ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತರ ಸಾವಿಗೇನು ಕಾರಣ? – ಕಹಳೆ ನ್ಯೂಸ್
ಬೆಂಗಳೂರು, ಆಗಸ್ಟ್.28: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಡುತ್ತಿರುವವರ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡು ಬರುತ್ತಿದೆ. ಆಗಸ್ಟ್ ತಿಂಗಳ ಕಳೆದ 25 ದಿನಗಳಲ್ಲಿ ಕೊವಿಡ್-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾದ ಶೇ.56 ಜನರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಮೂವರು ಕೊರೊನಾವೈರಸ್ ಸೋಂಕಿತರ ಪೈಕಿ ಒಬ್ಬರು ಆಸ್ಪತ್ರೆಗೆ ದಾಖಲಾದ ದಿನ ಅಥವಾ ಆಸ್ಪತ್ರೆಗೆ ದಾಖಲಾದ ಮರುದಿನವೂ ಪ್ರಾಣ ಬಿಟ್ಟಿರುವ ಪ್ರಕರಣಗಳು ಪತ್ತೆಯಾಗಿವೆ. ಇನ್ನು, ಶೇ.4.5ರಷ್ಟು ಸೋಂಕಿತರು ಮನೆಗಳಲ್ಲೇ ಅಥವಾ ಆಸ್ಪತ್ರೆಗೆ ಕರೆದೊಯ್ಯುವ...