ಉಪ್ಪಿನಂಗಡಿ : ಪಿಕಪ್ ಢಿಕ್ಕಿ ; ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು – ಕಹಳೆ ನ್ಯೂಸ್
ಬೈಕಿಗೆ ಪಿಕಪ್ ಢಿಕ್ಕಿಯಾಗಿ ಪರಾರಿಯಾಗಿದ್ದು, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಬೆಳ್ತಂಗಡಿ ತಾಲೂಕಿನ ಕಲ್ಲೇರಿಯ ಹುಣ್ಸೆಕಟ್ಟೆ ಎಂಬಲ್ಲಿ ನಡೆದಿದೆ. ಉರುವಾಲು ನಿವಾಸಿ ಕೃಷ್ಣಪ್ರಸಾದ್ ಶೆಟ್ಟಿ (36) ಹಾಗೂ ಕಣಿಯೂರಿನ ಜಯರಾಮ ಗೌಡ (28) ಮೃತರು ಎಂದು ಗುರುತಿಸಲಾಗಿದೆ. ಇಂದು ರಾತ್ರಿ ಉಪ್ಪಿನಂಗಡಿ ಕಡೆಯಿಂದ ಕಲ್ಲೇರಿ ಕಡೆ ಇವರು ಬೈಕ್ ನಲ್ಲಿ ಹೋಗುತ್ತಿದ್ದಾಗ ಎದುರು ಕಡೆಯಿಂದ ಅತೀ ವೇಗದಿಂದ ಬಂದ ಪಿಕಪ್ ಬೈಕ್ ಗೆ ಢಿಕ್ಕಿಯಾಗಿದೆ....







