Friday, June 19, 2026

ಹೆಚ್ಚಿನ ಸುದ್ದಿ

ಹೆಚ್ಚಿನ ಸುದ್ದಿ

ವಿದ್ಯಾಗಮ ತಾತ್ಕಾಲಿಕ ಸ್ಥಗಿತ! : ಶಿಕ್ಷಣ ಸಚಿವ ಸುರೇಶ್ ಕುಮಾರ್-ಕಹಳೆ ನ್ಯೂಸ್

ಬೆಂಗಳೂರು:ಕೊರೊನಾ ಕಾರಣದಿಂದಾಗಿ ಮಕ್ಕಳು ಕಲಿಕೆಯಿಂದ ವಂಚಿತರಾಗ ಬಾರದೆಂದು ರಾಜ್ಯ ಸರ್ಕಾರ ರೂಪಿಸಿದ್ದ 'ವಿದ್ಯಾಗಮ' ಯೋಜನೆ ಮೇಲೂ ಕೋವಿಡ್-19 ಕರಿಛಾಯೆ ಆವರಿಸಿದೆ. ಈ ಯೋಜನೆಯಿಂದಾಗಿ ಶಿಕ್ಷಕರಲ್ಲಿ ಕರೊನಾಂತಕ ಹೆಚ್ಚುತ್ತಿದೆ. ಕೂಡಲೇ ಇದನ್ನು ಸ್ಥಗಿತಗೊಳಿಸಿ ಶಿಕ್ಷಕರ ಹಾಗೂ ಮಕ್ಕಳ ಜೀವ ಉಳಿಸಬೇಕು ಎಂಬ ಒತ್ತಾಯ ರಾಜ್ಯಾದ್ಯಂತ ದಟ್ಟವಾಗಿ ಕೇಳಿಬಂದಿತ್ತು. ಈ ಕುರಿತು ಕೊನೆಗೂ ನಿರ್ಧಾರ ಕೈಗೊಂಡ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ...
ಹೆಚ್ಚಿನ ಸುದ್ದಿ

ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಈಗ ಬಿಜೆಪಿ ಮಿತ್ರಪಕ್ಷಗಳ ಏಕೈಕ ಪ್ರತಿನಿಧಿ-ಕಹಳೆ ನ್ಯೂಸ್

ಹೊಸದಿಲ್ಲಿ, ಅ.10: ಎಲ್‌ಜೆಪಿ ಮುಖಂಡ ರಾಮ್‌ವಿಲಾಸ್ ಪಾಸ್ವಾನ್ ಅವರ ನಿಧನದೊಂದಿಗೆ, ಕೇಂದ್ರದ ಅಧಿಕಾರಾರೂಢ ಎನ್‌ಡಿಎ ಮೈತ್ರಿಕೂಟ ಸಂಪುಟದಲ್ಲಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾದ ರಾಮದಾಸ್ ಅಠಾವಳೆ ಅವರನ್ನು ಹೊರತುಪಡಿಸಿ, ಎಲ್ಲ ಬಿಜೆಪಿಯೇತರ ಮುಖ ಮಾಯವಾದಂತಾಗಿದೆ. ಬಿಜೆಪಿ ಮಿತ್ರಪಕ್ಷಗಳು ಹಲವು ಸಂಸದರನ್ನು ಹೊಂದಿದ್ದರೂ, ಸಂಪುಟ ಮಾತ್ರ ಇದೀಗ ಬಹುತೇಕ ಬಿಜೆಪಿಗೆ ಸೀಮಿತವಾಗಿದೆ. ಕಳೆದ ವರ್ಷ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಬಳಿಕ ಅಧಿಕಾರ ಹಂಚಿಕೆ ಸಂಘರ್ಷದ ಹಿನ್ನೆಲೆಯಲ್ಲಿ ತನ್ನ ಪ್ರತಿನಿಧಿ ಅರವಿಂದ್ ಸಾವಂತ್...
ಹೆಚ್ಚಿನ ಸುದ್ದಿ

ಜೈಲುಹಕ್ಕಿ ಸಂಜನಾಗೆ ಜನ್ಮ ದಿನದ ಸಂಭ್ರಮ-ಕಹಳೆ ನ್ಯೂಸ್

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾಗೆ ಇವತ್ತು ಹುಟ್ಟುಹಬ್ಬದ ದಿನ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಸಂಜನಾ ಗರ್ಲಾನಿ ಕಳೆದ ವರ್ಷ ಅಭಿಮಾನಿಗಳು, ಕುಟುಂಬದವರು ಹಾಗೂ ಆತ್ಮೀಯರೊಂದಿಗೆ ಅದ್ದೂರಿಯಾಗಿ ಜನ್ಮದಿನ ಆಚರಿಸಿಕೊಂಡಿದ್ದರು. ಹೈಫೈ ಪಾರ್ಟಿಗಳ ಮೂಲಕ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿಕೊಂಡಿದ್ದ ಸಂಜನಾ ಈ ಬಾರಿ ಜೈಲಿನಲ್ಲಿಯೇ ಹುಟ್ಟುಹಬ್ಬದ ದಿನ ಕಳೆಯುವಂತಾಗಿದೆ. ನಟಿ ರಾಗಿಣಿಯೊಂದಿಗೆ ಜೈಲಲ್ಲಿ ಜಗಳವಾಡಿಕೊಂಡಿದ್ದ ಸಂಜನಾರನ್ನು ಬೇರೆ ಕೊಠಡಿಗೆ ಸ್ಥಳಾಂತರ ಮಾಡಲಾಗಿದೆ ಎಂದು ಹೇಳಲಾಗಿದೆ....
ಹೆಚ್ಚಿನ ಸುದ್ದಿ

BIG BREAKING : ದ್ವಿತೀಯ ‘ಪಿಯು ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ- ಕಹಳೆ ನ್ಯೂಸ್

ಬೆಂಗಳೂರು : ದಿನಾಂಕ 07-09-2020ರಿಂದ ದಿನಾಂಕ 19-09-2020ರವರೆಗೆ ರಾಜ್ಯದ 305 ಪರೀಕ್ಷಾ ಕೇಂದ್ರಗಳಲ್ಲಿ ನಡೆದಂತ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪದವಿ ಪೂರ್ವ ಶಿಕ್ಷಣ ಮಂಡಳಿ ಪ್ರಕಟಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, 2020ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು www.karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರಕ ಪರೀಕ್ಷೆಯಲ್ಲಿ ಒಟ್ಟು 2,12,678 ವಿದ್ಯಾರ್ಥಿಗಳು ಹಾಜರಾಗಿದ್ದರು. ಇಂತಹ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯಲ್ಲಿ 87,784 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇ.41.28ರಷ್ಟು...
ಹೆಚ್ಚಿನ ಸುದ್ದಿ

ಸಿಎಂ ಬಿಎಸ್ವೈ ಭೇಟಿಯಾಗುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ-ಕಹಳೆ ನ್ಯೂಸ್

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಗೆ ಬರುವವರಿಗೆ ಕೋವಿಡ್ 19 ಟೆಸ್ಟ್ ಕಡ್ಡಾಯ ಮಾಡಲಾಗಿದೆ. ಗೃಹ ಕಚೇರಿ ಕೃಷ್ಣಾ ಅಥವಾ ಕಾವೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಬರುವ ಜನರಿಗೆ ಆಂಟಿಜೆನ್ ಟೆಸ್ಟ್ ಮಾಡಲಾಗುತ್ತದೆ. ವರದಿ ನೆಗೆಟಿವ್ ಬಂದರೆ ಮಾತ್ರ ಸಿಎಂ ಭೇಟಿಗೆ ಅವಕಾಶ ನೀಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈಗಾಗಲೇ ಕೊರನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದಿದ್ದ ಸಿಎಂ ಬಿ.ಎಸ್. ಯಡಿಯೂರಪ್ಪ ಆರೋಗ್ಯದ...
ಹೆಚ್ಚಿನ ಸುದ್ದಿ

‘ಅಕ್ಟೋಬರ್ 16’ ರವರೆಗೆ ಶಾಲಾ ದಾಖಲಾತಿ ವಿಸ್ತರಿಸಿ ‘ರಾಜ್ಯ ಸರ್ಕಾರ’ದಿಂದ ಆದೇಶ-ಕಹಳೆ ನ್ಯೂಸ್

ಬೆಂಗಳೂರು : ಸಾರ್ವಜನಿಕ ಶಿಕ್ಷಣ ಇಲಾಖೆಯು ಶಾಲಾ ದಾಖಲಾತಿಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಅಕ್ಟೋಬರ್ 16 ರವರೆಗೆ ದಾಖಲಾತಿಗೆ ಅವಕಾಶ ನೀಡಲಾಗಿದೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ ದಾಖಲಾತಿ ಪ್ರಮಾಣ ಕಡಿಮೆಯಾದ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳು ದಾಖಲಾತಿ ಅವಧಿಯನ್ನು ವಿಸ್ತರಿಸಬೇಕೆಂದು ಮನವಿ ಮಾಡಿದ್ದವು. ಶಿಕ್ಷಣ ಸಂಸ್ಥೆಗಳ ಮನವಿಗೆ ಸ್ಪಂದಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು 2020-21 ನೇ ಶೈಕ್ಷಣಿಕ ಸಾಲಿನಲ್ಲಿ...
ಹೆಚ್ಚಿನ ಸುದ್ದಿ

BIG BREAKING NEWS : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಎಫ್​ಐಆರ್​ ದಾಖಲು-ಕಹಳೆ ನ್ಯೂಸ್

ನವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಅಧಿಕಾರಿಗಳು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಸಿಬಿಐ ಅಧಿಕಾರಿಗಳು ಡಿ.ಕೆ.ಶಿವಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದಾರೆ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ದೂರು ದಾಖಲಿಸಲಾಗಿದೆ. ಈ ಮೂಲಕ ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಬಿಗ್ ಶಾಕ್ ಎದುರಾಗಿದೆ. ಇಂದು ಬೆಳ್ಳಂಬೆಳಗ್ಗೆ ಡಿ.ಕೆ.ಶಿವಕುಮಾರ್ ಮನೆ, ಕಚೇರಿ ಸೇರಿ...
ಹೆಚ್ಚಿನ ಸುದ್ದಿ

BREAKING NEWS : ಕೇಂದ್ರ ಶಿಕ್ಷಣ ಸಚಿವಾಲಯದಿಂದ ‘ಶಾಲಾ-ಕಾಲೇಜು ಪುನರಾರಂಭ’ಕ್ಕೆ ‘ಮಾರ್ಗಸೂಚಿ’ ರಿಲೀಸ್ : ಈ ನಿಮಯಗಳ ಪಾಲನೆ ಕಡ್ಡಾಯ-ಕಹಳೆ ನ್ಯೂಸ್

ಬೆಂಗಳೂರು : ಅಕ್ಟೋಬರ್ 15 ರಿಂದ ರಾಜ್ಯದಲ್ಲಿ ಹಂತ ಹಂತವಾಗಿ ಶಾಲಾ-ಕಾಲೇಜು ಪುನರ್ ಆರಂಭ ಮಾಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯ ಸರ್ಕಾರವು ಶಾಲಾ-ಕಾಲೇಜು ಆರಂಭದ ಬಗ್ಗೆ ಪ್ರಕಟಣೆ ಹೊರಡಿಸಿದ್ದು, ಶಾಲೆ ಹಾಗೂ ಸ್ಥಳೀಯ ಆಡಳಿತದ ಸಮಾಲೋಚನೆಯೊಂದಿಗೆ ಷರತ್ತುಗಳ ಅನ್ವಯವಾಗಿ ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸುವುದಾಗಿ ತಿಳಿಸಿದೆ. ಈ ಹಿಂದೆ ರಾಜ್ಯದಲ್ಲಿ ಸೆಪ್ಟೆಂಬರ್ 21 ರಿಂದ ಶಾಲಾ-ಕಾಲೇಜು ಆರಂಭಿಸುವ ಕುರಿತು ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿತ್ತು....
1 164 165 166 167 168 174
Page 166 of 174