ದಕ್ಷಿಣ ಕನ್ನಡ ಸೇರಿ ಪಶ್ಚಿಮಘಟ್ಟಕ್ಕೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಪಿಎಂಜಿಎಸ್ವೈ-IV ಅನುಷ್ಠಾನಕ್ಕೆ ಹಲವು ಸವಾಲು ; ಭೌಗೋಳಿಕ ನೆಲೆಯಲ್ಲಿ ಮಾರ್ಗಸೂಚಿ ರೂಪಿಸುವಂತೆ ಸಂಸದ ಕ್ಯಾ. ಚೌಟ ಲೋಕಸಭೆಯಲ್ಲಿ ಪ್ರಸ್ತಾಪ -ಕಹಳೆ ನ್ಯೂಸ್
ನವದೆಹಲಿ: ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ(PMGSY)ಗೆ ನಿಗದಿಪಡಿಸಿರುವ ಮಾನದಂಡ/ ಮಾರ್ಗಸೂಚಿಗಳಲ್ಲಿ ತಿದ್ದುಪಡಿ ತಂದು ಈ ಯೋಜನೆ ಅನುಷ್ಠಾನಕ್ಕೆ ಎದುರಾಗಿರುವ ಸವಾಲು ಬಗೆಹರಿಸುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸಂಸತ್ತಿನಲ್ಲಿ ಗ್ರಾಮೀಣಾಭಿವೃದ್ಧಿ ಸಚಿವಾಲಯವನ್ನು ಒತ್ತಾಯಿಸಿದ್ದಾರೆ. ಲೋಕಸಭೆಯಲ್ಲಿ ನಿಯಮ 377ರಡಿ ಈ ಮಹತ್ವದ ವಿಷಯ ಪ್ರಸ್ತಾಪಿಸಿರುವ ಅವರು, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ...







