ಸಜೀಪಮೂಡ ಗ್ರಾಮದ ಮಿತ್ತಮಜಲು ಕ್ಷೇತ್ರದ ವತಿಯಿಂದ ನಡೆದ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್
ಬಂಟ್ವಾಳ: ಸಜೀಪಮೂಡ ಗ್ರಾಮದ ಮಿತ್ತಮಜಲು ಕ್ಷೇತ್ರದ ವತಿಯಿಂದ ಬಂಟ್ವಾಳ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ವನಮಹೋತ್ಸವ ಹಾಗೂ ಸಸಿ ವಿತರಣಾ ಕಾರ್ಯಕ್ರಮವು ಮಿತ್ತಮಜಲು ಕ್ಷೇತ್ರದ ವಠಾರದಲ್ಲಿ ನಡೆಯಿತು. ಅರಣ್ಯ ಇಲಾಖೆಯ ವತಿಯಿಂದ ಕ್ಷೇತ್ರದ ವಠಾರದಲ್ಲಿ 700 ಗಿಡಗಳನ್ನು ನಾಟಿ ಮಾಡಲಾಯಿತು. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮಾತನಾಡಿ, ಪ್ರಕೃತಿಯ ಸಮತೋಲನ ಕಳೆದುಕೊಂಡಾಗ ಗಿಡ ಮರಗಳೇ ಅದನ್ನು ಸಹಜ ಸ್ಥಿತಿಗೆ ತರುತ್ತಿದ್ದು, ಅರಣ್ಯ ನಾಶವು ಪ್ರಾಕೃತಿಕ ವಿಕೋಪಗಳಿಗೆ ಕಾರಣವಾಗುತ್ತದೆ....