Sunday, September 6, 2026

ಜಿಲ್ಲೆ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರುದ ಪಿಲಿಗೊಬ್ಬು 2026ಕ್ಕೆ ಭರ್ಜರಿ ಸಿದ್ಧತೆ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ ಪಿಲಿಗೊಬ್ಬು 2026’ ಸೀಸನ್–4ಕ್ಕೆ ಪುತ್ತೂರು ಸಜ್ಜಾಗುತ್ತಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಹಾಗೂ ಸಹಜ್ ರೈ ಬಳಜ್ಜ ಅವರ ಮುಂದಾಳತ್ವದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು 2026 ನಡೆಯಲಿದೆ. ಆಮಂತ್ರಣ ಪತ್ರಿಕೆ ಬಿಡುಗಡೆಗೂ ಮುನ್ನ ಶ್ರೀ ಮಹಾಲಿಂಗೇಶ್ವರ...
ಜಿಲ್ಲೆಬೆಂಗಳೂರುಸುದ್ದಿ

ಬೆಂಗಳೂರು : ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾಯೋಗಿಕ ಸಂಚಾರ ಆರಂಭ – ಕಹಳೆ ನ್ಯೂಸ್

ಬೆಂಗಳೂರು: ಯಶವಂತಪುರ(Yeshwantpur) ಮತ್ತು ಮಂಗಳೂರು ಸೆಂಟ್ರಲ್  ನಡುವೆ ರೈಲಿನ ಚಾಲನಾ ಸಮಯ ಹಾಗೂ ಮಾರ್ಗದ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲು 16 ಬೋಗಿಗಳ ವಂದೇ ಭಾರತ್ ಎಕ್ಸ್‌ಪ್ರೆಸ್  ಖಾಲಿ ರೇಕ್‌ನ ಪ್ರಾಯೋಗಿಕ ಸಂಚಾರ ಇಂದು ಯಶಸ್ವಿಯಾಗಿ ಆರಂಭವಾಗಿದೆ. ಬೆಳಗ್ಗೆ ಯಶವಂತಪುರ ರೈಲ್ವೆ ನಿಲ್ದಾಣದಿಂದ ಹೊರಟ ಈ ಪ್ರಾಯೋಗಿಕ ರೈಲಿನ ಚಾಲನಾ ಸಮಯವನ್ನು ಅಂದಾಜಿಸಿ ವಿವಿಧ ವಿಭಾಗಗಳಲ್ಲಿನ ಗರಿಷ್ಠ ವೇಗವನ್ನು ಪರಿಶೀಲಿಸಲಾಗುತ್ತದೆ. ಈ ಪ್ರಾಯೋಗಿಕ ಸಂಚಾರದ ಸಂದರ್ಭದಲ್ಲಿ ಕಾರ್ಯಾಚರಣೆ, ರೋಲಿಂಗ್ ಸ್ಟಾಕ್ ಮತ್ತು ವಿದ್ಯುತ್...
ಶಿವಮೊಗ್ಗಸುದ್ದಿ

ಪೊಲೀಸರಿಂದ ತಪ್ಪಿಸಿಕೊಳ್ಳಲು ಕೊಳದಲ್ಲಿ ಮುಳುಗಿ ಕುಳಿತಿದ್ದ ರೌಡಿಶೀಟರ್! – ಕಹಳೆ ನ್ಯೂಸ್

ಶಿವಮೊಗ್ಗ:‌ ಮಹಾಭಾರತ ಯುದ್ದದ ಕೊನೆಯ ದಿನ ಪಾಂಡವರಿಂದ ತಪ್ಪಿಸಿಕೊಳ್ಳಲು ದುರ್ಯೋಧನ ವೈಶಂಪಾಯನ ಸರೋವರದಲ್ಲಿ ಅಡಗಿ ಕುಳಿತಿದ್ದ ಕಥೆ ಎಲ್ಲರಿಗೂ ಗೊತ್ತಿದೆ. ಅದೇ ರೀತಿ ಪೊಲೀಸರಿಂದ  ತಪ್ಪಿಸಿಕೊಳ್ಳಲು ರೌಡಿಶಿಟರ್‌ ಒಬ್ಬ ಕೊಳದ ನೀರಲ್ಲಿ ಅರ್ಧಗಂಟೆ ಮುಳುಗಿ ಕುಳಿತ ಘಟನೆ ಭದ್ರಾವತಿಯಲ್ಲಿ  ನಡೆದಿದೆ. ಭದ್ರಾವತಿಯ ರೌಡಿಶೀಟರ್‌ ದಿಲೀಪ್‌ ಅಲಿಯಾಸ್‌ ಕರಿಯಾ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಳ್ಳದ ನೀರಿನಲ್ಲಿ ಅಡಗಿದ್ದ. ಈತನ ವಿರುದ್ಧ ಕಳ್ಳತನ, ಕೊಲೆ ಯತ್ನ ಸೇರಿ 16 ಪ್ರಕರಣಗಳಿವೆ. ಪ್ರಕರಣ ಒಂದರಲ್ಲಿ ಈತನ ವಿರುದ್ಧ...
ಸುದ್ದಿಹಾಸನ

ಸಾರಿಗೆ ಬಸ್, ಪಿಕಪ್ ವಾಹನದ ನಡುವೆ ಭೀಕರ ಅಪಘಾತ – ಓರ್ವ ಸಾವು, ನಾಲ್ವರಿಗೆ ಗಾಯ – ಕಹಳೆ ನ್ಯೂಸ್

ಹಾಸನ: ಸಾರಿಗೆ ಬಸ್ ಹಾಗೂ ಬೊಲೆರೋ ಪಿಕಪ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ, ಸಕಲೇಶಪುರ  ತಾಲೂಕಿನ ಮಾರನಹಳ್ಳಿ ಸಮೀಪ ನಡೆದಿದೆ. ದಿನೇಶ್ (38) ಸ್ಥಳದಲ್ಲೇ ಸಾವನ್ನಪ್ಪಿದ ವ್ಯಕ್ತಿ. ಸುಬ್ರಮಣ್ಯ, ವೆಂಕಟರಮಣ, ಜಿತೇಂದ್ರ ಹಾಗೂ ದುರ್ಗಾಪ್ರಸಾದ್ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಐಸಿಐಸಿಐ ಬ್ಯಾಂಕ್‌ಗೆ ಸೇರಿದ ಬೊಲೆರೋ ಪಿಕಪ್ ವಾಹನ ಎಟಿಎಂಗಳಿಗೆ ಹಣ ತುಂಬಲು ಬರುತ್ತಿತ್ತು. ಈ ವೇಳೆ ಮಂಗಳೂರಿನಿಂದ...
ಜಿಲ್ಲೆಮುಂಬೈಸುದ್ದಿ

200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗು ಜನನ : ರಥದಲ್ಲಿ ಕೂರಿಸಿ ಅದ್ದೂರಿ ಸ್ವಾಗತ – ಕಹಳೆ ನ್ಯೂಸ್

ಮುಂಬೈ: ಹೆಣ್ಣು ಮಗು ಬೇಡ ಎಂದು ಭ್ರೂಣ ಹತ್ಯೆ ಮಾಡಿಸುವ ಈ ಕಾಲದಲ್ಲಿ ಹೆಣ್ಣು ಮಗು ಜನಿಸಿದೆ ಎಂದು ಕುಟುಂಬವೊಂದು ರಥದಲ್ಲಿ ಕೂರಿಸಿ ಅದ್ದೂರಿಯಾಗಿ ಸ್ವಾಗತಿಸಿರುವ ಘಟನೆ ಮಹಾರಾಷ್ಟ್ರದ ಬೀಡ್‌ನಲ್ಲಿ (Beed) ನಡೆದಿದೆ. ಹೌದು, ಈ ಕುಟುಂಬದಲ್ಲಿ ಸುಮಾರು 200 ವರ್ಷಗಳ ಅಂದರೆ ನಾಲ್ಕು ತಲೆಮಾರುಗಳ ಬಳಿಕ ಹೆಣ್ಣು ಮಗು ಜನಿಸಿದೆ. ಹೆರಿಗೆಯಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಟುಂಬಸ್ಥರು ಮಗು ಹಾಗೂ ತಾಯಿಯನ್ನು ರಥದಲ್ಲಿ ಕೂರಿಸಿ, ತಾಳ-ವಾದ್ಯಗಳು ಹಾಗೂ ನೃತ್ಯದೊಂದಿಗೆ...
ಜಿಲ್ಲೆಬಳ್ಳಾರಿರಾಜ್ಯಸುದ್ದಿ

ಬಳ್ಳಾರಿ ಚಲೋ – 2ನೇ ದಿನವೂ ಪಾದಯಾತ್ರೆಗೆ ಹರಿದು ಬಂದ ಕಾರ್ಯಕರ್ತರ ದಂಡು – ಕಹಳೆ ನ್ಯೂಸ್

ರಾಯಚೂರು: ರಾಜ್ಯ ಸರ್ಕಾರದ ಆಡಳಿತ ವೈಫಲ್ಯ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದಿರುವ ಬಳ್ಳಾರಿ ಚಲೋ ಪಾದಯಾತ್ರೆಗೆ ಎರಡನೇ ದಿನವೂ‌ ಕಾರ್ಯಕರ್ತರ ದಂಡು ಹರಿದು ಬರುತ್ತಿದೆ. ಎರಡನೇ ದಿನ ಸಂತೆಕೆಲ್ಲೂರಿನ ಘನಮಠೇಶ್ವರ ಮಠದಿಂದ ಗುಡದೂರಿಗೆ 21 ಕಿ.ಮೀ ಪಾದಯಾತ್ರೆ ನಡೆಯಲಿದ್ದು ಪಾದಯಾತ್ರೆಯಲ್ಲಿ ಹಲವಾರು ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ಮಸ್ಕಿ, ಮಾನ್ವಿ, ಹುನಗುಂದ, ಕುಷ್ಟಗಿ, ಲಿಂಗಸುಗೂರು, ಮುದ್ದೇಬಿಹಾಳ ಕಾರ್ಯಕರ್ತರು ಇಂದು ಸೇರಲಿದ್ದಾರೆ. ಸಂತೆಕೆಲ್ಲೂರಿನಿಂದ ಮುದಬಾಳ ಕ್ರಾಸ್ ವರೆಗೆ ಪಾದಯಾತ್ರೆ ನಡೆದು...
ಜಿಲ್ಲೆಸುದ್ದಿ

ಸ್ಕೂಟಿಗೆ ಪೆಟ್ರೋಲ್ ಹಾಕಿಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು : ಹೃದಯಾಘಾತ ಶಂಕೆ -ಕಹಳೆ ನ್ಯೂಸ್

ದಾವಣಗೆರೆ: ಸ್ಕೂಟಿಗೆ ಪೆಟ್ರೋಲ್ ಹಾಕಿಸುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಾವಣಗೆರೆಯ  ಎಸ್‌ಪಿಎಸ್ ನಗರದ ಭಾರತ್ ಪೆಟ್ರೋಲ್ ಬಂಕ್‌ನಲ್ಲಿ  ನಡೆದಿದೆ. ದಾವಣಗೆರೆಯ ಮೆಹೆಬೂಬ್ ನಗರದ ನಿವಾಸಿ ಮುನ್ನಾ ಮೃತ ವ್ಯಕ್ತಿ. ದ್ವಿಚಕ್ರ ವಾಹನಕ್ಕೆ ಪೆಟ್ರೋಲ್ ಹಾಕಿಸುವ ವೇಳೆ ಕುಸಿದು ಬಿದ್ದು ಮುನ್ನಾ ಸಾವನ್ನಪ್ಪಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮುನ್ನಾ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಲಾರಿ ಓಡಿಸಿದ ಪೇಮೆಂಟ್ ಪಡೆದು ಮನೆಗೆ ಹಿಂದಿರುಗುವಾಗ ಘಟನೆ ನಡೆದಿದೆ. ದ್ವಿಚಕ್ರ...
ಜಿಲ್ಲೆಸುದ್ದಿ

ನೇಪಾಳ ಪ್ರವಾಹ : ಯುಎಸ್ ಪೌರತ್ವ ಹೊಂದಿರುವ ತುಮಕೂರು ಮೂಲದ ಇಬ್ಬರು ನಾಪತ್ತೆ – ಕಹಳೆ ನ್ಯೂಸ್

ತುಮಕೂರು: ನೇಪಾಳದ ಪ್ರವಾಹದಲ್ಲಿ ಯು.ಎಸ್ ಪೌರತ್ವ ಹೊಂದಿರುವ ತುಮಕೂರು ಮೂಲದ ಇಬ್ಬರು ನಾಪತ್ತೆಯಾಗಿದ್ದಾರೆ. ತುಮಕೂರು ನಗರದ ನೃಪತುಂಗನ ಬಡಾವಣೆಯ ರಂಗುಸುಧೀರ್ (53), ಕೀರ್ತಿ ಆಚಾರ್ಯ (50) ನಾಪತ್ತೆಯಾಗಿದ್ದಾರೆ. ಯು.ಎಸ್‌ನಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಇವರು ಆಗಸ್ಟ್ 22ರಂದು ಯು.ಎಸ್‌ನಿಂದ 10 ಜನರ ತಂಡ ನೇಪಾಳಕ್ಕೆ ಹೊರಟಿದ್ದರು. 26ರ ಬೆಳಗ್ಗೆ 8:29ರಂದು ಸಂಬಂಧಿ ಗುರುಪ್ರಸಾದ್ ಎನ್ನುವವರಿಗೆ ಕೊನೆ ಕಾಲ್ ಮಾಡಿದ್ದರು. ಅಲ್ಲಿಂದ ಸಂಪರ್ಕಕ್ಕೆ ಸಿಗುತ್ತಿಲ್ಲ. ಪರಿಣಾಮ ಅವರ ತುಮಕೂರಿನ ಮನೆಯ ಸದಸ್ಯರಲ್ಲಿ...
1 2 3 1,012
Page 1 of 1012