Friday, March 6, 2026

ಚಿಕ್ಕಮಂಗಳೂರು

ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕುದುರೆಮುಖಕ್ಕೆ ಚಾರಣ ಹೋಗಲು ತೆರಳುತ್ತಿದ್ದ ಪ್ರವಾಸಿಗರ ಬಸ್ ಪಲ್ಟಿ: ಹಲವರಿಗೆ ಗಾಯ – ಕಹಳೆ ನ್ಯೂಸ್

ಚಿಕ್ಕಮಗಳೂರು: ಕುದುರೆಮುಖ ಚಾರಣ ಹೋಗಲು ಪ್ರವಾಸಿಗರು ತೆರಳುತ್ತಿದ್ದ ಖಾಸಗಿ ಬಸ್ ಕಳಸ ಸಮೀಪದ ಕಂಚಿಗಾನೆ ತಿರುವಿನಲ್ಲಿ ಶನಿವಾರ ಬೆಳಿಗ್ಗೆ 5.30ರ ಸುಮಾರಿನಲ್ಲಿ ಪಲ್ಟಿಯಾಗಿದೆ. ಬಸ್‌ನಲ್ಲಿ 48 ಜನ ಪ್ರಯಾಣ ಮಾಡುತ್ತಿದ್ದರು. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, 14 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಎಲ್ಲರನ್ನು ಕಳಸ ಪಟ್ಟಣದ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಿದರು....
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ: ವಾರದ ಸಂತೆಗೂ ಬ್ರೇಕ್ – ಕಹಳೆ ನ್ಯೂಸ್

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಇಂದಿನಿಂದ ನಾಲ್ಕು ದಿನಗಳ ಕಾಲ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಹಿಂದೂ ಪೀಠಕ್ಕಾಗಿ ಆಗ್ರಹಿಸಿ ಹಿಂದೂ ಪರ ಸಂಘಟನೆಗಳು ಬಾಬಾಬುಡನ್ ಗಿರಿಯ ಇನಾಂ ದತ್ತಾತ್ರೇಯ ಪೀಠದಲ್ಲಿ ದಂತ ಜಯಂತಿ ಆಚರಿಸುತ್ತಿದ್ದು, ನಾಳೆಯಿಂದ ಮೂರು ದಿನಗಳಕಾಲ ದತ್ತ ಜಯಂತಿ ನಡೆಯಲಿದೆ. ಬುಧವಾರ ಬೃಹತ್ ಶೋಭಾ ಯಾತ್ರೆ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಾದ್ಯಂತ ಜಿಲ್ಲಾಡಲಿತ ಹಾಗೂ ಪೊಲೀಸ್ ಇಲಾಖೆ ಹೈ ಅಲರ್ಟ್...
ಚಿಕ್ಕಮಂಗಳೂರುಜಿಲ್ಲೆಸಂತಾಪಸುದ್ದಿ

ಕಾರುಗಳ ಮುಖಾಮುಖಿ ಡಿಕ್ಕಿ; ಇಬ್ಬರು ಮೃತ್ಯು, ಓರ್ವ ಗಂಭೀರ – ಕಹಳೆ ನ್ಯೂಸ್

ಚಿಕ್ಕಮಗಳೂರು : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ನ.9ರ ರವಿವಾರ ತಾಲೂಕಿನ ಹಿರೇಗೌಜ‌ ಗ್ರಾಮದ ಬಳಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಚನ್ನಗಿರಿ ಮೂಲದ ಕುಮಾರಪ್ಪ (69) ಹಾಗೂ ಸತೀಶ್ (35) ಮೃತ ದುರ್ದೈವಿಗಳು. ಮತ್ತೊಂದು ಕಾರಿನಲ್ಲಿದ್ದ ಡ್ರೈವರ್ ಸ್ಥಿತಿ ಗಂಭೀರವಾಗಿದೆ. ಹಿರೇಗೌಜ ಗ್ರಾಮದ ತಿರುವಿನಲ್ಲಿ ಈ ಘಟನೆ ನಡೆದಿದ್ದು, ಗಂಭೀರ ಗಾಯಗೊಂಡ ಚಾಲಕನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಸಖರಾಯಪಟ್ಟಣ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಜಮೀನು ಸರ್ವೆ ವೇಳೆ ದೈವ ಬಂತೆಂದು ಹೈಡ್ರಾಮಾ ಮಾಡಿದ ವ್ಯಕ್ತಿ: ಅಧಿಕಾರಿಗಳು ಕಂಗಾಲು – ಕಹಳೆ ನ್ಯೂಸ್

ಚಿಕ್ಕಮಗಳೂರು: ಜಮೀನು ಸರ್ವೆ ವೇಳೆ ವ್ಯಕ್ತಿಯೋರ್ವ ದೈವ ಬಂತೆಂದು ಅಧಿಕಾರಿಗಳನ್ನು ಹೆದರಿಸಲು ಯತ್ನಿಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಚಿಕ್ಕಮಗಲುರಿನ ಕೊಪ್ಪ ತಾಲೂಕಿನ ಚಿಕ್ಕನಗುಂಡಿ ಗ್ರಾಮದಲ್ಲಿ ಅಧಿಕಾರಿಗಳು ಜಮೀನು ಸರ್ವೆ ಕಾರ್ಯಕ್ಕೆ ಆಗಮಿಸಿದ್ದರು. ಈ ವೇಳೆ ಸುರೇಶ್ ಎಂಬ ವ್ಯಕ್ತಿ, ದೈವ ಮೈಮೇಲೆ ಬಂದಿದೆ ಎಂದು ಹೇಳಿ ಕೈಯಲ್ಲಿ ಬೆಂಕಿ ಹಿಡಿದುಕೊಂಡು ಬಂದು ಅತ್ತಿಂದಿತ್ತ ಓಡಾಡಿ ಹೈಡ್ರಾಮಾ ಮಾಡಿದ್ದಾನೆ. ಓಡಿ ಬಂದು ನಿಂತಿದ್ದ ಮಹಿಳೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಘಟನೆ ಕಂಡು ಸರ್ವೆ...
ಚಿಕ್ಕಮಂಗಳೂರುಸುದ್ದಿ

20 ಅಡಿ ಆಳದಲ್ಲಿದ್ದ ಚಿನ್ನದ ಚೀಲವನ್ನು ನಿಮಿಷದಲ್ಲಿ ಹುಡುಕಿ ತಂದ ಈಶ್ವರ್ ಮಲ್ಪೆ- ಕಹಳೆ ನ್ಯೂಸ್

ಚಿಕ್ಕಮಗಳೂರು ಜಿಲ್ಲೆಯ ಮಾಗಡಿ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿತು. ಅದೃಷ್ಟವಶಾತ್, ಕಾರಿನಲ್ಲಿದ್ದವರು ಈಜಿ ದಡ ಸೇರಿದರು. ಆದರೆ ಕಾರಿನಲ್ಲಿದ್ದ ಸುಮಾರು ₹50 ಲಕ್ಷ ಮೌಲ್ಯದ ಚಿನ್ನಾಭರಣಗಳು ನೀರಿನಲ್ಲಿ ಮುಳುಗಿದವು. ಇದೀಗ ಈಶ್ವರ್ ಮಲ್ಪೆ ಅವರು ಆ ಚಿನ್ನವನ್ನು ಹುಡುಕಿ ವಾರಸುದಾರರಿಗೆ ಹಿಂತಿರುಗಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಮಾಗಡಿ ಬಳಿ ಮಂಗಳವಾರ ಸಂಜೆ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕೆರೆಗೆ ಬಿದ್ದಿತು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಿನ್ನದ...
ಚಿಕ್ಕಮಂಗಳೂರುಸುದ್ದಿ

ಮರಕ್ಕೆ ಕಟ್ಟಿ, ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನ : ಸ್ಥಳೀಯರು ಬರುತ್ತಿದ್ದಂತೆ ಕಾಮುಕರು ಪರಾರಿ

ಚಿಕ್ಕಮಗಳೂರು : ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕಿಯನ್ನು ಮರಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ಈ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಸಂತ್ರಸ್ತ ಯುವತಿ ಬಸರೀಕಟ್ಟೆ ಗ್ರಾಮದ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ನಿತ್ಯ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಿಂದ ಬಸರೀಕಟ್ಟೆ ಗ್ರಾಮಕ್ಕೆ ಹೋಗಿ ಬರುತ್ತಿದ್ದರು. ಮಂಗಳವಾರ ಅದೇ ರೀತಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದರು. ಈ ವೇಳೆ ನಾಲ್ಕೈದು ಯುವಕರ ಗುಂಪು ದಾರಿಯಲ್ಲಿ ಕಾಯುತ್ತಾ ನಿಂತಿದ್ದರು....
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಹೋಂ ಸ್ಟೇ ಸ್ನಾನಗೃಹದಲ್ಲಿ ಯುವತಿ ಅನುಮಾನಾಸ್ಪದ ಸಾವು -ಕಹಳೆ ನ್ಯೂಸ್

ಚಿಕ್ಕಮಗಳೂರು: ಹೋಂ ಸ್ಟೇ ಸ್ನಾದ ಗೃಹದಲ್ಲಿ ಯುವತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳುರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿರುವ ಹಿಪ್ಲ ಹೋಮ್ ಸ್ಟೇಯಲ್ಲಿ ನಡೆದಿದೆ. ದೇವಲಾಪುರ ಗ್ರಾಮದ ರಂಜಿತಾ (27) ಮೃತ ಯುವತಿ. ರಂಜಿತಾ ಹಾಗೂ ರೇಖಾ ಎಂಬ ಯುವತಿಯರು ಸ್ನೇಹಿತೆಯ ಎಂಗೇಜ್ ಮೆಂಟ್ ಗೆಂದು ಎರಡು ದಿನಗಳ ಹಿಂದೆ ಬೆಂಗಳೂರಿನಿಂದ ಬಂದಿದ್ದರು. ಮೃತ ರಂಜಿತಾ ಚಿಕ್ಕಮಗಳೂರಿನ ದೇವಲಾಪುರ ಮೂಲದವರು. ರಂಜಿತಾ ಹಾಗೂ ರೇಖಾ ಬೆಂಗಳೂರುನ ಖಾಸಗಿ ಕಂಪನಿಯಲ್ಲಿ ಕೆಲಸ...
ಚಿಕ್ಕಮಂಗಳೂರುಸುದ್ದಿ

ಧಾರಾಕಾರ ಮಳೆ; ರೈಲ್ವೇ ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿತು ಭಾರೀ ಅನಾಹುತ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಗೆ ರೈಲ್ವೆ ಹಳಿಗೆ ಹಾಕಿದ್ದ ಜಲ್ಲಿ ಕಲ್ಲು ಕೊಚ್ಚಿ ಹೋದ ಘಟನೆ ತಾಲೂಕಿನ ಕಣಿವೆ ಗ್ರಾಮದಲ್ಲಿ ನಡೆದಿದೆ. ರೈಲ್ವೆ ಸಿಬ್ಬಂದಿ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ. ಬುಧವಾರ ರಾತ್ರಿಯಿಡೀ ಸುರಿದ ಮಳೆಯಿಂದ ಕಾಲುವೆಯ ನೀರು ಉಕ್ಕಿ ಹರಿದ ಪರಿಣಾಮ ಹಳಿಯಲ್ಲಿದ್ದ ಜಲ್ಲಿ ಕಲ್ಲುಗಳು ಕೊಚ್ಚಿ ಹೋಗಿದ್ದವು. ಚಿಕ್ಕಮಗಳೂರಿನಿಂದ ಶಿವಮೊಗ್ಗ ಕಡೆಗೆ ಹೊರಟ್ಟಿದ್ದ ಪ್ಯಾಸೆಂಜರ್ ರೈಲು ಕಣಿವೆ ಬಳಿ ಆಗಮಿಸುತ್ತಿದ್ದಂತೆ ರೈಲ್ವೇ ಸಿಬ್ಬಂದಿ ತಕ್ಷಣ...
1 2 3 4 7
Page 2 of 7