Thursday, April 23, 2026

ಮೈಸೂರು

ಮೈಸೂರುಸುದ್ದಿ

ಮೈಸೂರಿನಲ್ಲಿ ಹೃದಯವಿದ್ರಾವಕ ಘಟನೆ: ಬಿಸಿ ನೀರಿನ ಪಾತ್ರೆಗೆ ಬಿದ್ದು 2 ವರ್ಷದ ಮಗು ಸಾವು -ಕಹಳೆ ನ್ಯೂಸ್

ಮೈಸೂರು: ಬಿಸಿ ನೀರಿನ ಪಾತ್ರೆಗೆ ಬಿದ್ದು 2 ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಜಯಗಿರಿ ಗ್ರಾಮದಲ್ಲಿ ನಡೆದಿದೆ. ಮಗುವಿಗೆ ಸ್ನಾನ ಮಾಡಿಸಲು ಹೋದಾಗ ಈ ದುರಂತ ಸಂಭವಿಸಿದೆ. ಎರಡು ವರ್ಷದ ವೇದಾ ಮೃತ ಮಗು. ರಮ್ಯಾ ಹಾಗೂ ಬಸಪ್ಪ ದಂಪತಿಯ ಪುತ್ರಿ. ತಾಯಿ ರಮ್ಯಾ ಮಗುವಿಗೆ ಸ್ನಾನ ಮಾಡಿಸಲು ಕರೆದೊಯ್ದಿದ್ದ ವೇಳೆ ನೀರು ಬಿಸಿಯಾಗಿದ್ದರಿಂದ ತಣ್ಣೀರು ತರಲು ಹೋಗಿದ್ದರು. ಮಗುವನ್ನು ಸ್ನಾನದ ಮನೆಯಲ್ಲೇ ಬಿಟ್ತು...
ಜಿಲ್ಲೆಮೈಸೂರುಸುದ್ದಿ

ಮೈಸೂರು ರಿಯಲ್‌ ಎಸ್ಟೇಟ್‌ ಉದ್ಯಮಿ ಕಿಡ್ನ್ಯಾಪ್‌ ಮಾಡಿ 30 ಲಕ್ಷಕ್ಕೆ ಬೇಡಿಕೆ – ಆರೋಪಿಗಳು ಅರೆಸ್ಟ್‌ -ಕಹಳೆನ್ಯೂಸ್

ಮೈಸೂರು: ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣವನ್ನು ಪೊಲೀಸರು ಸಿನಿಮಿಯಾ ಶೈಲಿಯಲ್ಲಿ ಭೇದಿಸಿ ಕಿಡ್ನ್ಯಾಪ್ ಆದ ಕೆಲವೇ ಗಂಟೆಗಳಲ್ಲಿ ಅರೋಪಿಗಳ ಎಡೆಮುರಿಕಟ್ಟಿದ್ದಾರೆ. ವಿಜಯನಗರದ ಹೆರಿಟೇಜ್ ಕ್ಲಬ್ ಬಳಿ ವಿಜಯನಗರ ಮೂರನೇ ಹಂತದ ನಿವಾಸಿ ಲೋಕೇಶ್ ಎಂಬವರನ್ನು, ಟಾಟಾ ಸುಮೋದಲ್ಲಿ ಬಂದ ಐದು ಮಂದಿ ಅಪಹರಣ ಮಾಡಿದ್ದರು. ಬಳಿಕ ಲೋಕೇಶ್ ಮೊಬೈಲ್‌ನಿಂದ ಅವರ ಪತ್ನಿಗೆ ಕರೆ ಮಾಡಿ ಆರೋಪಿಗಳು 30 ಲಕ್ಷ ಹಣಕ್ಕೆ ಡಿಮ್ಯಾಂಡ್ ಇಟ್ಟಿದ್ದರು. ಗಾಬರಿಗೊಂಡ ಲೋಕೇಶ್...
ಮೈಸೂರುಸುದ್ದಿ

ಚಾಮುಂಡಿ ದರ್ಶನಕ್ಕೆ ತೆರಳುವಾಗ, ‘ಹೃದಯಾಘಾತ’ : ಕಾಂಗ್ರೆಸ್ ಮಾಜಿ ಶಾಸಕ ಆರ್ ವಿ ದೇವರಾಜ್ ನಿಧನ – ಕಹಳೆ ನ್ಯೂಸ್

ಮೈಸೂರು : ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​​ವಿ ದೇವರಾಜ್​ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ...
ಮೈಸೂರುಸುದ್ದಿ

ಮೈಸೂರಲ್ಲಿ ರೈತರ ಮೇಲೆ ಹುಲಿ ದಾಳಿಗೆ ಯತ್ನ : ಕೊನೆಗೂ ಸೆರೆ ಹಿಡಿದ ಅರಣ್ಯ ಸಿಬ್ಬಂದಿ-ಕಹಳೆ ನ್ಯೂಸ್

ಮೈಸೂರು : ಇತ್ತೀಚಿಗೆ ಮೈಸೂರಲ್ಲಿ ಹುಲಿ ದಾಳಿ ಪ್ರಕರಣಗಳು ಹೆಚ್ಚಿತ್ತು. ಇದೀಗ ಇಂದು ಇಬ್ಬರು ರೈತರ ಮೇಲೆ ದಾಳಿ ಮಾಡಲು ಯತ್ನಿಸಿದ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದೆ. ಹುಣಸೂರು ತಾಲೂಕಿನ ಹನಗೋಡು ಹೋಬಳಿ ಗುರುಪುರ ಬಳಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದಲ್ಲಿರುವ ಗೌಡನಕಟ್ಟೆ ಗ್ರಾಮದ ಜಮೀನಿನಲ್ಲಿ ಗುರುವಾರ ತಡರಾತ್ರಿ ಹುಲಿ ಸೆರೆ ಸಿಕ್ಕಿದೆ. ಹುಲಿ ಸೆರೆ ಹಿಡಿಯುವಂತೆ ಗ್ರಾಮಸ್ಥರು ಆಗ್ರಹಿಸಿದ್ದರಿಂದ ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ...
ಜಿಲ್ಲೆಮೈಸೂರುರಾಜಕೀಯಸುದ್ದಿ

 ಸಿಎಂ ಸಿದ್ದರಾಮಯ್ಯಗೆ ಅಧಿಕಾರದ ಹುಚ್ಚು ಹಿಡಿದಿದೆ: ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ – ಕಹಳೆ ನ್ಯೂಸ್

ಮೈಸೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕುದುರೆ ವ್ಯಾಪಾರ ಶುರುವಾಗಿ ಒಂದ ವರ್ಷವಾಗಿದೆ. ಸಿಎಂ ಸಿದ್ದರಾಮಯ್ಯನವರಿಗೆ ಅಧಿಕಾರದ ಹುಚ್ಚು ಹಿಡಿದಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿ.ಸೋಮಣ್ಣ, ರಾಜ್ಯ ಸರ್ಕಾರದ ಕುದುರೆ ವ್ಯಾಪರ ಈಗ ಅಲ್ಲ, ಕಳೆದ ಒಂದು ವರ್ಷದಿಂದ ಕುದುರೆ ವ್ಯಾಪಾರ ಶುರುವಾಗಿದೆ. ಸಿದ್ದರಾಮಯ್ಯ ಭ್ರಷ್ಟ ಸಿಎಂ ಆಗಿದ್ದಾರೆ ಎಂದರು. ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಇಬ್ಬರೂ ಕುದುರೆ ವ್ಯಾಪಾರ ಮಾಡುತ್ತಿದ್ದಾರೆ. ಇದೊಂದು ಲಫಂಗ ಸರ್ಕಾರ. ೨೦೧೩ರಲ್ಲಿ...
ಜಿಲ್ಲೆಮೈಸೂರುಸುದ್ದಿ

ಮೈಸೂರಲ್ಲಿ ಮನೆ ಮುಂದೆ ನಿಲ್ಲಿಸಿದ ಕಾರುಗಳಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಕಿಡಿಗೇಡಿಗಳು – ಕಹಳೆ ನ್ಯೂಸ್

ಮೈಸೂರು : ಮೈಸೂರಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದ್ದು, ಮನೆ ಮುಂದೆ ನಿಲ್ಲಿಸಿದ ಎರಡು ಕಾರುಗಳಿಗೆ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ನಡೆದಿದ್ದು, ಅಲ್ಲಿನ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ. ನಂಜನಗೂಡು ನಗರದ ಶ್ರೀರಾಂಪುರ ಬಡಾವಣೆಯಲ್ಲಿರುವ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಅಭಿನಾಗಭೂಷಣ್ ಮತ್ತು 5ನೇ ಕ್ರಾಸ್​ನಲ್ಲಿರುವ ಸಂತೋಷ್ ಎಂಬುವವರ ಕಾರಿಗೆ ಮಧ್ಯರಾತ್ರಿ ಏಕಕಾಲದಲ್ಲಿ ಪೆಟ್ರೋಲ್ ಸುರಿದು ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಹೊತ್ತಿ ಉರಿಯುತ್ತಿದ್ದ ಕಾರನ್ನು ಕಂಡು ಅಕ್ಕಪಕ್ಕದ...
ಜಿಲ್ಲೆಮೈಸೂರುಸುದ್ದಿ

ನ.23ರಂದು ಮೈಸೂರಲ್ಲಿ ‘ಒಡಿಸ್ಸಿ ನೃತ್ಯೋತ್ಸವ’ ಆಯೋಜನೆ: ನಾಡಿನ ‘ಶ್ರೇಷ್ಟ ನೃತ್ಯಕಲಾವಿದ’ರು ಭಾಗಿ – ಕಹಳೆ ನ್ಯೂಸ್

ಮೈಸೂರು: ಸಾಂಸ್ಕೃತಿಕ ನಗರಿ ಎಂದೆನಿಸಿಕೊಂಡಿರುವ ಮೈಸೂರನಲ್ಲಿ ಕಳೆದ ಇಪ್ಪತ್ತೊಂಭತ್ತು ವರ್ಷಗಳಿಂದ ಒಡಿಸ್ಸಿ ನೃತ್ಯ ಕಲೆಯನ್ನು ಪರಿಚಯಿಸುತ್ತಾ, ನೃತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ರುದ್ರ ನೃತ್ಯಯೋಗ ಶಾಲೆಯ ನೃತ್ಯಗುರು ಸಿಂಧು ಕಿರಣ್‌ರವರು, ಈಗ ನಾಲ್ಕನೇ ಆವೃತ್ತಿಯ ಮೈಸೂರು ಒಡಿಸ್ಸಿ ಉತ್ಸವವನ್ನು ಸಂಘಟಿಸಿದ್ದಾರೆ ಎಂದು ಗುರು ಸಿಂಧು ಕಿರಣ್‌ರವರ ಶಿಷ್ಯೆ-ನೃತ್ಯ ಕಲಾವಿದೆ ಪೃಥೆ ಹವಾಲ್ದಾರ್ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನ.23, 2025 ರಂದು ಮೈಸೂರು ವಿಜಯ ನಗರದಲ್ಲಿನ ಪ್ರತಿಷ್ಟಿತ ಜಗನ್ನಾಥ್...
ಬೆಂಗಳೂರುಮೈಸೂರುರಾಜ್ಯಸುದ್ದಿ

ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು ಎಂದ ಪ್ರೊ.ಪುರುಷೋತ್ತಮ ಬಿಳಿಮಲೆ – ಕಹಳೆ ನ್ಯೂಸ್

ಮೈಸೂರು: 'ಯಕ್ಷಗಾನ ಕಲಾವಿದರಲ್ಲಿ ಅನೇಕರು ಸಲಿಂಗಿಗಳು. ಅಲ್ಲಿ ಅಂಥ ಅನಿವಾರ್ಯತೆಯಿತ್ತು' ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಹೇಳಿದರು. ಇಲ್ಲಿನ ಮಾನಸಗಂಗೋತ್ರಿಯ ಪ್ರಸಾರಾಂಗದಲ್ಲಿ ಮಂಗಳವಾರ 'ಧರೆಗೆ ದೊಡ್ಡವರ ಕಾವ್ಯದ ಏಳು ಪಠ್ಯಗಳು' ಹಾಗೂ 'ನಾವು ಕೂಗುವ ಕೂಗು' ಕೃತಿಗಳನ್ನು ಬಿಡುಗಡೆ ಮಾಡಿದ ಅವರು, 'ಸತ್ಯವನ್ನು ಹೇಳಲು ಹಿಂಜರಿಯಬಾರದು. ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು....
1 2 3 4 19
Page 2 of 19