ನ.23ರಂದು ಮೈಸೂರಲ್ಲಿ ‘ಒಡಿಸ್ಸಿ ನೃತ್ಯೋತ್ಸವ’ ಆಯೋಜನೆ: ನಾಡಿನ ‘ಶ್ರೇಷ್ಟ ನೃತ್ಯಕಲಾವಿದ’ರು ಭಾಗಿ – ಕಹಳೆ ನ್ಯೂಸ್
ಮೈಸೂರು: ಸಾಂಸ್ಕೃತಿಕ ನಗರಿ ಎಂದೆನಿಸಿಕೊಂಡಿರುವ ಮೈಸೂರನಲ್ಲಿ ಕಳೆದ ಇಪ್ಪತ್ತೊಂಭತ್ತು ವರ್ಷಗಳಿಂದ ಒಡಿಸ್ಸಿ ನೃತ್ಯ ಕಲೆಯನ್ನು ಪರಿಚಯಿಸುತ್ತಾ, ನೃತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವ ರುದ್ರ ನೃತ್ಯಯೋಗ ಶಾಲೆಯ ನೃತ್ಯಗುರು ಸಿಂಧು ಕಿರಣ್ರವರು, ಈಗ ನಾಲ್ಕನೇ ಆವೃತ್ತಿಯ ಮೈಸೂರು ಒಡಿಸ್ಸಿ ಉತ್ಸವವನ್ನು ಸಂಘಟಿಸಿದ್ದಾರೆ ಎಂದು ಗುರು ಸಿಂಧು ಕಿರಣ್ರವರ ಶಿಷ್ಯೆ-ನೃತ್ಯ ಕಲಾವಿದೆ ಪೃಥೆ ಹವಾಲ್ದಾರ್ ಹೇಳಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನ.23, 2025 ರಂದು ಮೈಸೂರು ವಿಜಯ ನಗರದಲ್ಲಿನ ಪ್ರತಿಷ್ಟಿತ ಜಗನ್ನಾಥ್...






