Thursday, July 23, 2026

ಹುಬ್ಬಳ್ಳಿ

ಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ವಧು -ವರ ಇಲ್ಲದೇ ನಡೀತು ಆರತಕ್ಷತೆ ಸಮಾರಂಭ: ವಿಮಾನ ಟೇಕಾಫ್ ಆಗದ ಕಾರಣ ಆನ್ ಲೈನ್ ನಲ್ಲೇ ಭಾಗಿಯಾದ ಮದು ಮಕ್ಕಳು-ಕಹಳೆ ನ್ಯೂಸ್

ಹುಬ್ಬಳ್ಳಿ: ವಿಮಾನ ಟೇಕಾಫ್ ಆಗದ ಕಾರಣ ಆನ್ಲೈನ್ ನಲ್ಲೇ ಆರತಕ್ಷತೆ ಸಮಾರಂಭದಲ್ಲಿ ಮದು ಮಕ್ಕಳು ಭಾಗಿಯಾಗಿದ್ದಾರೆ. ಇಂಡಿಗೋ ವಿಮಾನ ಹಾರಾಟ ರದ್ದಾದ ಹಿನ್ನೆಲೆಯಲ್ಲಿ ಆನ್ಲೈನ್ ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ಮದು ಮಕ್ಕಳೇ ಬರದೇ ವಿಡಿಯೋ ಕಾನ್ಫರೆನ್ಸ್ ಮೂಲಕ ಆನ್ಲೈನ್ ನಲ್ಲಿ ಆರತಕ್ಷತೆ ನಡೆಸಲಾಗಿದೆ. ಹುಬ್ಬಳ್ಳಿಯ ಗುಜರಾತ್ ಭವನದಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ. ನವೆಂಬರ್ 23ರಂದು ಭುವನೇಶ್ವರದಲ್ಲಿ ಟೆಕ್ಕಿಗಳ ಮದುವೆಯಾಗಿದೆ. ಹುಬ್ಬಳ್ಳಿಯ ಮೇಧಾ ಮತ್ತು ಭುವನೇಶ್ವರದ ಸಂಗಮದಾಸ್ ಅವರ ಮದುವೆ ನೆರವೇರಿದ್ದು,...
ಸುದ್ದಿಹುಬ್ಬಳ್ಳಿ

ವಿವಿಧ ಬ್ರ್ಯಾಂಡ್‌ಗಳ 100 ಕಾರುಗಳನ್ನು ಗುರುತಿಸುವ ಮೂಲಕ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ದಾಖಲೆ ಸೃಷ್ಟಿಸಿದ ಹುಬ್ಬಳ್ಳಿಯ ಸಾತ್ವಿಕ್ ಬಿ.ಬಿ. – ಕಹಳೆ ನ್ಯೂಸ್

ಹುಬ್ಬಳ್ಳಿ: 3 ನಿಮಿಷ 54 ಸೆಕೆಂಡ್‌ಗಳಲ್ಲಿ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ವಿವಿಧ ಬ್ರ್ಯಾಂಡ್‌ಗಳ 100 ಕಾರುಗಳನ್ನು ಗುರುತಿಸುವ ಮೂಲಕ 8 ವರ್ಷದ ಬಾಲಕ ಸಾತ್ವಿಕ್ ಬಿ.ಬಿ. 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್'ನಲ್ಲಿ ದಾಖಲೆ ಸೃಷ್ಟಿಸಿದ್ದಾನೆ. 7 ವರ್ಷ 8 ತಿಂಗಳು ವಯಸ್ಸಿನಲ್ಲಿ ಸಾತ್ವಿಕ್ ಈ ಸಾಧನೆ ಮಾಡಿದ್ದಾನೆ.  ಈತನ ಸಾಧನೆ ಗುರುತಿಸಿ 'ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್' ಅ.8ರಂದು 'ಐಬಿಆರ್‌ ಅಚೀವರ್' ಎಂದು ಬಿರುದು ನೀಡಿದೆ. ಸಾತ್ವಿಕ್, ಹುಬ್ಬಳ್ಳಿಯ ಸುಭಾಸನಗರದ...
ಜಿಲ್ಲೆಸುದ್ದಿಹುಬ್ಬಳ್ಳಿ

ಜಯದೇವ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು₹100 ಕೋಟಿ ಬಿಡುಗಡೆ ಮಾಡಿ: ಬೊಮ್ಮಾಯಿ – ಕಹಳೆ ನ್ಯೂಸ್

ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದ ಬಳಿ ನಿರ್ಮಾಣವಾಗುತ್ತಿರುವ ಜಯದೇವ ಹೃದ್ರೋಗ ಆಸ್ಪತ್ರೆ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ₹100 ಕೋಟಿ ಬಿಡುಗಡೆ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಕಾಮಗಾರಿ ಆರಂಭವಾಗಿ ಮೂರು ವರ್ಷಗಳಾಗಿದ್ದರೂ ಇನ್ನೂ ಪೂರ್ಣಗೊಂಡಿಲ್ಲ. ಕೂಡಲೇ ಅನುದಾನ ಬಿಡುಗಡೆ ಮಾಡಿ ಮೊದಲ ಹಂತದ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿ ವಿಳಂಬವಾದರೆ ಯೋಜನಾ ವೆಚ್ಚ ಇನ್ನೂ ಹೆಚ್ಚುತ್ತದೆ ಎಂದು ಬುಧವಾರ ಸುದ್ದಿಗಾರರಿಗೆ ತಿಳಿಸಿದರು....
ಕ್ರೈಮ್ಜಿಲ್ಲೆಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯ ಬರ್ಬರ ಹತ್ಯೆ! – ಕಹಳೆ ನ್ಯೂಸ್

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು, ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ದೆಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ವೃದ್ದೆಯನ್ನು ನಿಂಗವ್ವ ಮುಳಗೋಡ (75) ಎಂದು ತಿಳಿದುಬಂದಿದೆ. ನಿಂಗವ್ವನನ್ನು ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹುಬ್ಬಳ್ಳಿಯ ಬ್ರಹ್ಮಗಿರಿ ಕಾಲೋನಿಯಲ್ಲಿ ಈ ಒಂದು ಭೀಕರವಾದ ಕೊಲೆ ನಡೆದಿದೆ. ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ವೃದ್ದೆ ನಿಂಗಮ್ಮನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನಾ ಸ್ಥಳಕ್ಕೆ ವಿದ್ಯಾಗಿರಿ ಠಾಣೆ ಪೊಲೀಸರು ಭೇಟಿ ನೀಡಿ...
ಜಿಲ್ಲೆರಾಜ್ಯಸುದ್ದಿಹುಬ್ಬಳ್ಳಿಹೆಚ್ಚಿನ ಸುದ್ದಿ

ಇನ್ಮುಂದೆ YouTube ಚಾನಲ್ ಗಳ ಆರಂಭಕ್ಕೆ ಲೈಸೆನ್ಸ್‌ ಕಡ್ಡಾಯ: ರಾಜ್ಯ ಸರ್ಕಾರದಿಂದ ಶೀಘ್ರ ಕಾನೂನು -ಕಹಳೆ ನ್ಯೂಸ್

ಹುಬ್ಬಳ್ಳಿ: ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು. ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು. ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ...
ಕ್ರೈಮ್ಸುದ್ದಿಹುಬ್ಬಳ್ಳಿ

ಹುಬ್ಬಳ್ಳಿಯಲ್ಲಿ ಗಿರೀಶ್ ಮಟ್ಟಣ್ಣನವ‌ರ್, ಯೂಟ್ಯೂಬರ್ ಸಮೀರ್ FIR ದಾಖಲು – ಕಹಳೆ ನ್ಯೂಸ್

ಹುಬ್ಬಳ್ಳಿ:- ಜೈನ ಧರ್ಮದ ಬಗ್ಗೆ ಅವಹೇಳನಕಾರಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಗಿರೀಶ ಮಟ್ಟಣ್ಣವ‌ರ್ ಹಾಗೂ ಅದರ ವಿಡಿಯೋ ಪ್ರಸಾರ ಮಾಡಿದ್ದ ಯೂಟ್ಯೂಬರ್ ಸಮೀರ್ ವಿರುದ್ಧ ಹುಬ್ಬಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. FIR no: 01/2025 00: 299, 196(1)(໖) ໖. ಎನ್.ಎಸ್ 2023 ಅಡಿ ಪ್ರಕರಣ ದಾಖಲಾಗಿದೆ. ಜೈನ್ ಸಮಾಜದ ಮುಖಂಡ ಅಜೀರ್ ಬಸಾಪುರ ಅವರಿಂದ ದೂರು ದಾಖಲಿಸಲಾಗಿದೆ. ಗಿರೀಶ್ ಮಟ್ಟೆಣ್ಣವರ ಜೈನ್ ಧರ್ಮದ ಬಗ್ಗೆ ಅವಹೇಳನಕಾರಿ...
ಜಿಲ್ಲೆಸಂತಾಪಸುದ್ದಿಹುಬ್ಬಳ್ಳಿ

ಸಾಲಬಾಧೆ ತಾಳಲಾರದೆ ಒಂದೇ ಗ್ರಾಮದ ಇಬ್ಬರು ರೈತರ ಆತ್ಮಹತ್ಯೆ – ಕಹಳೆ ನ್ಯೂಸ್

ಹುಬ್ಬಳ್ಳಿ : ಒಂದೇ ಗ್ರಾಮದಲ್ಲಿ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ನಡೆದಿದೆ. ರವಿರಾಜ್‌ ಜಾಡರ್‌(42) ಮತ್ತು ಬಸವನಗೌಡ ಪಾಟೀಲ್‌(56) ಮೃತ ದುರ್ದೈವಿಗಳು. ಕಳೆದ 24 ಗಂಟೆಗಳಲ್ಲಿ ಇಬ್ಬರು ರೈತರು ನೇಣಿಗೆ ಶರಣಾಗಿದ್ದು ಭಾರಿ ಆತಂಕ ಮೂಡಿಸಿದೆ. ನಾಲ್ಕೈದು ವರ್ಷಗಳಿಂದ ಅತಿವೃಷ್ಟಿ, ಅನಾವೃಷ್ಟಿ ಹೊಡೆತಕ್ಕೆ ಕಂಗಾಲಾಗಿದ್ದ ರೈತರು,ಕೃಷಿಗಾಗಿ ಬ್ಯಾಂಕ್‌ ಮತ್ತು ಖಾಸಗಿಯಾಗಿ ಸಾಲ ಮಾಡಿದ್ದರು ಎಂದು ತಿಳಿದುಬಂದಿದೆ. ಕಳೆದ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು...
ಸುದ್ದಿಹುಬ್ಬಳ್ಳಿ

ಬೃಹತ್ ವೇಶ್ಯಾವಾಟಿಕೆ ಜಾಲ ಬೇಧಿಸಿದ ಹುಬ್ಬಳ್ಳಿ ಪೊಲೀಸರು: ಶೌಚಾಲಯದಲ್ಲಿ ಸುರಂಗ ಮಾರ್ಗ ಪತ್ತೆ

ಹುಬ್ಬಳ್ಳಿ: ಬೃಹತ್ ವೇಶ್ಯಾವಾಟಿಕೆ ಜಾಲವನ್ನು ಪೊಲೀಸರು ಬೇಧಿಸಿದ್ದು, ಲಾಡ್ಜ್ ಮ್ಯಾನೇಜರ್, ಸಿಬ್ಬಂದಿಯನ್ನು ಬಂಧಿಸಲಾಗಿದೆ. ಮೈಸೂರಿನ ಒಡನಾಡಿ ಸಂಸ್ಥೆ ಸಹಯೋಗದೊಂದಿಗೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಹಲವು ಮಹಿಳೆಯರನ್ನು ರಕ್ಷಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರದ ಪಾರಿಜಾತ ರೆಸಿಡೆನ್ಸಿ ಲಾಡ್ಜ್ ನಲ್ಲಿ ಈ ದಂಧೆ ನಡೆಯುತ್ತಿತ್ತು. ಲಾಡ್ಜ್ ರೂಮಿನ ಶೌಚಾಲಯದಲ್ಲಿ ರಹಸ್ಯ ಕೋಣೆ ಇದ್ದು, ಪೊಲೀಸರು ದಾಳಿ ನಡೆಸುತ್ತಿದ್ದಂತೆ ಯುವತಿಯರನ್ನು ರಹಸ್ಯ ಕೂಣೆ ಮೂಲಕ ಸುರಂಗ ಮಾರ್ಗದಲ್ಲಿ ಬೇರೆ ರೂಮುಗಳಿಗೆ ಸ್ಥಳಾಂತರಿಸಲಾಗುತ್ತಿತ್ತು....
1 2 3 4 9
Page 2 of 9