Thursday, July 23, 2026

ಚಿಕ್ಕಮಂಗಳೂರು

ಚಿಕ್ಕಮಂಗಳೂರುಸುದ್ದಿ

ಪ್ರೀತಿ ನಿರಾಕರಿಸಿದ ಅಪ್ರಾಪ್ತೆಯನ್ನು ನೆಲಕ್ಕೆ ಹಾಕಿ ತುಳಿದ ಪಾಗಲ್‌ ಪ್ರೇಮಿ -ಕಹಳೆ ನ್ಯೂಸ್

ಚಿಕ್ಕಮಗಳೂರು: ಪಾಗಲ್‌ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ ಅಪ್ರಾಪ್ತ ಬಾಲಕಿಯನ್ನು ನೆಲಕ್ಕೆ ಹಾಕಿ ತುಳಿದು ಕ್ರೌರ್ಯ ಎಸಗಿದ ಘಟನೆ ಚಿಕ್ಕಮಗಳೂರಿನಲ್ಲಿ  ನಡೆದಿದೆ. ನಗರದ ಎಸ್‌ಪಿ ಹಾಗೂ ಡಿಸಿ ಕಚೇರಿ ಪಕ್ಕದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಬಾಲಕಿಯ ಮೇಲೆ ಯುವಕ ಹಲ್ಲೆ ನಡೆಸಿದ್ದಾನೆ. ಇದನ್ನು ಕಂಡ ಸ್ಥಳೀಯರು ಬಾಲಕಿಯ ರಕ್ಷಣೆಗೆ ಧಾವಿಸಿದ್ದಾರೆ. ಈ ವೇಳೆ ಯುವಕ ಅಲ್ಲಿಂದ ಓಡಿ ಹೋಗಿದ್ದಾನೆ. ಆತನನ್ನು ಸ್ಥಳೀಯರು ಬೆನ್ನಟ್ಟಿ ಎಸ್‌ಪಿ ಮನೆ ಬಳಿ ಹಿಡಿದಿದ್ದಾರೆ. ಬಳಿಕ ಯುವಕನಿಗೆ ಧರ್ಮದೇಟು...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ನಡು ರಸ್ತೆಯಲ್ಲಿ ತಲ್ವಾರ್‌ನಿಂದ ಬೃಹತ್ ಕೇಕ್‌ ಕತ್ತರಿಸಿ ಬರ್ತಡೇ ಸೆಲೆಬ್ರೇಷನ್‌ : ಪುಂಡನ ವಿರುದ್ಧ ಎಫ್‌ಐಆರ್‌ – ಕಹಳೆ ನ್ಯೂಸ್

ಚಿಕ್ಕಮಗಳೂರು: ಇಲ್ಲಿನ ವಾಜಪೇಯಿ ಲೇಔಟ್‌ನಲ್ಲಿ ಯುವಕರ ಗುಂಪೊಂದು ನಡು ರಸ್ತೆಯಲ್ಲಿ ತಲ್ವಾರ್‌ನಿಂದ ಕೇಕ್ ಕತ್ತರಿಸಿ ಹುಟ್ಟುಹಬ್ಬ (Birthday) ಆಚರಿಸಿ, ಪುಂಡಾಟ ಮೆರೆದಿದೆ. ಮಹಮದ್ ಸಮೀರ್ ಎಂಬಾತ ಮಧ್ಯರಾತ್ರಿ ವೇಳೆ ರೌಡಿ ಸ್ಟೈಲ್‌ನಲ್ಲಿ ಕಾರಿನಿಂದ ಕೆಳಗಿಳಿದು ಲಾಂಗ್‌ನಿಂದ ಕೇಕ್ ಕತ್ತರಿಸಿದ್ದಾನೆ. ಸುಮಾರು 5 ಕೆಜಿಗೂ ಅಧಿಕ ತೂಕದ ಬೃಹತ್ ಕೇಕ್ ಕತ್ತರಿಸಲಾಗಿದೆ. ಈ ವೇಳೆ 10ಕ್ಕೂ ಹೆಚ್ಚು ಯುವಕರು ಸ್ಥಳದಲ್ಲಿದ್ದರು. ಇದನ್ನು ವಿಡಿಯೋ ಮಾಡಿದ್ದ ಯುವಕರು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ವಿಡಿಯೋ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

8 ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ 24 ಗಂಟೆ ಆಂಬುಲೆನ್ಸ್‌ನಲ್ಲೇ ನರಳಾಡಿದ ಗಾಯಾಳು-ಕಹಳೆ ನ್ಯೂಸ್

ಚಿಕ್ಕಮಗಳೂರು: ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನಿಗೆ ಆಸ್ಪತ್ರೆಯಲ್ಲಿ ಬೆಡ್ ಸಿಗದೇ 24 ಗಂಟೆ ಆಂಬುಲೆನ್ಸ್‌ನಲ್ಲೇ ಕಾಲ ಕಳೆದ ಕರುಣಾಜನಕ ಘಟನೆಗೆ ಕಾಫಿನಾಡು  ಸಾಕ್ಷಿಯಾಗಿದೆ. ಚಿಕ್ಕಮಗಳೂರು ತಾಲೂಕಿನ ಅರೆನೂರು ಬಳಿ ರವಿ ಎಂಬಾತ ಬೈಕ್‌ನಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ. ಚಿಕ್ಕಮಗಳೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ವೈದ್ಯರು ಮಂಗಳೂರಿಗೆ ರೆಫರ್ ಮಾಡಿದ್ದರು. ಆಂಬುಲೆನ್ಸ್‌ನಲ್ಲಿ ಮಂಗಳೂರಿಗೆ ಹೋದ ಗಾಯಾಳು ಯುವಕನಿಗೆ ಸುಮಾರು 8 ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಅದೇ ಆಂಬುಲೆನ್ಸ್‌ನಲ್ಲೇ ವಾಪಸ್ ಆಲ್ದೂರು ಗ್ರಾಮಕ್ಕೆ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕೌಟುಂಬಿಕ ಕಲಹ :ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣು -ಕಹಳೆ ನ್ಯೂಸ್

ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ  ಬೇಸತ್ತು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ. ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್‌ರವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮುದ್ದಾದ ಮಕ್ಕಳಿದ್ದರು. ಸದ್ಯ ಪದ್ಮ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲೇ ಇದ್ದು, ಪೊಲೀಸರು ಪದ್ಮ ಕುಟುಂಬಸ್ಥರ ಬರುವಿಕೆಗಾಗಿ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಸಾಂಬಾರ್ ಮಾಡಿಲ್ಲ ಅಂತ ಅಪ್ಪ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ -ಕಹಳೆ ನ್ಯೂಸ್

ಚಿಕ್ಕಮಗಳೂರು: ಸಾಂಬಾರ್  ಮಾಡಿಲ್ಲ ಅಂತ ಅಪ್ಪ  ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ನಡೆದಿದೆ. ಸೌಜನ್ಯ ಪೂಜಾರಿ (22) ಮೃತ ದುರ್ದೈವಿ. ಶನಿವಾರ ಬೆಳಗ್ಗೆ ತರಕಾರಿ ತಂದುಕೊಟ್ಟು ಸಾಂಬಾರ್ ಮಾಡುವಂತೆ ಯುವತಿಗೆ ಅಪ್ಪ ಹೇಳಿದ್ದರು. ಮಧ್ಯಾಹ್ನ ಊಟಕ್ಕೆ ಬಂದಾಗ ಮಗಳು ಸೌಜನ್ಯ ಸಾಂಬಾರ್ ಮಾಡಿರಲಿಲ್ಲ. ಸಾಂಬಾರ್ ಏಕೆ ಮಾಡಿಲ್ಲ ಎಂದು ಅಪ್ಪ ಬೈದಿದ್ದಾರೆ. ಮಗಳಿಗೆ ಬೈದ ಅಪ್ಪ ಸಾಂಬಾರ್ ತರಲು ಪಕ್ಕದ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ :ಪ್ರಯಾಣಿಕರು ಜಸ್ಟ್‌ ಮಿಸ್‌ -ಕಹಳೆ ನ್ಯೂಸ್

ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರಿನ ಮುಂಭಾಗ ಬೃಹತ್‌ ಮರವೊಂದು ಬಿದ್ದ ಘಟನೆ ಚಿಕ್ಕಮಗಳೂರು  ತಾಲೂಕಿನ ಆಲ್ದೂರು ಬಳಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಏ.24ರ ಸಂಜೆ ಆಲ್ದೂರಿನಲ್ಲಿ ಭಾರೀ ಮಳೆ ಸುರಿಯುತ್ತಿತ್ತು. ಈ ವೇಳೆ ಕಾರಿನಲ್ಲಿ ಹಾಸನ ಮೂಲದ ನಾಲ್ವರು ಪ್ರಯಾಣಿಸುತ್ತಿದ್ದರು. ಈ ವೇಳೆ ಮರ ಬಿದ್ದಿದೆ. ಮರ ಬೀಳುವ ದೃಶ್ಯ ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರ ಮೊಬೈಲ್‌ನಲ್ಲಿ ಸೆರೆಯಾಗಿದೆ.   ಮರ ಬೀಳುತ್ತಿದ್ದಂತೆ ಚಾಲಕ ಕಾರನ್ನು ನಿಯಂತ್ರಣಕ್ಕೆ ತೆಗೆದುಕೊಂಡು ನಿಲ್ಲಿಸಿದ್ದಾನೆ....
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಚಿಕ್ಕಮಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ ಜಯಂತಿ (Ambedkar Jayanti) ಮೆರವಣಿಗೆ ವೇಳೆ ಭಾರಿ ಅಚಾತುರ್ಯವೊಂದು ಬಿಳೇಕಲ್ಲು ಗ್ರಾಮದಲ್ಲಿ ನಡೆದಿದೆ. ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿ ಕಾರು ಚಲಾಯಿಸಿದ ಪರಿಣಾಮ 7 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. 7 ಜನರಿಗೆ ಗಾಯವಾಗಿದೆ. 7 ವರ್ಷದ ಮಗು ಸಾನ್ವಿ ಸಾವನ್ನಪ್ಪಿದೆ. 11 ವರ್ಷದ ನಿಶ್ಚಿತ್-ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಗಾಯಗೊಂಡಿದ್ದು, ಹಾಸನದ ಮೆಡಿಕಲ್‌ ಕಾಲೇಜಿಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಅಪಘಾತವಾಗುತ್ತಿದ್ದಂತೆ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕೇರಳದಿಂದ  ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿ 16 ವರ್ಷದ ವಿದ್ಯಾರ್ಥಿನಿ  ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ  ಭಾಗದಲ್ಲಿ ನಡೆದಿದೆ. ಶ್ರೀನಂದನ (16) ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ ಚಂದ್ರದ್ರೋಣ ಸಾಲಿನಲ್ಲಿ ಪ್ರಕೃತಿ ಸೌಂದರ್ಯ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಕತ್ತಲಾಗಿದ್ದರಿಂದ ಶ್ರೀನಂದನ ನಾಪತ್ತೆಯಾಗಿದ್ದಾಳೆ. ಜೊತೆಗಿದ್ದವರು ಹುಡುಕಾಡಿದರೂ ಪತ್ತೆಯಾಗಿಲ್ಲ....
1 2 3 8
Page 1 of 8