Thursday, April 23, 2026

ಚಿಕ್ಕಮಂಗಳೂರು

ಚಿಕ್ಕಮಂಗಳೂರುಜಿಲ್ಲೆಸುದ್ದಿ

ಅಂಬೇಡ್ಕರ್‌ ಜಯಂತಿ ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿಯಿಂದ ಕಾರು ಚಾಲನೆ – 7 ವರ್ಷದ ಮಗು ಸ್ಥಳದಲ್ಲೇ ಸಾವು -ಕಹಳೆ ನ್ಯೂಸ್

ಚಿಕ್ಕಮಗಳೂರು: ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್‌ ಜಯಂತಿ (Ambedkar Jayanti) ಮೆರವಣಿಗೆ ವೇಳೆ ಭಾರಿ ಅಚಾತುರ್ಯವೊಂದು ಬಿಳೇಕಲ್ಲು ಗ್ರಾಮದಲ್ಲಿ ನಡೆದಿದೆ. ಮೆರವಣಿಗೆಯಲ್ಲಿದ್ದವರ ಮೇಲೆ ಮದ್ಯ ವ್ಯಸನಿ ಕಾರು ಚಲಾಯಿಸಿದ ಪರಿಣಾಮ 7 ವರ್ಷದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. 7 ಜನರಿಗೆ ಗಾಯವಾಗಿದೆ. 7 ವರ್ಷದ ಮಗು ಸಾನ್ವಿ ಸಾವನ್ನಪ್ಪಿದೆ. 11 ವರ್ಷದ ನಿಶ್ಚಿತ್-ತೃಪ್ತಿ, ತಿಮ್ಮರಾಜು, ಉಷಾ, ಚೇತನ್, ಸೃಷ್ಠಿ ಹಾಗೂ ನಾಗರಾಜ್ ಗಾಯಗೊಂಡಿದ್ದು, ಹಾಸನದ ಮೆಡಿಕಲ್‌ ಕಾಲೇಜಿಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಅಪಘಾತವಾಗುತ್ತಿದ್ದಂತೆ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕೇರಳದಿಂದ ಪ್ರವಾಸ ಬಂದಿದ್ದ 10ನೇ ತರಗತಿ ವಿದ್ಯಾರ್ಥಿನಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕೇರಳದಿಂದ  ಚಿಕ್ಕಮಗಳೂರು ಪ್ರವಾಸಕ್ಕೆ ಬಂದಿದ್ದ 40 ಜನರ ತಂಡದಲ್ಲಿ 16 ವರ್ಷದ ವಿದ್ಯಾರ್ಥಿನಿ  ಚಂದ್ರದ್ರೋಣ ಪರ್ವತಗಳ ಸಾಲಿನಲ್ಲಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ  ಭಾಗದಲ್ಲಿ ನಡೆದಿದೆ. ಶ್ರೀನಂದನ (16) ನಾಪತ್ತೆಯಾಗಿರುವ 10ನೇ ತರಗತಿ ವಿದ್ಯಾರ್ಥಿನಿ. ಕೇರಳದಿಂದ ಬಂದಿದ್ದ 40 ಜನರ ತಂಡ ಮಂಗಳವಾರ ಸಂಜೆ 6:30ರ ಸುಮಾರಿಗೆ ಚಂದ್ರದ್ರೋಣ ಸಾಲಿನಲ್ಲಿ ಪ್ರಕೃತಿ ಸೌಂದರ್ಯ ವೀಕ್ಷಣೆಗೆ ತೆರಳಿದ್ದರು. ಈ ವೇಳೆ ಕತ್ತಲಾಗಿದ್ದರಿಂದ ಶ್ರೀನಂದನ ನಾಪತ್ತೆಯಾಗಿದ್ದಾಳೆ. ಜೊತೆಗಿದ್ದವರು ಹುಡುಕಾಡಿದರೂ ಪತ್ತೆಯಾಗಿಲ್ಲ....
ಚಿಕ್ಕಮಂಗಳೂರುಜಿಲ್ಲೆಸಂತಾಪಸುದ್ದಿ

ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕೆಕೆಆರ್‌ಟಿಸಿ ಬಸ್ ಪಲ್ಟಿ : 8 ಮಂದಿಗೆ ಗಾಯ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕುಕ್ಕನೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ ಬಸ್ ಚಿಕ್ಕಮಗಳೂರು ತಾಲೂಕಿನ ಕೊಡಾಳ್ ಬಳಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಅಪಘಾತದಲ್ಲಿ ಎಂಟು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಮಾಡಲಾಗುತ್ತಿದೆ. ಬಸ್‍ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಶಾಲೆ ಬಿಸಿಯೂಟಕ್ಕೂ ತಟ್ಟಿದ ಗ್ಯಾಸ್‌ ಅಭಾವದ ಬಿಸಿ : ಸೌದೆ ಒಲೆಯಲ್ಲೇ ಅಡುಗೆ ಮಾಡಿದ ಸಿಬ್ಬಂದಿ -ಕಹಳೆ ನ್ಯೂಸ್

ಚಿಕ್ಕಮಗಳೂರು: ಅಮೆರಿಕ, ಇಸ್ರೇಲ್ ಹಾಗೂ ಇರಾನ್ ನಡುವಿನ ಸಂಘರ್ಷದಿಂದ ಉಂಟಾದ ಗ್ಯಾಸ್ ಅಭಾವ ಶಾಲೆಗಳ ಬಿಸಿಯೂಟ ಯೋಜನೆ ಮೇಲೂ ಪರಿಣಾಮ ಬೀರಿದೆ. ಗ್ಯಾಸ್ ಇಲ್ಲದೇ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಿಬ್ಬಂದಿ ಅಡುಗೆ ಮಾಡಲು ಪರದಾಡಿದ್ದಾರೆ. ಸಿಲಿಂಡರ್‌ ಸರಬರಾಜಾಗದೇ ಇದ್ದಿದ್ದರಿಂದ ಶಾಲೆಯ ಸಿಬ್ಬಂದಿ ಸೌದೆ ಬಳಸಿ ಬಯಲಲ್ಲಿ ಬಿಸಿಯೂಟ ಸಿದ್ಧಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಶಾಲೆಯ ಸಿಬ್ಬಂದಿ, ಐದು ದಿನಗಳಿಂದ ಗ್ಯಾಸ್ ಇಲ್ಲದೆ ಸೌದೆಯಲ್ಲೇ ಅಡುಗೆ ಮಾಡುತ್ತಿದ್ದೇವೆ....
ಚಿಕ್ಕಮಂಗಳೂರುಜಿಲ್ಲೆಸುದ್ದಿ

50 ಅಡಿ ಆಳಕ್ಕೆ ಬಿದ್ದ ಸಿಮೆಂಟ್ ಲಾರಿ : ಚಾಲಕ, ಕ್ಲೀನರ್ ಪವಾಡಸದೃಶ ಪಾರು – ಕಹಳೆ ನ್ಯೂಸ್

ಚಿಕ್ಕಮಗಳೂರು: ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ 12 ಚಕ್ರದ ಲಾರಿಯೊಂದು ಸುಮಾರು 50 ಅಡಿ ಆಳಕ್ಕೆ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಕೆಳಗೂರು ಟೀ ಎಸ್ಟೇಟ್ ಸಮೀಪ ನಡೆದಿದೆ. ದೊಡ್ಡಬಳ್ಳಾಪುರದಿಂದ ಹಿರೇಬೈಲು ಗ್ರಾಮಕ್ಕೆ ಸಿಮೆಂಟ್ ಸಾಗಿಸುತ್ತಿದ್ದ ಲಾರಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಟೀ ಎಸ್ಟೇಟಿನ ಲೈನ್ ಮನೆಗಳ ಬಳಿ ಪ್ರಪಾತಕ್ಕೆ ಉರುಳಿದೆ.‌ ಅಪಘಾತದಲ್ಲಿ ಲಾರಿ ಚಾಲಕ ಪಾರಾಗಿದ್ದು, ಕ್ಲೀನರ್ ಗಂಭೀರ ಗಾಯಗೊಂಡಿದ್ದಾರೆ. ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಬೆಂಗಳೂರಿಂದ ಶೃಂಗೇರಿಗೆ ಹೊರಟಿದ್ದ ಎರಡು ಸರ್ಕಾರಿ ಬಸ್‌ ಸೀಜ್‌! -ಕಹಳೆ ನ್ಯೂಸ್

ಚಿಕ್ಕಮಗಳೂರು: ಬೆಂಗಳೂರಿಂದ ಶೃಂಗೇರಿಗೆ ಹೊರಟಿದ್ದ ಚಿಕ್ಕಮಗಳೂರು ಡಿಪೋಗೆ ಸೇರಿದ ಎರಡು ಸರ್ಕಾರಿ ಬಸ್‌ಗಳನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಸೀಜ್‌ ಮಾಡಲಾಗಿದೆ. ಅಪಘಾತದ ಪರಿಹಾರದ ಹಣ ಕ್ಲೈಮ್ ಆಗದಿದ್ದಕ್ಕೆ ಕೋರ್ಟ್‌ ಆದೇಶದ ಹಿನ್ನೆಲೆ ವಕೀಲರ ತಂಡ ಬಸ್‌ನ್ನು ಸೀಜ್‌ ಮಾಡಿದೆ. ಬಸ್‌ನ್ನು ಚನ್ನರಾಯಪಟ್ಟಣ ಕೋರ್ಟ್ ಆವರಣಕ್ಕೆ ತಂದು ನಿಲ್ಲಿಸುವಂತೆ ವಕೀಲರು ಸೂಚನೆ ನೀಡಿದ್ದಾರೆ. ಈ ವೇಳೆ ಬಸ್‌ನಲ್ಲಿದ್ದ ಪ್ರಯಾಣಿಕರನ್ನು ನಡುರಸ್ತೆಯಲ್ಲಿ ಇಳಿಸಿದ್ದಕ್ಕೆ ಜನ ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿಗೆ ಬರುವಾಗ ಮಾರ್ಗ...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಚಾರ್ಮಾಡಿ ದಟ್ಟಡವಿ ಮಧ್ಯೆ ಆನೆ, ಅಪಘಾತದ ಆತಂಕದಲ್ಲಿ ಮಂಜುನಾಥನ ಭಕ್ತರ ಪಾದಯಾತ್ರೆ!-ಕಹಳೆ ನ್ಯೂಸ್

ಚಿಕ್ಕಮಗಳೂರು: ಮಹಾಶಿವರಾತ್ರಿಯಂದು ಶಿವನ ತವರು ಎಂದೇ ಭಾವಿಸಿರುವ ಧರ್ಮಸ್ಥಳದಲ್ಲಿ ಶಿವರಾತ್ರಿ ಆಚರಿಸಬೇಕೆಂದು ಅಸಂಖ್ಯಾತ ಭಕ್ತರು ಆಸೆ ಹೊತ್ತಿರುತ್ತಾರೆ. ಅದಕ್ಕಾಗಿ ವಾರ-ತಿಂಗಳುಗಳ ಮುಂಚೆಯೇ ಸಕಲ ಸಿದ್ಧತೆ ಮಾಡಿಕೊಂಡಿರುತ್ತಾರೆ. ದಿನಕ್ಕೆ ಇಷ್ಟು ಕಿ.ಮೀ. ನಡೆದರೆ ಶಿವರಾತ್ರಿಯಂದೇ ಶಿವನೂರು ತಲುಪುತ್ತೇವೆಂದು ಲೆಕ್ಕಾಚಾರ ಕೂಡ ಹಾಕಿಕೊಂಡಿರುತ್ತಾರೆ. ಭಕ್ತರ ಊರುಗಳ ದೂರಕ್ಕನುಗುಣವಾಗಿ ಪಾದಯಾತ್ರೆ ಆರಂಭಿಸಿ ಶಿವರಾತ್ರಿಯಂದು ಧರ್ಮಸ್ಥಳ ತಲುಪುತ್ತಾರೆ. ಹೀಗೆ ಸಾಗುವ ಭಕ್ತರಿಗೆ ದಾರಿಯುದ್ದಕ್ಕೂ ನೂರಾರು ಕಷ್ಟಗಳು. ಭಕ್ತರು ಅದೆಲ್ಲವನ್ನೂ ಮೆಟ್ಟಿ ನೂರಾರು ಕಿ.ಮೀ. ಪಾದಯಾತ್ರೆ ಹೊರಟು...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಕಾಳ್ಗಿಚ್ಚು : ಎಕರೆಗಟ್ಟಲೆ ಸೂಕ್ಷ್ಮ ಹುಲ್ಲುಗಾವಲು ಬೆಂಕಿಗಾಹುತಿ – ಕಹಳೆ ನ್ಯೂಸ್

ಚಿಕ್ಕಮಗಳೂರು: ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿ ಅರಣ್ಯ ವ್ಯಾಪ್ತಿಯಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ ಸುಮಾರು ಒಂದೂವರೆ-ಎರಡು ಕಿ.ಮೀ. ಪಶ್ಚಿಮ ಘಟ್ಟಗಳ ತಪ್ಪಲಿನ ಅಪರೂಪದ ಹುಲ್ಲುಗಾವಲು ಬೆಂಕಿಗೆ ಆಹುತಿಯಾಗಿದೆ. ಮೂಡಿಗೆರೆ ಅರಣ್ಯ ವಲಯದೊಳಗೆ ಕಾಣಿಸಿಕೊಂಡಿರುವ ಬೆಂಕಿಯಿಂದ ಪಶ್ಚಿಮ ಘಟ್ಟಗಳ ಸಾಲಿನ ಸೂಕ್ಷ್ಮ ಹುಲ್ಲುಗಾವಲು ಪ್ರದೇಶ ಸಂಪೂರ್ಣವಾಗಿ ಧಗಧಗಿಸಿ ಉರಿಯುತ್ತಿದೆ. ಗಾಳಿಯ ವೇಗ ಕೂಡ ಹೆಚ್ಚಿರುವುದರಿಂದ ಬೆಂಕಿಯ ಕೆನ್ನಾಲಿಗೆ ಮತ್ತಷ್ಟು ಹರಡಿದ್ದು ಅರಣ್ಯ ಸಂಪತ್ತಿಗೆ...
1 2 3 8
Page 1 of 8