Thursday, April 23, 2026

ಚಿಕ್ಕಮಂಗಳೂರು

ಅಂಕಣಚಿಕ್ಕಮಂಗಳೂರುಜಿಲ್ಲೆಸುದ್ದಿ

ಕಳಸದಲ್ಲಿ ಧಾರಾಕಾರ ಮಳೆ ; ಟೀ ಎಸ್ಟೇಟ್‍ಗೆ ನುಗ್ಗಿದ ನೀರು, ಕಾರ್ಮಿಕರ ಪರದಾಟ-ಕಹಳೆ ನ್ಯೂಸ್

ಚಿಕ್ಕಮಗಳೂರು: ಕಳಸ  ತಾಲೂಕಿನ ಸುತ್ತಮುತ್ತ ಭಾರೀ ಮಳೆಯಾಗುತ್ತಿದೆ. ಪರಿಣಾಮ ತಾಲೂಕಿನ ಕೆಳಗೊರು ಗ್ರಾಮದಲ್ಲಿ ಟೀ ಎಸ್ಟೇಟ್‍ಗೆ ನೀರು ನುಗ್ಗಿದೆ. ಎಸ್ಟೇಟ್‍ಗೆ ನೀರು ನುಗ್ಗಿದ ವೇಳೆ, ಮಹಿಳಾ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಹಠಾತ್ ಆಗಿ ನೀರು ನುಗ್ಗಿದ್ದರಿಂದ ಕಾರ್ಮಿಕರು ಕಂಗಾಲಾಗಿದ್ದಾರೆ. ಕಟಾವು ಮಾಡಿದ್ದ ಟೀ ಎಲೆಗಳನ್ನು ಕಾಪಾಡಿಕೊಳ್ಳಲು ಪರದಾಡಿದ್ದಾರೆ. ನಿರಂತರ ಮಳೆಯಿಂದ ಮಲೆನಾಡಿಗರ ಜನಜೀವನ ಹೈರಾಣಾಗಿದೆ. ನಿರಂತರ ಸುರಿಯುತ್ತಿರೋ ಮಳೆಯಿಂದ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. ಕಾಫಿ ತೋಟದಲ್ಲಿ ಅರ್ಧಕರ್ಧ ಬೆಳೆ ನಾಶವಾಗಿದೆ....
ಕ್ರೈಮ್ಚಿಕ್ಕಮಂಗಳೂರುಸುದ್ದಿ

ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯ ಕೊಲೆ ; ಕಿಲಾಡಿ ಸೊಸೆ, ಪ್ರಿಯಕರ ಅರೆಸ್ಟ್-ಕಹಳೆ ನ್ಯೂಸ್

ಚಿಕ್ಕಮಗಳೂರು: ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆಯನ್ನು ಕೊಲೆ ಮಾಡಿದ್ದ ಸೊಸೆ ಹಾಗೂ ಆಕೆಯ ಪ್ರಿಯಕರನನ್ನು ಅಜ್ಜಂಪುರ  ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಆಶ್ವಿನಿ ಹಾಗೂ ಆಂಜನೇಯ ಎಂದು ಗುರುತಿಸಲಾಗಿದೆ. ಆರೋಪಿಗಳು ಆ.10 ರಂದು ಮುದ್ದೆಯಲ್ಲಿ ನಿದ್ರೆ ಮಾತ್ರೆ ಹಾಕಿ ಅತ್ತೆ ದೇವಿರಮ್ಮಳನ್ನು ಕೊಂದಿದ್ದರು. ಬಳಿಕ ಮನೆಯಲ್ಲಿ ಹಣ ಕದ್ದಿದ್ದರು. ಆರಂಭದಲ್ಲಿ ಕುಟುಂಬಸ್ಥರು ಸಹಜ ಸಾವು ಎಂದು ಅಂತ್ಯಸಂಸ್ಕಾರ ಮಾಡಿ ಮುಗಿಸಿದ್ದರು. ಆದರೆ ಹಣ ಕಳ್ಳತನ ಆಗಿದ್ದು ಗಮನಿಸಿ,...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಚಿಕ್ಕಮಗಳೂರು-ತಿರುಪತಿ ರೈಲಿಗೆ ‘ದತ್ತಪೀಠ ಎಕ್ಸ್’ಪ್ರೆಸ್’ ಎಂದು ಹೆಸರಿಡುವಂತೆ ಹಿಂದೂ ಸಂಘಟನೆಗಳ ಪಟ್ಟು – ಕಹಳೆ ನ್ಯೂಸ್

ಚಿಕ್ಕಮಗಳೂರು : ಜುಲೈ 17 ರಿಂದ ಆರಂಭವಾಗಲಿರುವ ಚಿಕ್ಕಮಗಳೂರು-ತಿರುಪತಿ ಎಕ್ಸ್ಪ್ರೆಸ್ ರೈಲಿಗೆ ದತ್ತಪೀಠ ಎಕ್ಸ್ಪ್ರೆಸ್ ಎಂದು ಹೆಸರಿಡುವಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದೆ. ಚಿಕ್ಕಮಗಳೂರಿನಿಂದ ತಿರುಪತಿಗೆ ಸಂಚರಿಸುವ ಎಕ್ಸ್ಪ್ರೆಸ್ ರೈಲಿಗೆ ನಿನ್ನೆ ಸಚಿವ ವಿ. ಸೋಮಣ್ಣ ಸಾಂಕೇತಿಕವಾಗಿ ಚಾಲನೆ ನೀಡಿದ್ದರು. ಇದೀಗ ಈ ರೈಲಿಗೆ ದತ್ತಪೀಠ ಎಕ್ಸ್ಪ್ರೆಸ್ ಎಂದು ಹೆಸರಿಡುವಂತೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿದೆ. ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್ ದತ್ತಪೀಠ ಎಕ್ಸ್ಪ್ರೆಸ್” ಚಿಕ್ಕಮಗಳೂರು-ತಿರುಪತಿ ಎಕ್ಸ್ಪ್ರೆಸ್ ರೈಲಿಗೆ ದತ್ತಪೀಠ...
ಚಿಕ್ಕಮಂಗಳೂರುಸುದ್ದಿ

ಸರ್ಕಾರಿ ಬಸ್ಸಿಗೆ ಡಿಕ್ಕಿ ಹೊಡೆದು ನವಿಲು ಸಾ*ವು. ಬಸ್ಸಿನ ಗಾಜು ಪೀಸ್ ಪೀಸ್-ಕಹಳೆ ನ್ಯೂಸ್

ಚಿಕ್ಕಮಗಳೂರು: ಸರಕಾರಿ ಬಸ್ಸಿಗೆ ಡಿಕ್ಕಿ ಹೊಡೆದು ರಾಷ್ಟ್ರ ಪಕ್ಷಿ ನವಿಲು ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಮಚ್ಚೇರಿ ಬಳಿ ಶನಿವಾರ (ಜು.12) ಸಂಭವಿಸಿದೆ. ಕಡೂರಿನಿಂದ ಬೆಂಗಳೂರಿಗೆ ಹೊರಟಿದ್ದ ಸರಕಾರಿ ಬಸ್ಸಿಗೆ ನವಿಲು ಏಕಾಏಕಿ ಅಡ್ಡ ಬಂದಿದೆ ಕೂಡಲೇ ಚಾಲಕ ಎಚ್ಚೆತ್ತು ಬ್ರೇಕ್ ಹಾಕಿದ್ದಾರೆ ಆದರೆ ನವಿಲು ಬಸ್ಸಿನ ಎದುರಿನ ಗಾಜಿಗೆ ಬಡಿದು ಸಾವನ್ನಪ್ಪಿದೆ. ಘಟನೆಯಲ್ಲಿ ಬಸ್ಸಿನ ಗಾಜು ಪುಡಿಯಾಗಿದ್ದು, ಸವಾರರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ...
ಚಿಕ್ಕಮಂಗಳೂರುಸುದ್ದಿ

ನೆಮ್ಮಾರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮತ್ತೆ ಗುಡ್ಡ ಕುಸಿತ: ವಾಹನ ಸಂಚಾರ ಸಂಪೂರ್ಣ ಸ್ಥಗಿತ: ಪರ್ಯಾಯ ಮಾರ್ಗದಲ್ಲಿ ತೆರಳಲು ಸೂಚನೆ…! -ಕಹಳೆ ನ್ಯೂಸ್

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಿಂದಾಗಿ ಗುಡ್ಡಕುಸಿತ ಸಂಭವಿಸುತ್ತಿದ್ದು, ಶೃಗೇರಿ ಬಳಿ ನೆಮ್ಮಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರವಾಗಿ ಗುಡ್ಡ ಕುಸಿಯುತ್ತಿದೆ. ಭಾರಿ ಮಳೆಯಿಂದಾಗಿ ನೆಮ್ಮಾರು ಬಳಿ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ಶೃಂಗೇರಿ-ಮಂಗಳೂರು ರಸ್ತೆ ಮಾರ್ಗ ಬಂದ್ ಆಗಿದೆ. ರಸ್ತೆಯಲ್ಲಿ ಬಿದ್ದಿರುವ ಮಣ್ಣು, ಮರಗಳನ್ನು ತೆರವುಗೊಳಿಸಲು ಮಳೆ ಅಡ್ಡಿಯಾಗಿದೆ. ಈ ಭಗದಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಬದಲಿ ಮಾರ್ಗದಲ್ಲಿ ತೆರಳುವಂತೆ ವಾಹನ ಸವಾರರಿಗೆ ಪೊಲೀಸರು ಸೂಚನೆ ನೀಡಿದ್ದಾರೆ....
ಚಿಕ್ಕಮಂಗಳೂರುಜಿಲ್ಲೆಸುದ್ದಿಹೆಚ್ಚಿನ ಸುದ್ದಿ

ಟ್ರಕ್ಕಿಂಗ್ ಗೆಂದು ಬಂದು ದಾರಿ ತಪ್ಪಿ ಕಾಡಿನ ಮಧ್ಯದಲ್ಲಿ ನಿತ್ರಾಣಗೊಂಡ ಕಾಲೇಜು ವಿದ್ಯಾರ್ಥಿಗಳು -ಕಹಳೆ ನ್ಯೂಸ್

ಚಿಕ್ಕಮಗಳೂರು: ಟ್ರಕ್ಕಿಂಗ್ ಗೆಂದು ಬಂದು ದಟ್ಟ ಕಾಡಿನಲ್ಲಿ ದಾರಿ ತಪ್ಪಿ ಅಲೆದು ಅಲೆದು ಸುಸ್ತಾಗಿ ಮೆಡಿಕಲ್ ಕಾಲೇಜಿನ ಹತ್ತು ಮಂದಿ ವಿದ್ಯಾರ್ಥಿಗಳು ನಿತ್ರಾಣಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಬಲ್ಲಾಳರಾಯನದುರ್ಗಾದಲ್ಲಿ ನಡೆದಿದೆ. ಚಿತ್ರದುರ್ಗದ ಬಸವೇಶ್ವರ ಮೆಡಿಕಲ್ ಕಾಲೇಜಿನ 5 ಹುಡುಗರು ಮತ್ತು 5 ಹುಡುಗಿಯರು ಬಲ್ಲಾಳರಾಯನ ದುರ್ಗಾ ಕಡೆಯಿಂದ ಟಿಕೆಟ್ ಬುಕ್ ಮಾಡಿ, ಬಂಡಾಜೆ ಭಾಗದಿಂದ ಟ್ರಕ್ಕಿಂಗ್ ಹೊರಟಿದ್ದಾರೆ ಆದರೆ ಕಾಡಿನ ಮಧ್ಯೆ ಬರುತ್ತಿದ್ದಂತೆ ದಾರಿ ತಪ್ಪಿ ಕಾಡಿನಲ್ಲಿ ಅಲೆದು ಅಲೆದು...
ಚಿಕ್ಕಮಂಗಳೂರುಜಿಲ್ಲೆಸುದ್ದಿ

ಕುಂಭಮೇಳದಲ್ಲಿ ನಾಪತ್ತೆಯಾಗಿದ್ದ ಅರ್ಚಕ 6 ತಿಂಗಳ ಬಳಿಕ ಮನೆಗೆ ವಾಪಸ್ -ಕಹಳೆ ನ್ಯೂಸ್

ಚಿಕ್ಕಮಗಳೂರು: ಕುಟುಂಬಸ್ಥರ ಜೊತೆ ಕಳೆದ ಜನವರಿಯಲ್ಲಿ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳಕ್ಕೆ ತೆರಳಿ ನಾಪತ್ತೆಯಾಗಿದ್ದ ಅರ್ಚಕರೊಬ್ಬರು ಬರೋಬ್ಬರಿ ಆರು ತಿಂಗಳ ಬಳಿಕ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ. ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ ಆರು ತಿಂಗಳ ಬಳಿಕ ಮನೆಗೆ ವಾಪಸ್ಸಾದ ವ್ಯಕ್ತಿ. ತಂಗಲಿ ಗ್ರಾಮದ ಚನ್ನಕೇಶವ ಸ್ವಾಮಿ ದೇವಾಲಯದ ಅರ್ಚಕನಾಗಿರುವ ನರಸಿಂಹಮೂರ್ತಿ ಅವರು ಪುತ್ರ ಬದರೀನಾಥ್ ಜೊತೆ ಕುಟುಂಬ ಸಮೇತ ಕುಂಭ ಮೇಳಕ್ಕೆ ಹೋಗಿದ್ದರು ಈ ವೇಳೆ...
ಚಿಕ್ಕಮಂಗಳೂರುಜಿಲ್ಲೆರಾಜ್ಯಸುದ್ದಿ

ರಾತ್ರೋ ರಾತ್ರಿ ಮರಳು ಅಡ್ಡೆ ಮೇಲೆ ತಹಶೀಲ್ದಾರ್ ದಂಪತಿಗಳಿಂದ ದಾಳಿ : 6 ಜನ ಅರೆಸ್ಟ್ -ಕಹಳೆ ನ್ಯೂಸ್

ಚಿಕ್ಕಮಗಳೂರು : ಅಕ್ರಮವಾಗಿ ಮರಳು ದಂಧೆ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ರಾತ್ರೋರಾತ್ರಿ ತಹಶೀಲ್ದಾರ್ ದಂಪತಿಗಳು ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ತಹಸೀಲ್ದಾರ್ ಲಿಖಿತಾ ಮೋಹನ್ ಅವರಿಂದ ಏಕಕಾಲಕ್ಕೆ ದಾಳಿ ನಡೆದಿದೆ. ದಾಳಿಯ ವೇಳೆ 4 ಪಿಕಪ್ ವಾಹನಗಳನ್ನು ಜಪ್ತಿ ಮಾಡಿಕೊಂಡಿದ್ದು 6 ಜನರನ್ನು ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ತುಂಗಾ ನದಿಯಲ್ಲಿ ಅಕ್ರಮವಾಗಿ ಮರಳು ಮಾಫಿಯಾ ನಡೆಸುತ್ತಿರುವ...
1 2 3 4 5 6 8
Page 4 of 8