Recent Posts

Friday, September 11, 2026

ಬಳ್ಳಾರಿ

ಜಿಲ್ಲೆಬಳ್ಳಾರಿಸುದ್ದಿ

ಅಕ್ರಮ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್‌ಗೆ ಅಧಿಕಾರಿಗಳ ದಾಳಿ :ಮಾಲೀಕ ವಶಕ್ಕೆ – ಕಹಳೆ ನ್ಯೂಸ್

ಬಳ್ಳಾರಿ: ಅಕ್ರಮವಾಗಿ ಯೂರಿಯಾ ಗೊಬ್ಬರ ಸ್ಟಾಕ್ ಇಟ್ಟಿದ್ದ ಗೋಡೌನ್ ಮೇಲೆ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಬಳ್ಳಾರಿ ನಗರದ ಹೊರವಲಯದ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆದಿದೆ. ಸರ್ಕಾರದಿಂದ ಬಂದಿದ್ದ ಯೂರಿಯಾ ಗೊಬ್ಬರ ಸ್ಟಾಕ್ ಮಾಡಿ ಕಾಳ ಸಂತೆಯಲ್ಲಿ ಮಾರಾಟ ಮಾಡಲು ಹುನ್ನಾರ ನಡೆಸಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಜಂಟಿ ದಾಳಿ ನಡೆಸಿದ್ದಾರೆ. ಇಂಡಸ್ಟ್ರಿಯಲ್ ಏರಿಯಾದ ಎಡ್ವಿನ್ ಎನ್ನುವ ವ್ಯಕ್ತಿಗೆ ಸೇರಿದ್ದ ಗೋಡೌನ್‌ನಲ್ಲಿ ಸುಮಾರು...
ಜಿಲ್ಲೆಬಳ್ಳಾರಿಸುದ್ದಿ

ಬಳ್ಳಾರಿ ಬ್ಯಾನರ್‌ ಬಡಿದಾಟದ ವಿಡಿಯೋ ಇದ್ದಲ್ಲಿ ಸೆಂಡ್‌ ಮಾಡಿ : ಸಿಐಡಿ ಮನವಿ -ಕಹಳೆ ನ್ಯೂಸ್

ಬಳ್ಳಾರಿ: ಜನಾರ್ದನ ರೆಡ್ಡಿ ಮನೆ ಮುಂದೆ ನಡೆದ ಬ್ಯಾನರ್ ಗಲಭೆ ಹಾಗೂ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಕರಣದ ಸಿಐಡಿ ತನಿಖೆ ಚುರುಕುಗೊಂಡಿದೆ.   ಈಗಾಗಲೇ ಗಲಭೆಯ ಕುರಿತು ಮಹತ್ವದ ದಾಖಲೆ ಕಲೆ ಹಾಕಿರುವ ಸಿಐಡಿ ತಂಡ ಘಟನೆ ಸಂಬಂಧ ಸಾರ್ವಜನಿಕರಿಂದಲೂ ವಿಡಿಯೋ, ಪೋಟೋ ಸಂಗ್ರಹಕ್ಕೆ ಮುಂದಾಗಿದೆ. ವಾಟ್ಸಪ್ ನಂಬರ್‌ ನೀಡಿ ವಿಡಿಯೋ ತುಣುಕುಗಳ ಹಾಕುವಂತೆ ಮನವಿ ಮಾಡಿಕೊಂಡಿದೆ. ಗಲಭೆ ಸಂದರ್ಭದಲ್ಲಿ ಮೊಬೈಲ್ ರೆಕಾರ್ಡ್ ಮಾಡಿದ ವಿಡಿಯೋಗಳನ್ನ...
ಬಳ್ಳಾರಿರಾಜ್ಯಸುದ್ದಿ

ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರ ದಾಳಿ : 10 ಮೊಬೈಲ್ ಫೋನ್ ಗಳು ಪತ್ತೆ – ಕಹಳೆ ನ್ಯೂಸ್

ಬಳ್ಳಾರಿ: ಬಳ್ಳಾರಿ ಕಾರಾಗೃಹದ ಮೇಲೆ ಪೊಲೀಸರು ದಾಳಿ ನಡೆಸಿ, ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 10 ಮೊಬೈಲ್ ಫೋನ್ ಗಳು ಪತ್ತೆಯಾಗಿವೆ. 10 ಕೀಪ್ಯಾಡ್ ಮೊಬೈಲ್ ಗಳು, 3 ಚಾರ್ಜರ್ ಗಳು, ಕೇಬಲ್ ಗಳು ಪತ್ತೆಯಾಗಿವೆ. ಮೊಬೈಲ್, ಚಾರ್ಜರ್ ಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಬಗ್ಗೆ ಬ್ರೂಸ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಜಿಲ್ಲೆಬಳ್ಳಾರಿಸುದ್ದಿ

ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳುವು ಪ್ರಕರಣ: ಬಳ್ಳಾರಿ ಮೂಲದ ಚಿನ್ನದ ವ್ಯಾಪಾರಿ ಗೋವರ್ಧನ್ ಅರೆಸ್ಟ್ – ಕಹಳೆ ನ್ಯೂಸ್

ತಿರುವನಂತಪುರಂ: ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳುವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಎಸ್ ಐಟಿ ಅಧಿಕಾರಿಗಳು ಬಳ್ಳಾರಿ ಚಿನ್ನದ ವ್ಯಾಪಾರಿ ಗೋವರ್ಧನ್ ಅವರನ್ನು ಬಂಧಿಸಿದ್ದಾರೆ. ಬಳ್ಳಾರಿಯ ರೊದ್ದಂ ಜ್ಯುವೆಲರಿ ಶಾಪ್ ಮಾಲೀಕರಾಗಿರುವ ಗೋವರ್ಧನ್ ಅವರನ್ನು ವಿಚಾರಣೆ ಹಿನ್ನೆಲೆಯಲ್ಲಿ ಕೇರಳಕ್ಕೆ ಕರೆಸಿಕೊಂಡಿದ್ದ ಎಸ್ ಐಟಿ ಅಧಿಕಾರಿಗಳು ವಿಚಾರಣೆ ಬಳಿಕ ಗೋವರ್ಧನ್ ಅವರನ್ನು ಬಂಧಿಸಿದ್ದಾರೆ. ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲದ ಚಿನ್ನ ಕಳುವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ನಿಂದ ಚಿನ್ನ ಖರೀದಿಸಿರುವ ಆರೋಪದಡಿ...
ಬಳ್ಳಾರಿಸುದ್ದಿ

ಜನಾರ್ಧನ ರೆಡ್ಡಿ ಪುತ್ರನ ವಿರುದ್ಧ 100 ಕೋಟಿ ಮೌಲ್ಯದ ಭೂ ಕಬಳಿಕೆ ಆರೋಪ : ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್-ಕಹಳೆ ನ್ಯೂಸ್

ಬಳ್ಳಾರಿ : ರಾಜ್ಯದಲ್ಲಿ ಮತ್ತೊಂದು ಹಗರಣ ಬೆಳಕಿಗೆ ಬಂದಿದ್ದು ಗಂಗಾವತಿ ಶಾಸಕ ಜನಾರ್ಧನರೆಡ್ಡಿ ಪುತ್ರನಿಗೂ ಇದೀಗ ಭೂ ಕಬಳಿಕೆ ಆರೋಪ ಕೇಳಿ ಬಂದಿದೆ ಜನಾರ್ದನ ರೆಡ್ಡಿ ಪುತ್ರ ಕಿರೀಟಿ ರೆಡ್ಡಿ ವಿರುದ್ಧ ಈ ಒಂದು ಭೂ ಕಬಳಿಕೆ ಆರೋಪ ಕೇಳಿ ಬಂದಿದ್ದು100 ಕೋಟಿ ಮೌಲ್ಯದ ಸುಮಾರು 9 ಎಕರೆ ಭೂಮಿ ಕಬಳಿಸಿದ ಆರೋಪ ಕೇಳಿ ಬಂದಿದೆ. ಹೌದು ಕಿರೀಟಿ ರೆಡ್ಡಿ ಹಾಗೂ ಸಹವರ್ತಿಗಳಿಂದ ಭೂಮಿ ಕಬಳಸಿರುವ ಆರೋಪ ಕೇಳಿ ಬಂದಿದೆ...
ಅಂಕಣಬಳ್ಳಾರಿಸುದ್ದಿ

ಹಂಪಿ ವಿರೂಪಾಕ್ಷ ದೇಗುಲದ ಆವರಣದಲ್ಲಿ ನಿಂತ ಮಳೆ ನೀರು ; ದರ್ಶನಕ್ಕಾಗಿ ಪ್ರವಾಸಿಗರು ಹೈರಾಣು-ಕಹಳೆ ನ್ಯೂಸ್

ಬಳ್ಳಾರಿ: ವಿಜಯನಗರ  ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಇದರಿಂದ ಹಂಪಿಯ ವಿರೂಪಾಕ್ಷ ದೇವಾಲಯದ  ಆವರಣದಲ್ಲಿ ಮಳೆ ನೀರು ನಿಂತಿದ್ದು, ಜನರು ಹೈರಾಣಾಗುತ್ತಿದ್ದಾರೆ. ಐತಿಹಾಸಿಕ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದ ಆವರಣದಲ್ಲಿ ಮಳೆಯಿಂದಾಗಿ ಮೊಣಕಾಲುದ್ಧ ನೀರು ನಿಂತಿದೆ. ಪರಿಣಾಮ ದೇವಸ್ಥಾನಕ್ಕೆ ಬರುವ ಭಕ್ತರು ಹಾಗೂ ಪ್ರವಾಸಿಗರಿಗೆ ಸಮಸ್ಯೆ ಎದುರಾಗಿದೆ. ಬೇರೆ ದಾರಿಯಿಲ್ಲದೇ ಪ್ರವಾಸಿಗರು ನಿಂತ ನೀರಿನಲ್ಲಿಯೇ ನಡೆದುಕೊಂಡು ಹೋಗಿ, ವಿರೂಪಾಕ್ಷೇಶ್ವರನ ದರ್ಶನ ಪಡೆದಿದ್ದಾರೆ. ಮಳೆ ಬಂದಾಗ ನೀರು ಹೊರಹೋಗುವ...
ಅಂಕಣಬಳ್ಳಾರಿಸುದ್ದಿ

ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ ; ದೇಶದ ಹೆಸರಲ್ಲಿ ಪೂಜೆ-ಕಹಳೆ ನ್ಯೂಸ್

ಬಳ್ಳಾರಿ: ರಾಜ್ಯ ಪ್ರವಾಸದಲ್ಲಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ , ಐತಿಹಾಸಿಕ ಹಂಪಿಯ ವಿರುಪಾಕ್ಷೇಶ್ವರನ ಸನ್ನಿಧಿಗೆ ಭೇಟಿ ನೀಡಿ ದರ್ಶನ ಪಡೆದು, ಆನೆ ಲಕ್ಷ್ಮೀಯಿಂದ ಹೂವಿನ ಹಾರ ಹಾಕಿಸಿಕೊಂಡರು. ಇದೇ ವೇಳೆ ದೇಶಕ್ಕೆ ಒಳ್ಳೆಯದಾಗಲಿ ಎಂದು ನಿರ್ಮಲಾ ಸೀತಾರಾಮನ್ ಹಂಪಿಯ ವಿರುಪಾಕ್ಷೇಶ್ವರನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದರು.ಪೂಜೆ ಬಳಿಕ ಮಾತನಾಡಿದ ನಿರ್ಮಲಾ ಸೀತಾರಾಮನ್, ನನಗೆ ಬಹಳಷ್ಟು ಜನ ಹಂಪಿಯನ್ನ ವೀಕ್ಷಣೆ ಮಾಡಿ ಎಂದು ಹೇಳುತ್ತಿದ್ದರು. ಇಂದು ಆ ಅವಕಾಶ...
ಅಂಕಣಕ್ರೈಮ್ಬಳ್ಳಾರಿಸುದ್ದಿ

ಬಳ್ಳಾರಿ ; 200ಕ್ಕೂ ಹೆಚ್ಚು ಬಾಡಿಗೆ ಕಾರುಗಳನ್ನು ಅಡವಿಟ್ಟು ಹಣಪಡೆದು ಪರಾರಿ-ಕಹಳೆ ನ್ಯೂಸ್

ಬಳ್ಳಾರಿ: ಬಾಡಿಗೆ ಪಡೆದ 200ಕ್ಕೂ ಹೆಚ್ಚು ಕಾರುಗಳನ್ನು  ಗಿರವಿಯಿಟ್ಟು ಹಣಪಡೆದು ವಂಚಕನೋರ್ವ ಪರಾರಿಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆಯ ಸಿಂಧನೂರಿನ  ಎಂ.ಡಿ ಜಹೀದ್ ಭಾಷಾ ಅಲಿಯಾಸ್ ಸೋನೊ 200ಕ್ಕೂ ಹೆಚ್ಚು ಜನರಿಗೆ ವಂಚಿಸಿ ಪರಾರಿಯಾಗಿದ್ದಾನೆ. ಎರಡು ಮೂರು ತಿಂಗಳು ಕಾರಿಗೆ ಬಾಡಿಗೆ ಕೊಟ್ಟು ಬಳಿಕ ಕೈ ಕೊಟ್ಟಿದ್ದಾನೆ. ಆರು ತಿಂಗಳಿಂದ ಸತತವಾಗಿ ಬಳ್ಳಾರಿಯ ತನ್ನ ಸ್ನೇಹಿತರ ಮೂಲಕ ಕಾರುಗಳನ್ನ ಇತರರಿಂದ ಬಾಡಿಗೆ ಪಡೆದಿದ್ದ ಎಂ.ಡಿ ಜಹೀದ್ ಪಾಷಾ ಸಿಂಧನೂರಿನಲ್ಲಿ...
1 2 3 4 7
Page 2 of 7