ಪತ್ನಿ ಫೋಟೋ ಸ್ಟೇಟಸ್ಗೆ, ಅನೈತಿಕ ಸಂಬಂಧ ಶಂಕೆ : ಕುಡಗೋಲಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆಗೈದ ದಂಪತಿ -ಕಹಳೆ ನ್ಯೂಸ್
ಬೆಳಗಾವಿ: ಸ್ಟೇಟಸ್ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬನನ್ನು ದಂಪತಿ ಸೇರಿ ಕುಡಗೋಲಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ( ತಾಲೂಕಿನ ಕಲ್ಲೋಳಿ ಪಟ್ಟಣದಲ್ಲಿ ನಡೆದಿದೆ. ಕಲ್ಲೋಳಿ ಗ್ರಾಮದ ಬನಪ್ಪ ಒಡೆಯರ್ ಮತ್ತು ಲಕ್ಷ್ಮೀ ಒಡೆಯರ್ ಇಬ್ಬರು ಸೇರಿಕೊಂಡು ಗುಜನಟ್ಟಿ ಗ್ರಾಮದ ರಮೇಶ್ ಬಂಟ್ರೋಳಿ ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೊಲೆಯಾದ ರಮೇಶ್ ಆರೋಪಿ ಬನಪ್ಪನ ಪತ್ನಿ ಲಕ್ಷ್ಮೀ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂದು...






