Tuesday, September 8, 2026

ಬೆಳಗಾವಿ

ಜಿಲ್ಲೆಬೆಳಗಾವಿಸಂತಾಪಸುದ್ದಿ

ಪತ್ನಿ ಫೋಟೋ ಸ್ಟೇಟಸ್‌ಗೆ, ಅನೈತಿಕ ಸಂಬಂಧ ಶಂಕೆ : ಕುಡಗೋಲಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆಗೈದ ದಂಪತಿ -ಕಹಳೆ ನ್ಯೂಸ್

ಬೆಳಗಾವಿ: ಸ್ಟೇಟಸ್ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬನನ್ನು ದಂಪತಿ ಸೇರಿ ಕುಡಗೋಲಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ( ತಾಲೂಕಿನ ಕಲ್ಲೋಳಿ  ಪಟ್ಟಣದಲ್ಲಿ ನಡೆದಿದೆ. ಕಲ್ಲೋಳಿ ಗ್ರಾಮದ ಬನಪ್ಪ ಒಡೆಯರ್ ಮತ್ತು ಲಕ್ಷ್ಮೀ ಒಡೆಯರ್ ಇಬ್ಬರು ಸೇರಿಕೊಂಡು ಗುಜನಟ್ಟಿ ಗ್ರಾಮದ ರಮೇಶ್ ಬಂಟ್ರೋಳಿ ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಕೊಲೆಯಾದ ರಮೇಶ್ ಆರೋಪಿ ಬನಪ್ಪನ ಪತ್ನಿ ಲಕ್ಷ್ಮೀ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂದು...
ಜಿಲ್ಲೆಬೆಳಗಾವಿಸುದ್ದಿ

ಶಿವಂ ಅಸೋಸಿಯೇಟ್ಸ್, ಅಂಗ ಸಂಸ್ಥೆಗಳಿಂದ ಸುಮಾರು 2110 ಕೋಟಿ ವಂಚನೆ: ಇಡಿಶಿವಂ ಅಸೋಸಿಯೇಟ್ಸ್, ಅಂಗ ಸಂಸ್ಥೆಗಳಿಂದ ಸುಮಾರು 2110 ಕೋಟಿ ವಂಚನೆ: ಇಡಿ – ಕಹಳೆ ನ್ಯೂಸ್

ಬೆಳಗಾವಿ: ಶಿವಂ ಅಸೋಸಿಯೇಟ್ಸ್  ವಿರುದ್ಧದ ವಂಚನೆ ಪ್ರಕರಣಕ್ಕೆ ಇದೀಗ ಜಾರಿ (ED Raid) ನಿರ್ದೇಶನಾಲಯ (ED) ಎಂಟ್ರಿಯಾಗಿದೆ. ದಾಳಿ ಬಳಿಕ ಇಡಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ಕಂಪನಿ ಮೂಲಕ ನಡೆದಿದೆ ಎನ್ನಲಾದ ಹಣಕಾಸು ವಂಚನೆಯ ಹಲವು ವಿವರಗಳು ಬಹಿರಂಗವಾಗಿವೆ. ಬೆಳಗಾವಿಯ ಶಿವಂ ಅಸೋಸಿಯೇಟ್ಸ್ ವಿರುದ್ಧ ಜಿಲ್ಲಾಡಳಿತ ಸಾರಿದ್ದ ಸಮರದ ಬಳಿಕ ಇದೀಗ ಪ್ರಕರಣವನ್ನು ಜಾರಿ ನಿರ್ದೇಶನಾಲಯ (ED) ಕೈಗೆತ್ತಿಕೊಂಡಿತ್ತು. ದಾಳಿ ನಡೆಸಿದ ಬಳಿಕ ಇಡಿ ತನ್ನ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ್ದು,...
ಜಿಲ್ಲೆಬೆಳಗಾವಿಸುದ್ದಿ

ಕೊಯ್ನಾದಿಂದ 34 ಸಾವಿರ ಕ್ಯೂಸೆಕ್‌ ನೀರು ಬಿಡುಗಡೆ : ಕೃಷ್ಣಾ ನದಿ ತೀರದಲ್ಲಿ ಹೆಚ್ಚಿದ ಪ್ರವಾಹ ಆತಂಕ – ಕಹಳೆ ನ್ಯೂಸ್

ಬೆಳಗಾವಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಪರಿಣಾಮವಾಗಿ ಕೃಷ್ಣಾ ನದಿ ಹಾಗೂ ಅದರ ಉಪನದಿಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗಿದ್ದು, ನದಿ ತೀರದ ಜನರಲ್ಲಿ ಪ್ರವಾಹದ(Flood) ಆತಂಕ ಎದುರಾಗಿದೆ. ಮಹಾರಾಷ್ಟ್ರದ ಸಾತಾರಾ ಜಿಲ್ಲೆಯಲ್ಲಿರುವ ಪ್ರಮುಖ ಕೊಯ್ನಾ ಜಲಾಶಯಕ್ಕೆ(Koyna Dam) ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಪ್ರಸ್ತುತ ಜಲಾಶಯಕ್ಕೆ 49 ಸಾವಿರ ಕ್ಯೂಸೆಕ್ ನೀರು ಒಳಹರಿವು ದಾಖಲಾಗಿದೆ. ಮುನ್ನೆಚ್ಚರಿಕಾ...
ಜಿಲ್ಲೆಬೆಳಗಾವಿಸುದ್ದಿ

ನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ – ರೂಮ್‌ಮೇಟ್‌ನಿಂದಲೇ ಕೃತ್ಯ – ಕಹಳೆ ನ್ಯೂಸ್

ಬೆಳಗಾವಿ: ನೇಪಾಳದಲ್ಲಿ ಹೋಟೆಲ್‌ ಕೆಲಸಕ್ಕೆ ತೆರಳಿದ್ದ ಬೆಳಗಾವಿ  ಯುವಕ ತನ್ನ ರೂಮ್‌ಮೇಟ್‌ನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾನೆ. ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಕೊಲೆಯಾದ ಯುವಕ. ಈತ ನೇಪಾಳದ ಹೋಟೆಲ್ ಕೆಲಸಕ್ಕೆ ತೆರಳಿದ್ದ. ಜೊತೆಗಿದ್ದ ರೂಮ್‌ಮೇಟ್‌ ಆತನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಸಾಯಿಲ್ ಶವವನ್ನು ಭಾರತ ತರುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪೊಲೀಸರ ಮೂಲಕ ಈ ಬಗ್ಗೆ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು...
ಜಿಲ್ಲೆಬೆಳಗಾವಿಸುದ್ದಿ

ಗಂಡನ ಮನೆಯವರ ಸಾಲದ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಳಗಾವಿ: ತಾಯಿ ಹಾಗೂ ಕರುಳ ಕುಡಿಯೊಂದು ಜೊತೆಯಾಗಿಯೇ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಪೀರನವಾಡಿಯಲ್ಲಿ ನಡೆದಿದೆ. ಗಂಡನ ಮನೆಯವರ ತೀವ್ರ ಮಾನಸಿಕ ಹಾಗೂ ದೈಹಿಕ ಕಿರುಕುಳಕ್ಕೆ ಬೇಸತ್ತು ತಾಯಿ, ತನ್ನ ಮೂರು ವರ್ಷದ ಮಗನೊಂದಿಗೆ ಸೀರೆಯಿಂದ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟಿದ್ದಾಳೆ. ಪ್ರೇಮಾ ನಾಗೇಶ ತಳವಾರ (28) ಹಾಗೂ ಅವರ 3 ವರ್ಷದ ಪುತ್ರ ಭುವನ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಇವರು ಬೆಳಗಾವಿಯ ಪೀರನವಾಡಿ ಪಾಟೀಲ್ ಗಲ್ಲಿಯ ನಿವಾಸಿಗಳಾಗಿದ್ದಾರೆ. ಗಂಡನ...
ಜಿಲ್ಲೆಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – ಕಹಳೆ ನ್ಯೂಸ್

ಬೆಳಗಾವಿ: ಕಳೆದ ಮಾರ್ಚ್ ತಿಂಗಳಲ್ಲಿ ಹರ್ಯಾಣದ ಸಮಾಲ್ಖಾದಲ್ಲಿ ಯಶಸ್ವಿಯಾಗಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ  ಪ್ರಮುಖ ಸಭೆಯ ಬೆನ್ನಲ್ಲೇ, ಈ ಬಾರಿಯ ಪ್ರತಿಷ್ಠಿತ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಕುಂದಾನಗರಿ ಬೆಳಗಾವಿ   ವೇದಿಕೆಯಾಗಲಿದೆ. ಜುಲೈ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಈ ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ. ಈ ವಾರ್ಷಿಕ ಸಭೆಯಲ್ಲಿ ಸಂಘದ ವಿವಿಧ ಸ್ತರದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ದೇಶವ್ಯಾಪಿಯ ಎಲ್ಲಾ ಪ್ರಾಂತ ಪ್ರಚಾರಕರು...
ಜಿಲ್ಲೆಬೆಳಗಾವಿಸುದ್ದಿ

ಬೆಳಗಾವಿಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಜನ ಅರೆಸ್ಟ್ – ಕಹಳೆ ನ್ಯೂಸ್

ಬೆಳಗಾವಿ: ಗಡಿಜಿಲ್ಲೆಯಲ್ಲಿ ಕಂಟ್ರಿ ಪಿಸ್ತೂಲ್ ತಯಾರಿಸುತ್ತಿದ್ದ 13 ಆರೋಪಿಗಳ ಗ್ಯಾಂಗ್‌ವೊಂದನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಆರೋಪಿಗಳಾದ ಮಾರುತಿ ಸುತಾರ, ಸೋಮನಾಥ ಚೌಗಲೆ, ಸಂತೋಷ ನಾಯಕ, ಮಾರುತಿ ಗುಡದ್ಯಾಗೋಳ, ಬಾಳು ನಾಯಕ, ಲಕ್ಷ್ಮಣ ಗುಜನಾಳ, ಬಸವರಾಜ ಸಾಲೋಟಗಿ, ಬಸವಂತ ಯರಮಾಳಕರ, ಲಕ್ಷ್ಮಣ ಗುರವ, ಮರಿಯಪ್ಪ ನಾಯಕ, ವಿಶ್ವನಾಥ ದೇಸಾಯಿ ಬಂಧಿತರು. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನಲ್ಲಿ ನಡೆದಿದ್ದ ಕೊಲೆ ಕೇಸ್‌ನ ತನಿಖೆ ನಡೆಸುತ್ತಿದ್ದ ವೇಳೆ ಪೊಲೀಸರಿಗೆ ಕಂಟ್ರಿ ಪಿಸ್ತೂಲ್‌ನಿಂದ ಕೊಲೆ ಮಾಡಿರುವುದು...
ಜಿಲ್ಲೆಬೆಳಗಾವಿರಾಜ್ಯಸುದ್ದಿ

ಮನೆಯಲ್ಲಿ ಗುಂಡು ಹಾರಿಸಿಕೊಂಡು ವೈದ್ಯ ದಿನೇಶ್ ಭಟ್ಕಳ್ ಆತ್ಮಹತ್ಯೆ -ಕಹಳೆ ನ್ಯೂಸ್

ಬೆಳಗಾವಿ: ಕೆಎಲ್‌ಇ ಆಸ್ಪತ್ರೆಯಲ್ಲಿ ಕಳೆದ 40 ವರ್ಷಗಳಿಂದ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಡಾ. ದಿನೇಶ್ ಭಟ್ಕಳ್  ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡಾ.ದಿನೇಶ್ ಭಟ್ಕಳ್ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಮೂಲದವರು. ಆದರೆ, ಬೆಳಗಾವಿಯ ಕೆಎಲ್‌ಇ ಆಸ್ಪತ್ರೆಯಲ್ಲಿ ಸುಮಾರು 40 ವರ್ಷಗಳ ಕಾಲ ವೈದ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಇವರಿಗೆ ಶ್ವಾಸಕೋಶ ಕ್ಯಾನ್ಸರ್ ಇರುವುದು ಗೊತ್ತಾಗಿತ್ತು. ಚಿಕಿತ್ಸೆಗಾಗಿಯೇ ತಮ್ಮೂರು ಬಿಟ್ಟು ಬೆಳಗಾವಿಯ ಟಿಳಕವಾಡಿಯ ಮಂಡೋಲಿ...
1 2 3 8
Page 1 of 8