Friday, March 6, 2026

ಮಂಡ್ಯ

ಜಿಲ್ಲೆಮಂಡ್ಯಸುದ್ದಿ

ನಾಲ್ಕು ದಿನದಲ್ಲಿ ಹಸೆಮಣೆ ಏರಬೇಕಿದ್ದ ತಮ್ಮನನ್ನು 28 ಬಾರಿ ಇರಿದು ಕೊಂದ ಪಾಪಿ ಅಣ್ಣ – ಕಹಳೆ ನ್ಯೂಸ್

ಮಂಡ್ಯ: ಅಣ್ಣನೇ ತನ್ನ ಮಕ್ಕೊಳೊಂದಿಗೆ ಸೇರಿ ತಮ್ಮನನ್ನು 28 ಬಾರಿ ಇರಿದು ಕೊಂದ ಘಟನೆ ಮಂಡ್ಯದ ಮಾಯಪ್ಪನಹಳ್ಳಿಯಲ್ಲಿ ನಡೆದಿದೆ. ಯೋಗೇಶ್ (30) ಕೊಲೆಯಾದ ನತದೃಷ್ಟ ವ್ಯಕ್ತಿ ಎಂದು ತಿಳಿದು ಬಂದಿದೆ. ಕೊಲೆಯಾದವನ ಅಣ್ಣ ಲಿಂಗರಾಜು, ಮಕ್ಕಳಾದ ಭರತ್, ದರ್ಶನ್‍ರಿಂದ ಈ ಕೃತ್ಯ ನಡೆದಿದೆ. ಕೊಲೆ ಬಳಿಕ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹಲವು ವರ್ಷಗಳಿಂದ ಲಿಂಗರಾಜು ಹಾಗೂ ಕೊಲೆಯಾದ‌ ಯೋಗೇಶ್ ನಡುವೆ ಆಸ್ತಿ ಕಲಹವಿತ್ತು. ಆಸ್ತಿ ವಿಷಯಕ್ಕೆ ಆಗಾಗ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು....
ಜಿಲ್ಲೆಮಂಡ್ಯಸುದ್ದಿ

ಹೃದಯಾಘಾತದಿಂದ ಬಿಎಸ್‌ಎಫ್ ಯೋಧ ಸಾವು -ಕಹಳೆ ನ್ಯೂಸ್

ಮಂಡ್ಯ: ಮಹಾರಾಷ್ಟ್ರದ ಚಾಕೋರು ಜಿಲ್ಲೆಯ ಲಾತೂರ್‌ನ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಡ್ಯ ಮೂಲದ ಬಿಎಸ್‌ಎಫ್ ಯೋಧ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮಂಡ್ಯ ನಗರದ ತಾವರೆಗೆರೆ ಬಡಾವಣೆ ನಿವಾಸಿ ಎಂ.ಬಿ ಮಾದೇಗೌಡ (44) ಮೃತ ಯೋಧ. ಕರ್ತವ್ಯದ ಸಮಯದಲ್ಲಿ ಹೃದಯಾಘಾತದಿಂದ ಯೋಧ ಮೃತಪಟ್ಟಿದ್ದಾರೆ. ಮಾದೇಗೌಡ 2000ರಲ್ಲಿ ಮೈಸೂರಿನಲ್ಲಿ ನಡೆದ ಬಿಎಸ್‌ಎಫ್ ಸೇನಾ ನೇಮಕಾತಿಯಲ್ಲಿ ಆಯ್ಕೆಯಾಗಿದ್ದು, ಕಳೆದ 25 ವರ್ಷಗಳಲ್ಲಿ ದೇಶದ ಹಲವೆಡೆ ಸೇವೆ ಸಲ್ಲಿಸಿದ್ದರು. ಇಂದು ಯೋಧನ ಮೃತದೇಹ ಮಂಡ್ಯಕ್ಕೆ...
ಮಂಡ್ಯಸುದ್ದಿ

ಮಂಡ್ಯದಲ್ಲಿ ಭೀಕರ ಅಪಘಾತ : ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವು, ಓರ್ವನಿಗೆ ಗಾಯ-ಕಹಳೆ ನ್ಯೂಸ್

ಮಂಡ್ಯ : ಮಂಡ್ಯದಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿ ಇದ್ದಂತಹ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿಯ ಮೈಸೂರು ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ. ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮಂಡ್ಯ ಜಿಲ್ಲೆಯ ಕಾರು ಚಾಲಕ ಗೋವಿಂದರಾಜು ಹಾಗೂ ಅಶೋಕ್ ಸ್ಥಳದಲ್ಲಿ ಸಾವನಪ್ಪಿದ್ದರೆ, ಇನ್ನೂ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ...
ದೆಹಲಿಮಂಡ್ಯಸುದ್ದಿ

ಪ್ರತಿಭಟನೆ ಬಿಟ್ಟು ದೆಹಲಿಗೆ ಬನ್ನಿ, ವಿಮಾನ, ವಸತಿ ವೆಚ್ಚ ನಾನೇ ಭರಿಸುವೆ ಅಂಗನವಾಡಿ ಸಿಬ್ಬಂದಿಗೆ HDK ಭರವಸೆ – ಕಹಳೆ ನ್ಯೂಸ್

ಮಂಡ್ಯ/ನವದೆಹಲಿ: ಪ್ರತಿಭಟನೆ ಬಿಟ್ಟು ಮಾತುಕತೆಗೆ ದೆಹಲಿಗೆ ಬರುವಂತೆ ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದಿರುವ ಅಕ್ಷರ ದಾಸೋಹ ನೌಕರರು, ಅಂಗನವಾಡಿ ಕಾರ್ಯಕರ್ತೆರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಆಹ್ವಾನ ನೀಡಿದ್ದಾರೆ. ಜಿಲ್ಲಾಧಿಕಾರಿ ಕುಮಾರ್ ಅವರ ಮೂಲಕ ರಾಜ್ಯ ಅಂಗನವಾಡಿ ನೌಕರರ ಸಂಘದ ಪದಾಧಿಕಾರಿ ಶ್ರೀಕುಮಾರಿ ಜೊತೆ ಕುಮಾರಸ್ವಾಮಿಯವರು ದೂರವಾಣಿಯಲ್ಲಿ ಮಾತನಾಡಿದರು. ನಿಮ್ಮ ಸಂಘದ ಪ್ರತಿನಿಧಿಗಳಲ್ಲಿ 10 ಜನ ಪ್ರಮುಖರು ದೆಹಲಿಗೆ ಬನ್ನಿ. ನಾನೇ ಸಂಬಂಧಪಟ್ಟ ಸಚಿವರು, ಅಧಿಕಾರಿಗಳ ಜೊತೆ ಸಭೆ ಏರ್ಪಾಡು ಮಾಡಿಸುತ್ತೇನೆ. ನೀವು ಬಂದು...
ಜಿಲ್ಲೆಮಂಡ್ಯಸುದ್ದಿ

ಕಾಂಗ್ರೆಸ್ ನಿಯಮದ ಪ್ರಕಾರ ‘KPCC’ ಅಧ್ಯಕ್ಷರೇ ‘ಸಿಎಂ’ ಆಗಬೇಕು : ಡಿಕೆಶಿ ಪರ ಪ್ರತಾಪ್ ಸಿಂಹ ಬ್ಯಾಟಿಂಗ್ – ಕಹಳೆ ನ್ಯೂಸ್

ಮಂಡ್ಯ : ಸಿದ್ದರಾಮಯ್ಯಗೆ ಸಿಎಂ ಸ್ಥಾನ ಬಿಟ್ಟು ಕೊಡುವ ಮನಸ್ಸು ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಎಲ್ಲರಿಗೂ ಹೆದರಿಕೊಳ್ಳುವ ಸ್ಥಿತಿ ಇದೆ. ಅದಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾರೆ. ಕಾಂಗ್ರೆಸ್ ನಿಯಮದ ಪ್ರಕಾರ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು. ಮಂಡ್ಯದಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಗೆ ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟು ಕೊಡ್ತಾರೆ ಅಂತ ಅನಿಸಲ್ಲ. ಸಿದ್ದರಾಮಯ್ಯ...
ಜಿಲ್ಲೆಮಂಡ್ಯಸುದ್ದಿ

ಸಾರಿಗೆ ಬಸ್ ಕಂಡಕ್ಟರ್ ಮೇಲೆ ಮಹಿಳೆ ಹ*ಲ್ಲೆ – ಕಹಳೆ ನ್ಯೂಸ್

ಮಂಡ್ಯ : ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆಯಲ್ಲಿ  ಮಹಿಳಾ ಪ್ರಯಾಣಿಕರೊಬ್ಬರು ಬಸ್ ನಿರ್ವಾಹಕನ  ಮೇಲೆ ಹಲ್ಲೆ  ನಡೆಸಿ ರಂಪಾಟ ಮಾಡಿರುವ ಘಟನೆ ಮಂಡ್ಯದ ಶ್ರೀರಂಗಪಟ್ಟಣ ಬಸ್ ನಿಲ್ದಾಣದಲ್ಲಿ ನಡೆದಿದೆ. ಶಕ್ತಿ ಯೋಜನೆಯಡಿ ಮೈಸೂರಿನಿಂದ ಮಹಿಳೆಯೊಬ್ಬರು ತುಮಕೂರಿಗೆ ಟಿಕೆಟ್ ಪಡೆದಿದ್ದರು, ಆದರೆ ಶ್ರೀರಂಗಪಟ್ಟಣದ ಬಸ್ ನಿಲ್ದಾಣದಲ್ಲೇ ಮಹಿಳೆ ಇಳಿದು ಹೋಗಿದ್ದಾರೆ, ಇದನ್ನು ಗಮನಿಸಿದ ಬಸ್ ಕಂಡಕ್ಟರ್ ನೀವು ತುಮಕೂರಿಗೆ ಟಿಕೆಟ್ ಪಡೆದಿರುವುದು ಮಧ್ಯದಲ್ಲಿ ಇಳಿಯುವಂತಿಲ್ಲ...
ಜಿಲ್ಲೆಮಂಡ್ಯಶಿಕ್ಷಣಸುದ್ದಿ

ನನಗೆ ಬರುವ ಸಂಬಳವನ್ನ ಶಿಕ್ಷಕರಿಗೆ ಕೊಡುವ ತೀರ್ಮಾನ ಮಾಡಿದ್ದೇನೆ : ಕೇಂದ್ರ ಸಚಿವ HD ಕುಮಾರಸ್ವಾಮಿ -ಕಹಳೆ ನ್ಯೂಸ್

ಮಂಡ್ಯ : ಇಂದು ಮಂಡ್ಯಕ್ಕೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದರು. ಮಂಡ್ಯದ ಮೈಷುಗರ್ ಶಾಲೆಗೆ ಆಗಮಿಸಿ, ಶಾಲೆಯ ಆಡಳಿತ ಮಂಡಳಿ ಜೊತೆ ಸಭೆ‌ ನಡೆಸಲಿದ್ದಾರೆ. ಶಾಲೆಯ ಶಿಕ್ಷಕರಿಗೆ ಸಂಬಳ ಕೊಡಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿರುವ ಶಾಲೆ. ಈ ಬಗ್ಗೆ 25 ಕೋಟಿ ಹಣ ಡೆಪಸಿಟ್ ಇಡುವುದಾಗಿ ಹೆಚ್.ಡಿ.ಕೆ.ಈ ಹಿಂದೆ ಹೇಳಿದ್ದರು. ಹಾಗಾಗಿ ಇಂದು ನಡೆಯುವ ಸಭೆ ಕುತೂಹಲಕ್ಕೆ ಕಾರಣವಾಗಿದೆ. ಮಂಡ್ಯದ ಮೈಶುಗರ್ ಶಾಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ಭಾಷಣ ಮಾಡಿದರು. ನನ್ನ...
ಜಿಲ್ಲೆಮಂಡ್ಯಸುದ್ದಿಹೆಚ್ಚಿನ ಸುದ್ದಿ

ಮಂಡ್ಯದಲ್ಲಿ ಅಕ್ರಮವಾಗಿ 50ಕ್ಕೂ ಹೆಚ್ಚು ದನದ ಕರುಗಳನ್ನು ಮಾರಾಟಕ್ಕೆ ಯತ್ನ – ಕಹಳೆ ನ್ಯೂಸ್

ಮಂಡ್ಯ: ಜಿಲ್ಲೆಯಲ್ಲಿ ಅಕ್ರಮವಾಗಿ ಕರುಗಳ ಮಾರಾಟಕ್ಕೆ ಗ್ಯಾಂಗ್ ಮುಂದಾಗಿತ್ತು. ವಿಷಯ ತಿಳಿದು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹೋಗ್ತಿದ್ದಂತೆ ಕರುಗಳನ್ನ ಬಿಟ್ಟು ಎಸ್ಕೇಪ್ ಆಗಿರುವಂತ ಘಟನೆ ತೆಂಡೆಕೆರೆ ಗ್ರಾಮದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ‌ ತಾಲೂಕಿನ ತೆಂಡೆಕೆರೆ ಗ್ರಾಮದ ಸಂತೆಯಲ್ಲಿ 50 ಕ್ಕೂ ಹೆಚ್ಚು ಕರುಗಳನ್ನ ಖರೀದಿಸಿ ಕಟ್ಟಡವೊಂದರಲ್ಲಿ ಕೂಡಿಟ್ಟದದ್ದರು. ವಿಷಯ ತಿಳಿದ ಮೈಸೂರು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಹೀಗೆ ದಾಳಿ ಮಾಡ್ತಿದ್ದಂತೆ ಅಕ್ರಮ ಗೋ...
1 2 3 10
Page 1 of 10