ಆರು ತಿಂಗಳ ಬಳಿಕ ಕೆಆರ್ಎಸ್ ಡ್ಯಾಂಗೆ 1,000 ಕ್ಯೂಸೆಕ್ ನೀರು ಒಳಹರಿವು -ಕಹಳೆ ನ್ಯೂಸ್
ಮಂಡ್ಯ: ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯಕ್ಕೆ (KRS Dam) ಬರೊಬ್ಬರಿ ಆರು ತಿಂಗಳ ಸುದೀರ್ಘ ಕಾಯುವಿಕೆಯ ನಂತರ ಒಂದು ಸಾವಿರ ಕ್ಯೂಸೆಕ್ ನೀರು ಒಳಹರಿವು ಹರಿದುಬಂದಿದೆ. ಕಾವೇರಿ ಜಲಾನಯನ ಪ್ರದೇಶದ ಕೆಲವೆಡೆ ಜಿಟಿಜಿಟಿ ಮಳೆಯಾಗುತ್ತಿರುವುದರಿಂದ ಜಲಾಶಯಕ್ಕೆ ಬರುವ ನೀರಿನ ಪ್ರಮಾಣದಲ್ಲಿ ಅಲ್ಪಮಟ್ಟದ ಏರಿಕೆ ಕಂಡುಬಂದಿದೆ. ಇಂದು ಜಲಾಶಯಕ್ಕೆ 1,449 ಕ್ಯೂಸೆಕ್ ಒಳಹರಿವು ದಾಖಲಾಗಿದ್ದು, ಜಲಾಶಯದಿಂದ 760 ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ....






