Thursday, July 23, 2026

ಮೈಸೂರು

ಜಿಲ್ಲೆಮೈಸೂರುಸುದ್ದಿ

ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ; ಆರೋಪಿ ಬಂಧನ – ಕಹಳೆ ನ್ಯೂಸ್

ಮೈಸೂರು: ಮನೆಯಲ್ಲಿದ್ದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ  ಆರೋಪದಡಿ ಯುವಕನೊಬ್ಬನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ. 23 ವರ್ಷದ ಸುರೇಶ್ ಬಂಧಿತ ಆರೋಪಿ. ಬಾಲಕಿಯ ತಂದೆ-ತಾಯಿ ಕೂಲಿ ಕೆಲಸಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಆರೋಪಿ, ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡಿದ್ದಾಳೆ. ಆಕೆಯ ಕಿರುಚಾಟ ಕೇಳಿ ಅಕ್ಕಪಕ್ಕದ ಮನೆಯವರು ತಕ್ಷಣ ಸ್ಥಳಕ್ಕೆ ಧಾವಿಸಿದ್ದಾರೆ....
ಜಿಲ್ಲೆಮೈಸೂರುಸುದ್ದಿ

ನಿನ್ನನ್ನು ಕೆಲಸದಿಂದ ತೆಗೆಸುತ್ತೇನೆ : ಮಹಿಳಾ SIR ಸಿಬ್ಬಂದಿಗೆ ಜೀವ ಬೆದರಿಕೆ, ಯುವಕನ ವಿರುದ್ಧ ಎಫ್‌ಐಆರ್ – ಕಹಳೆ ನ್ಯೂಸ್

ಮೈಸೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿಗೆ ಮನೆಗೆ ನುಗ್ಗಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅನುಚಿತವಾಗಿ ವರ್ತಿಸಿ ಬೆದರಿಕೆಯೊಡ್ಡಿದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದ್ದು, ಆರೋಪಿ ವಿರುದ್ಧ ಪೊಲೀಸರು ಎಫ್‌ಐಆರ್  ದಾಖಲಿಸಿಕೊಂಡಿದ್ದಾರೆ. ನಂಜನಗೂಡು ತಾಲೂಕಿನ ಮುಳ್ಳೂರು ಗ್ರಾಮದ ಮಹೇಂದ್ರ ಕುಮಾರ್ ಎಂಬ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯದಲ್ಲಿ ನಿರತರಾಗಿದ್ದ ಲತಾ ಎಂಬುವರು ನೀಡಿದ ದೂರಿನನ್ವಯ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಜುಲೈ 13ರ...
ಜಿಲ್ಲೆಮೈಸೂರುಸುದ್ದಿ

ಬಿಲ್‌ ವಿಚಾರಕ್ಕೆ ಗಲಾಟೆ ತೆಗೆದು ಪಬ್‌ ಮ್ಯಾನೇಜರ್‌ ಮೇಲೆ ಹಲ್ಲೆ – ಕಹಳೆ ನ್ಯೂಸ್

ಮೈಸೂರು: ಬಿಲ್‌ ವಿಚಾರಕ್ಕೆ ಜಗಳ ತೆಗೆದು ಪಬ್‌ ಮ್ಯಾನೇಜರ್‌ ಮೇಲೆ ಹಲ್ಲೆ ನಡೆಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಅಗ್ರಹಾರದಲ್ಲಿನ ಸಿಪಾಯಿ ಗ್ರಾಂಡೆ‌ ಪಬ್‌ನಲ್ಲಿ ಈ ಗಲಾಟೆಯಾಗಿದೆ‌. ಗಲಾಟೆ ದೃಶ್ಯಾವಳಿ‌ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬರ್ತ್‌ಡೇ ಪಾರ್ಟಿಗೆ ಪಬ್‌ಗೆ ಬಂದವರು ಬಿಲ್ ವಿಚಾರದಲ್ಲಿ ಮ್ಯಾನೇಜರ್ ಜೊತೆ ಜಗಳ ತೆಗೆದು ಹಲ್ಲೆ ಮಾಡಿದ್ದಾರೆ. ನಜರಾಬಾದ್‌ನ ಯುವಕರ ಟೀಂನಿಂದ ಈ ಹಲ್ಲೆ ನಡೆದಿದೆ. 7 ಮಂದಿ ಯುವಕರಿದ್ದ ಪಾರ್ಟಿಯಲ್ಲಿ 15 ಸಾವಿರ ಬಿಲ್...
ಜಿಲ್ಲೆಮೈಸೂರುಸುದ್ದಿ

ಮೈಸೂರು ರೈಲು ನಿಲ್ದಾಣದಲ್ಲಿ 40ಕ್ಕೂ ಹೆಚ್ಚು ಶಂಕಿತ ಬಾಂಗ್ಲಾ ವಲಸಿಗರು ಪತ್ತೆ : ತೀವ್ರ ವಿಚಾರಣೆ – ಕಹಳೆ ನ್ಯೂಸ್

ಮೈಸೂರು: ಮೈಸೂರು ರೈಲು ನಿಲ್ದಾಣದಲ್ಲಿ  40ಕ್ಕೂ ಹೆಚ್ಚು ಶಂಕಿತ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದು, ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಇವರನ್ನು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಲ್ಕತ್ತಾದಿಂದ ವಾರಕ್ಕೊಮ್ಮೆ ಸಂಚರಿಸುವ ಹೌರಾ ಎಕ್ಸ್‌ಪ್ರೆಸ್ ರೈಲಿನ ಮೂಲಕ ಇವರು ಮೈಸೂರಿಗೆ ಬಂದಿರುವುದಾಗಿ ತಿಳಿದುಬಂದಿದೆ. ರೈಲು ನಿಲ್ದಾಣದಲ್ಲಿ ಕಾರ್ಯಕರ್ತರು ಅವರ ಗುರುತಿನ ಚೀಟಿಗಳು ಮತ್ತು ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಪರಿಶೀಲನೆ ವೇಳೆ ಹಲವರ ಬಳಿ ಇದ್ದ ಗುರುತಿನ ಚೀಟಿಗಳ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಕೆಲವು...
ಜಿಲ್ಲೆಮೈಸೂರುಸುದ್ದಿ

ಕಾಲೇಜು ಕ್ಯಾಂಪಸ್‌ ನಲ್ಲೇ ಕುಸಿದು ಬಿದ್ದು ಹೃದಯಾಘಾತಕ್ಕೆ ಪಿಯುಸಿ ವಿದ್ಯಾರ್ಥಿ ಬಲಿ.! -ಕಹಳೆ ನ್ಯೂಸ್

ಮೈಸೂರು: ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಮೈಸೂರಿನ ಮರಿಮಲ್ಲಪ್ಪ ಕಾಲೇಜಿನ ಆವರಣದಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬರು ಕಾಲೇಜು ಆವರಣದಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ವಿದ್ಯಾರ್ಥಿಯನ್ನು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಯರಗನಹಳ್ಳಿ ಗ್ರಾಮದ ವೈ.ಕೆ. ಮಾದೇಶ್ ಎಂದು ಗುರುತಿಸಲಾಗಿದೆ. ಅವರು ಮೈಸೂರಿನಲ್ಲಿ ಬಿಎಸ್ಸಿ ಓದುತ್ತಿರುವ ತಮ್ಮ ಅಕ್ಕನೊಂದಿಗೆ ವಾಸವಾಗಿದ್ದು, ಮರಿಮಲ್ಲಪ್ಪ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಶಿಕ್ಷಣ ಪಡೆಯುತ್ತಿದ್ದರು. ಮಧ್ಯಾಹ್ನ ಸುಮಾರು 2 ಗಂಟೆಯ ವೇಳೆಗೆ ತರಗತಿಯಿಂದ ಹೊರಬಂದ ಮಾದೇಶ್,...
ಜಿಲ್ಲೆಮೈಸೂರುಸುದ್ದಿ

ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪ : ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ವಿರುದ್ಧ FIR -ಕಹಳೆ ನ್ಯೂಸ್

ಮೈಸೂರು: ಸಾಲದ ಹಣ ಕೇಳಲು ಹೋದ ವ್ಯಕ್ತಿ ಮೇಲೆ ಹಲ್ಲೆ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್  ವಿರುದ್ಧ ಎಫ್ಐಆರ್ ದಾಖಲಾಗಿದೆ. 55 ಲಕ್ಷ ಹಿಂದಿರುಗಿಸದ ಆರೋಪ ವಿಶ್ವನಾಥ್‌ ಮೇಲಿದೆ. ಸಾಲದ ಹಣ ವಾಪಸ್ ಕೇಳಲು ಹೋದ ವ್ಯಕ್ತಿ ಮೇಲೆ ವಿಧಾನ ಪರಿಷತ್ ಸದಸ್ಯ ಅಡಗೂರು ವಿಶ್ವನಾಥ್ ಹಲ್ಲೆ ನಡೆಸಿದ್ದಾರೆ ಎಂದು ದೇವರಾಜ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ವಿಶ್ವನಾಥ್ ಇರುವಾಗ ಹಣ ಕೇಳಲು...
ಜಿಲ್ಲೆಮೈಸೂರುರಾಜ್ಯಸುದ್ದಿ

ಬೆಂಗ್ಳೂರು : ಮೈಸೂರು ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿ 26 ಲಕ್ಷ ದರೋಡೆ -ಕಹಳೆ ನ್ಯೂಸ್

ಮಂಡ್ಯ: ಖಾಸಗಿ ಕಂಪನಿ ಉದ್ಯೋಗಿಯೊಬ್ಬರ ಕಾರನ್ನು ದುಷ್ಕರ್ಮಿಗಳ ಗ್ಯಾಂಗ್‌ ಅಡ್ಡಗಟ್ಟಿ 26 ಲಕ್ಷ ರೂ. ದರೋಡೆ ಮಾಡಿದ ಘಟನೆ ಮದ್ದೂರು  ಪಟ್ಟಣದ ಹೊರ ವಲಯದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ  ನಡೆದಿದೆ. ಮೈಸೂರಿನ  ಖಾಸಗಿ ಕಂಪನಿ ಉದ್ಯೋಗಿ ಗೋವಿಂದರಾಜು ಅವರು ತೆರಳುತ್ತಿದ್ದ ಐ-20 ಕಾರನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು, ಹಣ ದೋಚಿ ಪರಾರಿಯಾಗಿದ್ದಾರೆ. ರಾತ್ರಿ 7 ಗಂಟೆ ಸುಮಾರಿಗೆ ಬೇರೆ ಕಂಪನಿಯಿಂದ ತಮ್ಮ ಕಂಪನಿಗೆ ಹಣ ವಿತರಣೆ ಮಾಡಲು ಮೈಸೂರಿನಿಂದ – ಬೆಂಗಳೂರಿಗೆ ತೆರಳುತ್ತಿದ್ದರು....
ಜಿಲ್ಲೆಮೈಸೂರುಸುದ್ದಿ

ಕೇಸರಿ ಪೇಟಕ್ಕೂ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ -ಕಹಳೆ ನ್ಯೂಸ್

ಮೈಸೂರು: ಶಾಲೆಗಳಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತಿಲ್ಲ. ಕೇಸರಿ ಪೇಟಕ್ಕೂ  ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರಿನಲ್ಲಿ (Mysuru) ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಮೊದಲಿನಿಂದ ಯಾವ ಪೇಟಗಳಿವೆ ಆ ಪೇಟಗಳಿಗಷ್ಟೇ ಅವಕಾಶ ನೀಡಲಾಗಿದೆ. ಈಗ ಪೇಟದ ಬಣ್ಣ ಬದಲಾಯಿಸಿಕೊಂಡು ಬಂದರೆ ಅವಕಾಶ ಮಾಡಿಕೊಡುವುದಿಲ್ಲ. ಹಿಜಬ್‌ಗೆ ಮಾತ್ರ ಅವಕಾಶ ಕೊಟ್ಟಿಲ್ಲ. ಜನಿವಾರ, ಶಿವಧಾರ, ಪೇಟಕ್ಕೂ ಅವಕಾಶ ಕೊಟ್ಟಿದ್ದೇವೆ. ಆದರೆ ಹೊಸ ರೂಪದ ಪೇಟಕ್ಕೆ ಅವಕಾಶ...
1 2 3 20
Page 1 of 20