Tuesday, May 21, 2024

ಮೈಸೂರು

ಮೈಸೂರು

ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ, ಕಷ್ಟದ ಸಂದರ್ಭ ಸ್ಪಂದಿಸುವುದರಲ್ಲಿ ದೇವರಿದ್ದಾನೆ ; ಸಿದ್ದರಾಮಯ್ಯ-ಕಹಳೆ ನ್ಯೂಸ್

ಮೈಸೂರು : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ. ಕಷ್ಟದ ಸಂದರ್ಭ ಸ್ಪಂದಿಸುವುದರಲ್ಲಿ ದೇವರಿದ್ದಾನೆ ಎಂದು ಹೇಳಿದ್ದಾರೆ. ಟಿ.ನರಸೀಪುರದಲ್ಲಿ ಸಾರ್ವಜನಿಕರನ್ನುದ್ದೇಶೀಸಿ ಮಾತನಾಡಿದ ಅವರು, ನಾನು ದೇವಾಲಯಗಳಿಗೆ ಹೋಗುವುದು ಕಡಿಮೆ. ಮನೆಯಲ್ಲಿ ಪೂಜೆ ಮಾಡುವುದಿಲ್ಲ. ಹಾಗೆಂದು ದೇವರು ಇಲ್ಲ ಎಂದಲ್ಲ. ಕಷ್ಟ ಕಾಲದಲ್ಲಿ ದೇವರು ಸ್ಪಂದಿಸುತ್ತಾನೆ ಎಂದಿದ್ದಾರೆ. ಈ ಸಂದರ್ಭದಲ್ಲಿ ಪೂಜಾರಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆಲ ಪೂಜಾರಿಗಳು ತಟ್ಟೆ ಕಾಸಿಗಾಗಿ ಕಾಯುತ್ತಿರುತ್ತಾರೆ. ಪೂಜೆಯ ವೇಳೆಯಲ್ಲಿ...
ಮೈಸೂರು

ಹಳೆ ಲವರ್ ಮೇಲಿನ ಆಸೆಯಿಂದ ತುಂಬು ಗರ್ಭಿಣಿ ಪತ್ನಿಯ ಕೆನ್ನೆಗೆ ಹೊಡೆದು, ಕೊಲೆಗೈದ ಪತಿ-ಕಹಳೆ ನ್ಯೂಸ್

ಮೈಸೂರು : ಮೈಸೂರಿನಲ್ಲಿ ಹಳೆ ಲವರ್ ಮೇಲಿನ ಆಸೆಯಿಂದ ತುಂಬು ಗರ್ಭಿಣಿ ಪತ್ನಿಯ ಕೆನ್ನೆಗೆ ಪತಿರಾಯ ಹೊಡೆದು, ಬಳಿಕ ಆಕೆಯನ್ನು ಕೊಲೆಗೈದ ಘಟನೆ ನಡೆದಿದೆ. ಕೊಲೆಯಾದ ದುರ್ದೈವಿ ಜಯನಗರದ ಚಿನ್ನಗಿರಿ ಕೊಪ್ಪಲಿನ 19 ವರ್ಷದ ಕೀರ್ತನಾ ಎಂದು ತಿಳಿದುಬಂದಿದೆ. ಪತಿ ರಾಘವೇಂದ್ರನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ರಾಘವೇಂದ್ರ, ಸುಂದರಿ ಎಂಬ ಮಹಿಳೆಯೊಂದಿಗೆ 5 ವರ್ಷದಿಂದ ಸಂಬಂಧ ಹೊಂದಿದ್ದ. ಅಲ್ಲದೇ ಕಳೆದ ಒಂದು ವರ್ಷದ ಹಿಂದೆ ಚಾಮರಾಜನಗರ ಮೂಲದ ಕೀರ್ತನಾಳನ್ನು ವಿವಾಹವಾಗಿದ್ದು,...
ಮೈಸೂರು

ಹಳೆ ಹೆಗ್ಗುಡಿಲು ಗ್ರಾಮದಲ್ಲಿ ಆನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರ ಸಾವು-ಕಹಳೆ ನ್ಯೂಸ್

ಮೈಸೂರು : ಕಾಡುಪ್ರಾಣಿಗಳ ಉಪಟಳವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದೀಗ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೆ ಹೆಗ್ಗುಡಿಲು ಗ್ರಾಮದಲ್ಲಿ ಆನೆ ದಾಳಿಯಿಂದಾಗಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಕೇರಳದ 45 ವರ್ಷದ ಜೋಯಿ ಎಂದು ಗುರುತಿಸಲಾಗಿದೆ. ಇವರು ಇಲ್ಲಿನ ಜಮೀನೊಂದನ್ನು ಗುತ್ತಿಗೆಗೆ ಪಡೆದು ಶುಂಠಿ ಬೇಸಾಯ ಮಾಡುತ್ತಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಒಚಿಟಿ ಸಲಗ ದಾಳಿ ನಡೆಸಿ, ಸೊಂಡಿಲಿನಿಂದ ಎತ್ತಿ ಹಳ್ಳಕ್ಕೆ ಬಿಸಾಡಿದೆ. ಇದರಿಂದ ಗಾಯಗೊಂಡ...
ಮೈಸೂರು

ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು; ಎಸ್.ಟಿ.ಮೋರ್ಚಾದ ಸದಸ್ಯರ ಒತ್ತಾಯ-ಕಹಳೆ ನ್ಯೂಸ್

ಮೈಸೂರು : ಎಸ್.ಟಿ ಸಮುದಾಯ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದೆ. ಶ್ರೀರಾಮುಲು ಅವರಿಗೆ ಡಿಸಿಎಂ ಸ್ಥಾನ ನೀಡಬೇಕು ಎಂದು ಮೈಸೂರಿನಲ್ಲಿ ಪಕ್ಷದ ಕಾರ್ಯಕಾರಿ ಸಮಿತಿಯಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸಭೆಯನ್ನುದ್ದೇಶಿಸಿ ಮಾತನಾಡಿತ್ತಿದ್ದ ಸಂದರ್ಭದಲ್ಲಿ ಎಸ್.ಟಿ.ಮೋರ್ಚಾದ ಸದಸ್ಯರು ಘೋಷಣೆ ಕೂಗಲಾರಂಭಿಸಿದರು. ಎಸ್.ಟಿ.ಮೋರ್ಚಾದ ಸದಸ್ಯರ ಘೋಷಣೆಯಿಂದ ಬೇಸರ ವ್ಯಕ್ತಪಡಿಸಿದ ನಳಿನ್, ಪಕ್ಷದ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದು, ಇದು ರಾಜ್ಯ...
ಮೈಸೂರು

ಹೊಸ ಮಾದರಿ ಶಿಕ್ಷಣ ವ್ಯವಸ್ಥೆಯಲ್ಲಿ ದೂರ ಶಿಕ್ಷಣಕ್ಕೆ ಇನ್ನು ಡಿಮ್ಯಾಂಡೋ ಡಿಮ್ಯಾಂಡ್ -ಕಹಳೆ ನ್ಯೂಸ್

ಮೈಸೂರು: ಕರ್ನಾಟಕವು ಶೈಕ್ಷಣಿಕ ಕ್ಷೇತ್ರದಲ್ಲಿ ಇಡೀ ದೇಶದಲ್ಲಿಯೇ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ದೂರನ ಶಿಕ್ಷಣದಲ್ಲೂ ಬದಲಾವಣೆಯನ್ನು ತಂದಿದೆ. ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಮೂಲಕವೇ ದೂರ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಮುಕ್ತ ವಿಶ್ವವಿದ್ಯಾಲಯದ ಭೌತಿಕ ತರಗತಿಗಳ ಆರಂಭಕ್ಕೆ ವರ್ಚುವಲ್ ವೇದಿಕೆ ಮೂಲಕ ಬೆಂಗಳೂರಿನಿಂದಲೇ ಚಾಲನೆ ನೀಡಿ ಉನ್ನತ ಶಿಕ್ಷಣ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮಾತನಾಡಿದ್ದರೆ. ಆನ್‌ಲೈನ್ ಶಿಕ್ಷಣ ವ್ಯವಸ್ಥೆಗೆ ಬರುವ ದಿನಗಳಲ್ಲಿ ಭಾರಿ ಬೇಡಿಕೆ ಬರಲಿದ್ದು,...
ಮೈಸೂರು

ಸಚಿವ ಸ್ಥಾನ ಸಿಗಲಿ, ಸಿಗದೇ ಇರಲಿ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಬಲ ನೀಡುತ್ತೇನೆ; ಮಾಜಿ ಸಚಿವ ಎನ್.ಮಹೇಶ್-ಕಹಳೆ ನ್ಯೂಸ್

ಮೈಸೂರು: ಮಾಜಿ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಸಚಿವ ಸ್ಥಾನ ಸಿಗಲಿ, ಸಿಗದೇ ಇರಲಿ ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಬಲ ನೀಡುತ್ತೇನೆ. ಸಚಿವ ಸ್ಥಾನ ಕೊಟ್ಟರೆ ಒಳ್ಳೆಯ ಆಡಳಿತ ನಡೆಸಿ ಕ್ಷೇತ್ರ ಮತ್ತು ರಾಜ್ಯದ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹೇಳಿದರು. ಮೈಸೂರು ಜಿಲ್ಲೆಯ ಸುತ್ತೂರಿನಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಶಿವರಾತ್ರೀಶ್ವರ ಶಿವಯೋಗಿಗಳ ಜಯಂತಿ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಅವರು, ಸಚಿವ ಸ್ಥಾನದ ಆಕಾಂಕ್ಷೆ ಯಾರಿಗೆ ಇರುವುದಿಲ್ಲ ಹೇಳಿ? ಸಚಿವ...
ಮೈಸೂರು

ಪ್ರೇಮಕುಮಾರಿಗೆ ವಂಚನೆ ಪ್ರಕರಣದಲ್ಲಿ ಶಾಸಕ ರಾಮದಾಸ್‍ಗೆ ನಿರೀಕ್ಷಣಾ ಜಾಮೀನು-ಕಹಳೆ ನ್ಯೂಸ್

ಮೈಸೂರು: ಮೈಸೂರು ಶಾಸಕ ರಾಮದಾಸ್ ಅವರು ಪ್ರೇಮಾಕುಮಾರಿಗೆ ವಂಚನೆ ನಡೆಸಿ, ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಜಿಲ್ಲಾ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ರಾಮದಾಸ್ ಹಾಗೂ ಪ್ರೇಮಕುಮಾರಿ ಅವರ ರಾಜ್ಯದಾದ್ಯಂತ ಬಾರೀ ಸುದ್ದಿಯಾಗಿದ್ದ ಪ್ರಕರಣ ಇದೀಗ ಮತ್ತೊಂದು ತಿರುವು ಪಡೆದುಕೊಂಡಿದೆ. ಪ್ರೇಮಾಕುಮಾರಿ ಪ್ರಕರಣದಲ್ಲಿ ರಾಮದಾಸ್ ಅವರ ಮೇಲಿನ ಆರೋಪ ಸಾಬೀತಾಗಿಲ್ಲ ಎಂದು ಮೈಸೂರಿನ ರಸ್ವತಿಪುರಂ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿದ್ದರು. ಆದರೆ ಪೊಲೀಸರು ಸಲ್ಲಿಸಿದ್ದ ವರದಿಯನ್ನು...
ಮೈಸೂರು

ಚಾಮುಂಡಿ ಬೆಟ್ಟಕ್ಕೆ ಜನವರಿ 1ರಿಂದ ಭಕ್ತರಿಗೆ ಪ್ರವೇಶವಿಲ್ಲ-ಕಹಳೆ ನ್ಯೂಸ್

ಮೈಸೂರು: ಪ್ರತೀ ವರ್ಷ ಹೊಸವರ್ಷದ ದಿನ ಸಾವಿರಾರು ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸುತ್ತಾರೆ. ಆದರೆ ಈ ವರ್ಷ ಕೊರೊನಾ ಸಾಂಕ್ರಾಮಿಕದ ಭೀತಿಯಿರುವ ಕಾರಣ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿದೆ. ಈ ಸಂಬಂಧ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದು, ಕಟ್ಟು ನಿಟ್ಟಾಗಿ ಕೊರೊನಾ ಕ್ರಮಗಳನ್ನು ಪಾಲಿಸುವಂತೆ ಸೂಚಿಸಿದ್ದಾರೆ...
1 3 4 5 6
Page 5 of 6