Friday, April 24, 2026

ಮೈಸೂರು

ಜಿಲ್ಲೆದಕ್ಷಿಣ ಕನ್ನಡಮೈಸೂರುಸುದ್ದಿ

ಕಾವೇರಿ ನದಿಯಲ್ಲಿ ಹಿರಿಯ ಸಾಹಿತಿ ಎಸ್.ಎಲ್ ಭೈರಪ್ಪನವರ ಅಸ್ಥಿ ವಿಸರ್ಜನೆ – ಕಹಳೆ ನ್ಯೂಸ್

ಮೈಸೂರು : ಕನ್ನಡದ ಖ್ಯಾತ ಸಾಹಿತಿ ಎಸ್. ಎಲ್ ಭೈರಪ್ಪನವರ ಅಂತ್ಯಕ್ರಿಯೆ ನಿನ್ನೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನೆರವೇರಿಸಲಾಗಿದ್ದು, ಇಂದು ಕಾವೇರಿ ನದಿಯಲ್ಲಿಅಸ್ಥಿ ವಿಸರ್ಜನೆ ಮಾಡಲಾಗಿದೆ. ಶ್ರೀರಂಗಪಟ್ಟಣದ ರಂಗನಾಥ ಸ್ನಾನ ಘಟ್ಟದಲ್ಲಿ ಅವರ ಅಸ್ಥಿಯನ್ನು ವಿಸರ್ಜನೆ ಮಾಡಲಾಯಿತು. ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಸ್ಥಿ ವಿಸರ್ಜಿಸಿದರು. ಹಿರಿಯ ಕನ್ನಡ ಸಾಹಿತಿ, ಪದ್ಮಭೂಷಣ ಪುರಸ್ಕೃತರಾದ ಎಸ್.ಎಲ್. ಭೈರಪ್ಪ ಅವರು ಸೆಪ್ಟೆಂಬರ್ 24, 2025ರಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರ ಅಂತ್ಯಕ್ರಿಯೆ ನಿನ್ನೆ ಮೈಸೂರಿನ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಮೈಸೂರುಸುದ್ದಿ

ಮೈಸೂರುನಲ್ಲಿ ನಡೆದ ದಸರಾ ಸಿಎಂ ಕಪ್ 2025 ರಾಜ್ಯ ಮಟ್ಟದ ವೆಯಿಟ್ಲಿಫ್ಟಿಂಗ್ ನಲ್ಲಿ 79ಕೆಜಿ ವಿಭಾಗದಲ್ಲಿ ಇರ್ದೆ ಬೆಟ್ಟoಪಾಡಿ ನಿವಾಸಿ ರಜತ್ ರೈಗೆ ಬೆಳ್ಳಿ ಪದಕ -ಕಹಳೆ ನ್ಯೂಸ್

ಮೈಸೂರುನಲ್ಲಿ ನಡೆದ ದಸರಾ ಸಿಎಂ ಕಪ್ 2025 ರಾಜ್ಯ ಮಟ್ಟದ ವೆಯಿಟ್ಲಿಫ್ಟಿಂಗ್ ನಲ್ಲಿ 79ಕೆಜಿ ವಿಭಾಗದಲ್ಲಿ ಇರ್ದೆ ಬೆಟ್ಟoಪಾಡಿ ನಿವಾಸಿ ರಜತ್ ರೈ ಇವರು ಬೆಳ್ಳಿಯ ಪದಕ ಪಡೆದಿರುತ್ತಾರೆ. ಇವರು ಮಾಜಿ ಸೈನಿಕ ರತ್ನಾಕರ ರೈ ಮತ್ತು ಶಶಿಕಲಾ ಇವರ ಪುತ್ರ. ಇವರು ಬೆಂಗಳೂರಿನ ಹೌಸ್ ಆಫ್ ಫಿಟ್ನೆಸ್ನಲ್ಲಿ ಫಿಟ್ನೆಸ್ ಕೋಚ್ ಆಗಿದ್ದು ಕಾರ್ತಿಕ್,ಕಾವ್ಯ, ಆಶಿಕ್ ಇವರು ತರಬೇತು ನೀಡುತ್ತಿದ್ದಾರೆ....
ಅಂಕಣಮೈಸೂರುಸುದ್ದಿ

ಇಂದು ಮಹಿಷ ದಸರಾ ; ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ-ಕಹಳೆ ನ್ಯೂಸ್

– ದಸರಾದಲ್ಲಿ ಶತಮಾನದ ವಿಂಟೇಜ್‌ ಕಾರುಗಳ ಕಲರವ ಮೈಸೂರು: ನಗರದಲ್ಲಿಂದು ಮಹಿಷ ದಸರಾ  ಆಚರಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಚಾಮುಂಡಿ ಬೆಟ್ಟದಲ್ಲಿನ ಮಹಿಷಾಸುರ ಪ್ರತಿಮೆ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಮಾಡಿ ಪೊಲೀಸ್  ಆಯುಕ್ತರು ಆದೇಶಿಸಿದ್ದಾರೆ. ತಡರಾತ್ರಿ 12 ಗಂಟೆಯಿಂದಲೇ ಸೆ.25ರ ಬೆಳಗ್ಗೆ 6 ಗಂಟೆಯವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಯಾವುದೇ ಸಭೆ, ಸಮಾರಂಭ, ಮೆರವಣಿಗೆ ನಡೆಸುವಂತಿಲ್ಲ ಎಂದು ಆದೇಶಿಸಲಾಗಿದೆ. ದಸರಾ...
ಜಿಲ್ಲೆಮೈಸೂರುಸಂತಾಪಸುದ್ದಿ

ಚಾಮುಂಡಿ ಬೆಟ್ಟದ ಶಿವಾರ್ಚಕ ವಿಧಿವಶ : ಇಂದು ತಾಯಿ ಚಾಮುಂಡಿ ದೇವಿ ದರ್ಶನಕ್ಕೆ ನಿರ್ಬಂಧ – ಕಹಳೆ ನ್ಯೂಸ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರು ಚಾಲನೆ ದೊರೆತಿದ್ದು, ದಸರಾ ಸಂಭ್ರಮ ಸಡಗರದ ನಡುವೆಯೇ ಅವಘಡವೊಂದು ಸಂಭವಿಸಿದೆ. ಚಾಮುಂಡಿ ಬೆಟ್ಟದ ಶುವಾರ್ಚಕರು ವಿಧಿವಶರಾಗಿದ್ದಾರೆ. ಶಿವಾರ್ಚಕ ವಿ.ರಾಜು ಮೃತಪಟ್ತಿದ್ದು, ಈ ಹಿನ್ನೆಲೆಯಲ್ಲಿ ಇಂದು ತಾಯಿ ಚಾಮುಂಡಿ ದೇವಿ ದರ್ಶನ ಕೆಲ ಕಾಲ ನಿರ್ಬಂಧಿಸಲಾಗಿದೆ. ನಿನ್ನೆ ತಡರಾತ್ರಿ ಚಾಮುಂಡಿ ಬೆಟ್ಟದ ಶಿವಾರ್ಚಕ ವಿ,ರಾಜು ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೂ ತಾಯಿ ಚಾಮುಂಡಿ ದೇವಿ ದರ್ಶನಕ್ಕೆ ನಿತ್ಬಂಧ ವಿಧಿಸಲಾಗಿದೆ. ಮಧ್ಯಾಹ್ನದವರೆಗೂ...
ಅಂಕಣಮೈಸೂರುಸುದ್ದಿ

Mysuru Dasara ; ನೀಲಿ ಜರಿ ಸೀರೆಯಿಂದ ಕಂಗೊಳಿಸುತ್ತಿರುವ ಚಾಮುಂಡಿ ದೇವಿ-ಕಹಳೆ ನ್ಯೂಸ್

ಮೈಸೂರು: ದಸರಾ (Mysuru Dasara) ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದೆ. ತಾಯಿ ಚಾಮುಂಡಿಯ ಉತ್ಸವ ಮೂರ್ತಿಯನ್ನು ಬೆಳ್ಳಿ ರಥದಲ್ಲಿ ಕೂರಿಸಲಾಗಿದೆ. ನೀಲಿ ಜರಿ ಸೀರೆಯನ್ನು ತಾಯಿ ಚಾಮುಂಡಿಗೆ ಉಡಿಸಿದ್ದು, ವಜ್ರದ ಕಣ್ಣುಗಳಿಂದ ದೇವಿ ಕಂಗೊಳಿಸುತ್ತಿದೆ. ಈ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉದ್ಘಾಟನೆ ಆಗಲಿದೆ. ಇನ್ನು ಚಾಮುಂಡಿ ದೇವಸ್ಥಾನವನ್ನು ಕಬ್ಬಿನ ಜಲ್ಲೆ ಮತ್ತು ಹೂಗಳಿಂದ ಅಲಂಕೃತ ಮಾಡಲಾಗಿದೆ. ದೇವಸ್ಥಾನ ಒಳ ಭಾಗದಲ್ಲಿನ ಪ್ರತಿ ಕಂಬಕ್ಕೂ ಕಬ್ಬು ಕಟ್ಟಿ ಅಲಂಕಾರ...
ಜಿಲ್ಲೆಮೈಸೂರುಸುದ್ದಿ

ಇಂದು ಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧ -ಕಹಳೆ ನ್ಯೂಸ್

ಮೈಸೂರು : ಪ್ರವಾಸಿಗರೇ ಗಮನಿಸಿ…..ಇಂದುಮಧ್ಯಾಹ್ನ 1 ಗಂಟೆವರೆಗೆ ಮೈಸೂರು ಅರಮನೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಸಿಂಹಾಸನ ಜೋಡಣೆ ಕಾರ್ಯ ನಡೆಯುವ ಹಿನ್ನೆಲೆ ಮೈಸೂರಿನ ಅರಮನೆಗೆ ಮಧ್ಯಾಹ್ನ 1 ಗಂಟೆವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಮೋದಾ ದೇವಿ ಒಡೆಯರ್ ನೇತೃತ್ವದಲ್ಲಿ ಸಿಂಹಾಸನ ಜೋಡಣೆ ಕಾರ್ಯ ನೆರವೇರಲಿದೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕ್ರತಿಕ ನಗರಿ ಮೈಸೂರು ಸಜ್ಜಾಗಿದೆ. ಸೆ.22 ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭವಾಗಲಿದೆ. ದಸರಾ ಮಹೋತ್ಸವಕ್ಕೆ ಜಿಲ್ಲಾಡಳಿತ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ....
ಜಿಲ್ಲೆಮೈಸೂರುಸುದ್ದಿ

ಕಾನ್‌ಸ್ಟೆಬಲ್‌ ಹುದ್ದೆ: ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರ ಪ್ರತಿಭಟನೆ, ಆಗ್ರಹ -ಕಹಳೆ ನ್ಯೂಸ್

ಮೈಸೂರು: 'ಪೊಲೀಸ್‌ ಕಾನ್‌ಸ್ಟೆಬಲ್‌ ಹುದ್ದೆಗೆ ವಯೋಮಿತಿ ಹೆಚ್ಚಿಸಬೇಕು' ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಸದಸ್ಯರು ಕೋಟೆ ಆಂಜನೇಯ ದೇವಾಲಯದ ಮುಂಭಾಗದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು. 'ವಯೋಮಿತಿಯನ್ನು 27ರಿಂದ 33 ವರ್ಷಕ್ಕೆ ಏರಿಸುವ ಬಗ್ಗೆ ಗೃಹ ಸಚಿವರಿಗೆ ತಿಳಿಸಿರುವುದಾಗಿ 2024ರ ಸೆಪ್ಟೆಂಬರ್‌ನಲ್ಲಿ ಸಿಎಂ ಮಾಧ್ಯಮ ಹೇಳಿಕೆ ನೀಡಿದ್ದರು. ಅದರಂತೆ ಆಕಾಂಕ್ಷಿಗಳು ಇದ್ದ ಉದ್ಯೋಗ ತ್ಯಜಿಸಿ, ಪರೀಕ್ಷೆಗೆ ತಯಾರಿ ನಡೆಸಿದ್ದಾರೆ. ಆದರೆ ಈ ಕುರಿತು ಸರ್ಕಾರ ಆದೇಶ ಹೊರಡಿಸದಿರುವುದು...
ಜಿಲ್ಲೆಮೈಸೂರುಸುದ್ದಿ

ಜಂಬೂ ಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಣೆಗಾಗಿ ಟಿಕೆಟ್‌ ಹಾಗೂ ಗೋಲ್ಡ್ ಕಾರ್ಡ್‌ ಬಿಡುಗಡೆ -ಕಹಳೆ ನ್ಯೂಸ್

ಮೈಸೂರು - ವಿಶ್ವವಿಖ್ಯಾತ ದಸರಾದ ಆಕರ್ಷಣೆಯಾದ ಜಂಬೂ ಸವಾರಿ ಹಾಗೂ ಪಂಜಿನ ಕವಾಯತು ವೀಕ್ಷಣೆಗಾಗಿ ದಸರಾ ಟಿಕೆಟ್‌ ಹಾಗೂ ಗೋಲ್ಡ್ ಕಾರ್ಡ್‌ಗಳನ್ನು 25 ದಿನ ಮುಂಚಿತವಾಗಿ ಬಿಡುಗಡೆ ಮಾಡಲಾಗಿದೆ. ಪ್ರತಿಬಾರಿ ದಸರಾ ಜಂಬೂ ಸವಾರಿಗೆ ನಾಲ್ಕೈದು ದಿನ ಬಾಕಿ ಇರುವಾಗ ಟಿಕೆಟ್‌ ಹಾಗೂ ಗೋಲ್ಡ್ ಕಾರ್ಡ್‌ಗಳನ್ನು ಬಿಡುಗಡೆ ಮಾಡಲಾಗುತ್ತಿತ್ತು. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಟಿಕೆಟ್‌ಗಳು ಸೋಲ್ಡ್ ಔಟ್‌ ಆಗುತ್ತಿದ್ದವು. ಹೀಗಾಗಿ ದಸರಾ ಟಿಕೆಟ್‌ಗಳನ್ನು ಮುನ್ನವೇ ಬಿಡುಗಡೆ ಮಾಡಬೇಕೆಂದು ಪ್ರವಾಸಿಗರು ಹಾಗೂ...
1 3 4 5 6 7 19
Page 5 of 19