ವಿದ್ಯಾರ್ಥಿನಿ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ʻಲೋಕಾʼ ಬಲೆಗೆ – ಕಹಳೆ ನ್ಯೂಸ್
ಶಿವಮೊಗ್ಗ: ಭದ್ರಾವತಿಯಲ್ಲಿ ವಸತಿ ಶಾಲೆಗೆ ದಾಖಲಿಸಿಕೊಳ್ಳಲು ವಿದ್ಯಾರ್ಥಿನಿಯ ಪೋಷಕರ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಲೋಕಾಯುಕ್ತ ಬಲೆಗೆ ಬಿದ್ದ ಪ್ರಿನ್ಸಿಪಾಲ್. ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿಕೊಳ್ಳಲು ನಾಮದೇವ 20 ಸಾವಿರ ರೂ. ಲಂಚ ಕೇಳಿದ್ದ. ಶಾಲೆಗೆ ಡ್ರಮ್ ಸೆಟ್ ಬೇಕು ಎಂಬ ನೆಪದಲ್ಲಿ ಲಂಚ ಕೇಳಿದ್ದ. ಈ ಸಂಬಂಧ ವಿದ್ಯಾರ್ಥಿನಿಯ ಪೋಷಕರು ಲೋಕಾಯುಕ್ತಕ್ಕೆ ದೂರು...







