ಭೀಮನ ಮೇಲೆ ಕಲ್ಲು ತೂರಾಟ : ಅಸ್ಸಾಂ ಮೂಲದ ಪುಂಡನ ವಿರುದ್ಧ ಸ್ಥಳೀಯರು ಗರಂ – ಕಹಳೆ ನ್ಯೂಸ್
ಹಾಸನ: ಜನರ ಅಚ್ಚುಮೆಚ್ಚಿನ ಕಾಡಾನೆ ಭೀಮನ ಮೇಲೆ ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಕಲ್ಲು ತೂರಾಟ ನಡೆಸಿದ ಘಟನೆ ಸಕಲೇಶಪುರದ ಒಸ್ಸೂರು ಎಸ್ಟೇಟ್ನಲ್ಲಿ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ಭೀಮ ಘೀಳಿಟ್ಟು ಕಾರ್ಮಿಕನತ್ತ ನುಗ್ಗಲು ಯತ್ನಿಸಿದೆ. ಅಸ್ಸಾಂನಿಂದ ಬಂದ ಕಾರ್ಮಿಕ ನೆಲೆಸಿದ್ದ ಲೈನ್ ಮನೆಗಳ ಬಳಿ ಇಂದು (ಜು.14) ಬೆಳಿಗ್ಗೆ ಕಾಡಾನೆ ಭೀಮ ಸಾಗುತ್ತಿತ್ತು. ಈ ವೇಳೆ ಕಾಡಾನೆಗೆ ಕಲ್ಲುಗಳಿಂದ ಹೊಡೆದು ಹುಚ್ಚಾಟ ಪ್ರದರ್ಶಿಸಿದ್ದಾನೆ. ಪದೇ ಪದೇ ಕಲ್ಲು ತೂರಿ ಕೀಟಲೆ...







