Thursday, July 23, 2026

ಹಾಸನ

ಜಿಲ್ಲೆಹಾಸನ

ಭೀಮನ ಮೇಲೆ ಕಲ್ಲು ತೂರಾಟ : ಅಸ್ಸಾಂ ಮೂಲದ ಪುಂಡನ ವಿರುದ್ಧ ಸ್ಥಳೀಯರು ಗರಂ – ಕಹಳೆ ನ್ಯೂಸ್

ಹಾಸನ: ಜನರ ಅಚ್ಚುಮೆಚ್ಚಿನ ಕಾಡಾನೆ ಭೀಮನ ಮೇಲೆ ಅಸ್ಸಾಂ ಮೂಲದ ಕಾರ್ಮಿಕನೊಬ್ಬ ಕಲ್ಲು ತೂರಾಟ ನಡೆಸಿದ ಘಟನೆ ಸಕಲೇಶಪುರದ ಒಸ್ಸೂರು ಎಸ್ಟೇಟ್‌ನಲ್ಲಿ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ಭೀಮ ಘೀಳಿಟ್ಟು ಕಾರ್ಮಿಕನತ್ತ ನುಗ್ಗಲು ಯತ್ನಿಸಿದೆ. ಅಸ್ಸಾಂನಿಂದ ಬಂದ ಕಾರ್ಮಿಕ ನೆಲೆಸಿದ್ದ ಲೈನ್‌ ಮನೆಗಳ ಬಳಿ ಇಂದು (ಜು.14) ಬೆಳಿಗ್ಗೆ ಕಾಡಾನೆ ಭೀಮ ಸಾಗುತ್ತಿತ್ತು. ಈ ವೇಳೆ ಕಾಡಾನೆಗೆ ಕಲ್ಲುಗಳಿಂದ ಹೊಡೆದು ಹುಚ್ಚಾಟ ಪ್ರದರ್ಶಿಸಿದ್ದಾನೆ. ಪದೇ ಪದೇ ಕಲ್ಲು ತೂರಿ ಕೀಟಲೆ...
ಸುದ್ದಿಹಾಸನ

ಮಲೆನಾಡು ಪ್ರದೇಶದಲ್ಲಿ ಉತ್ತಮ ಮಳೆ – ವರದಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ – ಕಹಳೆ ನ್ಯೂಸ್

ಹಾವೇರಿ: ಮಲೆನಾಡು ಪ್ರದೇಶಗಳಲ್ಲಿ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ವರದಾ ನದಿಯಲ್ಲಿ  ನೀರಿನ ಹರಿವು ಹೆಚ್ಚಿದ್ದು, ನದಿ ತೀರದ ಗ್ರಾಮಗಳ ರೈತರಲ್ಲಿ ಹೊಸ ಆಶಾಭಾವನೆ ಮೂಡಿದೆ. ಈ ಹಿನ್ನೆಲೆಯಲ್ಲಿ ಹಾನಗಲ್  ತಾಲೂಕಿನ ಬಾಳಂಬೀಡ ಗ್ರಾಮದ ರೈತರು  ವರದಾ ನದಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಹಾವೇರಿ ಜಿಲ್ಲೆಯಲ್ಲಿ ಈ ಬಾರಿ ಮುಂಗಾರು ಮಳೆ ಕೊರತೆಯಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು ಪರದಾಡುವ ಪರಸ್ಥಿತಿ ನಿರ್ಮಾಣವಾಗಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ನಿರೀಕ್ಷಿತ ಮಳೆಯಾಗಿಲ್ಲ. ಈ ಬಾರಿ...
ಜಿಲ್ಲೆಸುದ್ದಿಹಾಸನ

ಕಡಿಮೆ ಇತ್ತು ನೀರು : ಆತ್ಮಹತ್ಯೆಗೆ ಹೇಮಾವತಿ ನದಿಗೆ ಹಾರಿ ಮರಳಿನ ಮೇಲೆ ಬಿದ್ದವನ ರಕ್ಷಣೆ – ಕಹಳೆ ನ್ಯೂಸ್

ಹಾಸನ: ಹೇಮಾವತಿ ನದಿಗೆ  ಹಾರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಅಗ್ನಿಶಾಮಕದಳ ಹಾಗೂ ಪೊಲೀಸರ ಸಮಯೋಚಿತ ಕಾರ್ಯಾಚರಣೆಯಿಂದ ರಕ್ಷಿಸಿದ ಘಟನೆ ಹಾಸನ  ಜಿಲ್ಲೆ, ಸಕಲೇಶಪುರ  ಪಟ್ಟಣದ, ಮಳಲಿ ಬೈಪಾಸ್‌ನಲ್ಲಿ ನಡೆದಿದೆ. ಹಾಸನ ಮೂಲದ ಚಿರಂತ್ (38) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಚಿರಂತ್ ರಾಷ್ಟ್ರೀಯ ಹೆದ್ದಾರಿ 75ರ ಬಿಎಂ ರಸ್ತೆಯ ಮಳಲಿ ಬೈಪಾಸ್‌ನಲ್ಲಿರುವ ಹೇಮಾವತಿ ಸೇತುವೆಯಿಂದ ನದಿಗೆ ಜಿಗಿದಿದ್ದಾನೆ. ಚಿರಂತ್ ಜಿಗಿದಿದ್ದನ್ನು ಕಂಡು ಸ್ಥಳೀಯರು ಪೊಲೀಸರು ಹಾಗೂ ಅಗ್ನಿಶಾಮಕದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ....
ಜಿಲ್ಲೆಸುದ್ದಿಹಾಸನ

ಡ್ರಾಪ್‌ ಕೊಡುವ ನೆಪದಲ್ಲಿ ಅತ್ಯಾಚಾರ ಯತ್ನ : ಕೊಲೆ ಬೆದರಿಕೆಗೆ ಹೆದರಿ ಬೈಕ್‌ನಿಂದ ಜಿಗಿದ ಬಾಲಕಿ -ಕಹಳೆ ನ್ಯೂಸ್

ಹಾಸನ: ಕಾಲೇಜಿಗೆ ಡ್ರಾಪ್ ಕೊಡುವ ನೆಪದಲ್ಲಿ ಪರಿಚಯಸ್ಥ ಅಪ್ರಾಪ್ತ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಹಾಸನದಲ್ಲಿ  ನಡೆದಿದೆ. ಪದವಿ ಓದುತ್ತಿರುವ ಆರೋಪಿ, ಬಾಲಕಿಗೆ ಡ್ರಾಪ್‌ ಕೊಡುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಾಪಸ್‌ ಕರೆದುಕೊಂಡು ಬರುವಾಗ ಯಾರಿಗಾದ್ರೂ ಹೇಳಿದ್ರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಇದರಿಂದ ಹೆದರಿದ ಬಾಲಕಿ ಬೈಕ್‌ನಿಂದ ಜಿಗಿದಿದ್ದಾಳೆ. ಬಾಲಕಿಗೆ ಗಂಭೀರ ಗಾಯಗಳಾಗಿದ್ದು, ಆಕೆಗೆ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ವಿದ್ಯಾಭ್ಯಾಸದ ಜೊತೆಗೆ ಪಾನಿಪುರಿ ಅಂಗಡಿ ನಡೆಸುತ್ತಿದ್ದ....
ಜಿಲ್ಲೆಸುದ್ದಿಹಾಸನ

ಯುವತಿ ವಿಚಾರವಾಗಿ ಕಿರುಕುಳ ಆರೋಪ :  ಆಡಿಯೋ ರೆಕಾರ್ಡ್ ಮಾಡಿಟ್ಟು ಯುವಕ ಆತ್ಮಹತ್ಯೆ -ಕಹಳೆ ನ್ಯೂಸ್

ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಯುವಕನೋರ್ವ ಆಡಿಯೋ ರೆಕಾರ್ಡ್  ಮಾಡಿಟ್ಟು ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ಬಳಿ ನಡೆದಿದೆ. ತಾಲೂಕಿನ ಮಾಕವಳ್ಳಿ ಗ್ರಾಮದ ಅಭಿಷೇಕ್ (26) ಮೃತ ಯುವಕ. ಇದೇ ಗ್ರಾಮದ ಶಂಕರ, ದರ್ಶನ್, ಚೇತನ್, ದಿನೇಶ್ ಎಂಬವರು ಯುವತಿಯೊಬ್ಬಳ ವಿಚಾರದಲ್ಲಿ ನನಗೆ ಕಿರುಕುಳ ನೀಡಿದ್ದಾರೆ. ನಾಲ್ವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ ಎಂದು ಆಡಿಯೋ...
ಜಿಲ್ಲೆಸುದ್ದಿಹಾಸನ

ಇಂದು ಲೋಕಾರ್ಪಣೆಗೊಳ್ಳಲಿದೆ ಅಂಬಾರಿ ಆನೆ ಅರ್ಜುನನ ಪ್ರತಿಮೆ -ಕಹಳೆ ನ್ಯೂಸ್

ಹಾಸನ: ಜಿಲ್ಲೆಯ ಸಕಲೇಶಪುರ  ತಾಲ್ಲೂಕಿನ ದಬ್ಬಳ್ಳಿಕಟ್ಟೆ ಮೀಸಲು ಅರಣ್ಯ ಪ್ರದೇಶದಲ್ಲಿ ನಿರ್ಮಾಣವಾಗಿರುವ ಅಂಬಾರಿ ಆನೆ ಅರ್ಜುನನ ಪ್ರತಿಮೆ ಇಂದು (ಮೇ 6) ಲೋಕಾರ್ಪಣೆಗೊಳ್ಳಲಿದೆ. ಇದಕ್ಕೂ ಮುನ್ನ 2 ಬಾರಿ ಲೋಕಾರ್ಪಣೆ ಕಾರ್ಯಕ್ರಮ ಮುಂದೂಡಿಕೆಯಾಗಿ ಇದೀಗ ಮೂರನೇ ಬಾರಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಇಂದು ಸಂಜೆ 4:30ಕ್ಕೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸ್ಮಾರಕ ಲೋಕಾರ್ಪಣೆ ಮಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ, ಶಾಸಕ ಸಿಮೆಂಟ್‌ಮಂಜು ಭಾಗಿಯಾಗಲಿದ್ದಾರೆ. 2023ರ ಡಿಸೆಂಬರ್...
ಜಿಲ್ಲೆಸುದ್ದಿಹಾಸನ

ಲಂಚ ಪಡೆಯುವಾಗ `ಲೋಕಾ’ ಬಲೆಗೆ ಬಿದ್ದ ಸೆಸ್ಕಾಂ ಅಧಿಕಾರಿ -ಕಹಳೆ ನ್ಯೂಸ್

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣ  ತಾಲ್ಲೂಕಿನ ನುರನಕ್ಕಿ ಗ್ರಾಮದಲ್ಲಿ ಲಂಚ ಪಡೆಯುವ ವೇಳೆ ಸೆಸ್ಕಾಂ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನುರನಕ್ಕಿ ಸೆಸ್ಕಾಂ ಬ್ರಾಂಚ್‍ನ ಜ್ಯೂನಿಯರ್ ಇಂಜಿನಿಯರ್ (ಎಇ) ದೇವರಾಜು ಲೋಕಾಯುಕ್ತಗೆ ಸಿಕ್ಕಿಬಿದ್ದಿದ್ದಾರೆ. ಶಶಾಂಕ್ ಎಂಬವರ ಕೊಳವೆಬಾವಿಗೆ ವಿದ್ಯುತ್ ಸಂಪರ್ಕ ನೀಡಲು ದೇವರಾಜು 5000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಲಂಚದ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಹಣದ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಇನ್ಸ್ಪೆಕ್ಟರ್...
ಜಿಲ್ಲೆಸುದ್ದಿಹಾಸನ

ಪ್ರೀವೆಡ್ಡಿಂಗ್ ಶೂಟ್‌ಗೆ ಹೋಗುವಾಗ ಅಪಘಾತ :ಹಸೆಮಣೆ ಏರಬೇಕಿದ್ದ ವರ ಧಾರುಣ ಸಾವು -ಕಹಳೆ ನ್ಯೂಸ್

ಹಾಸನ: ಕೆಲವೇ ದಿನಗಳಲ್ಲಿ ಹಸೆಮಣೆ   ಏರಬೇಕಿದ್ದ ವರನೊಬ್ಬ ಪ್ರೀವೆಡ್ಡಿಂಗ್ ಶೂಟ್‌ಗೆ  ವಧುವನ್ನು ಕರೆತರಲು ಹೋಗುತ್ತಿದ್ದಾಗ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ   ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಸಕಲೇಶಪುರ ತಾಲ್ಲೂಕಿನ ಮೂಗಲಿ ಗ್ರಾಮದದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಯುವಕನನ್ನು ಮನು.ಎಲ್‌.ಎನ್. (29) ಎಂದು ಗುರುತಿಸಲಾಗಿದೆ. ಇವರು ಬೇಲೂರು ತಾಲ್ಲೂಕಿನ, ಲಕ್ಕುಂದ ಗ್ರಾಮದ, ದರ್ಬಾರ್ ಪೇಟೆ ನಿವಾಸಿಯಾಗಿದ್ದರು. ಮೇ 10 ರಂದು ಆಲೂರು ತಾಲೂಕು ತೊಗರನಹಳ್ಳಿ ಗ್ರಾಮದ ಕಾಂಚನ ಜೊತೆ...
1 2 3 14
Page 1 of 14