Recent Posts

Saturday, September 12, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಪ್ರಶಸ್ತಿ ವಿಜೇತ ಯುವಕ ಮಂಡಲ ವಿಟ್ಲ ಇದರ ವತಿಯಿಂದ ನಡೆದ 49 ನೇ  ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ – ಕಹಳೆ ನ್ಯೂಸ್

  ವಿಟ್ಲ ಪ್ರಶಸ್ತಿ ವಿಜೇತ ಯುವಕ ಮಂಡಲ ವಿಟ್ಲ ಇದರ ವತಿಯಿಂದ ನಡೆದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯಲ್ಲಿ, 49 ನೇ ವರ್ಷದ ಮೊಸರು ಕುಡಿಕೆ ಉತ್ಸವದ ಸಂದರ್ಭದಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸುದರ್ಶನ್ ಪಡಿಯಾರ್, ವಿಟ್ಲ ಪ್ರಸಿದ್ಧ ಕೋಟಿ ಕೆರೆಯಲ್ಲಿ ಈಜು ಬಾರದೆ ನೀರಿಗೆ ಇಳಿದ ಮೂರು ಮಕ್ಕಳ ಜೀವ ಉಳಿಸಿದ ಮಹೇಶ್ ಬನ ಮತ್ತು ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ವಿಟ್ಲ ಪಿ ಎಂ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕೃಷ್ಣ ಮಂದಿರ ಅಮ್ಟೂರು- 40ನೇ ವರ್ಷದ ಮೊಸರು ಕುಡಿಕೆ ಉತ್ಸವ – ಕಹಳೆ ನ್ಯೂಸ್

ಶ್ರೀಕೃಷ್ಣ ಮಂದಿರ, ನವಜ್ಯೋತಿ ಮಿತ್ರ ಮಂಡಳಿ ಮತ್ತು ಜ್ಯೋತಿ ಮಹಿಳಾ ಮಂಡಲ ಅಮ್ಟೂರು ಇದರ ಸಂಯಕ್ತ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ 40ನೇ ವರ್ಷದ  ಮೊಸರುಕುಡಿಕೆ ಉತ್ಸವ ಆಚರಿಸಲಾಯಿತು. ಬೆಳಿಗ್ಗೆ ನಡೆದ ಆಟೋಟ  ಸ್ಪರ್ಧೆಯನ್ನು ಮಂದಿರದ ಅರ್ಚಕರಾದ ಮೋಹನ ಆಚರ‍್ಯ  ಉದ್ಘಾಟಿಸಿದರು. ಮಧ್ಯಾಹ್ನ 3ಗಂಟೆಗೆ ಸರಿಯಾಗಿ ಅಮ್ಟೂರು  ಪೊಯ್ಯಕಂಡ ರಸ್ತೆಗಳಲ್ಲಿ ಶೋಭಾಯಾತ್ರೆ ನಡೆಯಿತು. ಶೋಭಾಯಾತ್ರೆಯಲ್ಲಿ ಚೆಂಡೆ, ಕುಣಿತ ಭಜನೆಗಳು ಮತ್ತು  ಪುಟಾಣಿ ಕೃಷ್ಣ-ರಾಧೆಯರ ವೇಷ ಆಕರ್ಷಣೀಯವಾಗಿತ್ತು.  ಸಂಜೆ ನಡೆದ ಸಭಾ ಕಾರ್ಯಕ್ರಮದ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ) ಕಲ್ಲಡ್ಕ ವಲಯ ತುರ್ತು ಕಾರ್ಯಕಾರಿಣಿ  ಸಭೆ – ಕಹಳೆ ನ್ಯೂಸ್

ಕಲ್ಲಡ್ಕ :ಬಿಲ್ಲವ ಸಮಾಜ ಸೇವಾ ಸಂಘ (ರಿ), ಕಲ್ಲಡ್ಕ ವಲಯದ ತುರ್ತು ಕಾರ್ಯಕಾರಿಣಿ ಸಭೆಯು ಸೆಪ್ಟೆಂಬರ್ 6 ರವಿವಾರ ಪಂಚವಟಿ ವಾಣಿಜ್ಯ ಸಂಕೀರ್ಣ ಕಲ್ಲಡ್ಕದಲ್ಲಿ ಸಂಘದ ಅಧ್ಯಕ್ಷ ಚಂದ್ರಶೇಖರ್ ಸಾಲಿಯನ್ ರವರ ಅಧ್ಯಕ್ಷತೆಯಲ್ಲಿ ಜರಗಿತು. ಸಂಘಕ್ಕೆ ಸ್ವಂತ ನಿವೇಶನ ಖರೀದಿ ಕುರಿತು, ಹಾಗೂ ಸಂಘದ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಮನೆ-ಮನೆ ಸಂಪರ್ಕ ಅಭಿಯಾನ ಕುರಿತು ಚರ್ಚಿಸಲಾಯಿತು. ಸಭೆಯ ವೇದಿಕೆಯಲ್ಲಿ ಪ್ರಧಾನ ಕಾರ್ಯದರ್ಶಿ ರಮೇಶ್ ಪೂಜಾರಿ ಹೊಸಕಟ್ಟ, ಕೋಶಾಧಿಕಾರಿ ಕಿಶೋರ್ ಕುಮಾರ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಯಲ್ಲಿ ಶ್ರೀಕೃಷ್ಣ ಲೀಲೆ 2026 ಮತ್ತು ಸಾಂದೀಪನಿ ಗುರುಪ್ರಶಸ್ತಿ ಪ್ರದಾನ ಸಮಾರಂಭ – ಕಹಳೆ ನ್ಯೂಸ್

ಬಡಗನ್ನೂರು : ಶಾಲೆಯಲ್ಲಿ ಗುರುಗಳು ಹೇಳಿಕೊಡುವ ಪಾಠಗಳು ಸಂಸ್ಕೃತಿ ಮತ್ತು ಸಂಸ್ಕಾರ ಒಂದು ಭಾಗ ಎಂದು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನನ್ಯ ಅಚ್ಯುತ ಮೂಡಿತ್ತಾಯ ಹೇಳಿದರು. ಆವರು ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಹಾಗೂ ಎಸ್.ಕೆ. ಫ್ರೆಂಡ್ಸ್, ಮುಡಿಪಿನಡ್ಕ ಶ್ರೀಕೃಷ್ಣ ಯುವಕಮಂಡಲ, ಪಟ್ಟೆ ಶ್ರೀಕೃಷ್ಣ ಹಿರಿಯ ವಿದ್ಯಾರ್ಥಿ ಸಂಘ, ಪಟ್ಟೆ ಶ್ರೀಕೃಷ್ಣ ಭಜನಾ ಮಂಡಳಿ, ಮುಡಿಪಿನಡ್ಕ ಅಯ್ಯಪ್ಪ ಭಜನಾ ಮಂಡಳಿ, ಪೆರಿಗೇರಿ ನವಚೈತನ್ಯ ಯುವಕಮಂಡಲ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರುದ ಪಿಲಿಗೊಬ್ಬು 2026ಕ್ಕೆ ಭರ್ಜರಿ ಸಿದ್ಧತೆ : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು: ಕರಾವಳಿಯ ಸಾಂಪ್ರದಾಯಿಕ ಹುಲಿವೇಷದ ಸೊಬಗನ್ನು ಅನಾವರಣಗೊಳಿಸುವ ‘ಪುತ್ತೂರುದ ಪಿಲಿಗೊಬ್ಬು 2026’ ಸೀಸನ್–4ಕ್ಕೆ ಪುತ್ತೂರು ಸಜ್ಜಾಗುತ್ತಿದೆ. ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು. ವಿಜಯ ಸಾಮ್ರಾಟ್ (ರಿ.) ಪುತ್ತೂರು ಇದರ ಆಶ್ರಯದಲ್ಲಿ ಹಾಗೂ ಸಹಜ್ ರೈ ಬಳಜ್ಜ ಅವರ ಮುಂದಾಳತ್ವದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಪುತ್ತೂರುದ ಪಿಲಿಗೊಬ್ಬು 2026 ನಡೆಯಲಿದೆ. ಆಮಂತ್ರಣ ಪತ್ರಿಕೆ ಬಿಡುಗಡೆಗೂ ಮುನ್ನ ಶ್ರೀ ಮಹಾಲಿಂಗೇಶ್ವರ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವ ದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ – ಕಹಳೆ ನ್ಯೂಸ್

ಬಂದಾರು : ಸ. ಉ. ಪ್ರಾ ಶಾಲೆ, ಮೈರೋಳ್ತಡ್ಕ, ಬಂದಾರು ಇದರ ಅಮೃತ ಮಹೋತ್ಸವ ದ ಸಲುವಾಗಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕಾರ್ಯಕ್ರಮ ಆ 30 ರಂದು ನೆರವೇರಿತು. ದೇವರಿಗೆ ದೀಪ ಬೆಳಗಿಸುವುರ ಮೂಲಕ ಪ್ರಾರಂಬಿಸಲಾಯಿತು. ಪ್ರಗತಿ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಗುರುಪ್ರಸಾದ್ ಅವರು ಈ ಕಾರ್ಯಕ್ರಮವನ್ನು ನೆರವೇರಿಸಿದರು. ಅಂಚೆ ವಿಭಾಗ ಪುತ್ತೂರು ಇದರ ಉಪ ಅಧೀಕ್ಷರಾದ ಶ್ರೀ ಮೋಹನ್ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ನೂರಾರು...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ರೈಲಿನಲ್ಲಿ ಮಹಿಳೆಯ ಅರೆಬೆತ್ತಲೆ ಶವ ಪತ್ತೆ : ಅತ್ಯಾಚಾರ ಎಸಗಿ ಕೊಲೆ ಶಂಕೆ – ಕಹಳೆ ನ್ಯೂಸ್

ಧಾರವಾಡ: ಸೋಲ್ಲಾಪುರದಿಂದ ಧಾರವಾಡಕ್ಕೆ ಬಂದಿದ್ದ ರೈಲಿನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಕಳೆದ ರಾತ್ರಿ ಮಹಾರಾಷ್ಟ್ರದ ಸೊಲ್ಲಾಪೂರದಿಂದ ಹೊರಟಿದ್ದ ರೈಲು ಬೆಳಗ್ಗೆ ಧಾರವಾಡ ತಲುಪಿತ್ತು. ಈ ರೈಲಿನಲ್ಲಿ ರಾತ್ರಿ ಸಮಯದಲ್ಲಿ ಮಹಿಳೆಯ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ರೈಲ್ವೆ ಸಿಬ್ಬಂದಿ ಬೋಗಿ ಸ್ವಚ್ಛ ಮಾಡಲು ಬಂದಾಗ ಶವ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ. ಬಳಿಕ ಸಿಬ್ಬಂದಿ ರೇಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಮಹಿಳೆ ಯಾರು ಎಂದು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಯುವಶಕ್ತಿಯಿಂದ ಕ್ರೀಡಾ ಕ್ಷೇತ್ರದಲ್ಲಿ ಹೊಸ ಇತಿಹಾಸ ನಿರ್ಮಾಣವಾಗಲಿ- ಎಂ.ಎ ಗಫೂರ್ – ಕಹಳೆ ನ್ಯೂಸ್

ಮಂಗಳೂರು : ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಅವರು ತಮ್ಮ  ಅಪ್ರತಿಮ ಕ್ರೀಡಾ ಸಾಧನೆಯ ಮೂಲಕ ದೇಶಕ್ಕೆ ಸ್ವರ್ಣದ  ಗೌರವ ತಂದುಕೊಟ್ಟು  ಭಾರತೀಯ ಕ್ರೀಡಾ ಇತಿಹಾಸದಲ್ಲಿ ಅಧ್ಯಾಯ ನಿರ್ಮಿಸಿದ್ದಾರೆ. ಅವರು ನಿರ್ಮಿಸಿದಂತಹ ಇತಿಹಾಸವನ್ನು ಇಂದಿನ ಯುವಜನತೆ ತಮ್ಮ ಪ್ರತಿಭೆ, ಪರಿಶ್ರಮದ ಮೂಲಕ ಮರುನಿರ್ಮಿಸಬೇಕು. ಯುವಜನರು ದೇಶದ ಆಸ್ತಿ. ಸ್ವಾತಂತ್ರ್ಯ ಸಂಗ್ರಾಮದಿಂದ ಹಿಡಿದು ಇಂದಿನವರೆಗೂ ಯುವ ಜನತೆ ಕ್ರೀಡಾ ಕ್ಷೇತ್ರ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಮತ್ತು ಸಾಮಥ್ರ್ಯವನ್ನು ಪ್ರದರ್ಶಿಸಿ...
1 2 3 753
Page 1 of 753