ಕಾವಳಪಡೂರು: ನೂತನ ಹಿಂದೂ ರುದ್ರಭೂಮಿ ಲೋಕಾರ್ಪಣೆ – ಕಹಳೆ ನ್ಯೂಸ್
ಬಂಟ್ವಾಳ : ತಾಲೂಕಿನ ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾವಳಪಡೂರು ಗ್ರಾಮದ ಹಂಚಿಕಟ್ಟೆ ಎಂಬಲ್ಲಿ ಗ್ರಾಮ ಪಂಚಾಯತ್ ಹಾಗೂ ಹಿಂದೂ ರುದ್ರಭೂಮಿ ನಿರ್ಮಾಣ ಸಮಿತಿ ಮತ್ತು ದಾನಿಗಳ ವತಿಯಿಂದ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ನೂತನ ಹಿಂದೂ ರುದ್ರಭೂಮಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ರುದ್ರಭೂಮಿ ನಿರ್ಮಾಣ ಕಾರ್ಯ ಶ್ಲಾಘನೀಯ .ಇದಕ್ಕೆ ಕೈಜೋಡಿಸಿದ...







