ಧಾರಾಕಾರ ಮಳೆಯ ನಡುವೆಯೇ ನಡುರಸ್ತೆಯಲ್ಲಿ ಧಗಧಗನೇ ಹೊತ್ತಿ ಉರಿದ ಕಾರು -ಕಹಳೆ ನ್ಯೂಸ್
ಮಂಗಳೂರು ನಗರದ ಕುಲಶೇಖರ ಕಲ್ಪನೆ ಬಳಿ ನಡುರಸ್ತೆಯಲ್ಲಿಯೇ ಕಾರೊಂದು ಧಗಧಗನೇ ಹೊತ್ತಿ ಉರಿದ ಘಟನೆ ನಡೆದಿದೆ. ರವಿವಾರ ಮಧ್ಯಾಹ್ನ 12ಗಂಟೆಗೆ ಈ ಘಟನೆ ನಡೆದಿದೆ. ಸ್ವಿಫ್ಟ್ ಡಿಸಾಯರ್ ಟ್ಯಾಕ್ಸಿಯಲ್ಲಿ ಮೊದಲಿಗೆ ಹೊಗೆ ಕಾಣಿಸಿಕೊಂಡಿದೆ. ಬಳಿಕ ಕಾರು ಸಂಪೂರ್ಣ ಧಗಧಗನೇ ಹೊತ್ತಿ ಉರಿದಿದೆ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೂ ಕಾರಿನಲ್ಲಿ ಬೆಂಕಿಯ ಜ್ವಾಲೆ ಏಳುತ್ತಿರುವ ದೃಶ್ಯ ವೀಡಿಯೋದಲ್ಲಿ ದಾಖಲಾಗಿದೆ. ಸದ್ಯ ಸ್ಥಳದಲ್ಲಿದ್ದವರೇ ನೀರು ಹಾಯಿಸಿ ಬೆಂಕಿ ನಂದಿಸಿದ್ದಾರೆ. ಈ ಕಾರು ಯಾರಿಗೆ ಸೇರಿದ್ದು,...







