Thursday, May 7, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಕೇವಲ ತಲ್ವಾರ್ ತೋರಿಸಿದರೆ ಸಾಕಿತ್ತು: RSS ಮುಖಂಡ ಕಲ್ಕಡ ಪ್ರಭಾಕರ್ ಭಟ್-ಕಹಳೆ ನ್ಯೂಸ್

ಮಂಗಳೂರು: ಪಹಲ್ಗಾಮ್ ದಾಳಿ ವೇಳೆ ಉಗ್ರರಿಗೆ ಹಿಂದೂಗಳು ಕೇವಲ ತಲ್ವಾರ್ ತೋರಿಸಿದರೆ ಸಾಕಿತ್ತು ಕಥೆಯೇ ಬೇರೆ ಆಗುತ್ತಿತ್ತು ಎಂದು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ನೀಡಿದ್ದಾರೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ಮಾತನಾಡಿದ ಕಲ್ಲಡ್ಕ ಪ್ರಭಾಕರ್ ಭಟ್, ಹೆಣ್ಣುಮಕ್ಕಳು ವ್ಯಾನಿಟಿ ಬ್ಯಾಗ್ ನಲ್ಲಿ ಚೂರು ಇಟ್ಟುಕೊಳ್ಳಿ ಎಂದು ಕರೆ ನೀಡಿದರು. ವ್ಯಾನಿಟಿ ಬ್ಯಾಗ್ ನಲ್ಲಿ ಪೌಡರ್, ಬಾಚಣಿಗೆ ಜೊತೆ ಆರು ಇಂಚಿನ ಚಾಕು ಇಟ್ಟುಕೊಳ್ಳಿ. ಅದಕ್ಕೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಅಂಬಿಕಾ ಪದವಿ ಕಾಲೇಜಿನ ವಾರ್ಷಿಕ ಕ್ರೀಡಾದಿನದ ಉದ್ಘಾಟನಾ ಸಮಾರಂಭ -ಕಹಳೆ ನ್ಯೂಸ್

ಪುತ್ತೂರು: ಕ್ರೀಡೆಯನ್ನು ಕೇವಲ ಮೋಜು ಎಂಬಂತೆ ಸ್ವೀಕರಿಸದೆ ನಮ್ಮ ದೇಹದಾಢ್ಯತೆಯನ್ನು ಸಮೃದ್ಧಗೊಳಿಸುವ ವ್ಯವಸ್ಥೆಯಾಗಿ ಗುರುತಿಸಬೇಕು. ಯುವ ಸಮೂಹ ಆರೋಗ್ಯವಂತರಾಗಿ ಮೂಡಿಬರುವಲ್ಲಿ ಕ್ರೀಡೆ ಮಹತ್ವ ಪಡೆಯುತ್ತದೆ. ನಮ್ಮ ದೇಹಾರೋಗ್ಯ ದೇಶಕ್ಕೆ ಉಪಯೋಗ ಆಗುವ ನೆಲೆಯಲ್ಲಿ ವಿನಿಯೋಗಗೊಳ್ಳಬೇಕು. ದೇಶಕ್ಕಾಗಿ ನಾವು ಎಂಬ ಭಾವನೆ ಪ್ರತಿಯೊಬ್ಬರಲ್ಲೂ ಒಡಮೂಡಬೇಕು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಪದವಿ ಮಹಾವಿದ್ಯಾಲಯದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೇಕರಿಯಲ್ಲಿ ಬೆಂಕಿ ಅವಘಡ; ಲಕ್ಷಾಂತರ ರೂ. ನಷ್ಟ-ಕಹಳೆ ನ್ಯೂಸ್

ಮಂಗಳೂರು: ನಗರದ ಬೇಕರಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಮಂಗಳವಾರ (ಏ.29) ಮುಂಜಾನೆ ನಡೆದಿದೆ. ನಗರದ ಪಾಂಡೇಶ್ವರ ಬಳಿಯ ಬೇಕರಿಯಲ್ಲಿ ಈ ಅವಘಢ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎನ್ನಲಾಗಿದೆ. ಅವಘಡದಿಂದ ಐದು ಲಕ್ಷಕ್ಕೂ ರೂ. ಅಧಿಕ ಮೊತ್ತದ ವಸ್ತು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ನಷ್ಟವಾಗಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬಂದಿಗಳು ಕಾರ್ಯಾಚರಣೆ ಬೆಂಕಿಯನ್ನು ನಂದಿಸಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಭಜನಾ ತರಬೇತಿ ಶಿಬಿರದ ಸಮಾರೋಪ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಭಜನೆ ಇದ್ದಲ್ಲಿ ವಿಭಜನೆ ಇಲ್ಲ ಎಂಬ ಮಾತಿನಂತೆ ಮಕ್ಕಳಿಗೆ ಸಂಸ್ಕಾರ ಸಂಸ್ಕೃತಿ ಕಲಿಸಲು ಭಜನೆ ಸುಲಭ ಮಾರ್ಗವಾಗಿದೆ.ಜೊತೆಗೆ ಏಕಾಗ್ರತೆಗೆ, ನೆನಪಿನ ಶಕ್ತಿ ವೃದ್ಧಿಸಲು ಭಜನೆ ಸಹಕಾರಿಯಾಗಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹೇಳಿದರು. ಅವರು ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ.) ಬಂಟ್ವಾಳ ಇದರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಪುಂಜಾಲಕಟ್ಟೆ ವತಿಯಿಂದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕೈಕಂಬದಲ್ಲಿ 1 ಕೋ. ರೂ. ವೆಚ್ಚದ ರಸ್ತೆ ಅಭಿವೃದ್ಧಿಗೆ ಡಾ. ಭರತ್ ಶೆಟ್ಟಿ ಗುದ್ದಲಿಪೂಜೆ-ಕಹಳೆ ನ್ಯೂಸ್

ಗುರುಪುರ : ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುರುಪುರ ಕೈಕಂಬ-ಕಾಮಪಾದೆವರೆಗೆ 1 ಕೋಟಿ ರೂ ಅನುದಾನದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಎ. 28ರಂದು ಶಾಸಕ ಡಾ. ಭರತ್ ಶೆಟ್ಟಿ ಅವರು ಗುದ್ದಲಿಪೂಜೆ ನೆರವೇರಿಸಿದರು. ಶಾಸಕ ಡಾ. ಭರತ್ ಶೆಟ್ಟಿ ಮಾತನಾಡಿ, ಹಿಂದಿನ ಅವಧಿಯಲ್ಲಿ ಈ ಭಾಗದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ನಡೆದಿವೆ. ಈ ಭಾಗದ ಬಹುದಿನಗಳ ಬೇಡಿಕೆಯಂತೆ ಇದೀಗ ಈ ರಸ್ತೆ ಅಭಿವೃದ್ಧಿಗೊಳ್ಳುತ್ತಿದೆ. 5.75 ಅಗಲದೊಂದಿಗೆ ಒಟ್ಟು...
ದಕ್ಷಿಣ ಕನ್ನಡಪುತ್ತೂರುವಾಣಿಜ್ಯಸುದ್ದಿ

ಪುತ್ತೂರಿನ ಶೆಲ್ ನಲ್ಲಿ ಅಕ್ಷಯ ತೃತೀಯಕ್ಕೆ ವಿಶೇಷ ಆಫರ್ – ಕಹಳೆ ನ್ಯೂಸ್

ಪುತ್ತೂರು : ಕಳೆದ ಕೆಲವು ವರ್ಷಗಳಿಂದ ಪುತ್ತೂರಿನಲ್ಲಿ ಕಾರ್ಯಚರಿಸುತ್ತಿರುವ ತಿರುಮಲ ಫ್ಯುಯಲ್ಸ್ ನ ಶೆಲ್ ಪೆಟ್ರೋಲ್ ಪಂಪ್ ನಲ್ಲಿ ಈ ಬಾರಿಯ ಅಕ್ಷಯ ತೃತೀಯಕ್ಕೆ ಗ್ರಾಹಕರಿಗಾಗಿ ವಿಶೇಷ ಕೊಡುಗೆ ನೀಡುತ್ತಿದೆ. ಅಕ್ಷಯ ತೃತೀಯದ ಪ್ರಯುಕ್ತ ಗ್ರಾಹಕರಿಗಾಗಿ ಇಂದಿನ ಮಾರುಕಟ್ಟೆ ದರಕ್ಕಿಂತ ಲೀಟರ್‌ಗೆ ರೂ. 1 ಕಡಿಮೆ ಬೆಲೆಗೆ ಪೆಟ್ರೋಲ್ ಅನ್ನು ನೀಡುತ್ತಿದ್ದು, ಗ್ರಾಹಕರು ಸೀಮಿತ ಅವಧಿಗೆ ಈ ಸುವರ್ಣಾವಕಾಶವನ್ನು ಪಡೆದುಕೊಳ್ಳಿ. ಇನ್ನು ಅತ್ಯುತ್ತಮ ಇಂಧನ ಗುಣಮಟ್ಟ – ನಿಮ್ಮ ಎಂಜಿನ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯ ಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಾಹಿತಿ ಕಾರ್ಯಾಗಾರ-ಕಹಳೆ ನ್ಯೂಸ್

ಪುತ್ತೂರು: ಕಾರ್ಮಿಕ ಭವಿಷ್ಯ ನಿಧಿ ಮತ್ತು ರಾಜ್ಯ ಕಾರ್ಮಿಕರ ವಿಮಾ ಯೋಜನೆಯ ಬಗ್ಗೆ ಮಾಹಿತಿ ಕಾರ್ಯಾಗಾರವನ್ನು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿAಗ್ ಎಂಡ್ ಟೆಕ್ನಾಲಜಿಯಯ ಶ್ರೀ ರಾಮ ಸಭಾಭವನದಲ್ಲಿ ಏರ್ಪಡಿಸಲಾಗಿತ್ತು. ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ) ಇದರ ಆಶ್ರಯದಲ್ಲಿ ಕಾರ್ಮಿಕ ಭವಿಷ್ಯ ನಿಧಿ ಮಂಗಳೂರು ವಿಭಾಗದ ಜಿಲ್ಲಾ ಸಂಪರ್ಕ ಅಭಿಯಾನದ ಅಡಿಯಲ್ಲಿ ನಿಧಿ ಆಪ್ ಕೇ ನಿಕಟ್ ಎನ್ನುವ ಕಾರ್ಯಕ್ರಮದನ್ವಯ ಇದನ್ನು ಆಯೋಜಿಸಲಾಗಿತ್ತು. ಕಾರ್ಮಿಕ ಭವಿಷ್ಯ ನಿಧಿಗೆಸಂಬAಧಪಟ್ಟAತೆ ಎಲ್ಲಾ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕಲಾ ವಿಭಾಗದಲ್ಲಿ ಸಾಗರದಷ್ಟು ಅವಕಾಶವಿದೆ: ಡಾ. ಪೀಟರ್ ವಿಲ್ಸನ್ ಪ್ರಭಾಕರ್-ಕಹಳೆ ನ್ಯೂಸ್

ಪುತ್ತೂರು : ಅಂಕಪಟ್ಟಿಯ ಅಂಕಗಳಿಗಿAತ ನಮ್ಮ ಕೌಶಲ್ಯ ಜೀವನಕ್ಕೆ ಅಗತ್ಯ. ಹೆಚ್ಚಿನ ಕೌಶಲ್ಯವನ್ನು ಅಭ್ಯಸಿಸಿದಷ್ಟು ನಮ್ಮ ಪದವಿಗೆ ಹೆಚ್ಚಿನ ಬೆಲೆ ಸಿಗುತ್ತದೆ. ಪದವಿಯ ಜೊತೆ ಜೊತೆಗೆ ಬೇರೆ ಬೇರೆ ಸರ್ಟಿಫಿಕೇಟ್ ಕೋರ್ಸ್ಗಳನ್ನು ಮಾಡುವುದರಿಂದ ಕೆಲಸವನ್ನು ಪಡೆಯಲು ಸುಲಭವಾಗುತ್ತದೆ. ಅದೇ ರೀತಿ ವಿದೇಶಿ ಭಾಷೆಗಳನ್ನು ಕಲಿಯುವುದರಿಂದ ಬೇರೆ ದೇಶಗಳಲ್ಲಿ ಬದುಕು ಕಟ್ಟಿಕೊಳ್ಳಲು ಸಹಕಾರಿ. ಆನ್‌ಲೈನ್ ಕೋರ್ಸ್ಗಳು ಕೆಲಸವನ್ನು ಪಡೆಯಲು ಇರುವ ಸುಲಭೋಪಾಯ. ನಮ್ಮ ವೃತ್ತಿಜೀವನಕ್ಕೆ ಉಪಯೋಗವಾಗುವ ಕೋರ್ಸ್ಗಳನ್ನು ಆಯ್ಕೆಮಾಡಿಕೊಳ್ಳುವುದು ನಮ್ಮ ಜವಾಬ್ದಾರಿ...
1 143 144 145 146 147 727
Page 145 of 727