Thursday, May 14, 2026

ದಕ್ಷಿಣ ಕನ್ನಡ

ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸುದ್ದಿ

ಉಪ್ಪಿನಂಗಡಿ : ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಓರ್ವ ಮೃತ್ಯು, ಹತ್ತಕ್ಕೂ ಅಧಿಕ ಮಂದಿಗೆ ಗಂಭೀರ ಗಾಯ – ಕಹಳೆ ನ್ಯೂಸ್

ಉಪ್ಪಿನಂಗಡಿ ಏ.04  : ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, ಹತ್ತಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೀರಕಟ್ಟೆ ಎಂಬಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ. ಬೆಂಗಳೂರಿನಿಂದ ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್ ನೀರಕಟ್ಟೆಯ ಅಪಾಯಕಾರಿ ತಿರುವನ್ನು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಬಸ್ಸಿನಡಿ ಸಿಲುಕಿ ಮೃತಪಟ್ಟಿದ್ದು, ಹತ್ತಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಏ.6 ರಂದು ಮಂಗಳೂರು ಪುರಭವನದಲ್ಲಿ ಸನಾತನ ನೃತ್ಯ ಪ್ರೇರಣ ಮತ್ತು ಭರತನಾಟ್ಯ ಕಾರ್ಯಕ್ರಮ -ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಸನಾತನ ನಾಟ್ಯಾಲಯದ ವತಿಯಿಂದ ಏಪ್ರಿಲ್ 6 ಬಾನುವಾರ ಸಂಜೆ 6 ಗಂಟೆಗೆ ಸನಾತನ ನೃತ್ಯ ಪ್ರೇರಣಾ ಮತ್ತು ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ. ಈ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವ ವಿದ್ಯಾಲಯ ನಡೆಸಿದ 2024 ನೇ ಸಾಲಿನ ಭರತನಾಟ್ಯದ ವಿದ್ವತ್ ಅಂತಿಮ ಪರೀಕ್ಷೆಯನ್ನು ತೇರ್ಗಡೆ ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳಾದ ಸಿಂಚನಾ ಎಸ್ ಕುಲಾಲ್,ವಿಜಿತಾ ಕೆ ಶೆಟ್ಟಿ,ವೈಷ್ಣವಿ ತಂತ್ರಿ,ಜಾಹ್ನವಿ ಎಸ್ ಶೇಖ,ಧೃತಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರು

ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ನಿಂದ ಗೀತಾ ಬಾಯಿಗೆ ಆರ್ಥಿಕ ನೆರವು -ಕಹಳೆ ನ್ಯೂಸ್

ಮಂಗಳೂರು:ಡ್ರಾಮೆನ್ ನಾರ್ವೆಯಲ್ಲಿ ನಡೆಯಲಿರುವ ವಿಶ್ವ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್ ನಲ್ಲಿ ಭಾರತವನ್ನು ಪ್ರತಿನಿಧಿಸಲು ಆಯ್ಕೆಯಾಗಿರುವ ಗೀತಾ ಬಾಯಿ ಅವರಿಗೆ ಕೊಡಿಯಾಲ್ ಸ್ಫೋರ್ಟ್ ಅಸೋಸಿಯೇಶನ್ ವತಿಯಿಂದ ಆರ್ಥಿಕ ಸಹಾಯದ ಚೆಕ್ ಅನ್ನು ಸಂಸ್ಥೆಯ ಪ್ರಮುಖರಾದ ಮಂಗಲ್ಪಾಡಿ ನರೇಶ್ ಶೆಣೈಯವರು ಹಸ್ತಾಂತರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ರೀಡಾಪಟು ಗೀತಾ ಬಾಯಿ ಡ್ರಾಮೆನ್ ನಾರ್ವೆಯಲ್ಲಿ ನಡೆಯುವ ಈ ಸ್ಪರ್ಧಾ ಕೂಟದಲ್ಲಿ ಭಾಗವಹಿಸಲು ನಾಲ್ಕರಿಂದ ಐದು ಲಕ್ಷ ರೂಪಾಯಿ ಖರ್ಚು ಬರುತ್ತದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ತೆರೆದ ಚರಂಡಿಯಲ್ಲೇ ಹರಿಯುತ್ತಿದೆ ಕಲ್ಲಡ್ಕದ ಕೊಳಚೆ -ಕಹಳೆ ನ್ಯೂಸ್

ಬಂಟ್ವಾಳ: ಕಲ್ಲಡ್ಕ ಪೇಟೆಯ ಕೊಳಚೆ ನೀರು ನೇರವಾಗಿ ತೆರೆದ ಚರಂಡಿಯಲ್ಲಿ ಹರಿದು ಶುದ್ಧ ನೀರಿನ ತೋಡು ಸೇರುತ್ತಿರುವ ಪರಿಣಾಮ ಸ್ಥಳೀಯ ನಿವಾಸಿಗಳಿಗೆ ದುರ್ನಾತ, ಸಾಂಕ್ರಾಮಿಕ ರೋಗದ ಭೀತಿ ಎದುರಾಗಿರುವ ಕುರಿತು ನಾಗರಿಕರಿಂದ ಆಕ್ರೋಶ ವ್ಯಕ್ತವಾಗುತ್ತಿದೆ. ಇದರಿಂದ ಸ್ಥಳೀಯ ಕೃಷಿ ಭೂಮಿಗಳಿಗೆ ತೊಂದರೆಯಾಗುತ್ತಿದ್ದು, ಸಮಸ್ಯೆಯನ್ನು ಪರಿಹರಿಸುವಂತೆ ಸಂಬಂಧಪಟ್ಟ ಎಲ್ಲರಿಗೂ ದೂರು ನೀಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂಬ ಆರೋಪ ಕೇಳಿಬಂದಿದೆ. ಕಲ್ಲಡ್ಕ ಪೇಟೆಯ ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯಲ್ಲಿ ಮಳೆ ನೀರು ಹಾಗೂ ಕೊಳಚೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಮಾಜದ ಭದ್ರತೆಗೆ ಪೊಲೀಸರ ಪರಿಶ್ರಮ ಅನನ್ಯ-ಕಹಳೆ ನ್ಯೂಸ್

ಮಂಗಳೂರು: ಪೊಲೀಸರು ಸಮಾಜದ ಭದ್ರತೆ ಹಾಗೂ ಶಾಂತಿ ನಿರ್ಮಾಣಕ್ಕೆ ದುಡಿಯುತ್ತಾರೆ. ಪ್ರಾಮಾಣಿಕತೆಯಿಂದ ಕೆಲಸ ಮಾಡಿದಾಗ ಸಮಾಜದಿಂದ ಗೌರವ ಪ್ರಾಪ್ತಿಯಾಗುತ್ತದೆ ಎಂದು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ಧಾರ್ಥ ಗೋಯೆಲ್‌ ಹೇಳಿದರು. ನಗರ ಪೊಲೀಸ್‌, ಜಿಲ್ಲಾ ಪೊಲೀಸ್‌ ಮತ್ತು ಕೆಎಸ್‌ಆರ್‌ಪಿ 7ನೇ ಪಡೆ ಮಂಗಳೂರು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಬುಧವಾರ ಡಿ.ಎ.ಆರ್‌. ಕವಾಯತು ಮೈದಾನದಲ್ಲಿ ನಡೆದ ಕರ್ನಾಟಕ ರಾಜ್ಯ ಪೊಲೀಸ್‌ ಧ್ವಜ ಹಾಗೂ ಕಲ್ಯಾಣ ದಿನಾಚರಣೆಯ ಅಧ್ಯಕ್ಷತೆ ವಹಿಸಿ ಅವರು...
ಜಿಲ್ಲೆದಕ್ಷಿಣ ಕನ್ನಡಬೆಂಗಳೂರುಸುದ್ದಿ

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ, ಕಾರಿಗೆ ಐರಾವತ ಬಸ್ ಡಿಕ್ಕಿ, ನಾಲ್ವರ ಸಾವು -ಕಹಳೆ ನ್ಯೂಸ್

ಬೆಂಗಳೂರು :ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಮಂಡ್ಯ ಸಮೀಪದ ತೂಬಿನಕೆರೆ ಬಳಿ ಅತೀ ವೇಗವಾಗಿ ಬರುತ್ತಿದ್ದ ಐರಾವತ ಬಸ್ ಮುಂದೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಗರದ ನಾಲ್ವರು ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರು ಬೆಂಗಳೂರಿನ ಜೆಪಿ ನಗರದ ನಿವಾಸಿಗಳೆಂದು ಪೊಲೀಸರು ಈ ಸಂಜೆಗೆ ತಿಳಿಸಿದ್ದಾರೆ. ಬೆಂಗಳೂರಿನಿಂದ ಪಿರಿಯಾಪಟ್ಟಣಕ್ಕೆ ಕಾರಿನಲ್ಲಿ ಈ ನಾಲ್ವರು ಹೋಗುತ್ತಿದ್ದಾಗ ಎಕ್ಸ್‌ಪ್ರೆಸ್ ಹೆದ್ದಾರಿಯ ಮಂಡ್ಯ ಸಮೀಪದ ತೂಬಿನಕೆರೆ ಬಳಿ ಸರ್ವಿಸ್ ರಸ್ತೆಗೆ ಹೋಗುವ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು ಗ್ರಾಮದ ಕಾಡಿನ ಮಧ್ಯೆ ಪತ್ತೆಯಾದ ಹೆಣ್ಣು ಮಗುವಿನ ಪೋಷಕರನ್ನು ಪತ್ತೆ ಹಚ್ಚಿದ ಧರ್ಮಸ್ಥಳ ಪೊಲೀಸರು-ಕಹಳೆ ನ್ಯೂಸ್

ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡೋಳುಕೆರೆ ಕಾಡಿನ ಮಧ್ಯೆ ಪತ್ತೆಯಾದ ಹೆಣ್ಣು ಮಗುವಿನ ಪೋಷಕರನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿದ್ದಾರೆ. ಗ್ರಾಮದ ಜನರು ಈ ಕುರಿತು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದು, ಅವರ ಸಹಕಾರದೊಂದಿಗೆ ಮಗುವಿನ ತಂದೆ ತಾಯಿಯ ವಿವರಗಳೂ ಲಭ್ಯವಾಗಿವೆ. ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಸಮರ್ಥ ಆರ್. ಗಾಣಿಗೇರಾ ನೇತೃತ್ವದ ತಂಡವು ಮಗುವಿನ ತಂದೆ ರಂಜಿತ್ ಗೌಡನನ್ನು ಎ.2 ರಂದು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಧಾರ್ಮಿಕ ಕೇಂದ್ರಗಳು ಸರಕಾರಿ ಶಾಲೆಗಳಿಗೆ ಪೂರಕವಾಗಿರಬೇಕು-ಜಗನ್ನಾಥ್ ಚೌಟ-ಕಹಳೆ ನ್ಯೂಸ್

ಬಂಟ್ವಾಳ : ಧಾರ್ಮಿಕ ಕೇಂದ್ರಗಳು ಸರಕಾರಿ ಶಾಲೆಗಳಿಗೆ ಪೂರಕವಾಗಿರಬೇಕು. ಊರಿನ ಸರಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದರೆ ಪೋಷಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಕಳಿಸುವುದಕ್ಕೆ ಹಿಂದೇಟು ಹಾಕುತ್ತಾರೆ, ಆದುದರಿಂದ ಬಂಟ್ವಾಳ ತಾಲೂಕಿನ ಮೊಗರ್ನಾಡು ಸೀಮೆಯ ಸರಕಾರಿ ಶಾಲೆಗಳಿಗೆ ಕಲ್ಲಡ್ಕ ನೀಟಿಲೇಶ್ವರ ಕ್ಷೇತ್ರದಲ್ಲಿ ನಡೆಯುತ್ತಿರುವ ಮಹಾರುದ್ರ ಯಾಗದಲ್ಲಿ ಉಳಿಕೆಯ ಶೇಕಡ 50 ಭಾಗವನ್ನು ಊರಿನ ಸರಕಾರಿ ಶಾಲೆಗಳ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ನೀಡಲಾಗುವುದು ಎಂದು ಧಾರ್ಮಿಕ ಮುಖಂಡ ಚೌಟ...
1 164 165 166 167 168 731
Page 166 of 731