Thursday, May 14, 2026

ದಕ್ಷಿಣ ಕನ್ನಡ

ಕ್ರೈಮ್ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ- ಇಬ್ಬರ ಬಂಧನ -ಕಹಳೆ ನ್ಯೂಸ್

ಪುತ್ತೂರು: ಕಾರಿನಲ್ಲಿ ನಿಷೇಧಿತ ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪುತ್ತೂರು ನಗರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಸೋಮವಾರ ಬೆಳಿಗ್ಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್‌ ಪಾಯಿಂಟ್‌ನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯ, ಸುಬ್ರಹಮಣ್ಯ ಕಡೆಯಿಂದ ಬಂದ ಮಾರುತಿ ಸುಝುಕಿ ಆಲ್ಟೋ 800 ಕಾರನ್ನು ಪರಿಶೀಲಿಸಿದಾಗ ಕಾರಿನ ಡ್ಯಾಶ್ ಬೋರ್ಡ್‌ಲ್ಲಿ ಮಾದಕ ವಸ್ತುಗಳನ್ನು ಸೇದುವ ಸಾಧನಗಳು, ತೂಕ ಮಾಪಕ ಕಂಡುಬಂದಿತ್ತು. ಕಾರಿನ...
ಜಿಲ್ಲೆದಕ್ಷಿಣ ಕನ್ನಡಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳದ ವಾತ್ಸಲ್ಯ ಮನೆ ಹಸ್ತಾಂತರ -ಕಹಳೆ ನ್ಯೂಸ್

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಮಾತೃಶ್ರೀ ಅಮ್ಮನವರ ಕನಸಿನ ಕಾರ್ಯಕ್ರಮವಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ತಿಂಗಳು ಮಾಶಾಸನ ಪಡೆಯುತ್ತಿರುವ ಉಜಿರೆ ವಲಯದ ಮಾಚಾರು ಬಟ್ಟಾಜೆ ವಾತ್ಸಲ್ಯ ಸದಸ್ಯರಾದ ಕೂಸಪ್ಪರವರಿಗೆ ವಾತ್ಸಲ್ಯ ಮನೆ ನಿರ್ಮಾಣ ಮಾಡಲಾಗಿದ್ದು, ಮನೆಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಗೌರವಾನ್ವಿತ ಶರತ್ ಕೃಷ್ಣ ಪಡ್ವೆಟ್ನಾಯರವರು ಹಸ್ತಾಂತರ ಮಾಡಿದರು. ವಾತ್ಸಲ್ಯ ಯೋಜನೆಯಂತಹ ಸಮಾಜವನ್ನು ಕಟ್ಟುವ ಕಾರ್ಯಕ್ರಮದಲ್ಲಿ ಭಾಗಿಯಾಗುವುದು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಗೊನೆ ಮುಹೂರ್ಥ -ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಶ್ರೀ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನೆರವೇರಿತು. ಬೆಳಿಗ್ಗೆ ಪೂರ್ವ ಶಿಷ್ಟಸಂಪ್ರದಾಯದಂತೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ ನೆರವೇರಿಸಲಾಯಿತು. ಪ್ರಧಾನ ಅರ್ಚಕ ವೇ.ಮೂ.ವಿ.ಎನ್. ಭಟ್ ರವರು ಗೊನೆ ಮುಹೂರ್ತ ನಡೆಸಿಕೊಟ್ಟರು. ಇನ್ನೋರ್ವ ಪ್ರಧಾನ ಅರ್ಚಕ ವಸಂತ ಕೆದಿಲಾಯ ಸಹಕರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್,...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ – ಕಹಳೆ ನ್ಯೂಸ್

ಮಂಗಳೂರಿನ ಕಾರಾಗೃಹದಲ್ಲಿ ಅಳವಡಿಸಿರುವ ಜಾಮರ್‌ನಿಂದಾಗಿ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ಕುರಿತು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಪ್ರಮುಖರು ಜಿಲ್ಲಾ ಕಾರಾಗೃಹ ಅಧೀಕ್ಷಕರನ್ನು ಭೇಟಿ ಮಾಡಿ ಕೂಡಲೇ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ನಗರದ ಹೃದಯ ಭಾಗದಲ್ಲಿರುವ ಜೈಲಿನ ಜಾಮರ್‌ನಿಂದಾಗಿ ಸುತ್ತಮುತ್ತಲಿನ ಸುಮಾರು ಮೂರು ಕಿ.ಮೀ. ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಕಛೇರಿ, ನ್ಯಾಯಾಲಯ ಸಂಕೀರ್ಣ, ವಕೀಲರ ಕಛೇರಿ, ವಾಣಿಜ್ಯ ಸಂಕೀರ್ಣ ಸೇರಿದಂತೆ ಸ್ಥಳೀಯ ನಾಗರಿಕರಿಗೆ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ರೈತ ಮಿತ್ರ ಇರುವೆಗಳು ಮಾಡುತ್ತವೆ ಸುಂದರ ಬಾವಿ (ಜಲ ಮರುಪೂರಣ…!) – ಕಹಳೆ ನ್ಯೂಸ್

ಪೆರ್ನಾಜೆ : ಈ ಭೂಮಿ ಬಣ್ಣದ ಬುಗುರಿ ಎಂದು ಹಾಡಿದ್ದೇನೂ ಆದರೆ ನಾವು ಚಿಕ್ಕಂದಿನಲ್ಲಿ ಇರುವೆ ಇರುವೆ ಕರಿಯ ಇರುವೆ ನಾನು ಜೊತೆಗೆ ಬರುವೆ ಎಂದು ಹಾಡಿದ್ದೆ ಹಾಡಿದ್ದು ಎಲೆಯಲ್ಲಿ ಗೂಡು ಕಟ್ಟಿದ ಇರುವೆ ಸವಾರಿ ಹೋಗುವ ಇರುವೆಗಳನ್ನು ನೋಡುವುದೇ ಚೆಂದ... ಒಂದರಿಂದ ಒಂದಕ್ಕೆ ಕೊಡಿ ಮೀಸೆಗಳಲ್ಲಿ ಸನ್ನೆ ಮಾಡುತ್ತವೆ. ಇನ್ನೊಂದು ಕುಂಡೆ ಪಿಜಿನ್ ಮನೆಯ ಸಂದುಗಳಲ್ಲಿ ಮರಳು ಇರುವೆ ಹೀಗೆ ವಿವಿಧ ಪರಿಸರ ಮಾಲಿನ್ಯ ಮಾಡಬೇಡಿ ಎಂದು ವೇದಿಕೆಯಲ್ಲಿ...
ಅಂಕಣದಕ್ಷಿಣ ಕನ್ನಡಬೆಂಗಳೂರುಮಂಗಳೂರುಸಿನಿಮಾಸುದ್ದಿ

ಅಂದು ಬೀಡಿ ಕಟ್ಟಿ ಜೀವನ ಸಾಗಿಸುತ್ತಿದ್ದ ಯುವತಿ, ಇಂದು ಕರ್ನಾಟಕವೇ ಹೆಮ್ಮೆ ಪಡುವ ಅದ್ಭುತ ನಟಿ ದಿವ್ಯಾ ಅಂಚನ್..!! – ಕಹಳೆ ನ್ಯೂಸ್

ಆಕೆ ಬೀಡಿ ಕಟ್ಟುತ್ತಾ, ಮನೆ ಕೆಲಸ, ತೋಟದ ಕೆಲಸ ಜೊತೆಗೆ ಮನೆಯಲ್ಲೇ ಕ್ರಾಫ್ಟ್ ವರ್ಕ್ ಹಾಗೂ ಹೂ ಕಟ್ಟಿ ಬಡತನದಲ್ಲೇ ಜೀವನ ಸಾಗಿಸ್ತಾ ಇದ್ದ ಕರಾವಳಿಯ ಯುವತಿ. ಆದ್ರೆ ಇಂದು ಇಡೀ ಕರ್ನಾಟಕವೇ ಕೊಂಡಾಡುವ ಮನೆಮಗಳು. ಅವರೇ ಕಾಮಿಡಿ ಕಿಲಾಡಿಗಳು ಖ್ಯಾತಿಯ ದಿವ್ಯಾ ಅಂಚನ್.   ಹೌದು. ಬಡತನದಲ್ಲೇ ಜೀವನ ಸಾಗಿಸುತ್ತಿದ್ದ ದಿವ್ಯಾ ಈಗ ಇಡೀ ಕರ್ನಾಟಕವೇ ಹೆಮ್ಮೆ ಪಡುವಂತಹ ನಟಿಯಾಗಿ ಬೆಳೆದಿದ್ದಾರೆ. ಅಂದಹಾಗೆ ದಿವ್ಯಾ ಅಂಚನ್ ಅವರು ವೇಣೂರಿನ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರುಗಳ ಸರಳತೆಯ ಸೂತ್ರ ಪಾಲಿಸಿದರೆ ಬದುಕು ಸುಂದರ; ಸಂದೀಪ್ ಸಾಲ್ಯಾನ್-ಕಹಳೆ ನ್ಯೂಸ್

ಬಂಟ್ವಾಳ: ವಿದ್ಯೆಯಿಂದ ಸ್ವತಂತ್ರರಾಗಬೇಕಾದ ಇಂದಿನ ಯುವ ಸಮುದಾಯ ವಿದ್ಯಾವಂತರಾದರೂ ಸರಿ, ತಪ್ಪುಗಳನ್ನು ಸ್ವತಂತ್ರವಾಗಿ ಯೋಚಿಸಿ, ತೀರ್ಮಾನಿಸುವ ಶಕ್ತಿಯನ್ನು ಕಳೆದುಕೊಂಡಿದೆ, ಸಂಘಟನೆಯಿಂದ ಬಲಯುತರಾಗ ಬೇಕಾದವರು ಜಾತಿ, ಧರ್ಮದ ಹೆಸರಿನಲ್ಲಿ ಸಂಘಟನೆಯಾಗದೆ ವಿಘಟನೆಯಾಗುತ್ತಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಗಳ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎನ್ನುವ ಪರಿಕಲ್ಪನೆ ವಿಶಾಲವಾದ ಅರ್ಥವನ್ನು ಹೊಂದಿದೆ. ಇದು ವಿಶ್ವ ಮಾನವತೆಯ ಮಂತ್ರ, ಇದನ್ನು ಸರಿಯಾಗಿ ಅರ್ಥ ಮಾಡಿಕೊಂಡರೆ ಅಸಮಾನತೆ ಈ ಜಗದಲ್ಲಿರಲು ಸಾಧ್ಯವಿಲ್ಲ ಎಂದು ಪತ್ರಕರ್ತ,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೈಕ್​ ಅಪಘಾತ; ಯಕ್ಷಗಾನ ಭಾಗವತ ಸತೀಶ್​ ಆಚಾರ್ಯ ಸ್ಥಳದಲ್ಲೇ ಸಾವು-ಕಹಳೆ ನ್ಯೂಸ್

ಬೆಳ್ತಂಗಡಿ: ಮಾರ್ಚ್​ (31) ಸೋಮವಾರ ಮುಂಜಾನೆ 4 ಗಂಟೆ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಡಿಂಜೆಯಲ್ಲಿ ಬೈಕ್​ಗಳ ನಡುವೆ ತೀವೃ ಅಪಘಾತ ಸಂಭವಿಸಿದೆ. ಪರಿಣಾಮ ಅಪಘಾತದಲ್ಲಿ ಮಂಗಳಾದೇವಿ ಮೇಳದ ಭಾಗವತ ಸತೀಶ್​ ಆಚಾರ್ಯ (40) ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ ಅಣ್ಣಿ ಆಚಾರ್ಯ ಮತ್ತು ವಿನೋದ ಆಚಾರ್ಯ ದಂಪತಿ ಪುತ್ರ, ಮಂಗಳಾದೇವಿ ಯಕ್ಷಗಾನ ಮೇಳದ ಯಕ್ಷಗಾನ ಭಾಗವತ ಸತೀಶ್ ಆಚಾರ್ಯ ಮೃತಪಟ್ಟ ವ್ಯಕ್ತಿಯಾಗಿದ್ದಾರೆ....
1 166 167 168 169 170 731
Page 168 of 731