Thursday, May 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಂಗಳೂರಿ ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆ-ಕಹಳೆ ನ್ಯೂಸ್

ಪುತ್ತೂರು: ಮಂಗಳೂರಿ ನಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ರೈಲಿನಿಂದ ಯುವಕನೋರ್ವ ಬಿದ್ದು 15 ತಾಸುಗಳ ಬಳಿಕ ಪತ್ತೆಯಾದ ಘಟನೆ ಸವಣೂರಿನಲ್ಲಿ ನಡೆದಿದೆ. ಮಾ.25ರಂದು ರೈಲಿನಲ್ಲಿ ಕುಮಟದಿಂದ ಮಂಗಳೂರು ಮಾರ್ಗ ವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಉದಯ ಕುಮಾರ್‌ ರಾತ್ರಿ 11 ಗಂಟೆ ವೇಳೆಗೆ ಸವಣೂರು ಸಮೀಪದ ಸುಣ್ಣಾಜೆ ಬಳಿ ರೈಲಿನಿಂದ ಬಿದ್ದಿದ್ದಾರೆ. ಇದು ತುಸು ನಿರ್ಜನ ಪ್ರದೇಶವಾಗಿದ್ದು ಇಳಿಜಾರಿನಿಂದ ಕೂಡಿದೆ. ಬಿದ್ದ ಸ್ಥಳದಿಂದ 25 ಅಡಿಗಳಷ್ಟು ಕೆಳಭಾಗಕ್ಕೆ ಜಾರಿಗೊಂಡು ಹೋಗಿದ್ದ ಯುವಕ ಅಲ್ಲಿ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಡಿ ಏರಿಸುವ ದಿನ ಹಾಗೂ ಬ್ರಹ್ಮರಥೋತ್ಸವದ ದಿನ ಡ್ರೋನ್‌ಗೆ ಅವಕಾಶ ಇಲ್ಲ, ದೇಗುಲದ ವಠಾರದ ಶುಚಿತ್ವಕ್ಕೆ ವಿಶೇಷ ಮುತು ವರ್ಜಿ-ಕಹಳೆ ನ್ಯೂಸ್

ಪುತ್ತೂರು: ಗರುಡಾಗಮನಕ್ಕೆ ಅಡ್ಡಿಯಾ ಗುವುದೂ ಸೇರಿ ಕೆಲವೊಂದು ಕಾರಣಗಳಿಗಾಗಿ ಕೊಡಿ ಏರಿಸುವ ದಿನ ಹಾಗೂ ಬ್ರಹ್ಮರಥೋತ್ಸವದ ದಿನ ಡ್ರೋನ್‌ಗೆ ಅವಕಾಶ ಇಲ್ಲ. ದೇಗುಲದ ವಠಾರದ ಶುಚಿತ್ವಕ್ಕೆ ವಿಶೇಷ ಮುತು ವರ್ಜಿ ವಹಿಸಲಾಗುವುದು ಎಂದು ಮಹಾ ಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್‌ ಹೇಳಿದರು. ಜಾತ್ರೆ ಹಿನ್ನೆಲೆಯಲ್ಲಿ ಮಂಗಳವಾರ ದೇಗುಲದಲ್ಲಿ ಶಾಸಕ ಅಶೋಕ್‌ ಕುಮಾರ್‌ ರೈ ಅಧ್ಯಕ್ಷತೆಯಲ್ಲಿ ಇಲಾಖಾ ಅಧಿಕಾರಿಗಳ ಸಭೆ ಯಲ್ಲಿ ಅವರು ಮಾತನಾಡಿದರು. ಜಾತ್ರೆಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಜಿಲಮೊಗರು ಸೌಹಾರ್ದ ಸೇತುವೆ ಕಾಮಗಾರಿ ಮತ್ತೆ ಸ್ಥಗಿತ-ಕಹಳೆ ನ್ಯೂಸ್

ಪುಂಜಾಲಕಟ್ಟೆ: ನನೆಗುದಿಗೆ ಬಿದ್ದಿದ್ದ ಅಜಿಲಮೊಗರು ಸೌಹಾರ್ದ ಸೇತುವೆ ಕಾಮಗಾರಿ ಇನ್ನೇನು ಈ ಮಳೆಗಾಲಕ್ಕೆ ಪೂರ್ಣಗೊಳ್ಳುತ್ತದೆ ಎಂದು ಜನ ಅಂದಕೊಳ್ಳುತ್ತಿರುವಾಗಲೇ ಮರು ಆರಂಭಗೊಂಡ ಕೆಲಸ ಎರಡೇ ದಿನದಲ್ಲಿ ಮತ್ತೆ ಸ್ಥಗಿತಗೊಂಡಿದ್ದು, ಸೌಹಾರ್ದ ಸೇತುವೆ ಹೋರಾಟ ಸಮಿತಿ ಹಾಗು ಸಾರ್ವಜನಿಕರು ಆಕ್ರೋಶಕ್ಕೆ ಕಾರಣವಾಗಿದೆ. ಏಳು ವರ್ಷಗಳ ಹಿಂದೆ ಆರಂಭಗೊಂಡಿದ್ದ ಈ ಸೇತುವೆ ನಿಧಾನಗತಿಯ ಕಾಮಗಾರಿಯಿಂದಾಗಿ ಇನ್ನೂ ಪೂರ್ಣಗೊಂಡಿಲ್ಲ. ಅಜಿಲಮೊಗರು ಮಸೀದಿ ಮುಂಭಾಗದಿಂದ ಕಡೇಶ್ವಾಲ್ಯ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನ ಸಂಪರ್ಕಿಸುವ ದೆಸೆಯಲ್ಲಿ ನೇತ್ರಾವತಿ...
ಅಂಕಣದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾತಲ್ಲೇ ಮೋಡಿ ಮಾಡೋ ‘ಸ್ವರ ಮನ್ಮಥ’ ವಿಜೆ ಮಧುರಾಜ್ ಗುರುಪುರ..!! – ಕಹಳೆ ನ್ಯೂಸ್

ಇವರು ಮೈಕ್ ಹಿಡಿದು ಮಾತಾಡೋಕೆ ಶುರು ಮಾಡಿದ್ರೆ ಮಾತಲ್ಲೇ ಮೋಡಿ ಮಾಡೋ ಸ್ವರ ಮನ್ಮಥ. ತುಳುನಾಡಿನಲ್ಲಿ ಎಲ್ಲೇ ಫಂಕ್ಷನ್ಸ್ ಇರ್ಲಿ ಇವ್ರ ಹೋಸ್ಟೇ ಹೈಲೈಟ್. ಅಪ್ಪಟ ತುಳು ಭಾಷೆಯಲ್ಲಿ ಹೋಸ್ಟ್ ಮಾಡಿ ಜನರನ್ನು ರಂಜಿಸೋದು ಇವರ ಟ್ಯಾಲೆಂಟ್. ಅವರೇ ಸ್ವರ ಮನ್ಮಥ ಬಿರುದಾಂಕಿತ ವಿಜೆ ಮಧುರಾಜ್ ಗುರುಪುರ. ಹೌದು. ತುಳುನಾಡಿನಲ್ಲಿ ಎಲ್ಲೇ ಕಾರ್ಯಕ್ರಮಗಳು ಇರಲಿ ವಿಜೆ ಮಧುರಾಜ್ ಅವರ ಹೋಸ್ಟ್ ಅಂದಮೇಲೆ ಅಲ್ಲಿ ಮನೋರಂಜನೆಗೇನೂ ಕೊರತೆ ಇಲ್ಲ. ತನ್ನ ಅದ್ಭುತ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕಾಂಗ್ರೆಸ್ ಸರ್ಕಾರದ ವೈಫಲ್ಯಗಳಿಂದ ಗೊಂದಲದ ಗೂಡಾದ ಇಲಾಖೆಗಳು- ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರು: ಬಗೆಹರಿಯದ ಇ-ಖಾತಾ ಸಮಸ್ಯೆ:- ರಾಜ್ಯ ಸರ್ಕಾರದ ಕಂದಾಯ ಇಲಾಖೆಯು ಯಾವುದೇ ಪೂರ್ವಸಿದ್ಧತೆ ಇಲ್ಲದೇ ದಿನಬೆಳಗಾಗುವುದರೊಳಗೆ ಆಸ್ತಿ ನೋಂದಣಿಗೆ ಇ–ಖಾತಾ ಕಡ್ಡಾಯ ಮಾಡಿದ ನಂತರ ಮಂಗಳೂರು ನಗರ ವ್ಯಾಪ್ತಿಯಲ್ಲಿ ಉಂಟಾಗಿರುವ ಅವ್ಯವಸ್ಥೆಯ ಆಗರದಿಂದಾಗಿ ಸಾರ್ವಜನಿಕರು ದಿನನಿತ್ಯ ಕಚೇರಿಗಳಿಗೆ ಅಲೆದಾಡುವಂತಾಗಿದ್ದು ಈಗಾಗಲೇ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸಿ ಕಂದಾಯ ಸಚಿವರನ್ನು ಭೇಟಿಯಾದರೂ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ಜನಸಾಮಾನ್ಯರಿಗೆ ತೊಂದರೆಯಾಗುವ ಇಂತಹ ನಿಯಮಗಳನ್ನು ಏಕಾಏಕಿ ಇಡೀ ರಾಜ್ಯದ ತುಂಬೆಲ್ಲಾ ತರುವ ಮೊದಲು ಯಾವುದಾದರೂ ಒಂದೆರಡು...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ಸೈಂಟ್ ವಿಕ್ಟರ್ಸ್ ಪ್ರೌಢಶಾಲೆಯಲ್ಲಿ ಎಸೆಸ್ಸೆಲ್ಲಿ, ವಠಾರದಲ್ಲಿ ಫಿಲ್ಮ್ ಶೂಟಿಂಗ್ ಇವರಿಗೆ ಯಾವುದೇ ಕಾನೂನು ಇಲ್ವೆ?, ಮಕ್ಕಳ ಭವಿಷ್ಯದಲ್ಲಿ ಶಾಲಾ ಆಡಳಿತ ಸಮಿತಿಯ ಚೆಲ್ಲಾಟ.-ಕಹಳೆ ನ್ಯೂಸ್

ಪುತ್ತೂರು: ಎಸ್ ಎಸ್ ಎಲ್ ಸಿ ಪರೀಕ್ಷಾ ಕೇಂದ್ರವಾಗಿರುವ ಸೈಂಟ್ ವಿಕ್ಟರ್ಸ್ ಪ್ರೌಢ ಶಾಲೆಯ ಆವರಣದಲ್ಲಿ ಕನ್ನಡ ಸಿನಿಮಾವೊಂದಕ್ಕೆ ಶೂಟಿಂಗ್ ಗೆ ಅವಕಾಶ ಕೊಟ್ಟು ಶಾಲಾ ಆಡಳಿತ ಮಂಡಳಿ ಎಡವಟ್ಟು ಮಾಡಿಕೊಂಡಿದೆ. ಇಲ್ಲಿ ನಟ ಆರ್ಯನ್ ಅಭಿನಯದ `ಲವ್ ಟು ಲಸ್ಸಿ' ಎಂಬ ಕನ್ನಡ ಚಲನಚಿತ್ರದ ಶೂಟಿಂಗ್ ನಡೆಯುತ್ತಿತ್ತು. ಇದಕ್ಕೆ ಕಳೆದ ಒಂದೂವರೆ ತಿಂಗಳ ಹಿಂದೆಯೇ ಶಾಲಾ ಸಂಚಾಲಕರಿಂದ ಅನುಮತಿ ಪಡೆಯಲಾಗಿತ್ತು. ಆದ್ರೆ ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ-ಕಹಳೆ ನ್ಯೂಸ್

ಪದ್ಮುಂಜ : ಸರಕಾರಿ ಪ್ರೌಢಶಾಲೆ ಪದ್ಮುಂಜ ಇದರ ಸಭಾಭವನದಲ್ಲಿ ರಂಗಸಿರಿ ಯಕ್ಷಗಾನ ತರಬೇತಿ ಕೇಂದ್ರ ಉದ್ಘಾಟನೆ ಮಾಡಲಾಯಿತು. ಈ ಕಾರ್ಯಕ್ರಮವನ್ನು ಶ್ರೀಯುತ ನಾರಾಯಣಗೌಡ ಮುಚ್ಚುರು ಉದ್ಘಾಟಿಸಿ,ಮಕ್ಕಳಿಗೆ ಶುಭವನ್ನು ಹಾರೈಸಿದರು. ಅಧ್ಯಕ್ಷತೆಯನ್ನು ಕಣಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಯುತ ಸೀತಾರಾಮ ಮಡಿವಾಳ ಇವರು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ರಾಘವ ಗೇರುಕಟ್ಟೆ, ಯಕ್ಷಗಾನ ಅಕಾಡೆಮಿ ಸದಸ್ಯರು ಹಾಗೂ ಭರತನಾಟ್ಯ ನೃತ್ಯ ಗುರುಗಳಾದ ವಿದುಷಿ ಶ್ರೀಮತಿ ಡಿಂಪಲ್ ಇವರು ಉಪಸ್ಥಿತರಿದ್ದರು. ಹಾಗೆಯೇ ಕಿರಣ್ ಪುಷ್ಪಗಿರಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ-ಕಹಳೆ ನ್ಯೂಸ್

ಕಲ್ಲೇರಿ : ಬ್ಯಾಂಕ್ ಒಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರ ನೇತೃತ್ವದಲ್ಲಿ, 15 ದಿನಗಳ ಬಟ್ಟೆ ಕಸೂತಿ ತಯಾರಿಕೆಯ(ಆರಿ ವರ್ಕ್) ತರಬೇತಿಯ ಸಮಾರೋಪ ಕಾರ್ಯಕ್ರಮ ಕಲ್ಲೇರಿ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣದಲ್ಲಿ ನಡೆಯಿತು. ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ತಾಪಕರಾದ ಜೀವನ್ ಕೊಲ್ಯ ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರಿಗೆ ಸ್ವ ಉದ್ಯೋಗ ಮಾಡಲು...
1 170 171 172 173 174 731
Page 172 of 731