Thursday, May 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಮೋಡಾ ವೀಲ್ ಚೇರ್ ವಿತರಣೆ.-ಕಹಳೆ ನ್ಯೂಸ್

ಮಾಯಾ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ,ಉಜಿರೆ ವಲಯದ, ಮಾಯಾ ಕಾರ್ಯಕ್ಷೇತ್ರದ ನಾಗಕಲ್ಲು ದುಗ್ಗಪ್ಪ ಗೌಡರವರಿಗೆ ನಡೆದಾಡಲು ಕಷ್ಟಸಾಧ್ಯವಾಗಿದ್ದು ಇವರಿಗೆ ಸಮುದಾಯ ಅಭಿವೃದ್ಧಿ ವಿಭಾಗದ ಜನಮಂಗಳ ಕಾರ್ಯಕ್ರಮದಡಿಯಲ್ಲಿ ಕಮೋಡ ವೀಲ್ ಚೇರ್ ಗೆ ಬೇಡಿಕೆ ನೀಡಿದ್ದು, ಸದ್ರಿ ಬೇಡಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪೂಜ್ಯ ಖಾವಂದರು ಮಂಜೂರು ಮಾಡಿದ್ದು, ಮಾಯಾ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶಿವಪ್ಪ ಗೌಡ, ವಲಯ ಮೇಲ್ವಿಚಾರಕಿ ವನಿತಾ, ಬೆಳಾಲು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಮಳೆ ; ಎಲ್ಲೋ ಅಲರ್ಟ್ – ಕಹಳೆ ನ್ಯೂಸ್

ಮಂಗಳೂರು, ಮಾ.26 : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಹಲವು ಭಾಗಗಳಲ್ಲಿ ಮಂಗಳವಾರ ಸಂಜೆ ವೇಳೆಗೆ ಮಳೆಯಾಗಿದೆ. ಕಲ್ಮಡ್ಕದಲ್ಲಿ ಆಲಿಕಲ್ಲು ಮಳೆಯಾಗಿದ್ದು, ಪುತ್ತೂರಿನಲ್ಲೂ ಉತ್ತಮ ಮಳೆಯಾಗಿದೆ. ಜಿಲ್ಲೆಯ ಇತರ ಭಾಗಗಳಲ್ಲೂ ರಾತ್ರಿ ವೇಳೆ ವಾತಾವರಣ ಕಂಡುಬಂದಿದೆ. ಮಂಗಳೂರಿನಲ್ಲಿ ಗರಿಷ್ಠ 33.1 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 24.6 ಡಿ.ಸೆ. ದಾಖಲಾಗಿದೆ. ಬುಧವಾರವೂ ಕರಾವಳಿಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ...
ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

‘ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಕ್ಕೆ ಮಾದರಿ’ ; ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮೆಚ್ಚುಗೆ – ಕಹಳೆ ನ್ಯೂಸ್

ಮಂಗಳೂರು, ಮಾ.26 : ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಕೇವಲ ಸಭೆ, ಸಮಾರಂಭಗಳಿಗೆ ಮಾತ್ರವೇ ಸೀಮಿತವಾಗದೆ ಸಮಾಜಮುಖಿ ಚಟುವಟಿಕೆಗಳ ಮೂಲಕ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಂಗಳೂರು ಪತ್ರಿಕಾ ಭವನಕ್ಕೆ ಮಂಗಳವಾರ ಭೇಟಿ ನೀಡಿದ ಸಂದರ್ಭ ದ.ಕ. ಜಿಲ್ಲಾ ಕಾರ್ಯನಿತರ ಪತ್ರಕರ್ತರ ಸಂಘದ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ಮಂಗಳೂರು ಪತ್ರಿಕಾ ಭವನಕ್ಕೆ ಭೇಟಿ ನೀಡಿದಾಗ ಮನೆಗೆ ಬಂದ ಅನುಭವವಾಗುತ್ತದೆ. ಸಮಾಜ,...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಕಾಂಞಂಗಾಡ್‌ ನಿಂದ ಕಾಣಿಯೂರು ವರೆಗೆ ರೈಲ್ವೇ ಹೊಸ ಮಾರ್ಗ :ಅಶೋಕ್‌ ರೈ ಭೇಟಿಯಾದ ಕೇರಳ ನಿಯೋಗ

ಪುತ್ತೂರು: ಕಾಂಞಂಗಾಡ್‌ನಿಂದ ಕಾಣಿಯೂರು ವರೆಗೆ ಸಂಪರ್ಕ ಕಲ್ಪಿಸುವ ರೈಲ್ವೇ ಮಾರ್ಗ ಯೋಜನೆಯು ಅಭಿವೃದ್ದಿ ಕಾಣದೇ ನೆನೆಗುದಿಗೆ ಬಿದ್ದಿದ್ದು ಈ ವಿಷಯದಲ್ಲಿ ಕರ್ನಾಟಕ ಸರಕಾರದ ಜತೆ ಮಾತುಕತೆ ನಡೆಸಲು ರೈಲ್ವೇ ಹೋರಾಟ ಸಮಿತಿ ನಿಯೋಗವೊಂದು ಪುತ್ತೂರು ಶಾಸಕ ಅಶೋಕ್‌ ಕುಮಾರ್‌ರೈ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. 2008 ರಲ್ಲಿ ಕಾಂಞಂಗಾಡ್‌- ಕಾಣಿಯೂರು ರೈಲ್ವೇ ಹೊಸ ಮಾರ್ಗಕ್ಕೆ ಕೇಂದ್ರ ರೈಲ್ವೇ ಇಲಾಖೆ ಅನುಮೋದನೆ ನೀಡಿತ್ತು. ಕಾಮಗಾರಿಗೆ ಡಿಪಿಆರ್‌ ಸಿದ್ಧಪಡಿಸಿ, ಬಳಿಕ ಕೇಂದ್ರ ಸರಕಾರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು-ಸಿಎಸ್‌ಎಂಟಿ ರೈಲು ಸಂಚಾರದಲ್ಲಿ ಒಂದು ವಾರ ಕಾಲ ವ್ಯತ್ಯಯ-ಕಹಳೆ ನ್ಯೂಸ್

ಮಂಗಳೂರು: ಸಿಎಸ್‌ಎಂಟಿ ಮುಂಬೈ ಸ್ಟೇಷನ್‌ನಲ್ಲಿ ಪ್ಲಾಟ್‌ಫಾರಂ ವಿಸ್ತರಣೆ ಕಾಮಗಾರಿ ಇರುವುದರಿಂದ ಮಂಗಳೂರು-ಸಿಎಸ್‌ಎಂಟಿ ರೈಲು ಸಂಚಾರದಲ್ಲಿ ಒಂದು ವಾರ ಕಾಲ ವ್ಯತ್ಯಯ ಉಂಟಾಗಲಿದೆ. ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2 ಗಂಟೆಗೆ ಹೊರಡುವ ನಂ.12134 ಮಂಗಳೂರು ಜಂಕ್ಷನ್‌-ಸಿಎಸ್‌ಎಂಟಿ ಮುಂಬಯಿ ಸೂಪರ್‌ಫಾಸ್ಟ್‌ ಎಕ್ಸ್‌ಪ್ರೆಸ್‌ ಮಾ.25 ರಿಂದ 31 ರ ವರೆಗೆ ಥಾಣೆ ವರೆಗೆ ಮಾತ್ರವೇ ಸಂಚರಿಸಲಿದೆ. ಥಾಣೆ ಹಾಗೂ ಸಿಎಸ್‌ಎಂಟಿ ಮಧ್ಯೆ ಈ ರೈಲು ಭಾಗಶಃ ರದ್ದಾಗಲಿದೆ....
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ; ಡಿ.ಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಪ್ರತಿಭಟನೆ-ಕಹಳೆ ನ್ಯೂಸ್

ಮಂಗಳೂರು : ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದಲ್ಲಿರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ನಡೆದ ಪ್ರತಿಭಟನೆಯಲ್ಲಿ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕರು, ಕಾಂಗ್ರೆಸ್ ಒಂದು ಕುಲಗೆಟ್ಟ ಪಕ್ಷ ಎಂದು ಸ್ವತಃ...
ಅಂಕಣಕಾಸರಗೋಡುದಕ್ಷಿಣ ಕನ್ನಡಬದಿಯಡ್ಕಮಂಗಳೂರುಯಕ್ಷಗಾನ / ಕಲೆಸುದ್ದಿ

ಬಹುಮುಖ ಪ್ರತಿಭೆಯಾಗಿ ಮಿಂಚುತ್ತಿರುವ ಸಕಲಕಲಾ ವಲ್ಲಭೆ “ವಿದುಷಿ ಮೈತ್ರಿ ಭಟ್ ಮವ್ವಾರು” – ಕಹಳೆ ನ್ಯೂಸ್

ಒಂದೇ ಕಲೆಯನ್ನು ಮೈಗೂಡಿಸಿಕೊಂಡು ಸಾಧನೆ ಮಾಡಿದವರು ಅದೆಷ್ಟೋ ಜನ. ಆದ್ರೆ ಬೇರೆ ಬೇರೆ ಕಲೆಗಳಲ್ಲಿ ತೊಡಗಿಸಿಕೊಂಡು ಬಹುಮುಖ ಪ್ರತಿಭೆ ಎನಿಸಿಕೊಂಡವರು ಕೆಲವೇ ಕೆಲವು ಜನ. ಅಂತವರಲ್ಲಿ ವಿದುಷಿ ಮೈತ್ರಿ ಭಟ್ ಮವ್ವಾರು ಕೂಡಾ ಒಬ್ಬರು. ಹೌದು..ಎಂಎಸ್‍ಸಿ ಕಂಪ್ಯೂಟರ್ ಸೈನ್ಸ್ ಪದವೀಧರೆಯಾಗಿರುವ ಮೈತ್ರಿ ಭಟ್ ಅವರಿಗೆ ಬಾಲ್ಯದಲ್ಲೇ ಭರತನಾಟ್ಯ, ಯಕ್ಷಗಾನ ಹಾಗೂ ನಾಟಕಗಳಲ್ಲಿ ಅಪಾರವಾದ ಆಸಕ್ತಿ. ಮೈತ್ರಿ ಭಟ್ ಕಾಸರಗೋಡಿನ ಮವ್ವಾರಿನವರಾಗಿದ್ದು, ಗಣಪತಿ ಭಟ್ ಚಂದ್ರಿಕಾ ಭಟ್ ದಂಪತಿಯ ಪುತ್ರಿ. ಸದ್ಯ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಮಠದ ಸಮೀಪ ಗುಡ್ಡಕ್ಕೆ ಬೆಂಕಿ .ಪುನಾರ್ಪುಳಿ ಗಿಡಗಳಿಗೆ ಹಾನಿ-ಕಹಳೆ ನ್ಯೂಸ್

ಮಾಣಿ : ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀ ರಾಮಚಂದ್ರಾ ಪುರಮಠದ ವತಿಯಿಂದ ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು ಒಂದು ಸಾವಿರ ಪುನಾರ್ಪುಳಿ ಗಿಡಗಳ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿಬಿದ್ದಿದೆ. ಸ್ಥಳೀಯರು ನೀರುಹಾಕಿ ಬೆಂಕಿನಂದಿಸಲು ಪ್ರಯತ್ನಿಸಿದರೂ ಬಿಸಿಲಿನ ಧಗೆಗೆ ಬೆಂಕಿ ಗುಡ್ಡಕ್ಕೆ ಹರಡಿಕೊಂಡಿತು.ಬಳಿಕ ಬಂಟ್ವಾಳ ಫೈರ್ ಸರ್ವಿಸ್ ನವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಫಲಭರಿತ ಸುಮಾರು 50 ಗಿಡಗಳು ಬೆಂಕಿಯ ಕೆನ್ನಾಲಗೆಗೆ ಸಿಕ್ಕಿ ಸುಟ್ಟು ಹೋಗಿವೆ. ಹತ್ತಿರದಲ್ಲೇ ,ಮನೆಗಳು...
1 171 172 173 174 175 731
Page 173 of 731