Thursday, May 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮಾಣಿ ಮಠದ ಸಮೀಪ ಗುಡ್ಡಕ್ಕೆ ಬೆಂಕಿ .ಪುನಾರ್ಪುಳಿ ಗಿಡಗಳಿಗೆ ಹಾನಿ-ಕಹಳೆ ನ್ಯೂಸ್

ಮಾಣಿ : ಬಂಟ್ವಾಳ ತಾಲೂಕಿನ ಮಾಣಿ ಪೆರಾಜೆ ಶ್ರೀ ರಾಮಚಂದ್ರಾ ಪುರಮಠದ ವತಿಯಿಂದ ಮೂರು ವರ್ಷಗಳ ಹಿಂದೆ ನೆಟ್ಟಿದ್ದ ಸುಮಾರು ಒಂದು ಸಾವಿರ ಪುನಾರ್ಪುಳಿ ಗಿಡಗಳ ತೋಟಕ್ಕೆ ಆಕಸ್ಮಿಕವಾಗಿ ಬೆಂಕಿಬಿದ್ದಿದೆ. ಸ್ಥಳೀಯರು ನೀರುಹಾಕಿ ಬೆಂಕಿನಂದಿಸಲು ಪ್ರಯತ್ನಿಸಿದರೂ ಬಿಸಿಲಿನ ಧಗೆಗೆ ಬೆಂಕಿ ಗುಡ್ಡಕ್ಕೆ ಹರಡಿಕೊಂಡಿತು.ಬಳಿಕ ಬಂಟ್ವಾಳ ಫೈರ್ ಸರ್ವಿಸ್ ನವರು ಆಗಮಿಸಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು. ಫಲಭರಿತ ಸುಮಾರು 50 ಗಿಡಗಳು ಬೆಂಕಿಯ ಕೆನ್ನಾಲಗೆಗೆ ಸಿಕ್ಕಿ ಸುಟ್ಟು ಹೋಗಿವೆ. ಹತ್ತಿರದಲ್ಲೇ ,ಮನೆಗಳು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜೋಡುಮಾರ್ಗ ಜೇಸಿಯಿಂದ ಮಜಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ ಮೂಲಕ ವಿಶ್ವ ಜಲ ದಿನ ಆಚರಣೆ-ಕಹಳೆ ನ್ಯೂಸ್

ಬಂಟ್ವಾಳ: ಜೋಡುಮಾರ್ಗ ಜೇಸಿ ವತಿಯಿಂದ ಶನಿವಾರ ಮಜಿ ವೀರಕಂಭ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕವನ್ನು ಹಸ್ತಾಂತರಿಸುವ ಮೂಲಕ ವಿಶ್ವ ಜಲ ದಿನ ಆಚರಿಸಲಾಯಿತು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಜೇಸಿ ರಾಷ್ಟ್ರೀಯ ಉಪಾಧ್ಯಕ್ಷ ಜಿ.ಎಸ್.ಎನ್. ವರ್ಮಾ ಹಸ್ತಾಂತರಿಸಿ ಮಾತನಾಡಿ ನೀರಿನ ಮಹತ್ವವನ್ನು ವಿವರಿಸಿದರು. ಮುಖ್ಯ ಶಿಕ್ಷಕಿ ಬೆನೆಡಿಕ್ಟ ನೊರೊನ್ಹಾ ಹಾಗೂ ಶಿಕ್ಷಕವೃಂದಕ್ಕೆ ಘಟಕವನ್ನು ಹಸ್ತಾಂತರಿಸಲಾಯಿತು. ಶಿಕ್ಷಕಿ ಸಂಗೀತಾ ಶರ್ಮ ಮಾತನಾಡಿ ವಿಶ್ವ ಜಲದಿನವಾದ ಇಂದು ಶಾಲೆ ಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರದ ಜೀರ್ಣೋದ್ದಾರಕ್ಕೆ ಮಂಜೂರಾದ ಅನುದಾನದ ಮಂಜೂರಾತಿ ಪತ್ರ ಹಸ್ತಾಂತರ-ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿಯೋಜನೆ (ರಿ )ಬಿ ಸಿ ಟ್ರಸ್ಟ್.ಬಂಟ್ವಾಳ ತಾಲೂಕಿನ ಬಿ ಸಿ ರೋಡ್ ವಲಯದ ಬಂಟ್ವಾಳಮೂಡ ಕಾರ್ಯಕ್ಷೇತ್ರದ ಪಲ್ಲಮಜಲು ಶ್ರೀ ರಾಮಾಂಜನೇಯ ಭಜನಾ ಮಂದಿರದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ ರೂ 2 ಲಕ್ಷ ಅನುದಾನ ಮೊತ್ತದ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲ್ಲೂಕು ಯೋಜನಾಧಿಕಾರಿ ಜಯಾನಂದ ಪಿ ರವರು ಭಜನಾ ಮಂಡಳಿಯ ಅಧ್ಯಕ್ಷರು ಗಣೇಶ್ ದಾಸ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗ ಇಡುವಂತೆ ಗ್ರಾಮಸ್ಥರ ಆಗ್ರಹ -ಕಹಳೆ ನ್ಯೂಸ್

ಬಂಟ್ವಾಳ: ವೀರಕಂಬ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳ ಮೇಲೆ ನಿಗ ಇಡುವಂತೆ ಗ್ರಾಮಸ್ಥರು ಆಗ್ರಹಿಸಿದರು. ಸೋಮವಾರ ವೀರಕಂಭ ಮಜಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಭಾ ಭವನದಲ್ಲಿ ನಡೆದ ವೀರಕಂಭ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮಸಭೆಯಲ್ಲಿ ಗ್ರಾಮ ವ್ಯಾಪ್ತಿಯಲ್ಲಿರುವ ಬಾಡಿಗೆ ಮನೆಗಳಿಂದ ಗ್ರಾಮ ಸ್ವಚ್ಛತೆಗೆ ಅಡ್ಡಿಯಾಗಿದ್ದು, ಪರಿಚಯ ಇಲ್ಲದವರಿಗೆ ಬಾಡಿಗೆ ನೀಡಿರುವುದರಿಂದ ಕ್ರಮ ಚಟುವಟಿಕೆಗಳು ನಡೆಯುತ್ತಿದೆ,ಬಾಡಿಗೆ ಮನೆ ನೀಡುವಾಗ ಸೂಕ್ತ ದಾಖಲಾತಿ ಪಡೆದು ಗ್ರಾಮ ಪಂಚಾಯತಿಗೆ ಮಾಹಿತಿ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಒಂದೇ ಟಯರ್‌ನಲ್ಲಿ ‘ಸಾರಾ’ ಎಂಬ ಖಾಸಗಿ ಬಸ್ ಸಂಚಾರ ; ಬಸ್ ತಡೆ ಹಿಡಿದು ಸಾರ್ವಜನಿಕರ ಆಕ್ರೋಶ – ಕಹಳೆ ನ್ಯೂಸ್

ಬಂಟ್ವಾಳ, ಮಾ.24 : ವಿಟ್ಲ ಮತ್ತು ಮುಡಿಪು ನಡುವೆ ಸತತ ಎರಡು ದಿನಗಳಿಂದ ಒಂದೇ ಹಿಂಬದಿಯ ಟೈರ್‌ನೊಂದಿಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸನ್ನು ಸಾರ್ವಜನಿಕರು ತಡೆದು ವಿಟ್ಲ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.   ವಿಟ್ಲ, ಮುಡಿಪು ಮತ್ತು ಮಂಗಳೂರು ನಡುವೆ ಸಂಚರಿಸುವ 'ಸಾರಾ' ಎಂಬ ಖಾಸಗಿ ಬಸ್ಸಿನ ಬಸ್ಸಿನ ಹಿಂದಿನ ಎಡಭಾಗದಲ್ಲಿ ಒಂದೇ ಚಕ್ರದಲ್ಲಿ ಸಂಚರಿಸುತ್ತಿತ್ತು. ಇನ್ನೊಂದು ಟಯರ್ ಒಡೆದು ವಿಚಿತ್ರ ಶಬ್ದ ಬರುತ್ತಿದ್ದರೂ ಚಾಲಕ, ನಿರ್ವಾಹಕ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಶನಿವಾರ...
ಅಂಕಣದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುರಾಜ್ಯಸಿನಿಮಾಸುದ್ದಿ

ಹಾವ, ಭಾವ, ನಟನೆ ಮೂಲಕ ಮನೆ ಮಾತಾದ ಬೆಳ್ಳಿಪ್ಪಾಡಿ ಮನೆತನದ ಕುವರಿ ವೆನ್ಯಾ ರೈ – ಕಹಳೆ ನ್ಯೂಸ್

ಕಲೆ ಅನ್ನೋದು ಎಲ್ಲರಿಗೂ ಒಲಿಯುವುದಿಲ್ಲ. ಒಂದು ವೇಳೆ ಕಲೆ ಒಲಿದರೆ ಅವರಷ್ಟು ಅದೃಷ್ಟಶಾಲಿ ಬೇರೆ ಯಾರೂ ಇಲ್ಲ. ಹೌದು ಕಲೆ ಅನ್ನೋದೇ ಹಾಗೆ ಒಂದು ಬಾರಿ ಕಲಾ ಮಾತೆ ಶಾರದೆ ಕೈ ಹಿಡಿದರೆ ಅವರ ಅದೃಷ್ಟವೇ ಖುಲಾಯಿಸಿದಂತೆ. ಅಂತಹ ಒಬ್ಬ ಕಲಾವಿದೆ ನಮ್ಮ ನಡುವೆಯೇ ಇದ್ದು ಸದ್ದಿಲ್ಲದೇ ಸುದ್ದಿಯಾಗುತ್ತಿದ್ದಾರೆ. ಅವರೇ ತುಳುನಾಡಿನ ಅನಂತಾಡಿಯ ಬೆಳ್ಳಿಪ್ಪಾಡಿ ಮನೆತನದ ವೆನ್ಯಾ ರೈ. ಮುದ್ದು ಮುಖದ ಚಂದುಳ್ಳಿ ಚೆಲುವೆ ವೆನ್ಯಾ ತನ್ನ ಹಾವ ಭಾವ,...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಗೋವು ರಾಷ್ಟ್ರೀಯ ಪ್ರಾಣಿಯಾನ್ನಾಗಿ ಘೋಷಣೆ ಮಾಡಬೇಕು :ರಮಿತಾ ಶೈಲೇಂದ್ರ ಅಭಿಪ್ರಾಯ-ಕಹಳೆ ನ್ಯೂಸ್

ಬಂಟ್ವಾಳ:ಪ್ರಪಂಚದಲ್ಲಿರುವ ಎಲ್ಲಾ ಪ್ರಾಣಿಗಳ ಪೈಕಿ ಗೋವು ಶ್ರೇಷ್ಟ ಪ್ರಾಣಿಯಾಗಿದ್ದು ,ದಿನನಿತ್ಯ ಗೋಮಾತೆಗೆ ಗೋಪೂಜೆ ಮಾಡುವುದರಿಂದ ಪ್ರತ್ಯಕ್ಷ ಲಕ್ಷ್ಮೀಗೆ ಪೂಜೆ ಮಾಡಿದಂತೆ ಇದರಿಂದ ಲಕ್ಷ್ಮೀಯು ಸುಲಭವಾಗಿ ಒಲಿಯುತ್ತಾಳೆ . ಗೋವುಗಳ ಸಂಖ್ಯೆ ಹೆಚ್ಚಾದಂತೆ ಸಮಾಜದಲ್ಲಿ ಶಾಂತಿಯು ನೆಲೆಸಿ ರಾಷ್ಟ್ರವು ಸಮೃದ್ದ ಭರಿತವಾಗುತ್ತದೆ. ಭಾರತವು ಗೋಮಾತೆಗೆ ವಿಶೇಷವಾಗಿ ತಾಯಿಯ ಸ್ಥಾನ ನೀಡಿರುವುದರಿಂದ ಭಾರತ ಸಂಪದ್ಬರಿತ ರಾಷ್ಟ್ರವಾಗಿರುವುದನ್ನು ಮನಗಂಡ ಆಗಿನ ಕಾಲದ ಬ್ರಿಟಿಷರು ಭಾರತದಲ್ಲಿನ ಗೋವುಗಳ ಸಂಖ್ಯೆ ಕಡಿಮೆ ಮಾಡುವ ದುರುದ್ದೇಶದಿಂದ ಕಸಾಯಿಖಾನೆಯನ್ನು ತೆರೆಯುವ...
ಅಂಕಣದಕ್ಷಿಣ ಕನ್ನಡಪುತ್ತೂರುಮಂಗಳೂರುಯಕ್ಷಗಾನ / ಕಲೆಸುದ್ದಿ

ಸ್ಯಾಕ್ಸೋಫೋನ್ ಮಾಂತ್ರಿಕ ಎಂ.ವೇಣುಗೋಪಾಲ್ ಪುತ್ತೂರು – ಕಹಳೆ ನ್ಯೂಸ್

ಎಂ.ವೇಣುಗೋಪಾಲ್ ಪುತ್ತೂರು. ಹೆಸರಾಂತ ಸ್ಯಾಕ್ಸೋಫೋನ್ ವಾದಕರು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತರಾವಗಿರುವ ಇವರು, 7ನೇ ತರಗತಿಯಲ್ಲಿರುವಾಗಲೇ ಸ್ಯಾಕ್ಸೋಫೋನ್ ಕಚೇರಿ ನೀಡಿ ಎಲ್ಲರ ಗಮನ ಸೆಳೆದ ವಾದಕ. ತಂದೆ ಸ್ಯಾಕ್ಸೋಫೋನ್ ಮತ್ತು ಜಾನಪದ ನಾಗಸ್ವರ ಕಲಾವಿದ ಉಮೇಶ್ ದೇವಾಡಿಗ. ತಾಯಿ ಸರಸ್ವತಿ. ಪತ್ನಿ ಹರ್ಷಿತ ದೇವಾಡಿಗ ಹಾಗೂ ಮಗು ತಿಯಾಂಶಿ ವಿ ದೇವಾಡಿಗ ಒಳಗೊಂಡ ಸುಂದರ ಸಂಸಾರ ಇವರದ್ದು. ಪ್ರಾಥಾಮಿಕ ಶಿಕ್ಷಣವನ್ನು ಪುತ್ತೂರಿನ ಕೃಷ್ಣನಗರ ಶಾಲೆ, ಪ್ರೌಢ ಶಿಕ್ಷಣವನ್ನು ಸರಕಾರಿ ಜೂನಿಯರ್...
1 172 173 174 175 176 731
Page 174 of 731