Monday, April 27, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

ಬೆಳ್ತಂಗಡಿ : ನಾಳ ದೇವಸ್ಥಾನಕ್ಕೆ ಧನುಪೂಜೆಗೆ ಮನೆಯಿಂದ ಜ‌.14 ರಂದು 5 ಗಂಟೆಗೆ ಹೊರಟು ಹೋದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಬ್ರಹ್ಮಣ್ಯ ನಾಯಕ್ ಪುತ್ರ ಬಾಲಕ ಸುಮಂತ್(15) ಎಂಬಾತ ದೇವಸ್ಥಾನಕ್ಕೂ ತಲುಪದೆ ಮನೆಗೂ ವಾಪಾಸು ಹೋಗದೆ ನಾಪತ್ತೆಯಾಗಿ ಆತನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೆರೆಯ ನೀರನ್ನು ಖಾಲಿ ಮಾಡಿ ತನಿಖೆ ನಡೆಸಿದ ವೇಳೆ ಬಾಲಕ ಸುಮಂತ್ ಹಿಡಿದುಕೊಂಡು ಹೋದ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದೇವಸ್ಥಾನಕ್ಕೆಂದು ಹೊರಟ ಬಾಲಕ ಅಸಹಜ ಸಾವನ್ನಪ್ಪಿದ ಪ್ರಕರಣ : ಸಮಗ್ರ ತನಿಖೆಗಾಗಿ ನಾಲ್ಕು ವಿಶೇಷ ತಂಡ ರಚನೆ – ಕಹಳೆ ನ್ಯೂಸ್

ಬೆಳ್ತಂಗಡಿ: ದೇವಸ್ಥಾನಕ್ಕೆಂದು ಹೊರಟು ಅಸಹಜವಾಗಿ ಸಾವನ್ನಪ್ಪಿದ ಓಡಿಲ್ನಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ (15)ನ ಮೃತದೇಹದ ಮರಣೋತ್ತರ ಪರೀಕ್ಷೆ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಡೆಸಲಾಗಿದೆ. ಈ ವೇಳೆ ಬಾಲಕನ ತಲೆಗೆ ಮೂರು ಬಲವಾದ ಪೆಟ್ಟು ಬಿದ್ದಿರುವ ಗುರುತು ಕಂಡುಬAದಿರುವುದಾಗಿ ತಿಳಿದು ಬಂದಿದೆ. ಈ ಹಿನ್ನಲೆಯಲ್ಲಿ ಪೊಲೀಸರು ಪ್ರಕರಣದ ಸಮಗ್ರ ತನಿಖೆ ಆರಂಭಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿಯ ಕುರಿತ ಮಾಹಿತಿಗಳು ಲಭ್ಯವಾಗುತ್ತಿದ್ದು, ಬಾಲಕನ ತಲೆಗೆ ಕತ್ತಿ ಅಥವಾ ಇನ್ಯಾವುದೋ ಆಯುಧದಿಂದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳ : ಆನ್ ಲೈನ್ ಆ್ಯಪ್ ನಲ್ಲಿ ಚೂಡಿದಾರ್‌ ಬುಕ್ ಮಾಡಿ 87 ಸಾವಿರ ಕಳೆದುಕೊಂಡ ಯುವತಿ-ಕಹಳೆ ನ್ಯೂಸ್

ಬಂಟ್ವಾಳ ಜನವರಿ 15: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಬಂದ ಜಾಹಿರಾತು ನಂಬಿ ಆನ್ಲೈನ್ ಆ್ಯಪ್ ಮೂಲಕ ಚೂಡಿದಾರ್ ಬುತ್ ಮಾಡಿದ ಮಹಿಳೆ ಸೈಬರ್ ವಂಚಕರಿಂದ 87 ಸಾವಿರ ಕಳೆದುಕೊಂಡ ಘಟನೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸ್ ದೂರಿನ ಪ್ರಕಾರ 35 ವರ್ಷ ವಯಸ್ಸಿನ ಮಹಿಳೆ ಫೇಸ್‌ಬುಕ್‌ನಲ್ಲಿ ಬಂದ ಜಾಹೀರಾತನ್ನು ನೋಡಿ Aramya App ಮೂಲಕ ದಿನಾಂಕ 03-01-2026 ರಂದು ಸಾಲ್ವಾರ್‌ ಚೂಡಿದಾರ್‌ ಬಟ್ಟೆಯನ್ನು ಬುಕ್...
ದಕ್ಷಿಣ ಕನ್ನಡಮಂಗಳೂರುಯಕ್ಷಗಾನ / ಕಲೆಸುದ್ದಿ

ಜ.17 ರಿಂದ 19 ರ ತನಕ “ದ ದಾಪರ್ ಎಕ್ಸ್ಪೋ ಚಿತ್ರ ಕಲಾ ಪ್ರದರ್ಶನ”…. !

ಮಂಗಳೂರು:ಉದಯ ಕೃಷ್ಣ ಜಿ ಮತ್ತು ನಿಯತಿ. ಯು ಭಟ್ ಬೆಂಗಳೂರು ತಂದೆ ಮತ್ತು ಮಗಳು ಜೊತೆಯಾಗಿ ನಡೆಸುವ ದ ದಾಪರ್ ಎಕ್ಸ್ಪೋ ನಾಮದ ಚಿತ್ರ ಕಲಾ ಪ್ರದರ್ಶನವು ಜನವರಿ 17 ರಿಂದ 19 ರ ತನಕ ನಗರದ ಪ್ರಸಾದ್ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ ಎಂದು ಖ್ಯಾತ ಚಿತ್ರ ಕಲಾವಿದರಾದ ಉದಯ ಕೃಷ್ಣ ಜಿ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡು , ಕಾರ್ಯಕ್ರಮದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಮಾರ್ಗದರ್ಶನ ಕಾರ್ಯಕ್ರಮ : ಸಂಸ್ಕೃತಿ ರಕ್ಷಣೆಗೆ ಬೇಕಿದೆ ಆತ್ಮಬಲ ಮತ್ತು ಧರ್ಮಜಾಗೃತಿ – ಡಾ. ಶ್ರೀ ಪ್ರಣವ ಮಲ್ಯ-ಕಹಳೆ ನ್ಯೂಸ್

ಬಂಟ್ವಾಳ: ಧರ್ಮಶಿಕ್ಷಣದ ಅಭಾವದಿಂದಾಗಿ ಇಂದು ಹಿಂದೂ ಸಮಾಜದವರಿಂದಲೇ ಧರ್ಮ ಮತ್ತು ದೇವತೆಗಳ ವಿಡಂಬನೆಯಾಗುತ್ತಿರುವುದು ವಿಷಾದನೀಯ. ಹಬ್ಬಗಳು ಮತ್ತು ವಿವಾಹ ಸಂಸ್ಕಾರಗಳಲ್ಲಿ ಸಂಸ್ಕೃತಿಯ ವಿಕೃತೀಕರಣ ನಡೆಯುತ್ತಿದ್ದು, ಇದು ಧರ್ಮಹಾನಿಗೆ ಸಮಾನವಾಗಿದೆ ಎಂದರು. ದೇವಸ್ಥಾನಗಳಲ್ಲಿ ಹಿಂದೂ ಸಮಾಜಕ್ಕೆ ಧರ್ಮಶಿಕ್ಷಣ ಸಿಗುವ ವ್ಯವಸ್ಥೆಯಾಗಬೇಕು. ಹಿಂದೂ ಧರ್ಮದ ಮೇಲಿನ ಆಘಾತಗಳನ್ನು ತಡೆಯಲು ಸಮಾಜದಲ್ಲಿ ಮನೋಬಲ ಮತ್ತು ಆತ್ಮಬಲ ವೃದ್ಧಿಸಿ, ಎಲ್ಲರೂ ಸಂಘಟಿತ ಪ್ರಯತ್ನ ಮಾಡುವುದು ಅನಿವಾರ್ಯವಾಗಿದೆ ಎಂದು ಡಾ. ಶ್ರೀ. ಪ್ರಣವ ಮಲ್ಯ ಅವರು ಕರೆ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಕಾವ್ಯಶ್ರೀ ಅಜೀರು ಆಯ್ಕೆ , ಉಮೇಶ್ ಮಿಜಾರ್ ಗೆ ಕಲಾಭೂಷಣ ಪ್ರಶಸ್ತಿ-ಕಹಳೆ ನ್ಯೂಸ್

ಕಾರ್ಕಳ ಹಿರ್ಗಾನ ಶ್ರೀ ಕುಂದೇಶ್ವರ ಕ್ಷೇತ್ರದ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಶ್ರೀ ಕುಂದೇಶ್ವರ ಸಮ್ಮಾನ್ ಪ್ರಶಸ್ತಿಗೆ ಯಕ್ಷರಂಗದ ಅಗ್ರಮಾನ್ಯ ಮಹಿಳಾ ಭಾಗವತ ರಾದ ಕಾವ್ಯಶ್ರೀ ಅಜೇರು ಆಯ್ಕೆಯಾಗಿದ್ದಾರೆ. ಶ್ರೀಕುಂದೇಶ್ವರ ದೇಗುಲದ ಧರ್ಮದರ್ಶಿಯಾಗಿ, ಯಕ್ಷಗಾನ ಮೇಳ ಸಂಘಟಕ, ಕಲಾವಿದ, ಅರ್ಥಧಾರಿಯಾಗಿದ್ದ ದಿ.ರಾಘವೇಂದ್ರ ಭಟ್ ಸ್ಮರಣಾರ್ಥ, ಕ್ಷೇತ್ರದ ವತಿಯಿಂದ ಪ್ರಶಸ್ತಿ ನೀಡಲಾಗುತ್ತಿದೆ. ಜ.23ರಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಆಯ್ಕೆ ಸಮಿತಿ ಸಂಚಾಲಕ ಜಿತೇಂದ್ರ ಕುಂದೇಶ್ವರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಶ್ರೀ ಕುಂದೇಶ್ವರ ಕ್ಷೇತ್ರದಲ್ಲಿ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’: ಕೊನೆಯ ಎರಡು ದಿನಗಳಷ್ಟೇ ಬಾಕಿ- ಕಹಳೆ ನ್ಯೂಸ್

ಪುತ್ತೂರು: ನಗರದ ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ. ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಡಿ. 15 ರಿಂದ ಜ. 15 ರ ವರೆಗೆ ವಜ್ರಾಭರಣಗಳ ವಾರ್ಷಿಕ ಮಹೋತ್ಸವ ‘ಗ್ಲೋ ಫೆಸ್ಟ್’ ನಡೆಯುತ್ತಿದ್ದು, ಕೊನೆಯ ಮೂರು ದಿನಗಳಲ್ಲಿ ಈ ಮಹೋತ್ಸವ ಕೊನೆಗೊಳ್ಳಲಿದೆ. ಗ್ರಾಹಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಈ ಸಂದರ್ಭದಲ್ಲಿ ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ 7000 ರೂ. ವರೆಗೆ ಸಂಸ್ಥೆ ರಿಯಾಯಿತಿ ನೀಡಲಿದೆ. ದುಬಾರಿ ಎಂದು ಖರೀದಿ ಮಾಡಲು ಹಿಂದೇಟು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪ್ರಾಥಮಿಕ ಹಂತದಲ್ಲಿ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಾಗ ಕೆಟ್ಟ ಚಟಗಳಿಗೆ ದಾಸರಾಗುವುದು ತಪ್ಪುತ್ತದೆ : ಯಾಶಿರ್ ಕಲ್ಲಡ್ಕ- ಕಹಳೆ ನ್ಯೂಸ್

ಕಲ್ಲಡ್ಕ : ಪರಿಸರವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ, ಉತ್ತಮ ಹವ್ಯಾಸಗಳನ್ನು ಬೆಳೆಸುವ ಮೂಲಕ ಪುರಾತನ ಕಾಲದ ವಸ್ತುಗಳ ಸಂಗ್ರಹಣೆ ಹಾಗೂ ಮುಂದಿನ ಪೀಳಿಗೆಗೆ ಅವುಗಳ ಮಹತ್ವವನ್ನು ತಿಳಿಯುವಲ್ಲಿ ನಾವೆಲ್ಲರೂ ಪ್ರಯತ್ನಿಸಬೇಕಾಗಿದೆ. ಪ್ರಾಥಮಿಕ ಹಂತದಲ್ಲಿ ಉತ್ತಮ ಹವ್ಯಾಸವನ್ನು ಬೆಳೆಸಿಕೊಂಡಾಗ ಕೆಟ್ಟ ಚಟಗಳಿಗೆ ದಾಸರಾಗುವುದು ತಪ್ಪುತ್ತದೆ ಮತ್ತು ಉತ್ತಮ ಬಾಂಧವ್ಯದ ಜೊತೆ ಒಳ್ಳೆಯ ನಾಗರಿಕರಾಗುವುದರಲ್ಲಿ ನಮ್ಮ ಹವ್ಯಾಸಗಳು ಮುಖ್ಯ ಪಾತ್ರ ವಹಿಸುತ್ತವೆ ಎಂದು ಕಲ್ಲಡ್ಕ ಮ್ಯೂಸಿಯಂ ಮಾಲಕ ಯಾಶಿರ್ ಕಲ್ಲಡ್ಕ ಹೇಳಿದರು....
1 17 18 19 20 21 725
Page 19 of 725