Sunday, June 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ವಿಜೃಂಭಣೆಯಿಂದ ಮಹಿಳಾ ದಿನಾಚರಣೆ-ಕಹಳೆ ನ್ಯೂಸ್

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯದ ಸಿಟಿ ಕ್ಯಾಂಪಸ್, ಪಾಂಡೇಶ್ವರದಲ್ಲಿ ಮಾರ್ಚ್ 8, 2025, ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಹಿಳಾ ಹಕ್ಕುಗಳು, ಸಮಾನತೆ ಮತ್ತು ಸಬಲೀಕರಣದ ಮಹತ್ವವನ್ನು ಒಳಗೊಂಡಂತೆ ಹಲವು ಸಂಸ್ಥೆಗಳ ಸಂಯುಕ್ತ ಸಹಭಾಗಿತ್ವದಲ್ಲಿ ಈ ವಿಶೇಷ ದಿನಾಚರಣೆ ಜರುಗಿತು. ಈ ಕಾರ್ಯಕ್ರಮವನ್ನು ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಕಾಮರ್ಸ್, ಇನ್ಸ್ಟಿಟ್ಯೂಟ್ ಆಫ್ ಪೋರ್ಟ್, ಶಿಪ್ಪಿಂಗ್ ಅಂಡ್ ಲಾಜಿಸ್ಟಿಕ್ ಮ್ಯಾನೇಜ್ಮೆಂಟ್, ಇನ್ಸ್ಟಿಟ್ಯೂಟ್ ಆಫ್ ಫಿಸಿಯೊಥೆರಪಿ, ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ಮೆಂಟ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಫರಂಗಿಪೇಟೆಯ ದಿಗಂತ್‌ ಮನೆಬಿಟ್ಟು ಹೋಗಲು ಕಾರಣವೇನು? ಮಾಹಿತಿ ನೀಡಿದ ಎಸ್.ಪಿ-ಕಹಳೆ ನ್ಯೂಸ್

ಮಂಗಳೂರು: ಕಳೆದೆರಡು ವಾರದಿಂದ ಸುದ್ದಿ ಮಾಡಿದ್ದ ಫರಂಗಿಪೇಟೆ ದಿಗಂತ್ ನಾಪತ್ತೆ ಪ್ರಕರಣ ಸುಖಾಂತ್ಯವಾಗಿದೆ. ನಾಪತ್ತೆಯಾಗಿದ್ದ ಬಾಲಕ ದಿಗಂತ್‌ ಶನಿವಾರ (ಮಾ.08) ಉಡುಪಿಯಲ್ಲಿ ಪತ್ತೆಯಾಗಿದ್ದಾನೆ. ದಿಗಂತ್‌ ನಾಪತ್ತೆ ಪ್ರಕರಣದ ಬಗ್ಗೆ ಹಲವು ಊಹಾಪೋಹಗಳು ಎದ್ದಿತ್ತು. ಪತ್ತೆಯಾದ ಬಳಿಕವೂ ಹಲವು ಅನುಮಾನಗಳು ಜನರಲ್ಲಿ ಕಾಡಿತ್ತು. ರವಿವಾರ (ಮಾ.09) ಸುದ್ದಿಗೋಷ್ಠಿ ನಡೆಸಿದ ದ.ಕ.ಜಿಲ್ಲಾ ಎಸ್ ಪಿ ಯತೀಶ್ ಎನ್ ತನಿಖೆಯ ಬಗ್ಗೆ ವಿವರಣೆ ನೀಡಿದ್ದಾರೆ. ನಾಪತ್ತೆ ಬಳಿಕ ಬಂಟ್ವಾಳ ಡಿವೈಎಸ್ ಪಿ ನೇತೃತ್ತದಲ್ಲಿ ಏಳು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಮುತುವರ್ಜಿಯಲ್ಲಿ ಸುಮಾರು 63 ಲಕ್ಷ ವೆಚ್ಚದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ -ಕಹಳೆ ನ್ಯೂಸ್

ಮಂಗಳೂರು :ಆದ್ಯಪಾಡಿ ಶ್ರೀ ಆದಿನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಶುಭ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಡಾ. ವೈ ಭರತ್ ಶೆಟ್ಟಿ ಹಾಗೂ ದಕ್ಷಿಣ ಕನ್ನಡದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ವಿಶೇಷ ಮುತುವರ್ಜಿಯಲ್ಲಿ ಸುಮಾರು 63 ಲಕ್ಷ ವೆಚ್ಚದಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಇಂದು ನೆರವೇರಿತು. ಮಾನ್ಯ ಶಾಸಕರ ವಿಶೇಷ ಪ್ರಯತ್ನದಲ್ಲಿ ಸುಮಾರು 10 ಲಕ್ಷ ರೂಪಾಯಿ ವೆಚ್ಚದ ತಡೆಗೋಡೆ, 8...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ಮಾರುಕಟ್ಟೆಯಲ್ಲಿ ಏರಿಕೆಯತ್ತ ಚಾಲಿ ಅಡಿಕೆ ಧಾರಣೆ-ಕಹಳೆ ನ್ಯೂಸ್

ಪುತ್ತೂರು: ರಾಜ್ಯ ಬಜೆಟ್‌ ಮಂಡನೆ ಬೆನ್ನಲ್ಲೇ ಹೊಸ ಅಡಿಕೆ, ರಬ್ಬರ್‌ ಧಾರಣೆ ಏರಿಕೆಯತ್ತ ಮುಖ ಮಾಡಿದ್ದು, ಬೆಳೆಗಾರರಲ್ಲಿ ನಿರೀಕ್ಷೆ ಮೂಡಿಸಿದೆ. ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆ 400 ರೂ. ತಲುಪಿದೆ. ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಮಾ.8ರಂದು ಹೊಸ ಅಡಿಕೆ ಧಾರಣೆ ಕೆ.ಜಿ.ಗೆ 390 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ 400 ರೂ.ಇತ್ತು. ಸಿಂಗಲ್‌ ಚೋಲ್‌ 455 ರೂ., ಡಬ್ಬಲ್‌ ಚೋಲ್‌ 495 ರೂ. ಇದ್ದು ಧಾರಣೆ ಸ್ಥಿರವಾಗಿತ್ತು. 190ಕ್ಕೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪುಂಜಾಲಕಟ್ಟೆ:ಬಾಂಬಿಲದ ತೆಂಗಿನೆಣ್ಣೆ ಮಿಲ್ ಅಗ್ನಿಗಾಹುತಿ, ಅಪಾರ ನಷ್ಟ–ಕಹಳೆ ನ್ಯೂಸ್

ಪುಂಜಾಲಕಟ್ಟೆ: ಬಂಟ್ವಾಳ -ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ಬಾಂಬಿಲ ಎಂಬಲ್ಲಿ ತೆಂಗಿನ ಎಣ್ಣೆ ಮಿಲ್ ಅಗ್ನಿಗಾಹುತಿಯಾದ ಘಟನೆ ಮಾ.8ರ ಶನಿವಾರ ತಡರಾತ್ರಿ ಸಂಭವಿಸಿದೆ. ಇಲ್ಲಿನ ನಿವಾಸಿ ಜಯರಾಮ ಗೌಡ ಅವರ ಮಾಲಕತ್ವದ ಐ ಗ್ರೋ ಇನ್ ಕಾರ್ಪ್ ಎಂಬ ಮಿಲ್ ಅಗ್ನಿಗಾಹುತಿಯಾಗಿದ್ದು, ಸುಮಾರು 3 ಕೋಟಿ ರೂ. ಮೌಲ್ಯ ದ ಸೊತ್ತುಗಳು ನಾಶವಾಗಿದೆ. ಜಯರಾಮ ಅವರ ಮನೆ ಮಿಲ್ ನ ಸಮೀಪವೇ ಇದ್ದು, ಶನಿವಾರ ರಾತ್ರಿ ಸುಮಾರು ಒಂದು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಣಿಪಾಲ:ಹೆದ್ದಾರಿಯಿಂದ ಜಿಗಿದು ಪಲ್ಟಿ ಹೊಡೆದ ಕಾರು- ಕಹಳೆ ನ್ಯೂಸ್

ಮಣಿಪಾಲ: ಈಶ್ವರ ನಗರ ನೀರಿನ ಟ್ಯಾಂಕ್ ಬಳಿ ಕಾರು ಅಪಘಾತವಾದ ಘಟನೆ ಮಾ.8ರ ಶನಿವಾರ ತಡರಾತ್ರಿ ಸುಮಾರು 1.30 ಗಂಟೆಗೆ ಸಂಭವಿಸಿದೆ. ಕಾರು ಹೆದ್ದಾರಿಯಿಂದ ಜಿಗಿದು ಪಲ್ಟಿ ಹೊಡೆದಿದ್ದು, ಈ ಕಾರಿನಲ್ಲಿ ಹಲವು ನಂಬರ್ ಪ್ಲೇಟ್ ಗಳಿದ್ದವು. ಅಪಘಾತವಾದ ತತ್ ಕ್ಷಣ ಕಾರಿನೊಳಗಿದ್ದ ವ್ಯಕ್ತಿಗಳು ವಿವಿಧ ನೊಂದಣಿ ಸಂಖ್ಯೆಗಳುಳ್ಳ ನಂಬರ್ ಪ್ಲೇಟ್ ಗಳನ್ನು ಪೊದೆಗೆ ಎಸೆದು ಹೋಗಿದ್ದಾರೆ. ಘಟನೆಯ ಪರಿಣಾಮ ಓರ್ವ ವ್ಯಕ್ತಿಗೆ ಮಾತ್ರ ಗಾಯವಾಗಿದ್ದು, ಜೊತೆಗಿದ್ದವರು ಆತನನ್ನು ಉಪಚರಿಸುವ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಂಪೂರ್ಣ ಮಹಿಳಾ ಸಿಬ್ಬಂದಿಯೊಂದಿಗೆ ಹಾರಾಟ ನಡೆಸಿದ ಏರ್‌ಇಂಡಿಯಾ ಎಕ್ಸ್‌ಪ್ರೆಸ್- ಕಹಳೆ ನ್ಯೂಸ್

ಮಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಮಂಗಳೂರು-ಮಸ್ಕತ್ ವಿಮಾನ ಪೂರ್ಣ ಮಹಿಳಾ ಸಿಬ್ಬಂದಿಯೊಂದಿಗೆ ಹಾರಾಟ ನಡೆಸಿತು. ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ನ ಒಟ್ಟು 14 ಪೂರ್ಣ-ಮಹಿಳಾ ವಿಮಾನಗಳು ಕಾರ್ಯಾಚರಿಸಿವೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮಂಗಳೂರಿನಿಂದ ವಾರಕ್ಕೆ 70 ಕ್ಕೂ ಹೆಚ್ಚು ವಿಮಾನಗಳನ್ನು ನಿರ್ವಹಿಸುತ್ತಿದ್ದು, ನಗರವನ್ನು 4 ದೇಶೀಯ ಮತ್ತು 8 ಅಂತಾರಾಷ್ಟ್ರೀಯ ಸ್ಥಳಗಳಿಗೆ ಸಂಪರ್ಕಿಸುತ್ತದೆ. ಮಹಿಳಾ ದಿನಾಚರಣೆ ಅಂಗವಾಗಿ ಏರ್‌ ಇಂಡಿಯಾ ಎಕ್ಸ್‌ ಪ್ರೆಸ್‌ ವಿಶೇಷ ಯೋಜನೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಇನ್ನೂ ಪತ್ತೆಯಾಗದ ಮೂಡು ಪೆರಾರದ ನಿತೇಶ್‌ ಬೆಲ್ಚಡ: ವಿಶೇಷ ತಂಡ ರಚನೆಗೆ ಖಾದರ್‌ ಸೂಚನೆ- ಕಹಳೆ ನ್ಯೂಸ್

ಮಂಗಳೂರು: ಬಜಪೆ ಮೂಡು ಪೆರಾರ ಗ್ರಾಮದ ಅರ್ಕೆ ಪದವು ನಿವಾಸಿ, ನೀರುಮಾರ್ಗದ ಪ್ಯಾರಾಮೆಡಿಕಲ್‌ ಕಾಲೇಜೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತೇಶ್‌ ಬೆಲ್ಚಡ (19) ಫೆ. 13ರಂದು ನಾಪತ್ತೆಯಾಗಿದ್ದು, ಆತ ಎಲ್ಲಿಗೆ ಹೋಗಿದ್ದಾನೆ ಎನ್ನುವ ಸುಳಿವು ಇಲ್ಲಿಯವರೆಗೆ ಸಿಕ್ಕಿಲ್ಲ. ಇದೀಗ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್‌ ಅವರು ವಿಶೇಷ ತಂಡ ರಚಿಸಿ ನಾಪತ್ತೆಯಾಗಿರುವ ವಿದ್ಯಾರ್ಥಿಯನ್ನು ಪತ್ತೆ ಮಾಡುವಂತೆ ನಗರ ಪೊಲೀಸ್‌ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ದಿಗಂತ್‌ ಎನ್ನುವ ಯುವಕ ನಾಪತ್ತೆ ಪ್ರಕರಣ ರಾಜ್ಯಮಟ್ಟದಲ್ಲಿ...
1 191 192 193 194 195 740
Page 193 of 740