Sunday, June 14, 2026

ದಕ್ಷಿಣ ಕನ್ನಡ

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ವಿದ್ಯಾರ್ಥಿ ದೆಸೆಯಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆ ತಯಾರಿ ಆರಂಭಿಸಿ: ರಾಜು ಮೊಗವೀರ-ಕಹಳೆ ನ್ಯೂಸ್

ಮಂಗಳೂರು: ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವಾಗಲೇ ಉದ್ಯೋಗಕ್ಕೆ ಸಂಬAಧಪಟ್ಟ ಪರೀಕ್ಷಾ ತಯಾರಿಯಲ್ಲಿ ತೊಡಗಿಸಿಕೊಳ್ಳಬೇಕು. ಉದ್ಯೋಗಕ್ಕೆ ಸಂಬAಧಿಸಿದAತೆ ತರಬೇತಿಯನ್ನು ಸಾಮಾಜಿಕ ಮಾಧ್ಯಮಗಳ ಮೂಲಕವೂ ಪಡೆಯಬಹುದು ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ (ಆಡಳಿತ) ರಾಜು ಮೊಗವೀರ ಅವರು ತಿಳಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಕನ್ನಡ ಸಂಘ ಹಾಗೂ ಉದ್ಯೋಗ ಮತ್ತು ವೃತ್ತಿ ಸಮಲೋಚನಾ ಕೋಶ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ನಗರ ಹೋಬಳಿ ಘಟಕದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಜನೌಷಧಿ ಕೇಂದ್ರಗಳು ಪ್ರಧಾನ ಮಂತ್ರಿ ಮೋದಿಯವರ ಕಾರಣದಿಂದ ಬಡವರ ಪಾಲಿನ ಸಂಜೀವಿನಿಯಾಗಿದೆ: ಸಂಸದ ಕ್ಯಾ. ಬ್ರಿಜೇಶ್ ಚೌಟ-ಕಹಳೆ ನ್ಯೂಸ್

ಮಂಗಳೂರು: ಜನೌಷಧಿ ಕೇಂದ್ರಗಳಲ್ಲಿ ಔಷಧಿಗಳು ಕೈಗೆಟಕುವ ದರದಲ್ಲಿ ದೊರೆಯುತ್ತಿದ್ದು, ಬಡವರು ಸೇರಿದಂತೆ ಜನಸಾಮಾನ್ಯರ ಪಾಲಿಗೆ ಇದು ಸಂಜೀವಿನಿಯಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ. ನಗರದ ಕಂಕನಾಡಿ ಬೈಪಾಸ್ ಬಳಿಯಿರುವ ’ಜನೌಷಧಿ ಕೇಂದ್ರ’ದಲ್ಲಿ ಇಂದು ನಡೆದ ' ಜನೌಷಧಿ ದಿವಸ್' ಕಾರ್‍ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಡ ಮತ್ತು ಮಧ್ಯಮ ವರ್ಗಗಳಿಗೆ ಆರೋಗ್ಯ ವೆಚ್ಚ ಆರ್ಥಿಕ ಹೊರೆಯಾಗಿ ಪರಿಣಮಿಸುತ್ತಿರುವುದನ್ನು ಮನಗಂಡು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾನವನ ದುರಾಸೆ ಪರಿಸರ ನಾಶಕ್ಕೆ ಮುಖ್ಯ ಕಾರಣ: ಡಾ. ವಿನಾಯಕ ಕೆ.ಎಸ್ -ಕಹಳೆ ನ್ಯೂಸ್

ಮಂಗಳೂರು, ಮಾ.7: ಮಾನವ ತನ್ನ ಅವಶ್ಯಕತೆಗಳಿಗಾಗಿ ಪರಿಸರವನ್ನು ಅವಲಂಬಿಸಿ ಪ್ರವಾಸೋದ್ಯಮ, ಮನರಂಜನೆ ಸೇರಿದಂತೆ ನಾನಾ ಕಾರಣಗಳಿಗಾಗಿ ಪರಿಸರದ ಮೇಲೆ ದೌರ್ಜನ್ಯ ನಡೆಸುತ್ತಿದ್ದಾನೆ. ಸ್ವಾರ್ಥಕ್ಕಾಗಿ ಪರಿಸರ ಬಳಸಿಕೊಳ್ಳುವುದರಿಂದ ಪರಿಸರದ ಸ್ಥಿತಿ ಹದಗೆಟ್ಟಿದೆ ಎಂದು ಬಂಟ್ವಾಳ ಎಸ್ವಿಎಸ್ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಕೆ. ಎಸ್. ಆತಂಕ ವ್ಯಕ್ತಪಡಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಆಂತರಿಕ ಗುಣಮಟ್ಟ ಖಾತರಿ ಕೋಶ ವತಿಯಿಂದ ನಡೆದ ಪರಿಸರ ಮತ್ತು ಜೀವವೈವಿಧ್ಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ರಾಜ್ಯದ್ದು “ಈಗ ಬರ್ಕೊ-ಆಮೇಲೆ ಹರ್ಕೊ” ಬಜೆಟ್ – ಶಾಸಕ ಕಾಮತ್-ಕಹಳೆ ನ್ಯೂಸ್

ಮಂಗಳೂರು: ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ ಎಂದು ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದೊಂದು ಘೋಷಣೆ ಕೇಳುತ್ತಿದ್ದರೆ "ಈಗ ಬೇಕಾದ್ದನ್ನು ಬರೆದುಕೊಂಡು ಘೋಷಣೆ ಮಾಡೋದು, ಆಮೇಲೆ ಅದನ್ನು ಹರಿದು ಹಾಕೋದು" ಎನ್ನುವಂತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ಹೇಳಿದರು. ಓಲೈಕೆ ರಾಜಕಾರಣದ ಕರಿ ಛಾಯೆ ಇಲ್ಲೂ ಎದ್ದು ಕಾಣುತ್ತಿದ್ದು ಹಿಂದುಳಿದ, ಶೋಷಿತ ವರ್ಗಗಳ ಕಡೆಗಣನೆ ಮಾಡಲಾಗಿದೆ. ನಾರಾಯಣ ಗುರು ಅಭಿವೃದ್ಧಿ ನಿಗಮ ಹಾಗೂ ಬಂಟ್...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ರಿಟೈಲ್ ಬ್ಯುಸಿನೆಸ್ ತರಬೇತಿ ಕಾರ್ಯಕ್ರಮ;“ ವ್ಯವಹಾರ “ –ಉದ್ಘಾಟನೆ-ಕಹಳೆ ನ್ಯೂಸ್

ಪುತ್ತೂರು: “ಸುಸ್ಥಿರ ಭವಿಷ್ಯವನ್ನು ರಚಿಸಲು, ನಾವು ಇಂದಿನ ಯುವಕರನ್ನುಸಶಕ್ತಗೊಳಿಸಬೇಕು. ಅಗತ್ಯ ಕೌಶಲ್ಯ ಮತ್ತುಜ್ಞಾನದೊಂದಿಗೆ ಅವರನ್ನು ಸಜ್ಜುಗೊಳಿಸುವ ಮೂಲಕ, ಅವರುನಾಳೆಯ ಸವಾಲುಗಳನ್ನು ಎದುರಿಸಲು ಸಿದ್ಧರಾಗುವಂತೆ ಭವಿಷ್ಯದಬದುಕಿಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಬೇಕು.“ ಎಂದು ಲಘುಉದ್ಯೋಗ ಭಾರತಿ ಸಂಸ್ಥೆ ಪುತ್ತೂರು ಇದರ ಅಧ್ಯಕ್ಷರಾದಕೇಶವ ಅಮೈ ಇವರು ಹೇಳಿದರು. ತೆಂಕಿಲದ ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಉದ್ಯಮ ಕ್ಷೇತ್ರದ ಕೌಶಲ್ಯ ಮತ್ತು ಜ್ಞಾನವನ್ನು ಸುಧಾರಿಸುವ ರಿಟೈಲ್ ಬ್ಯುಸಿನೆಸ್ ತರಬೇತಿ ಕರ‍್ಯಕ್ರಮ “ ವ್ಯವಹಾರ “ವನ್ನು ಉದ್ಘಾಟಿಸಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಎಸ್‌ಇಝೆಡ್‌ ಅಧಿಕಾರಿಗಳು ದೈವಾರಾಧನೆಗೆ ಅಡ್ಡಿಪಡಿಸಬೇಡಿ: ಶರಣ್‌ ಪಂಪ್‌ವೆಲ್‌-ಕಹಳೆ ನ್ಯೂಸ್

ಮಂಗಳೂರು: ಬಜಪೆ ಸಮೀಪದ ನೆಲ್ಲಿದಡಿಗುತ್ತಿನ ಜುಮಾದಿ ಬಂಟ ದೈವಸ್ಥಾನದಲ್ಲಿ ದೈವಾರಾಧನೆಗೆ ಎಸ್‌ಇಝೆಡ್‌ ಅಧಿಕಾರಿಗಳು ಅಡ್ಡಿಪಡಿಸುವುದನ್ನು ಕೈ ಬಿಡದಿದ್ದರೆ ಸಂಘರ್ಷಮಯ ಸ್ಥಿತಿ ಉಂಟಾದೀತು. ಹಾಗಾಗಿ ಕೇಂದ್ರ, ರಾಜ್ಯ ಸರಕಾರ ಹಾಗೂ ಎಸ್‌ಇಝೆಡ್‌ ದೈವಾರಾಧನೆಗೆ ಅವಕಾಶ ನೀಡಬೇಕು ಎಂದು ವಿಶ್ವಹಿಂದೂ ಪರಿಷತ್‌ ಪ್ರಾಂತ ಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಆಗ್ರಹಿಸಿದ್ದಾರೆ. ನಗರದ ವಿಶ್ವಶ್ರೀ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೆಲ್ಲಿದಡಿಗುತ್ತಿನ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದೆ. ಅಲ್ಲಿನ ತೀರ್ಥಬಾವಿಯ ನೀರು ದೈವಿಕ ನಂಬಿಕೆಯಂತೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ವಾಮದ ಪದವು ಸರಕಾರಿ ಪ್ರೌಢ ಶಾಲಾ 10 ನೇ ತರಗತಿ ಮಕ್ಕಳ ಉಚಿತ ಟ್ಯೂಷನ್ ತರಗತಿ ಸಮಾರೋಪ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ ) ಬಂಟ್ವಳ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ ವಾಮದ ಪದವು ಸರಕಾರಿ ಪ್ರೌಢ ಶಾಲಾ 10 ನೇ ತರಗತಿ ಮಕ್ಕಳಿಗೆ ಉಚಿತವಾಗಿ 3 ತಿಂಗಳು ನೀಡಿದ ಟ್ಯೂಷನ್ ತರಗತಿಯ ಸಮಾರೋಪ ಕಾರ್ಯಕ್ರಮ ಗುರುವಾರ ನಡೆಸಲಾಯ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ವಹಿಸಿದ್ದರು. ಗ್ರಾಮಾಭಿವೃದ್ಧಿಯೋಜನೆಯ ಬಂಟ್ವಳ ತಾಲೂಕು ಯೋಜನಾಧಿಕಾರಿ ಜಯಾನಂದ...
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ನಾದಿನಿ, ಅತ್ತೆ, ಇಬ್ಬರು ಮಕ್ಕಳ ಹಂತಕನಿಗೆ ಕೊನೆಯುಸಿರಿನ ತನಕ ಜೈಲು;ಸುಪ್ರೀಂ ಕೋರ್ಟ್‌ ಆದೇಶ -ಕಹಳೆ ನ್ಯೂಸ್

ಪುತ್ತೂರು: ತನ್ನ ನಾದಿನಿ ಹಾಗೂ ಅತ್ತೆಯನ್ನು ಕುತ್ತಿಗೆಗೆ ಹಗ್ಗ ಬಿಗಿದು ಕೊ*ಲೆಗೈದು ಎರಡು ದಿನಗಳ ಬಳಿಕ ತನ್ನ ಪುಟ್ಟ ಮಕ್ಕಳಿಬ್ಬರನ್ನು ಪಾಣಾಜೆ ಬಳಿ ಕೆರೆಗೆ ದೂಡಿ ಹಾಕಿ ಕೊ*ಲೆ ಮಾಡಿದ್ದ ಪಾಣಾಜೆಯ ರಮೇಶ್‌ ನಾಯ್ಕನಿಗೆ ನೀಡಿರುವ ಶಿಕ್ಷೆಯನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್‌ ಮರಣದಂಡನೆ ಶಿಕ್ಷೆಯನ್ನು ಮಾರ್ಪಡಿಸಿ ಆತನ ಆಯುಷ್ಯದ ಕೊನೆಯ ತನಕವೂ ಜೈಲಲ್ಲಿಯೇ ಇರುವಂತೆ ಆದೇಶಿಸಿದೆ. ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸಿತ್ತು. ಕರ್ನಾಟಕ...
1 193 194 195 196 197 740
Page 195 of 740