ಫರಂಗಿಪೇಟೆಯ ವಿದ್ಯಾರ್ಥಿ ನಾಪತ್ತೆ ಪ್ರಕರಣ: ತನಿಖೆ ಚುರುಕು, ಮಾಹಿತಿ ಲಭ್ಯ-ಕಹಳೆ ನ್ಯೂಸ್
ಬಂಟ್ವಾಳ: ಕಳೆದ 8 ದಿನಗಳಿಂದ ನಾಪತ್ತೆಯಾಗಿರುವ ಫರಂಗಿಪೇಟೆ ಕಿದೆಬೆಟ್ಟಿನ ವಿದ್ಯಾರ್ಥಿ ದಿಗಂತ್ನ ಪತ್ತೆಗಾಗಿ ಪೊಲೀಸ್ ತನಿಖೆ ಇನ್ನಷ್ಟು ಚುರುಕುಗೊಂಡಿದೆ. ಬಂಟ್ವಾಳದಲ್ಲಿ ಈ ಹಿಂದೆ ಕರ್ತವ್ಯ ನಿರ್ವಹಿಸಿದ ಪ್ರಮುಖ ಪೊಲೀಸ್ ಅಧಿಕಾರಿಗಳನ್ನು ಕರೆಸಿ ವಿದ್ಯಾರ್ಥಿಯನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆ ಶ್ರಮಿಸುತ್ತಿದೆ. ಒಂದು ಮೂಲದ ಪ್ರಕಾರ ಆತನ ಇರುವಿಕೆ ಬಗ್ಗೆ ಗೊತ್ತಾಗಿದ್ದರೂ, ಆತ ಒಂದೇ ಕಡೆ ನಿಲ್ಲದೆ ಆಗಾಗ ಸ್ಥಳ ಬದಲಾಯಿಸುತ್ತಿರುವುದರಿಂದ ಪತ್ತೆಗೆ ತೊಡಕಾಗಿದೆ ಎನ್ನಲಾಗುತ್ತಿದೆ. ಆತ ಮೊಬೈಲನ್ನು ಬಿಟ್ಟು ಹೋಗಿರುವುದರಿಂದ...







