ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದ ನಾಡಿಗೆ ಗಂಡಾಂತರ : ವೇದವ್ಯಾಸ ಶಾಸಕ ಕಾಮತ್ ಆಕ್ರೋಶ – ಕಹಳೆ ನ್ಯೂಸ್
ಹುಬ್ಬಳ್ಳಿ ಗಲಭೆ ಪ್ರಕರಣ ಹಿಂಪಡೆದಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವು ಓಲೈಕೆ ರಾಜಕಾರಣದ ಪರಮಾವಧಿಯಾಗಿದ್ದು, ಇದರಿಂದ ರಾಜ್ಯಕ್ಕೆ ಎದುರಾಗಲಿರುವ ಗಂಡಾಂತರದ ನೇರ ಹೊಣೆಯನ್ನು ಸರ್ಕಾರವೇ ಹೊರಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ವಾಗ್ದಾಳಿ ನಡೆಸಿದರು. ಹುಬ್ಬಳ್ಳಿಯಲ್ಲಿ ಭಾರೀ ದೊಡ್ಡ ಕೋಮುಗಲಭೆಗೆ ಸಂಚು ರೂಪಿಸಿ ನೂರಾರು ಜನ ಮತಾಂಧರು ಏಕಾಏಕಿ ಪೊಲೀಸ್ ಠಾಣೆಗೆ ನುಗ್ಗಿದ್ದು, ಕಲ್ಲು ತೂರಾಟ ನಡೆಸಿದ್ದು, ಪೊಲೀಸರ ಕೊಲೆಗೆ ಯತ್ನಿಸಿದ್ದು ಸೇರಿದಂತೆ ಹಲವು ಆರೋಪದ ಮೇಲೆ...







