ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶ್ರೀ ಶಾರದಾಪೂಜೆ ಅಕ್ಷರವನ್ನು ಆರಾಧಿಸುವ ಪರಂಪರೆ ನಮ್ಮದೆಂಬುದು ಹೆಮ್ಮೆ : ರಾಕೇಶ ಕಮ್ಮಜೆ-ಕಹಳೆ ನ್ಯುಸ್
ಪುತ್ತೂರು: ಯಾರೂ ಅಕ್ಷರದ್ವೇಷಿಗಳಾಗಬಾರದು. ಅಕ್ಷರವನ್ನು ಪ್ರೀತಿಸುತ್ತಾ ಸಾಗಿದಂತೆ ನಮ್ಮ ಜ್ಞಾನ ವೃದ್ಧಿಯಾಗುತ್ತಾ ಹೋಗುತ್ತದೆ. ಅಕ್ಷರವನ್ನು ಗೌರವಿಸುವ, ಆರಾಧಿಸುವ ಪರಂಪರೆಗೆ ನಾವು ಸೇರಿದ್ದೇವೆ ಎಂಬ ಹೆಮ್ಮೆ ನಮ್ಮಲ್ಲಿರಬೇಕು. ಅಕ್ಷರಸರಸ್ವತಿಯ ವರಪುತ್ರ- ಪುತ್ರಿಯರಾಗಿ ನಾವು ಹೊರಹೊಮ್ಮಬೇಕು. ಆಗ ಸುಜ್ಞಾನ ನಮ್ಮದಾಗುತ್ತದೆ ಎಂದು ಅಂಬಿಕಾ ಪದವಿ ಮಹಾ ವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಹೇಳಿದರು. ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ಶನಿವಾರ ಶ್ರೀ ಶಾರದಾಪೂಜೆಯ...







