Friday, June 12, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ದ್ವಿಚಕ್ರವಾಹನಗಳನಡುವೆ ಮುಖಾ ಮುಖಿ ಡಿಕ್ಕಿ-ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃ*ತ್ಯು-ಕಹಳೆ ನ್ಯೂಸ್

ಬಂಟ್ವಾಳ : ದ್ವಿಚಕ್ರವಾಹನಳೆರಡರ ಮಧ್ಯೆ ಮೆಲ್ಕಾರ್ ಮುಡಿಪು ರಾಜ್ಯ ಹೆದ್ದಾರಿಯ ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ಆ. 2 ರಂದು ಬುಧವಾರ ನಡೆದ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟರ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಬರಿಮಾರು ನಿವಾಸಿ ಸರ್ಪಾಝ್ ( 33) ಮೃತಪಟ್ಟ ವ್ಯಕ್ತಿಯಾಗಿದ್ದು, ಸಹಸವಾರಿಣಿ ವಿದ್ಯಾರ್ಥಿ ಜಾಸ್ಮೀನ್ ( 18) ಗಾಯಳು ಆಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸರ್ಪಾಝ್ ಅವರು...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಾಮದಪದವ್ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ಬಂಟ್ವಾಳ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ವಗ್ಗ ವಲಯದ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜ್ ವಾಮದಪದವಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಜರಾಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕರಾದ ಶ್ರೀಧರ್ ಎಚ್ ಜಿ ವಹಿಸಿದ್ದರು. ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕು ಯೋಜನಾಧಿಕಾರಿ ಬಾಲಕೃಷ್ಣ ಕಾರ್ಯಕ್ರಮದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಒಂದು ಶಾಲೆಯ ಉಳಿವಿನಲ್ಲಿ ಆ ಶಾಲೆಯ ಪೋಷಕರು ಮತ್ತು ಹಿರಿಯ ವಿದ್ಯಾರ್ಥಿಗಳ ತಂಡ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ,-ಸಂಗೀತ ಶರ್ಮಾ ಪಿ ಜಿ-ಕಹಳೆ ನ್ಯೂಸ್ 

ಬಂಟ್ವಾಳ : ಯಾವುದೇ ಒಂದು ಶಾಲೆ ಉಳಿವಿನಲ್ಲಿ ಆ ಶಾಲೆಯ ಪೋಷಕರು ಮತ್ತು ಹಿರಿಯ ವಿದ್ಯಾರ್ಥಿಗಳ ತಂಡ ಬಹುಮುಖ್ಯ ಪಾತ್ರವನ್ನು ವಹಿಸುತ್ತದೆ ಎಂದು ರಾಜ್ಯಮಟ್ಟದ ಶಿಕ್ಷಕರತ್ನ ಪ್ರಶಸ್ತಿ ಪುರಸ್ಕೃತ ಮಜಿ ವೀರಕಂಭ ಶಾಲಾ ಶಿಕ್ಷಕಿ ಸಂಗೀತ ಶರ್ಮ ಹೇಳಿದರು. ಅವರು ಬಂಟ್ವಾಳ ತಾಲೂಕಿನ ಪೆರ್ನೆ ಗ್ರಾಮದ ಏಕೈಕ ಸರಕಾರಿ ಪ್ರಾಥಮಿಕ ಶಾಲೆ ಕಾರ್ಲ ಇಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ವತಿಯಿಂದ ಕಾರ್ಲ ಶಾಲಾ ಉಳಿಸಿ ಬೆಳೆಸುವ ದೃಷ್ಟಿಯಲ್ಲಿ ಕರೆದ ಸಭೆಯಲ್ಲಿ...
ಕ್ರೈಮ್ದಕ್ಷಿಣ ಕನ್ನಡಮಂಗಳೂರುರಾಜ್ಯಸುದ್ದಿ

ಸುರತ್ಕಲ್‌ ನ ಯುವತಿಗೆ ಅಶ್ಲೀಲ ಚಿತ್ರ ಕಳುಹಿಸಿ ನಿರಂತರ ಕಿರುಕುಳ ; ಯುವಕ ಮೊಹಮ್ಮದ್‌ ಶಾಕೀಬ್‌ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಸುರತ್ಕಲ್‌: ಮಂಗಳೂರಿನಲ್ಲಿ ಶಿಕ್ಷಣ ಪಡೆಯುತ್ತಿರುವ ಕೃಷ್ಣಾಪುರ ಬಳಿಯ ವಿದ್ಯಾರ್ಥಿನಿಯೋರ್ವಳಿಗೆ ಆಶ್ಲೀಲ ಚಿತ್ರಗಳನ್ನು ಕಳುಹಿಸುತ್ತಾ ಯುವಕನೊಬ್ಬ ಕಿರುಕುಳ ನೀಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ವಿದ್ಯಾರ್ಥಿನಿಯ ಪೋಷಕರು ಸುರತ್ಕಲ್‌ ಠಾಣೆಗೆ ನೀಡಿದ ದೂರಿನ ಮೇರೆಗೆ ಮೆಸೇಜ್‌ ಕಳುಹಿಸಿದ್ದ ಮಂಜನಾಡಿ ಬಳಿಯ ನಿವಾಸಿ ಮೊಹಮ್ಮದ್‌ ಶಾಕೀಬ್‌ನನ್ನು ವಶಕ್ಕೆ ಪಡೆಯಲಾಗಿದೆ. ಎಷ್ಟು ಬೇಕಾದರೂ ದುಡ್ಡು ಕೊಡಬಲ್ಲೆ, ಬರ್ತೀಯಾ ಎಂದು ಆಶ್ಲೀಲ ಚಿತ್ರ ಕಳುಹಿಸಿ ಪದೇಪದೆ ವಾಟ್ಸ್‌ಅಪ್‌ ಮೆಸೇಜ್‌ ಮೂಲಕ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದ. ಇದರಿಂದ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅ.02ರಿಂದ ಅ.11ರವರೆಗೆ ಬರಿಮಾರು ಕಲ್ಲೆಟ್ಟಿ ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದಲ್ಲಿ ನವರಾತ್ರಿ ಪೂಜೆ ಹಾಗೂ ಮಾರ್ನೆಮಿ ನೇಮೋತ್ಸವ – ಕಹಳೆ ನ್ಯೂಸ್

ಬಂಟ್ವಾಳ : ಬರಿಮಾರು ಕಲ್ಲೆಟ್ಟಿ ಶ್ರೀ ಕಾನಲ್ತಾಯ ಮಹಾಕಾಳಿ ದೈವಸ್ಥಾನದಲ್ಲಿ ಅ.02ರಿಂದ ಅ.11ರವರೆಗೆ ಬರಿಮಾರು ಶ್ರೀ ಕಾನಲ್ತಾಯ ಮಹಾಕಾಳಿ ಮತ್ತು ಪರಿವಾರ ದೈವಗಳಿಗೆ ನವರಾತ್ರಿ ಪೂಜೆ ಹಾಗೂ ಮಾರ್ನೆಮಿ ನೇಮೋತ್ಸವ ನಡೆಯಲಿದೆ. ಅ.02 ರಿಂದ ಅ.11 ರವರೆಗೆ ಪ್ರತಿದಿನ ಸಂಜೆ 6.30ಕ್ಕೆ ಭಜನಾ ಸೇವೆ, ಅ.08ರಂದು ಬೆಳಗ್ಗೆ 9.00ರಿಂದ ತೆನೆ ಹಬ್ಬ ಕಾರ್ಯಕ್ರಮ, ಅ.09, 10 ಮತ್ತು 11ರಂದು ರಾತ್ರಿ 8.30ರಿಂದ ಪಲ್ಲಕಿ ಉತ್ಸವ ಸೇವೆ, ರಾತ್ರಿ 9.00ರಿಂದ ಅನ್ನಸಂತರ್ಪಣೆ...
ದಕ್ಷಿಣ ಕನ್ನಡಸುದ್ದಿ

ಅಗ್ನಿವೀರ ಪಡೆಯೊಂದಿಗೆ ಶಾಸಕ ಡಾಕ್ಟರ್ ಭರತ್ ಶೆಟ್ಟಿ, ನೇತೃತ್ವದಲ್ಲಿ ಮಹಾತ್ಮಾ ಗಾಂಧಿ ಸಂಸ್ಮರಣೆ,ಸ್ವಚ್ಛತಾ ಅಭಿಯಾನ -ಕಹಳೆ ನ್ಯೂಸ್

ಕಾವೂರು : ರಾಷ್ಟ್ರ ಪಿತಾ ಮಹಾತ್ಮ ಗಾಂಧಿ ಹಾಗೂ ದೇಶದ ಪ್ರಸಿದ್ಧ ಪ್ರಧಾನಿಗಳಲ್ಲಿ ರ‍್ವರಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಪ್ರಯುಕ್ತ ಶಾಸಕರಾದ ಡಾ. ಭರತ್ ಶೆಟ್ಟಿ ವೈಅವರು ದೇಶದ ಯೋಧರಾದ ಅಗ್ನಿವೀರ ಪಡೆಯೊಂದಿಗೆ ನಗರದ ಕೆಪಿಟಿ ಬಳಿಯ ಉದಯನಗರ ಸುತ್ತಮುತ್ತ ಸ್ವಚ್ಛತಾ ಅಭಿಯಾನ ನಡೆಸಿದರು. ಇದೇ ಸಂರ‍್ಭ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ರ‍್ಪಿಸಲಾಯಿತು. ಈ ಸಂರ‍್ಭ ಮಾತನಾಡಿದ ಅವರು, ಪ್ರಧಾನಿ ನರೇಂದ್ರ...
ದಕ್ಷಿಣ ಕನ್ನಡಸುದ್ದಿಸುಳ್ಯ

ಎನ್ನೆಂಸಿ ವಿಜ್ಞಾನ ಸಂಘದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ-ಕಹಳೆ ನ್ಯೂಸ್

ಸುಳ್ಯ; ನೆಹರೂ ಮೆಮೋರಿಯಲ್ ಕಾಲೇಜು ಸುಳ್ಯ ಇಲ್ಲಿನ ವಿಜ್ಞಾನ ಸಂಘ ಇದರ 2024-25ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಅಕ್ಟೋಬರ್ 01 ಮಂಗಳವಾರದAದು ಕಾಲೇಜು ಸಭಾಂಗಣದಲ್ಲಿ ನಡೆಯಿತು. ಮಣಿಪಾಲ ಸಂಶೋದನಾ ಕೇಂದ್ರದಲ್ಲಿ ಪಿ.ಹೆಚ್.ಡಿ ವ್ಯಾಸಂಗ ಮಾಡುತ್ತಿರುವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ, ಪದವಿಯಲ್ಲಿ ಮಂಗಳೂರು ವಿಶ್ವವಿದ್ಯಾಲಯದಿಂದ ರ್ಯಾಂಕ್ ಪಡೆದಿದ್ದ ಕು. ಪ್ರಮೀತ, ದೀಪ ಬೆಳಗಿದ ನಂತರ ವೈಜ್ಞಾನಿಕವಾಗಿ ರಾಸಾಯನಿಕ ವಸ್ತುಗಳನ್ನು ಬಳಸಿ ಕಾಮನ ಬಿಲ್ಲಿನ ಬಣ್ಣಗಳನ್ನು ಉತ್ಪಾದಿಸಿ ವಿನೂತನ ರೀತಿಯಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವೀರಕಂಭ ಮಜಿ ಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿ ಅವರ ಜನ್ಮದಿನಾಚರಣೆ ಕಾರ್ಯಕ್ರಮ -ಕಹಳೆ ನ್ಯೂಸ್

ಕಲ್ಲಡ್ಕ: ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಮಜಿ ಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಭಾವ ಭಾವಚಿತ್ರಕ್ಕೆ ಶಾಲಾ ಮುಖ್ಯ ಶಿಕ್ಷಕಿ, ಶಿಕ್ಷಕ ವೃಂದ ವಿದ್ಯಾರ್ಥಿಗಳು ಪುಷ್ಪ ಸಮರ್ಪಿಸಿದರು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಬೆನೆಡಿಕ್ಟ ಆಗ್ನೇಸ್ ಮಂಡೋನ್ಸಾ ಗಾಂಧೀ ಮತ್ತು ಶಾಸ್ತ್ರೀಯವರ ಜೀವನದ ಘಟನೆಗಳನ್ನು ತಿಳಿಸುತ್ತಾ...
1 302 303 304 305 306 739
Page 304 of 739