ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ 23ನೇ ವರ್ಷದ ನವದಂಪತಿ ಸಮಾವೇಶ -ಕಹಳೆ ನ್ಯೂಸ್
ಕಲ್ಲಡ್ಕ :ನೂತನವಾಗಿ ಗೃಹಸ್ಥಾಶ್ರಮವನ್ನು ಪ್ರವೇಶಿಸಿದ ದಂಪತಿಗಳಿಗೆ ಆಯೋಜಿಸಿದ ಕಾರ್ಯಕ್ರಮ ನವದಂಪತಿ ಸಮಾವೇಶವು ತಳಿರು ತೋರಣಗಳಿಂದ ಅಲಂಕೃತಗೊಂಡ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದ ವೇದವ್ಯಾಸ ಧ್ಯಾನ ಮಂದಿರದಲ್ಲಿ ನಡೆಯಿತು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತದ ಕುಟುಂಬ ಪ್ರಭೋದನ್ ಸಹಸಂಯೋಜಕರಾದ ಶ್ರೀ ಸುಬ್ರಾಯ ನಂದೋಡಿ ಮತ್ತು ಶ್ರೀಮತಿ ಜಯಲಕ್ಷ್ಮೀ ನಂದೋಡಿ ಹಿರಿಯ ದಂಪತಿಗಳಾಗಿ ಉಪಸ್ಥಿತರಿದ್ದು, ಪ್ರಭು ಶ್ರೀರಾಮನ ಮೂರ್ತಿಗೆ ಕ್ಷೀರಾಭಿಷೇಕ ಮಾಡಿ ಪುಷ್ಪಾರ್ಚನೆಗೈಯ್ಯುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ, ತಮ್ಮ ಜೀವನದ ಅನುಭವನಗಳನ್ನು...







