ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ : ಇಲಾಖಾ ಅಧಿಕಾರಿ ಜೊತೆ ಶಾಸಕ ಅಶೋಕ್ ರೈ ಮಾತುಕತೆ – ಕಹಳೆ ನ್ಯೂಸ್
ಪುತ್ತೂರು: ಪುತ್ತೂರಿನಲ್ಲಿ ಸುಸಜ್ಜಿತ ತಾಲೂಕು ಕ್ರೀಡಾಂಗಣ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರು ಶಾಸಕ ಅಶೋಕ್ ರೈ ಅವರು ಕ್ರೀಡಾಮತ್ತು ಯುವ ಸಬಲೀಕರಣ ಇಲಾಖೆಯ ಅಧಿಕಾರಿ ಜೊತೆ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಇಲಾಖೆ ಆಯುಕ್ತರಾದ ಚೇತನ್ ಅವರ ಜೊತೆ ಸುದೀರ್ಘ ಮತುಕತೆ ನಡೆಸಿದ ಶಾಸಕರು ನಪುತ್ತೂರು ಬೆಳೆಯುತ್ತಿರುವ ಪಟ್ಟಣವಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲಾ ಕೆಂದ್ರವಾಗಿ ರೂಪುಗೊಳ್ಳುವ ಸಾಧ್ಯತೆ ಇರುವ ಕಾರಣ ಪುತ್ತೂರಿನ ಕ್ರೀಡಾ ಚಟುವಟಿಕೆಗೆ ಸೂಕ್ತ ಕ್ರೀಡಾಂಗಣದ ಅಗತ್ಯತೆ ಇದೆ. ಈಗ...







