Thursday, June 11, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಸುದ್ದಿ

ತುಳು ಭಾಷೆಯನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನೆ ಎತ್ತಿದ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ- ಕಹಳೆ ನ್ಯೂಸ್

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವ ಬೇಡಿಕೆಯ ಪ್ರಸ್ತುತ ಹಂತ ಹಾಗೂ ತುಳು ಭಾಷೆಯನ್ನು 8 ನೇ ಪರಿಚ್ಛೇದಕ್ಕೆ ಸೇರಿಸುವಂತೆ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಭಾಗದ ಜನರು ಒತ್ತಾಯಿಸುತ್ತಿರುವುದು ಸರಕಾರದ ಗಮನದಲ್ಲಿ ಇದೆಯೇ ? ಎಂದು ಪ್ರಶ್ನೆ ಮಾಡಿದರು ಮತ್ತು ಸರ್ಕಾರ ಈ ಬಗೆಗೆ ಯಾವೆಲ್ಲಾ ಕ್ರಮ ಕೈಗೊಂಡಿದೆ ಎಂದು ಕೇಳಿದರು. ಪಹ್ವಾ (1996) ಮತ್ತು ಸೀತಾಕಾಂತ್...
ದಕ್ಷಿಣ ಕನ್ನಡಪುತ್ತೂರುಸಂತಾಪಸುದ್ದಿ

ಹೃದಯಾಘಾತದಿಂದ ಭಾಸ್ಕರ್ ಆಚಾರ್ಯ ನಿಧನ – ಕಹಳೆ ನ್ಯೂಸ್

ಪುತ್ತೂರು : ಸಂಟ್ಯಾರ್ ನಿವಾಸಿ ಭಾಸ್ಕರ್ ಆಚಾರ್ಯ (61ವ) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮೃತರು ಪತ್ನಿ, ಮಕ್ಕಳು, ಅಳಿಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.  ...
ಕೃಷಿದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರು: ಲಿಟ್ಲ್ ಫ್ಲವರ್ ಶಾಲೆಯಲ್ಲಿ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವ ಆಚರಣೆ – ಕಹಳೆ ನ್ಯೂಸ್

ಪುತ್ತೂರು: ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ, ಪುತ್ತೂರು ಇಲ್ಲಿನ ಭಾರತ್ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ದಳದ ವತಿಯಿಂದ ವನ ಮಹೋತ್ಸವವನ್ನು ಆಚರಿಸಲಾಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆ ವಹಿಸಿ ಮಾತನಾಡಿ ವನ ಮಹೋತ್ಸವದ ಅಗತ್ಯತೆ,ಪ್ರಕೃತಿಯ ಆಂತರ್ಯದ ಸತ್ವವನ್ನು ನಾವು ತಿಳಿದು ಕೊಳ್ಳುವ ಅನಿವಾರ್ಯತೆಯ ಕುರಿತು ಬೆಳಕು ಚೆಲ್ಲಿದರು. ವೇದಿಕೆಯಲ್ಲಿ ಸ್ಕೌಟ್ ಶಿಕ್ಷಕರಾದ ಬಾಲಕೃಷ್ಣ ರೈ ಪೊರ್ದಾಲ್,ಗೈಡ್ ಶಿಕ್ಷಕಿಯರಾದ...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜ್ರುಪಾದೆ, ಬಲ್ನಾಡು ಪುತ್ತೂರು, ಇದರ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಉಜ್ರುಪಾದೆ, ಬಲ್ನಾಡು ಪುತ್ತೂರು, ಇದರ ಬೆಳ್ಳಿ ಹಬ್ಬ 25ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಇಂದು ಬಲ್ನಾಡು ಶ್ರೀ ಭಟ್ಟಿ ವಿನಾಯಕ ದೇವಸ್ಥಾನದಲಿ ನಡೆಯಿತು. ಈ ಸಂದರ್ಭದಲ್ಲಿ ಬಾಲಸುಬ್ರಹ್ಮಣ್ಯ ಕೋಟ್ಯಾನ್ ಸದಸ್ಯರು ಬಲ್ನಾಡು ಗ್ರಾಮಪಂಚಾಯತ್, ಪ್ರಕಾಶ್ ಕೆಲ್ಲಾಡಿ, ಗಿರೀಶ್ ಕಂಟ್ರಾನಿಮೂಲೆ, ಹೇಮಚಂದ್ರ ಮುದಲಾಜೆ, ಪ್ರವೀಣ್ ಓಟೆ, ಅಶೋಕ್, ಚರಣ್ ಕುಲಾಲ್, ಪೂರ್ಣಪ್ರಕಾಶ್ ಕಾಂತಿಲ ಉಪಸ್ಥಿತರಿದ್ದರು. ಆ....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನೂತನ ವಿದ್ಯಾರ್ಥಿ ಸಂಘ ಮತ್ತು ವಾಣಿಜ್ಯ,ವಿಜ್ಞಾನ,ಸಾಹಿತ್ಯ ಸಂಘಗಳ ಉದ್ಘಾಟನಾ ಕಾರ್ಯಕ್ರಮ- ಕಹಳೆ ನ್ಯೂಸ್

ನಾಯಕತ್ವದ ಬೆಳವಣಿಗೆಗೆ ಹಾಗೂ ಆರೋಗ್ಯಯುತ ಪ್ರಜಾಪ್ರಭುತ್ವದ ನಿರ್ಮಾಣಕ್ಕೆ ವಿದ್ಯಾರ್ಥಿ ಸಂಘಗಳು ಮಾರ್ಗಸೂಚಿಗಳಾಗಲಿವೆ. ಭವಿಷ್ಯಕ್ಕೆ ಭದ್ರ ಬುನಾದಿ ಕಲ್ಪಿಸಬಲ್ಲ ಶಕ್ತಿ ಇರುವ ವಿದ್ಯಾರ್ಥಿ ಜೀವನದಲ್ಲಿ, ನಾಯಕತ್ವ ಗುಣಗಳನ್ನು ಬೆಳೆಸಿಕೊಂಡಲ್ಲಿ ಉತ್ತಮ ಪ್ರಜೆಗಳಾಗಿ ಬದುಕಲು ಸಾಧ್ಯ.ಜಗತ್ತಿನ ಕತ್ತಲೆಯನ್ನು ಹೋಗಲಾಡಿಸುವ ಅಗಾಧ ಶಕ್ತಿ ವಿದ್ಯಾರ್ಥಿಗಳಲ್ಲಿದೆ. ಉತ್ತಮ ನಾಯಕತ್ವ ಗುಣಮಟ್ಟವನ್ನು ಬೆಳೆಸಿಕೊಂಡಾಗ ಪ್ರಪಂಚವನ್ನೇ ಬದಲಿಸುವಂತಹ ಪ್ರಜೆಗಳಾಗಬಹುದು.”ಎಂದು ಸುಳ್ಯದ ಸರಕಾರಿ ಪ.ಪೂ. ಕಾಲೇಜಿನ ಉಪಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ ಪಿ. ಇವರು ಹೇಳಿದರು. ನರೇಂದ್ರ ಪ.ಪೂ.ಕಾಲೇಜಿನಲ್ಲಿ 2024-25 ನೇ...
ಕ್ರೀಡೆದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಸೇರಿ 9 ಪದಕ ಬೇಟೆಯಾಡಿದ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ವಿದ್ಯಾರ್ಥಿಗಳು : ಆಸ್ಟ್ರೇಲಿಯಾದಲ್ಲಿ ಆ.20ರಿಂದ ಆರಂಭವಾಗಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಲಿರುವ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪುತ್ತೂರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಪುತ್ತೂರಿನ ಬಾಲವನದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ವಿದ್ಯಾರ್ಥಿಗಳು ಚಿನ್ನ, ಬೆಳ್ಳಿ ಸೇರಿ 9 ಪದಕ ಬೇಟೆಯಾಡುವ ಜೊತೆಗೆ ಆ.20ರಿಂದ ಸೆ.8ರವರೆಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ಚಾಂಪಿಯನ್‍ಶಿಪ್‍ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಂಬಿಕಾ ಪದವಿ ಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಪ್ರಥಮ ಪಿಯು ವಾಣಿಜ್ಯ ಶಾಸ್ತ್ರದ ವಿದ್ಯಾರ್ಥಿನಿ,...
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ- ಕಹಳೆ ನ್ಯೂಸ್

ವಿದ್ಯಾಭಾರತಿ ಕರ್ನಾಟಕ ಆಯೋಜಿಸಿದ ಸರಸ್ವತಿ ವಿದ್ಯಾಲಯ ಸಿದ್ದಾಪುರದಲ್ಲಿ ನಡೆದ ರಾಜ್ಯಮಟ್ಟದ ತರುಣರ ವಿಭಾಗದ ಯೋಗಾಸನ ಸ್ಪರ್ಧೆಯಲ್ಲಿ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪ್ರಥಮ ವಾಣಿಜ್ಯ ವಿಭಾಗದ ಸಾತ್ವಿಕ್ ಮತ್ತು ಲಿಖಿತ್ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಆಂಧ್ರಪ್ರದೇಶದಲ್ಲಿ ನಡೆಯುವ ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಲು ಆಯ್ಕೆ ಆಗಿರುವ ಇವರ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪದಾಧಿಕಾರಿಗಳು, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ಸಿಬ್ಬಂದಿ ವರ್ಗ ಶುಭ ಹಾರೈಸಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಶಿಕ್ಷಣಸುದ್ದಿ

ಪುತ್ತೂರಿನ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ)ಕಾಲೇಜಿನಲ್ಲಿ ತುಳು ಸಂಘ, ಪ್ರಾಚೀನ ವಸ್ತುಗಳ ಪ್ರದರ್ಶನ ಕೇಂದ್ರ, ರೋವರ್ಸ್ ರೇಂಜರ್ಸ್ ಘಟಕ ಹಾಗೂ ಐಕ್ಯೂಎಸಿ ಘಟಕದ ಸಹಯೋಗದಲ್ಲಿ ಆಯೋಜಿಸಲಾದ ಆಟಿದ ನೆಂಪು ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ಆಟಿ ಎಂದರೆ ಅದು ಬೇಸಾಯದ ತಿಂಗಳು. ಇಂದು ಗ್ರಾಮೀಣ ಭಾಗದಿಂದ ಅಂತರಾಷ್ಟೀಯ ಮಟ್ಟದವರೆಗೂ ಆಟಿ ತಿಂಗಳ ಆಚರಣೆಗಳನ್ನು ಆಚರಿಸುತ್ತ ಬರುತ್ತಿದ್ದಾರೆ. ತುಳುನಾಡಿನಲ್ಲಿ ತುಳುವರು ಆಟಿ ತಿಂಗಳಿನ ಸಂದರ್ಭದಲ್ಲಿ ಯಾವುದೇ ಶುಭಕಾರ್ಯಕ್ರಮಗಳನ್ನು ಆಚರಿಸುವುದಿಲ್ಲ. ಆಟಿ ಕೆಲೆಂಜ ಮನೆಮನೆಗೆ ಬರುತ್ತಾನೆ. ಈ ಮೂಲಕ ಊರಿಗೆ ಬಂದ ಮಾರಿ ಕಳೆಯುತ್ತಾನೆ ಎಂಬುವುದು ಜನರ ನಂಬಿಕೆ ಎಂದು ವಕೀಲ ಹಾಗೂ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಕುಂಬ್ರ ದುರ್ಗಾಪ್ರಸಾದ್ ರೈ ಹೇಳಿದರು. ಇವರು...
1 346 347 348 349 350 739
Page 348 of 739