ಉಳ್ಳಾಲ : ಭಾರಿ ಮಳೆಗೆ ಮನೆ ಮೇಲೆ ಕಂಪೌಂಡ್ ಕುಸಿದು ಒಂದೇ ಕುಟುಂಬದ ನಾಲ್ವರು ಮೃತ್ಯು : ಮಡಿದವರ ಆತ್ಮಕ್ಕೆ ಸದ್ದತಿ ಕೋರಿದ ದ.ಕ.ಸಂಸದ ಕ್ಯಾ. ಬ್ರಿಜೇಶ್ ಚೌಟ – ಕಹಳೆ ನ್ಯೂಸ್
ಉಳ್ಳಾಲ : ಕುತ್ತಾರಿನಲ್ಲಿ ಇಂದು ಮುಂಜಾನೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಅತ್ಯಂತ ದುರದೃಷ್ಟಕರ. ಈ ಘಟನೆಯಲ್ಲಿ ಮಡಿದವರ ಆತ್ಮಕ್ಕೆ ಸದ್ದತಿಯನ್ನು ಕೋರುತ್ತೇನೆ. ನಾನು ಲೋಕಸಭಾ ಅಧಿವೇಶನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿರುವ ಕಾರಣ ಕುತ್ತಾರಿನ ಘಟನೆಯ ಕುರಿತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ತುರ್ತು ಸ್ಪಂದಿಸುವಂತೆ ತಿಳಿಸಿದ್ದು, ದೆಹಲಿಯಿಂದ ಆಗಮಿಸಿದ ತಕ್ಷಣ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದೇನೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಜಿಲ್ಲೆಯ ಜನರು ವಿಶೇಷವಾಗಿ...







