Sunday, June 14, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಪೆರ್ಲ ಶ್ರೀ ದುರ್ಗಾಪರಮೇಶ್ವರಿ ಉಲ್ಲಾಳ್ತಿ ದೇವಸ್ಥಾನದ ಸಭಾಭವನದಲ್ಲಿ ನಡೆಯುತ್ತಿರುವ 1801ನೇ ಮಧ್ಯವರ್ಜನ ಶಿಬಿರದ ಕುಟುಂಬ ದಿನ ಕಾರ್ಯಕ್ರಮ–ಕಹಳೆ ನ್ಯೂಸ್

ನಮ್ಮ ನಿರ್ಧಾರ ನಮ್ಮ ಕೈಯಲ್ಲಿದೆ,ಭವಿಷ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ ಆದರೆ ಹವ್ಯಾಸಗಳನ್ನು ಬದಲಾಯಿಸಬಹುದು, ಹವ್ಯಾಸಗಳು ನಮ್ಮ ಭವಿಷ್ಯವನ್ನೇ ಬದಲಾಯಿಸಬಲ್ಲದು. ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್ (ರಿ )ಧರ್ಮಸ್ಥಳ,ಉಡುಪಿ ಪ್ರಾದೇಶಿಕ ವಿಭಾಗದ,ಮಂಜೇಶ್ವರ ತಾಲೂಕಿನ,ಪೆರ್ಲ ವಲಯದ, ಕಾಸರಗೋಡು ಪೆರ್ಲ ಶ್ರೀ ದುರ್ಗಾಪರಮೇಶ್ವರಿ ಉಲ್ಲಾಳ್ತಿ ದೇವಸ್ಥಾನದ ಸಭಾಭವನದಲ್ಲಿ ನಡೆಯುತ್ತಿರುವ 1801 ನೇ ಮಧ್ಯವರ್ಜನ ಶಿಬಿರದ ಕುಟುಂಬ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಬಂಟ್ವಾಳ ತಾಲೂಕಿನ ಕಲ್ಲಡ್ಕ ಮಾದರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ- ಕಹಳೆ ನ್ಯೂಸ್

ಕಲ್ಲಡ್ಕ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಲಡ್ಕ ಇಲ್ಲಿನ ವಿದ್ಯಾರ್ಥಿಗಳಾದ ರೋಹಿತ್ ಎನ್ "ಚೆಸ್ "ಪಂದ್ಯಾಟದಲ್ಲಿ ಹಾಗೂ ಚರಣ್ ಎನ್ "ಉದ್ದ ಜಿಗಿತ' ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಎಚ್ ಸಿ ಎಲ್ ಸಂಸ್ಥೆ ವತಿಯಿಂದ ದಿನಾಂಕ 21-06-2024 ರಂದು ಆಂಧ್ರಪ್ರದೇಶದ ವಿಜಯ್ ವಾಡದಲ್ಲಿ ನಡೆಯುವ ರಾಷ್ಟ್ರ ಮಟ್ಟ ದ ಕ್ರೀಡಾಕೂಟ ದಲ್ಲಿ ಭಾಗವಹಿಸುತ್ತಿದ್ದಾರೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು : ಜಿಡೆಕಲ್ಲು ಕಾಲೇಜು ಬಳಿ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಫೋಟ : ಬೆಂಕಿ ನಂದಿಸಿದ ಕಾಲೇಜಿನ ವಿದ್ಯಾರ್ಥಿಗಳು – ಕಹಳೆ ನ್ಯೂಸ್

ಪುತ್ತೂರು: ಜಿಡೆಕಲ್ಲು ಕಾಲೇಜು ಬಳಿ ಇರುವ ಮನೆಯೊಂದರಲ್ಲಿ ಇಂದು ಬೆಳಗ್ಗೆ ರೆಫ್ರಿಜರೇಟರ್ ಸ್ಫೋಟಗೊಂಡ ಪರಿಣಾಮ ಇಡೀ ಮನೆಗೆ ಬೆಂಕಿ ಹಬ್ಬಿದ ಘಟನೆ ನಡೆದಿದೆ. ತಕ್ಷಣವೇ ಅದೇ ಪರಿಸರದಲ್ಲಿದ್ದ ಜಿಡೆಕಲ್ಲು ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳಾದ ಎಡ್ವರ್ಡ್, ವಿಖ್ಯಾತ್ ಮತ್ತು ಪ್ರೀತೇಶ್ ಸೇರಿ ಸ್ಥಳೀಯರಾದ ಅಶೋಕ್ ರವರ ಸಹಕಾರದೊಂದಿಗೆ ಮನೆಯೊಳಗೆ ನುಗ್ಗಿ ನೀರು ಎರಚುವ ಮೂಲಕ ಬೆಂಕಿ ನಂದಿಸುವ ಪ್ರಯತ್ನ ಮಾಡಿದ್ದಾರೆ. ನಂತರ ಕೆಲವೇ ಹೊತ್ತಿನಲ್ಲಿ ಅಗ್ನಿಶಾಮಕದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿಯನ್ನು ಸಂಪೂರ್ಣವಾಗಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸಂಕಷ್ಟದಲ್ಲಿರುವ ಬಂಟ್ವಾಳ ಕುರಿಯಾಳದ ಬಡ ಕುಟುಂಬಕ್ಕೆ ನೆರವಾದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ಟಾಳ ಪ್ರಖಂಡ – ಕಹಳೆ ನ್ಯೂಸ್

ಬಂಟ್ವಾಳ : ಕುರಿಯಾಳದ ತೀರಾ ಅಸಹಾಯಕ ಮತ್ತು ಬಡತನದಲ್ಲಿದ್ದ ಕುಟುಂಬಕ್ಕೆ ವಿಶ್ವಹಿಂದು ಪರಿಷತ್ ಬಜರಂಗದಳ ಬಂಟ್ಟಾಳ ಪ್ರಖಂಡದ ವತಿಯಿಂದ ಒಂದು ದಿನದ ಧರ್ಮ ರಕ್ಷಣೆ ಮತ್ತು ಸೇವಾ ಕಾರ್ಯ ನಡೆಯಿತು. ಬಂಟ್ವಾಳ ತಾಲೂಕಿನ ಕುರಿಯಾಳ ನಿವಾಸಿ ಪದ್ಮನಾಭ ಪೂಜಾರಿಯವರ ಕುಟುಂಬವೊAದು ತೀರಾ ಸಂಕಷ್ಟದಲ್ಲಿದ್ದು ಮನೆ ಮತ್ತು ಮನೆಯ ಪರಿಸರ ಕೆಟ್ಟು ಹೋಗಿತ್ತು. ಇದನ್ನು ಮನಗಂಡ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬಂಟ್ಟಾಳ ಪ್ರಖಂಡದ ಕಾರ್ಯಕರ್ತರು ಜೂ.16ರಂದು ಪದ್ಮನಾಭ ಪೂಜಾರಿಯವರ ಮನೆಯನ್ನು...
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ ಆಯ್ಕೆಯಾದ ಅಗ್ನಿವೀರ ಭವಿಶ್ ತಾರಿಗುಡ್ಡೆಯವರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಕೇಂದ್ರ ಸರ್ಕಾರ ಅಗ್ನಿಪಥ್ ಯೋಜನೆಯ ಮೂಲಕ ಯುವಕರಿಗೆ ಸೇನೆಯಲ್ಲಿ ಸೇವೆ ನೀಡುವ ಅವಕಾಶವನ್ನು ಕಲ್ಪಿಸಿದೆ. ದೇಶ ಭಕ್ತಿ ಅಂತರಾಳದಲ್ಲಿ ಇದ್ದ ಕಾರಣದಿಂದ ಅಗ್ನಿವೀರನಾಗಿ ಆಯ್ಕೆಯಾಗಲು ಸಾಧ್ಯವಾಗಿದೆ. ಎಲ್ಲರಿಗೂ ಮಾದರಿಯಾಗಿರುವ ಯುವಕ ಬೇರೆ ಯುವಕರನ್ನು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ಸಾಮಥ್ಯವನ್ನು ಹೊಂದಿದ್ದಾನೆ ಎಂದು ಮುಳಿಯ ಸಂಸ್ಥೆಯ ನಿರ್ದೇಶಕಿ ಅಶ್ವಿನಿ ಕೃಷ್ಣ ಮುಳಿಯ ಹೇಳಿದರು. ಪುತ್ತೂರು ಮುಳಿಯ ಜ್ಯುವೆಲ್ಸ್ ನ ಶಾಖೆಯಲ್ಲಿ ಮುಳಿಯ ಜ್ಯುವೆಲ್ಸ್ ನ ವತಿಯಿಂದ ಭಾರತೀಯ ಸೇನೆಗೆ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಳಿಕೆ ಗ್ರಾಮದ ಮೂವಾಜೆಯ ಶ್ರೀ ಧೂಮಾವತಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯದ “ವಿಜ್ಞಾಪನ ಪತ್ರದ ಬಿಡುಗಡೆ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಮೂವಾಜೆಯ ಶ್ರೀ ಧೂಮಾವತಿ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯದ ಬಗ್ಗೆ "ವಿಜ್ಞಾಪನ ಪತ್ರದ ಬಿಡುಗಡೆ" ಕಾರ್ಯಕ್ರಮ ಕಾಂತಿಲ ಸುಬ್ಬಣ್ಣ ಭಟ್ ಅಧ್ಯಕ್ಷತೆಯಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಉದ್ಯಮಿಗಳು ಪತ್ರಕರ್ತರು ಮೈಸೂರಿನ ರಾಕೇಶ್, ಅಳಿಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಪದ್ಮನಾಭ ಪೂಜಾರಿ , ಕಾನಮನೆತನದ ಹಿರಿಯರಾದ ಶಾರದಾ ಭಟ್, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಅಳಿಕೆ ವಲಯ ಅಧ್ಯಕ್ಷರಾದ ರವೀಶ್ ಕೆ, ಕಾನ ಕೃಷ್ಣ ಭಟ್,ಕಾನ ಈಶ್ವರ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಮೂಡುಬಿದಿರೆ : ಕಂಬಳ ಅನುದಾನ ಬಿಡುಗಡೆ ವಿಳಂಬ ಆಗ್ರಹಿಸಿ ಜೂ.19ಕ್ಕೆ ಸಿಎಂ, ಸಚಿವರ ಭೇಟಿ, ಮಾತುಕತೆ : ಜಿಲ್ಲಾ ಕಂಬಳ ಸಮಿತಿ ಸಮಾಲೋಚನಾ ಸಭೆಯಲ್ಲಿ ಅಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿ ಬೆಳಪು – ಕಹಳೆ ನ್ಯೂಸ್

ಮೂಡುಬಿದಿರೆ: ಅವಿಭಜಿತ ಜಿಲ್ಲೆಯಲ್ಲಿ ನಡೆಯುವ ಪ್ರತಿ ಕಂಬಳಕ್ಕೆ ಸರಕಾರವು ತಲಾ 5ಲಕ್ಷ ರೂ. ಅನುದಾನವನ್ನು ಹಿಂದೆ ನೀಡುತ್ತಿತ್ತು ಆದರೆ ಪ್ರಸಕ್ತ ವರ್ಷದಲ್ಲಿ ಬಿಡುಗಡೆಯಾಗಿಲ್ಲ. ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಜೂ.19ರಂದು ಜಿಲ್ಲಾ ಕಂಬಳ ಸಮಿತಿಯಿಂದ ಮುಖ್ಯಮಂತ್ರಿಗಳು ಹಾಗೂ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡುವ ಕುರಿತು ಸಮಾಜ ಮಂದಿರದಲ್ಲಿ ನಡೆದ ಜಿಲ್ಲಾ ಕಂಬಳ ಸಮಿತಿಯಿಂದ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ಸರ್ಕಾರದ ಅನುದಾನ ಬಿಡುಗಡೆ ಕುರಿತು ಸಮಿತಿಯ ಪದಾಧಿಕಾರಿಗಳು, ಕಂಬಳಗಳ ವ್ಯವಸ್ಥಾಪಕರ ಜೊತೆ...
ದಕ್ಷಿಣ ಕನ್ನಡಮೂಡಬಿದಿರೆಸುದ್ದಿ

ಪಾಣರ ಅಜಿಲ ಯಾನೆ ನಲಿಕೆ ಯವರ ಸಮಾಜ ಸೇವಾ ಸಂಘದ 3ನೇ ವಾರ್ಷಿಕೋತ್ಸವ :  ಪುಸ್ತಕ ವಿತರಣೆ, ಸಮಾಜ ಸೇವಕಗೆ ಸನ್ಮಾನ– ಕಹಳೆ ನ್ಯೂಸ್

ಮೂಡುಬಿದಿರೆ ತಾಲೂಕು ಪಾಣರ ಅಜಿಲ ಯಾನೆ ನಲಿಕೆ ಯವರ ಸಮಾಜ ಸೇವಾ ಸಂಘದ 3ನೇ ವಾರ್ಷಿಕೋತ್ಸವ-ಪುಸ್ತಕ ವಿತರಣೆ-ಸಮ್ಮಾನ ಕಾರ್ಯಕ್ರಮವು ಸಮಾಜ ಮಂದಿರದಲ್ಲಿ ನಡೆಯಿತು. ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಶ್ರೀಪತಿ ಭಟ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕು ಇದೆ. ಶಿಕ್ಷಣದಿಂದ ಸಮಾಜದ ಬೆಳವಣಿಗೆ ಸಾಧ್ಯ ಆದ್ದರಿಂದ ಸಮಾಜದ ಎಲ್ಲಾ ಮಕ್ಕಳು ಶಿಕ್ಷಣವನ್ನು ಪಡೆಯುವಂತ್ತಾಗಬೇಕು ಎಂದ ಅವರು ಸಂಘದ ಎಲ್ಲ ಚಟುವಟಿಕೆಗಳಿಗೆ ತುಂಬು ಪ್ರೋತ್ಸಾಹ ನೀಡುವುದಾಗಿ...
1 385 386 387 388 389 740
Page 387 of 740