Saturday, June 13, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಸರಕಾರಿ ಕಚೇರಿಯೊಳಗೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನ-ಕಹಳೆ ನ್ಯೂಸ್

ಕೌಟುಂಬಿಕ ಕಲಹಕ್ಕೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುತ್ತಿದ್ದ ವೇಳೆ ವ್ಯಕ್ತಿಯೊರ್ವ ಸರಕಾರಿ ಕಚೇರಿಯೊಳಗೆ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದ್ದು, ಆತನನ್ನು ಮಂಗಳೂರು ‌ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಅದಕ್ಕೂ ಮೊದಲು ಆತನನ್ನು ಸಿ.ಡಿ.ಪಿ.ಒ.ಇಲಾಖೆಯ ಸಿಬ್ಬಂದಿ ಗಳು ಸೇರಿ ಆತನನ್ನು ಬಂಟ್ವಾಳ ‌ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ‌ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿದೆ.ಮಹಾರಾಷ್ಟ್ರ ಮೂಲದ ಪ್ರಕಾಶ್ ಚೌಗಲೆ ಆತ್ಮಹತ್ಯೆಗೆ ಪ್ರಯತ್ನ ಮಾಡಿದ್ದಾನೆ ಎಂದು ಹೇಳಲಾಗಿದೆ....
ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರಿನ ಬನ್ನೂರು ಜೈನರ ಗುರಿಯಲ್ಲಿ ಪಂಜುರ್ಲಿ ಮತ್ತು ಗುಳಿಗ ದೈವದ ವರ್ಷಾವಧಿ ನೇಮೋತ್ಸವದಲ್ಲಿ ಅಚ್ಚರಿಯ ಘಟನೆ ; ದೈವದ ಫೋಟೋ ತೆಗೆಯುವ ವೇಳೆ ಫೋಟೋದಲ್ಲಿ ಕಂಡಿತು ದೈವದ ಪ್ರತಿಬಿಂಬ…!!! – ಕಹಳೆ ನ್ಯೂಸ್

ದೈವಗಳನ್ನು ನಂಬಿಕೊಂಡು ಬದುಕು ಕಟ್ಟಿಕೊಳ್ಳುವ ತುಳುನಾಡಿನ ಜನತೆಗೆ ಈಗ ಕೋಲ ನೇಮಗಳ ಹಬ್ಬ. ಹಾಗೆಯೇ ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಬನ್ನೂರು ಜೈನರ ಗುರಿಯಲ್ಲಿ ಪಂಜುರ್ಲಿ ಮತ್ತು ಗುಳಿಗನ ವರ್ಷಾವಧಿ ನೇಮ ನಡೆಯಿತು. ನಾಗ ಬನದ ಜೊತೆಗೆ ಗುಳಿಗನ ಮತ್ತು ಪಂಜುರ್ಲಿ ದೈವಗಳ ಕಾರಣಿಕ ಇರುವ ಈ ಪುಣ್ಯ ಮಣ್ಣಿನಲ್ಲಿ ಫೆಬ್ರವರಿ 19 ವರ್ಷಾವಧಿ ನೇಮಕ್ಕೆ ಖಾಯಂ ದಿನಾಂಕ. ಈ ಸಂದರ್ಭದಲ್ಲಿ ಅಚ್ಚರಿಯಾದರೂ ಸತ್ಯ ಘಟನೆಯೊಂದು ಸೆರೆಯಾಗಿದೆ. ಸಾಕ್ಷಾತ್ ದೈವ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡ್ರೋನ್‌ನಿಂದ ಎಲೆಚುಕ್ಕಿ ರೋಗಕ್ಕೆ ಔಷಧ : ಬೆಳ್ತಂಗಡಿಯಲ್ಲಿ ಯಶಸ್ವಿ – ಕಹಳೆ ನ್ಯೂಸ್

ಬೆಳ್ತಂಗಡಿ: ಅಡಿಕೆ ಎಲೆಚುಕ್ಕಿ ರೋಗ ಹತೋಟಿ ಸವಾಲಾಗಿರುವ ಮಧ್ಯೆ ಸುಳ್ಯ-ಕಾಸರಗೋಡು ಪ್ರದೇಶ ದಲ್ಲಿ ಡ್ರೋನ್‌ ಬಳಸಿ ಔಷಧ ಸಿಂಪಡಣೆಗೆ ತೊಡಗಿದ್ದು, ಬೆಳ್ತಂಗಡಿ ತಾಲೂಕಿನಲ್ಲೂ ಬೆಳೆಗಾರ ರೊಬ್ಬರು ಈ ಪ್ರಯೋಗ ನಡೆಸಿದ್ದಾರೆ. ಎಲೆ ಚುಕ್ಕಿ ರೋಗ ನಿಯಂತ್ರಣ ಸಲುವಾಗಿ ಸರಕಾರ ಶಿಲೀಂಧ್ರ ನಾಶಕ ಖರೀದಿಸಲು ಪ್ರತೀ ಹೆಕ್ಟೇರ್‌ಗೆ 4 ಸಾವಿರ ರೂ. ಗಳಂತೆ ಆರಂಭದಲ್ಲಿ 10 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ಮೊದಲನೇ ಸಿಂಪಡಣೆಗೆ 4 ಕೋ.ರೂ. ಅನುದಾನ ನೀಡಿ, ಹೆಕ್ಸ್‌ಕೊನೊಜಾಲ್‌ ಅಥವಾ...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಇಂದಿನಿಂದ 2 ದಿನ ” ಮಂಗಳೂರು ಲಿಟ್‌ ಫೆಸ್ಟ್‌ ” | ‘ದಿ ಐಡಿಯಾ ಆಫ್‌ ಭಾರತ್‌’ 25ರಷ್ಟು ಗೋಷ್ಠಿಗಳು ಎರಡು ಪ್ರತ್ಯೇಕ ಸಭಾಂಗಣ ; ರಾಷ್ಟ್ರೀಯ, ಅಂತಾರಾಷ್ಟ್ರೀಯ ಖ್ಯಾತಿಯ ಸಾಹಿತಿಗಳು, ಕಲಾವಿದರು, ಪತ್ರಕರ್ತರು ಭಾಗಿ – ಸಮಾಲೋಚನೆ – ಕಹಳೆ ನ್ಯೂಸ್

ಮಂಗಳೂರು: ಸಮಾಜದ ಹಲವು ಜ್ವಲಂತ ವಿಚಾರಗಳ ಬಗ್ಗೆ ಹೊಸ ಹೊಳಹು ಮೂಡಿಸುವ ಆಶಯದೊಂದಿಗೆ ಮಂಗಳೂರು ಲಿಟ್‌ಫೆಸ್ಟ್‌ನ 5ನೇ ಆವೃತ್ತಿ ಫೆ.18 ಮತ್ತು 19ರಂದು ನಡೆಯುತ್ತಿದೆ. ಭಾರತ್‌ ಫೌಂಡೇಶನ್‌ ಹಮ್ಮಿಕೊಂಡಿರುವ ಲಿಟ್‌ ಫೆಸ್ಟ್‌ ನಗರದ ಟಿಎಂಎ ಪೈ ಸಭಾಭವನದಲ್ಲಿ “ದಿ ಐಡಿಯಾ ಆಫ್‌ ಭಾರತ್‌’ ಎಂಬ ಪರಿಕಲ್ಪನೆಯಡಿ ನಡೆಯಲಿದ್ದು 50ಕ್ಕೂ ಅಧಿಕ ವಿಷಯ ಪರಿಣಿತರು ಸಮಾಲೋಚನೆ ನಡೆಸಲಿದ್ದಾರೆ. ಒಟ್ಟು 25ರಷ್ಟು ಗೋಷ್ಠಿಗಳು ಎರಡು ಪ್ರತ್ಯೇಕ ಸಭಾಂಗಣದಲ್ಲಿ ನಡೆಯಲಿವೆ. ಪ್ರತಿಬಾರಿಯೂ ರಾಷ್ಟ್ರೀಯ, ಅಂತಾರಾಷ್ಟ್ರೀಯ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿಸುಬ್ರಹ್ಮಣ್ಯ

ಮಹಾ ಶಿವರಾತ್ರಿ ಪಾದಯಾತ್ರೆ ಮೂಲಕ ಧರ್ಮಸ್ಥಳಕ್ಕೆ ಬರುವ ಪಾದಯಾತ್ರಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ತಂಡದಿಂದ ಸ್ವಚ್ಛತಾ ಪಾಠ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ಮಹಾ ಶಿವರಾತ್ರಿ ಹಬ್ಬ ಎಂದ ಕೂಡಲೇ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳು ಪಾದಯಾತ್ರೆ ಮೂಲಕ ಆಗಮಿಸಲು ಆರಂಭಿಸುತ್ತಾರೆ. ಹೀಗೆ ಬರುವ ಪಾದಯಾತ್ರಾರ್ಥಿಗಳಲ್ಲಿ ಸ್ವಚ್ಛತಾ ಜಾಗೃತಿ ಮೂಡಿಸಲು ಶೌರ್ಯ ವಿಪತ್ತು ನಿರ್ವಹಣ ತಂಡ ಕೆಲಸ ಮಾಡುತ್ತಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾ ಶಿವರಾತ್ರಿ ಅಂಗವಾಗಿ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಹಾಗೂ ಚಾರ್ಮಾಡಿ ಭಾಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾದಯಾತ್ರೆ ಕೈಗೊಳ್ಳುತ್ತಾರೆ. ಈ ರೀತಿ ಬರುವ ಪಾದಯಾತ್ರಿಗಳು ಅಲ್ಲಲ್ಲಿ ವಿಶ್ರಾಂತಿ ಪಡೆದು...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ನಾಳೆ ಶಿವರಾತ್ರಿ ಜಾಗರಣೆ : ಧರ್ಮಸ್ಥಳಕ್ಕೆ ಬರುತ್ತಿದ್ದಾರೆ 50ಸಾವಿರ ಪಾದಯಾತ್ರಿಗಳು – ಕಹಳೆ ನ್ಯೂಸ್

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ. 18ರಂದು ನಡೆಯುವ ಶಿವರಾತ್ರಿ ಆಚರಣೆಗೆ ನಾಡಿನ ವಿವಿಧೆಡೆಯಿಂದ 50 ಸಾವಿರಕ್ಕೂ ಅಧಿಕ ಪಾದಯಾತ್ರಿಗಳ ಸಹಿತ ಲಕ್ಷಕ್ಕೂ ಅಧಿಕ ಭಕ್ತರು ಸೇರುವುದರಿಂದ ಕ್ಷೇತ್ರದಲ್ಲಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ, ಶಿವಮೊಗ್ಗ, ಭದ್ರಾವತಿ, ಹಾಸನ, ದಾವಣಗೆರೆ ಸಹಿತ ನಾನಾ ಊರುಗಳಿಂದ ಪ್ರತೀ ವರ್ಷದಂತೆ ಅನೇಕ ಪಾದಯಾತ್ರಿಗಳ ಸಂಘಟನೆಗಳ ಮೂಲಕ ಭಕ್ತರು ಶಿವನಾಮ ಸ್ಮರಣೆಯೊಂದಿಗೆ ಪಾದಯಾತ್ರೆಯಲ್ಲಿ ಆಗಮಿಸುತ್ತಿದ್ದಾರೆ. 50 ಸಾವಿರ ಪಾದಯಾತ್ರಿಗಳು ಈಗಾಗಲೇ...
ಉಡುಪಿದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ – 18 ಕೋಟಿ ರೂ. ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ನಿರ್ಮಾಣ ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದರು. ಅಲ್ಲದೆ, ಬೈಲಹೊಂಗಲ ತಾಲ್ಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳನ್ನು 217 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಸೈನಿಕ್ ಸ್ಕೂಲ್ ಸೊಸೈಟಿ ಸಹಯೋಗದೊಂದಿಗೆ ಪ್ರಾರಂಭ...
ದಕ್ಷಿಣ ಕನ್ನಡಯಕ್ಷಗಾನ / ಕಲೆರಾಜ್ಯಸುದ್ದಿ

ಯಕ್ಷರಂಗದ ಮೇರು ಭಾಗವತರಾದ ಬಲಿಪ ನಾರಾಯಣ ಭಾಗವತರು ಇನ್ನಿಲ್ಲ – ಕಹಳೆ ನ್ಯೂಸ್

ಮಂಗಳೂರು : ತೆಂಕುತಿಟ್ಟು ಯಕ್ಷರಂಗದ ಭೀಷ್ಮ ರೆಂದೇ ಖ್ಯಾತರಾದ ಭಾಗವತರಾದ ಬಲಿಪ ನಾರಾಯಣ ಭಾಗವತರು ಇಂದು ಸಂಜೆ 6:30 ಗಂಟೆಗೆ ದೈವಾಧೀನರಾಗಿದ್ದಾರೆ. ಅಂತಿಮ ವಿಧಿ ವಿಧಾನಗಳು ಇಂದು ರಾತ್ರಿ 1.30 ಗಂಟೆಯ ಸುಮಾರಿಗೆ ಅವರ ಸ್ವಗ್ರಹದಲ್ಲಿ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ....
1 546 547 548 549 550 740
Page 548 of 740