Wednesday, June 10, 2026

ದಕ್ಷಿಣ ಕನ್ನಡ

ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಕೇಸರಿ ಭದ್ರಕೋಟೆಗೆ ಚಾಣಕ್ಯ ; ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆ..!ಪುತ್ತೂರಿನಲ್ಲಿ ಅಮಿತ್ ಶಾ ಚುನಾವಣಾ ರಣತಂತ್ರ –  ಕಹಳೆ ನ್ಯೂಸ್

ಪುತ್ತೂರು: ಚುನಾವಣೆ (Karnataka Election) ಸಮೀಪಿಸುತ್ತಿದ್ದಂತೆ ಕೇಸರಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಬಿಜೆಪಿ ಚಾಣಕ್ಯನ ಸಂಚಾರ ಆರಂಭಗೊಂಡಿದೆ. ಪುತ್ತೂರಿನ ಕ್ಯಾಂಪ್ಕೋ (Campco) ಸಂಸ್ಥೆಯ ಸುವರ್ಣ ಮಹೋತ್ಸವದ ಸಂಭ್ರಮದೊಂದಿಗೆ ಬಿಜೆಪಿಯ ರಣ ಕಹಳೆಯನ್ನೂ ಕೇಂದ್ರದ ಗೃಹ, ಸಹಕಾರಿ ಸಚಿವ ಅಮಿತ್ ಶಾ (Amit shah) ಮೊಳಗಿಸಲಿದ್ದಾರೆ. ಪಕ್ಷದ ವರಿಷ್ಠರು ಬರುವ ಹಿನ್ನೆಲೆಯಿಂದ ಬಿಜೆಪಿಯಲ್ಲಿ (BJP) ಚುನಾವಣಾ ಚಟುವಟಿಕೆ ಗರಿಗೆದರಿದೆ. ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಿನ್ನೆಲೆಯಲ್ಲಿ ನಡೆಯಲಿರುವ ಬೃಹತ್...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಪುತ್ತೂರು ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮೊಹಮ್ಮದ್ ಬಶೀರ್ ಅರೆಸ್ಟ್ – ಕಹಳೆ ನ್ಯೂಸ್

ಪುತ್ತೂರು, ಫೆ 06 ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ನರಿಂಗಾನ ನಿವಾಸಿ ಮೊಹಮ್ಮದ್ ಬಶೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 2009ರಲ್ಲಿ ಗಾಂಜಾ ಪ್ರಕರಣದಲ್ಲಿ ಬಶೀರ್ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಹೊರಗಿದ್ದು, ಕಳೆದ ಐದು ವರ್ಷಗಳಿಂದ ವಿಚಾರಣೆಗೆ ಒಳಗಾಗಲು ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಆರೋಪಿಗಳ ವಿರುದ್ಧ ವಾರೆಂಟ್ ಜಾರಿ ಮಾಡಲಾಗಿದ್ದು, ಇದೀಗ ಪುತ್ತೂರು ನಗರ ಪೊಲೀಸ್ ನಿರೀಕ್ಷಕರ ಮಾರ್ಗದರ್ಶನದಲ್ಲಿ ಮೊಹಮ್ಮದ್ ಬಶೀರ್ ನನ್ನು ಬಂಧಿಸಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳರಾಜ್ಯ

ರುದ್ರಗಿರಿಯ ರಣಕಹಳೆ | ಹಿಂದೂ ಜಾಗರಣ ವೇದಿಕೆ ಹೋರಾಟದ ಫಲಶ್ರುತಿ, ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತ 2 ಕಿ.ಮೀ. ಗಣಿಗಾರಿಕೆ ನಿಷೇಧ : ಜಿಲ್ಲಾಡಳಿತದಿಂದ ರಾಜ್ಯ ಸರಕಾರಕ್ಕೆ ಪ್ರಸ್ತಾವ – ಕಹಳೆ ನ್ಯೂಸ್

ಬಂಟ್ವಾಳ: ಇಲ್ಲಿನ ಶ್ರೀ ಕಾರಿಂಜೇಶ್ವರ ದೇವಸ್ಥಾನದ ಸುತ್ತಮುತ್ತಲ 2 ಕಿ.ಮೀ. ವ್ಯಾಪ್ತಿಯನ್ನು ಕ್ಷೇತ್ರದ ಪಾವಿತ್ರ್ಯ ಮತ್ತು ಸಂರಕ್ಷಣೆಯ ಜತೆಗೆ ಸ್ಥಳೀಯರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಗಣಿಗಾರಿಕಾ ಚಟುವಟಿಕೆ ನಿಷೇಧಿತ ಪ್ರದೇಶವೆಂದು ಘೋಷಿಸುವ ಕುರಿತು ದ.ಕ.ಜಿಲ್ಲಾಡಳಿತ ರಾಜ್ಯ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ. ಮುಖ್ಯಮಂತ್ರಿಗಳ ನಿರ್ದೇಶನದಂತೆ ಕ್ಷೇತ್ರದ ಸುತ್ತ ಗಣಿಗಾರಿಕೆ ನಿಷೇಧಿಸುವ ನಿಟ್ಟಿನಲ್ಲಿ ಪ್ರಸ್ತಾವ ಸಲ್ಲಿಸಲು ಮಂಗಳೂರು ಸಹಾಯಕ ಕಮಿಷನರ್‌ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರು ಕಳೆದ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿನ ತ್ಯಾಜ್ಯ ನಿರ್ವಹಣೆ ಸಮಸ್ಯೆ ಪರಿಹಾರಕ್ಕೆ ‘ಸ್ವಚ್ಛ ಮಂದಿರ ಅಭಿಯಾನ’ : ಫೆ.10ರಂದು ಉದ್ಘಾಟನೆ – ರೋಹಿಣಿ ಸಿಂಧೂರಿ- ಕಹಳೆ ನ್ಯೂಸ್

ಬೆಂಗಳೂರು: ಭಕ್ತಾದಿಗಳಿಗೆ ದೇವಾಲಯಗಳಲ್ಲಿ ನೈರ್ಮಲ್ಯದ ವಾತಾವರಣ ಮತ್ತು ಸ್ವಚ್ಚ ಪರಿಸರವನ್ನು ನೀಡುವ ಉದ್ದೇಶವನ್ನು ಹೊಂದಿರುವ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವಚ್ಛ ಮಂದಿರ ಅಭಿಯಾನ ಉದ್ಘಾಟನೆಗೆ ಸಿದ್ದವಾಗಿದೆ. ಫೆ. 10 ರಂದು ನಿಮಿಷಾಂಭ ದೇವಸ್ಥಾನದಿಂದ ಉದ್ಘಾಟನೆ ಮಾಡಲಾಗುವುದು ಎಂದು ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆಯನ್ನು ನೀಡಿರುವ...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿಯಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಮಲಿನ ನೀರು ಶುದ್ಧೀಕರಣ ಘಟಕ ; ಶೀಘ್ರ ಲೋಕಾರ್ಪಣೆ ಮಾಡಲಾಗುವುದು ಎಂದ ಶಾಸಕ ಹರೀಶ್‌ ಪೂಂಜ – ಕಹಳೆ ನ್ಯೂಸ್

ಬೆಳ್ತಂಗಡಿ: ಮಾನವನ ನೇರ ನಿರ್ಲಕ್ಷ್ಯ ಹಾಗೂ ದುರಾಸೆಯಿಂದ ಭವಿಷ್ಯದ ಪರಿಸರ ಅಕ್ಷರಶಃ ಮಾಲಿನ್ಯಕರವಾಗಲಿದೆ. ಇದನ್ನು ಇಂದೇ ಸರಿಪಡಿಸಿ ಸುಸ್ಥಿತಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ.ಪಂ. ಮುಂದಡಿಯಿಟ್ಟಿದ್ದು, ಪಟ್ಟಣ ವ್ಯಾಪ್ತಿಯ ಶೌಚಾಲಯದ ದ್ರವ ತ್ಯಾಜ್ಯವನ್ನು ಶುದ್ಧೀಕರಿಸಿ ಮರುಬಳಕೆಗೆ ಯೋಗ್ಯವಾಗಿಸುವ ಘಟಕ ಸ್ಥಾಪಿಸಿದೆ. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಕೆ.ಯು. ಎಸ್‌. ಮತ್ತು ಡಿ.ಬಿ.)ಯಿಂದ ಯೋಜನೆ ಅನುಷ್ಠಾನಗೊಳಿಸಿದ್ದು 6.7 ಕೋ.ರೂ. ಘಟಕ ವೆಚ್ಚ, 5 ವರ್ಷಗಳ ನಿರ್ವಹಣೆ, ಸಕ್ಕಿಂಗ್‌ಯಂತ್ರ ಸಹಿತ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಫೆ.11ರಂದು ಪುತ್ತೂರಿಗೆ ಕೇಂದ್ರ ಸಚಿವ ಅಮಿತ್‌ ಶಾ ಭೇಟಿ, ಸಹಕಾರಿ ಸಮಾವೇಶ ಯಶಸ್ಸಿಗೆ ಸಂಸದ ನಳಿನ್‌ ಸೂಚನೆ – ಈಶ್ವರಮಂಗಲ ಹನುಮಗಿರಿ ಭಾರತ ಮಾತಾ ಮಂದಿರ ಉದ್ಘಾಟನೆ ; ಎಂ.ಟಿ. ರಸ್ತೆಯಲ್ಲಿ ಕ್ಯಾಂಪ್ಕೋ ಅಗ್ರಿ ಮಾಲ್‌ಗೆ ಶಿಲಾನ್ಯಾಸ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್‌ ಕಾಲೇಜಿನ ಮೈದಾನದಲ್ಲಿ ಫೆ. 11ರಂದು ಹಮ್ಮಿಕೊಳ್ಳಲಾಗಿರುವ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವ ಹಾಗೂ ಸಹಕಾರ ಸಮಾವೇಶದಲ್ಲಿ ಕೇಂದ್ರ ಗೃಹ ಮತ್ತು ಸಹಕಾರಿ ಸಚಿವರಾದ ಅಮಿತ್‌ ಶಾ ಭಾಗವಹಿಸಲಿದ್ದಾರೆ. ಜಿಲ್ಲಾಡಳಿತ ತತ್‌ಕ್ಷಣದಿಂದಲೇ ಎಲ್ಲ ತಯಾರಿ, ಸಿದ್ಧತೆ ನಡೆಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ನಿರ್ದೇಶನ ನೀಡಿದ್ದಾರೆ. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಿದ್ಧತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು...
ಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಸುದ್ದಿ

ಕಾಸರಗೋಡು ಕನ್ನಡದ ಅಸ್ಮಿತೆಯ ಸಂಕೇತವಾಗಿರುವ ಎಡನೀರು ಮಠಕ್ಕೆ ರಾಜ್ಯ ಸರಕಾರದ ಪ್ರತಿಷ್ಠಿತ ಗಡಿನಾಡ ಚೇತನ ಪ್ರಶಸ್ತಿ ; ಬೆಂಗಳೂರಿನ ಗಾಂಧಿಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈ ಅವರ ಹೆಸರಲ್ಲಿ ಕೊಡಮಾಡುವ ಗಡಿನಾಡ ಚೇತನ ಪ್ರಶಸ್ತಿ ಈ ಬಾರಿ ಕಾಸರಗೋಡು ಎಡನೀರು ಮಠಕ್ಕೆ ಲಭಿಸಿದೆ. ಶ್ರೀ ಎಡನೀರು ಮಠವು ಧಾರ್ಮಿಕ ಪೀಠವಾದರೂ ಗಡಿನಾಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಕನ್ನಡಪರ ಹೋರಾಟಗಳಲ್ಲಿ ನಿರತವಾಗಿರುವ ಸಾಂಸ್ಕೃತಿಕ ಪೀಠವಾಗಿದೆ. ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರವು ಗುರುವಾರ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ 2022-23ನೇ ಸಾಲಿನ 'ಗಡಿನಾಡ ಚೇತನ' ಪ್ರಶಸ್ತಿ ವಿತರಿಸಿ...
ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಬಿ.ಸಿ.ರೋಡಿನ ಎಲೆಕ್ಟ್ರಾನಿಕ್ಸ್ ಮಳಿಗೆ ಬೆಂಕಿ ; ಲಕ್ಷಾಂತರ ರೂ.ನಷ್ಟ – ಕಹಳೆ ನ್ಯೂಸ್

ಬಂಟ್ವಾಳ: ಬಿ.ಸಿ.ರೋಡಿನ ಕೈಕುಂಜೆ ರಸ್ತೆಯಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಬೃಹತ್ ಮಳಿಗೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಲಕ್ಷಾಂತರ ಮೌಲ್ಯದ ಉತ್ಪನ್ನಗಳು ಸುಟ್ಟು ಭಸ್ಮವಾದ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ಬಿ.ಸಿ.ರೋಡಿನ ಪ್ರಿಯಾ ಎಲೆಕ್ಟ್ರಾನಿಕ್ಸ್ ನಲ್ಲಿ ಬೆಳಗ್ಗಿನ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಬಂಟ್ವಾಳ ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ನಿರ್ವಹಿಸಿದ್ದಾರೆ. ಎಲೆಕ್ಟ್ರಾನಿಕ್ಸ್ ಸೊತ್ತುಗಳ ಜತೆಗೆ ಎಲೆಕ್ಟ್ರಿಕ್ ಬೈಕ್ ಗಳು ಕೂಡ ಇದ್ದು, ಬ್ಯಾಟರಿ ಸ್ಪೋಟದಿಂದಲೂ ಬೆಂಕಿ ಹಿಡಿರುವ ಸಾಧ್ಯತೆ ಇದ್ದು,...
1 547 548 549 550 551 739
Page 549 of 739