ಉಪ್ಪಿನಂಗಡಿ ಪರಿಸರದಲ್ಲಿ ನಿಷ್ಪ್ರಯೋಜಕವಾದ ಅನೇಕ ಕಿಂಡಿ ಅಣೆಕಟ್ಟುಗಳು ; ಕೋಟ್ಯಂತರ ರೂ. ನೀರಿನಲ್ಲಿ ಹೋಮ..! – ಕಹಳೆ ನ್ಯೂಸ್
ಉಪ್ಪಿನಂಗಡಿ: ಕೋಟ್ಯಂತರ ರೂ. ವೆಚ್ಚದಲ್ಲಿ ಕೃಷಿ ಚಟುವಟಿಕೆ ಹಾಗೂ ಅಂತರ್ಜಲವನ್ನು ವೃದ್ಧಿಸುವ ಉದ್ದೇಶದಿಂದ ನಿರ್ಮಿಸಿರುವ ಕಿಂಡಿ ಅಣೆಕಟ್ಟುಗಳ ಪೈಕಿ ಹಲವು ನಿರ್ವಹಣೆಯಿಲ್ಲದೆ ಸೊರಗಿ ನಿಷ್ಪ್ರಯೋಜಕವಾಗುತ್ತಿವೆ. ಆ ಮೂಲಕ ಉಪ್ಪಿನಂಗಡಿ ಭಾಗ ಒಂದರಲ್ಲೇ ಅನೇಕ ಕಿಂಡಿ ಅಣೆಕಟ್ಟುಗಳಿಂದು ಮೂಲ ಉದ್ದೇಶವನ್ನೇ ಮರೆತಂತಿದ್ದು, ನೀರಿಲ್ಲದೆ ಬರಡಾಗಿ ನಿಂತಿದೆ. ಕೆಮ್ಮಾರ: ಇನ್ನೂ ಹಲಗೆ ಅಳವಡಿಸಿಲ್ಲ : ನೇತ್ರಾವತಿ ನದಿಯನ್ನು ಸೇರುವ ಸಣ್ಣ ಹೊಳೆಗೆ ಕೆಮ್ಮಾರದ ನೆಕ್ಕರಾಜೆ ಬಳಿ ಒಂದು ಕಿಂಡಿ ಅಣೆಕಟ್ಟನ್ನು ನಿರ್ಮಾಣ ಮಾಡಲಾಗಿದೆ. ಇಲ್ಲಿ...







