ಸೆಪ್ಟೆಂಬರ್ 2 ಪ್ರಧಾನಿ ಮೋದಿ ಆಗಮನ ಹಿನ್ನಲೆ ಸಾಗಿದೆ ಭರದ ಸಿದ್ಧತೆ ; ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ – ಕಹಳೆ ನ್ಯೂಸ್
ಮಂಗಳೂರು, ಅ 25 : ಪ್ರಧಾನಿ ಮೋದಿ ಅವರು ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡಲಿದ್ದು ಅವರನ್ನು ಬರಮಾಡಿಕೊಳ್ಳಲು ಜಿಲ್ಲಾಡಳಿತದಿಂದ ಭರದ ಸಿದ್ಧತೆ ಆರಂಭಗೊಂಡಿದೆ. ಪ್ರಧಾನಿ ಮೋದಿ ಅವರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ಸರಣಿ ಸಭೆ ನಡೆಸಲಾಗುತ್ತಿದ್ದು, ಈಗಾಗಲೇ ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ ಪೂರ್ವಸಿದ್ಧತಾ ಸಭೆ ಸೋಮವಾರ ನಡೆಸಲಾಗಿದೆ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ಭದ್ರತೆ ಸೇರಿದಂತೆ ಪೂರಕ ಸಿದ್ಧತೆಗಳ ಸಭೆ ನಡೆಸತೊಡಗಿದ್ದಾರೆ. ಸಮಾವೇಶ ನಡೆಯಲಿರುವ ಗೋಲ್ಡ್ಪಿಂಚ್ ಸಿಟಿ,...







