Thursday, May 14, 2026

ದಕ್ಷಿಣ ಕನ್ನಡ

ಉಡುಪಿಕಡಬದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯಸುಳ್ಯ

ಆ. 5,6 ರಂದು ಕರಾವಳಿಯಲ್ಲಿ ‘ಆರೆಂಜ್‌ ಅಲರ್ಟ್‌’ ; ಭಾರೀ ಗಾಳಿಮಳೆ | ಕಡಬ ಹಾಗೂ ಸುಳ್ಯ ತತ್ತರ – ಕಹಳೆ ನ್ಯೂಸ್

ಮಂಗಳೂರು/ಉಡುಪಿ: ಮುಂಗಾರು ಬಿರುಸು ಪಡೆದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಆ. 4ರಿಂದ 6ರ ವರೆಗೆ ಕರಾವಳಿ ಭಾಗದಲ್ಲಿ “ಆರೆಂಜ್‌ ಅಲರ್ಟ್‌’ ಘೋಷಿಸಲಾಗಿದೆ. ಈ ವೇಳೆ ಭಾರೀ ಮಳೆ, ಗಾಳಿ ಮತ್ತು ಸಮುದ್ರದ ಅಬ್ಬರ ಹೆಚ್ಚಿರುವ ನಿರೀಕ್ಷೆ ಇದೆ. ದ.ಕ. ಜಿಲ್ಲೆಯಾದ್ಯಂತ ಗುರುವಾರ ದಿನವಿಡೀ ಉತ್ತಮ ಮಳೆಯಾಗಿದೆ. ಮಂಗಳೂರು ನಗರ ದಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ವೇಳೆ ಮಳೆಯ ಬಿರುಸು ಹೆಚ್ಚಿತ್ತು. ಉಡುಪಿಯಲ್ಲಿ ಹಗಲು...
ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಮೇಘಸ್ಫೋಟಕ್ಕೆ ಸುಳ್ಯದ 4 ಗ್ರಾಮಗಳು ತತ್ತರ ; ರಾತ್ರಿ ಇದ್ದ ಅಂಗಡಿ ಬೆಳಗ್ಗೆ ಮಾಯ! – ಕಹಳೆ ನ್ಯೂಸ್

ಸುಳ್ಯ : ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರಿದ್ದು, ಅದರಲ್ಲಿಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೆಂದೂ ನೋಡಿರದ ಘಟನೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಜನ ಈ ಬಾರಿಯ ಮಳೆಗೆ ತತ್ತರಿಸಿ ಹೋಗಿದ್ದಾರೆ. ಹೌದು. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿರುವ 4 ಗ್ರಾಮಗಳ ಜನ ತೀವ್ರ ಆತಂಕಕ್ಕೀಡಾಗಿದ್ದಾರೆ. ಹರಿಹರ, ಕೊಲ್ಲಮೊಗ್ರು, ಬಾಳುಗೋಡು ಹಾಗೂ ಕಲ್ಮಕಾರು ಗ್ರಾಮದಲ್ಲಿ ಮೇಘಸ್ಫೋಟ ಉಂಟಾಗಿದ್ದು, ಸಾಕಷ್ಟು ಹಾನಿ ಸಂಭವಿಸಿದೆ.  ಹರಿಹರದ ಭೀಕರ ಪ್ರವಾಹಕ್ಕೆ ಹೊಳೆ ಪಕ್ಕದಲ್ಲಿದ್ದ ಅಂಗಡಿ ಹಾಗೂ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಹೇರಲಾಗಿದ್ದ ನಿರ್ಬಂಧ ; 45 ನಿಮಿಷದಲ್ಲಿ ಆದೇಶ ವಾಪಾಸ್ ಪಡೆದ ಮಂಗಳೂರು ನಗರ ಆಯುಕ್ತ ಎನ್. ಶಶಿಕುಮಾರ್ – ಕಹಳೆ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಹೇರಲಾಗಿದ್ದ ನಿರ್ಬಂಧವನ್ನು ಮತ್ತೆ ಹಿಂಪಡೆಯಲಾಗಿದೆ.ಕೆಲವು ಗಂಟೆಗಳ ಹಿಂದೆ ಹಿರಿಯ ನಾಗರಿಕರು, ಮಕ್ಕಳು ಮತ್ತು ಮಹಿಳೆಯರನ್ನು ಹೊರತು ಪಡಿಸಿ ದ್ವಿಚಕ್ರದಲ್ಲಿ ಹಿಂಬದಿ ಸವಾರರಿಗೆ ನಿರ್ಬಂಧ ಹೇರುವ ಬಗ್ಗೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಸೂಚಿಸಿದ್ದರು. ಬಳಿಕ ಮಂಗಳೂರು ನಗರ ಆಯುಕ್ತ ಎನ್. ಶಶಿಕುಮಾರ್ ಆದೇಶವನ್ನು ಹೊರಡಿಸಿದ್ದರು.ಇದೀಗ 45 ನಿಮಿಷದಲ್ಲಿ ಆದೇಶವನ್ನು ವಾಪಾಸ್ ಪಡೆಯಲಾಗಿದೆ....
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಉಳ್ಳಾಲ ತಲವಾರು ದಾಳಿ ” ಯಾರೂ ತನ್ನ ಮೇಲೆ ತಲವಾರು ದಾಳಿ ಮಾಡಿಲ್ಲ, ಬೆನ್ನಟ್ಟಿ ಬಂದಿಲ್ಲ” – ವದಂತಿ ಹಬ್ಬಿಸಿದ ವ್ಯಕ್ತಿ ವಿರುದ್ಧ ಕ್ರಮ : ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ – ಕಹಳೆ ನ್ಯೂಸ್

ಮಂಗಳೂರು, ಆ.3: ವ್ಯಕ್ತಿಯೋರ್ವ ತನ್ನನ್ನು ಯಾರೋ ಬೆನ್ನಟ್ಟಿ ತಲವಾರು ದಾಳಿ ನಡೆಸಲು ಯತ್ನಿಸಿದ್ದಾರೆ ಎಂದು ವದಂತಿ ಹಬ್ಬಿಸಿದ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ವದಂತಿ ಹಬ್ಬಿಸಿದ ವ್ಯಕ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಉಚ್ಚಿಲ ನಿವಾಸಿ ಕಿಶೋರ್ ವದಂತಿ ಹಬ್ಬಿಸಿದ ವ್ಯಕ್ತಿಯಾಗಿದ್ದಾನೆ. ಈತ ಇಂದು ಬೆಳಗ್ಗೆ ಕೆ.ಸಿ.ನಗರ ಮುಳ್ಳುಗುಡ್ಡೆ ಎಂಬಲ್ಲಿ ತನ್ನನ್ನು ಬೆನ್ನಟ್ಟಿ ತಲವಾರು ದಾಳಿ...
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೆರಡು ದಿನ ರಾತ್ರಿ ನಿರ್ಬಂಧ ಮುಂದುವರಿಕೆ ; ಆಗಸ್ಟ್‌ 2 ರಿಂದ ಆಗಸ್ಟ್ 4ರ ವರೆಗೆ ರಾತ್ರಿ ನಿರ್ಬಂಧ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. – ಕಹಳೆ ನ್ಯೂಸ್

ಮಂಗಳೂರು, ಆ 02 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ನಿರ್ಬಂಧಗಳನ್ನು ಪೊಲೀಸ್ ಇಲಾಖೆಯ ಕೋರಿಕೆಯ ಮೇಲೆ ಮತ್ತೆ ಎರಡು ದಿನಗಳ ಕಾಲ ವಿಸ್ತರಿಸಿ ಜಿಲ್ಲಾಡಳಿತ ಮಂಗಳವಾರ ಆದೇಶ ಹೊರಡಿಸಿದೆ. ಬೆಳ್ಳಾರೆ ಮತ್ತು ‌ಸುರತ್ಕಲ್‌ನಲ್ಲಿ ನಡೆದ ಕೊಲೆ ಕೃತ್ಯದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ತುರ್ತು ಸೇವೆಯನ್ನು ಹೊರತುಪಡಿಸಿ ಇತರ ಚಟುವಟಿಕೆಗಳಿಗೆ‌ ಆಗಸ್ಟ್‌ 2ರ ಸಂಜೆ 6 ಗಂಟೆಯಿಂದ ಆಗಸ್ಟ್ 4ರ ಮುಂಜಾನೆ 6 ರವರೆಗೆ ನಿರ್ಬಂಧ ಮುಂದುವರಿಸಲಾಗಿದೆ. ಈ ಸಮಯದಲ್ಲಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಹಮ್ಮದ್ ಫಾಝಿಲ್ ಹತ್ಯೆಗೂ ಮುನ್ನ ಕಾರಿಂಜೇಶ್ವರ ದೇವಸ್ಥಾನಕ್ಕೆ ತೆರಳಿದ್ದ ಸುಹಾಸ್ ಶೆಟ್ಟಿ ; ಫಾಝಿಲ್ ಟಾರ್ಗೆಟ್ ಆಗಿದ್ದೇಕೆ..? ಆರೋಪಿಗಳು ಒಬ್ಬರಿಗೊಬ್ಬರು ಪರಿಚಯಸ್ಥರಲ್ಲ..! – ಕಹಳೆ ನ್ಯೂಸ್

ಮಂಗಳೂರು,ಆ 02: ಸುರತ್ಕಲ್‌‌ನಲ್ಲಿ ಗುರುವಾರ ರಾತ್ರಿ ನಡೆದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್ ಫಾಝಿಲ್ ಹತ್ಯೆ ಹಿಂದೆ ಇರುವ ಆರೋಪಿಗಳಾದ ಸುಹಾಸ್ ಶೆಟ್ಟಿ ಹಾಗೂ ಆರು ಮಂದಿಯನ್ನು ಬಂಧಿಸಿದೆ. ಈ ಬಗ್ಗೆ ಪೊಲೀಸ್ ಕಮೀಷನರ್ ಮಾಹಿತಿ ನೀಡಿದ್ದು, ಈ ಹತ್ಯೆ ಪ್ರಕರಣ ಆರೋಪಿಗಳ ಪತ್ತೆಗೆ ಪೊಲೀಸರ 7-8 ತಂಡ ಶ್ರಮಿಸಿದ್ದು, ಇಂದು ಬೆಳಗ್ಗೆ 5.30ಕ್ಕೆ ಉದ್ಯಾವರದಲ್ಲಿ ಸುಹಾಸ್ (29), ಮೋಹನ್ (26) ಗಿರಿಧರ್ (23 ), ಅಭಿಷೇಕ್ (23) ದೀಕ್ಷಿತ್ (21),ಶ್ರೀನಿವಾಸ್ ಆರು ಮಂದಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ; ಮತ್ತೆ ಇಬ್ಬರು ಜಿಹಾದಿಗಳ ಬಂಧನ – ಸದ್ದಾಂ ಹಾಗೂ ಹಾರೀಸ್ ಹೆಡೆಮುಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ಪುತ್ತೂರು: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ನಡೆದಿರುವ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ)ಗೆ ವಹಿಸಿಕೊಡಲು ರಾಜ್ಯ ಸರಕಾರ ತೀರ್ಮಾನಿಸಿರುವ ಬೆನ್ನಲ್ಲೇ ಎನ್‌ಐಎ ಅಧಿಕಾರಿಗಳ ಎರಡು ತಂಡಗಳು ಪ್ರಕರಣದ ಮಾಹಿತಿಯನ್ನು ಕಲೆ ಹಾಕುತ್ತಿರುವುದಾಗಿ ವರದಿಯಾಗಿದೆ. ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿ ಇನ್ನಿಬ್ಬರು ಆರೋಪಿಗಳು ಪೊಲೀಸರು ಬಂಧಿಸಿದ್ದಾರೆ. ಈ ಕುರಿತು ಅಧಿಕೃತ ಮಾಹಿತಿ ನೀಡಿದ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಪ್ರವೀಣ್ ನೆಟ್ಟಾರ್...
ಕಡಬಕ್ರೈಮ್ದಕ್ಷಿಣ ಕನ್ನಡಸುದ್ದಿಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಲ್ಲಿ ವರುಣನ ರುದ್ರ ನರ್ತನ – ಫಲಿಸದ ಪ್ರಾರ್ಥನೆ ; ಕೈ ಕೈ ಹಿಡಿದ ಸ್ಥಿತಿಯಲ್ಲಿ ಮಣ್ಣಿನಡಿ ಮಕ್ಕಳ ಶವ ಪತ್ತೆ – ಕಹಳೆ ನ್ಯೂಸ್

ಸುಬ್ರಹ್ಮಣ್ಯ, ಆ 02 : ಭಾರೀ ಮಳೆ ಸುರಿದ ಪರಿಣಾಮ ಸುಬ್ರಹ್ಮಣ್ಯ ಪರಿಸರದಲ್ಲಿ ಗುಡ್ಡ ಕುಸಿದು ಸೋಮವಾರ ರಾತ್ರಿ ಇಬ್ಬರು ಮಕ್ಕಳು ಮೃತಪಟ್ಟಿದ್ದು, ಮಣ್ಣಿನಡಿ ಸಿಲುಕಿದ ಸೋದರಿಯರನ್ನು ದೀರ್ಘ‌ ಕಾರ್ಯಾಚರಣೆಯ ಬಳಿಕ ಮೇಲಕ್ಕೆತ್ತುವ ಸಂದರ್ಭ ಇಬ್ಬರೂ ಒಬ್ಬರಿಗೊಬ್ಬರು ಕೈ ಕೈ ಹಿಡಿದುಕೊಂಡ ಸ್ಥಿತಿಯಲ್ಲಿದ್ದರು ಎಂದು ತಿಳಿದು ಬಂದಿದೆ. ಪರ್ವತಮುಖಿಯ ಕುಸುಮಾಧರ ಅವರ ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಅವರ ಮಕ್ಕಳಾದ ಶ್ರುತಿ (11) ಮತ್ತು ಜ್ಞಾನಶ್ರೀ (6) ಮಣ್ಣಿನಡಿ...
1 573 574 575 576 577 731
Page 575 of 731